ಸುಂಟಿಕೊಪ್ಪ,ಡಿ.16 : ಅಂತಿಮ ವರ್ಷದ ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ವಿಭಾಗದ ಪರೀಕ್ಷೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಚಿನ್ನದ ಪದಕ ಪಡದುಕೊಂಡ ಸುಂಟಿಕೊಪ್ಪದ ಶೈನಿ ಡಿಸೋಜ ಅವರನ್ನು ಕೆದಕಲ್ ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು. ಕೆದಕಲ್ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಗ್ರಾಮಸಭೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಫಲ ತಾಂಬೂಲ ನೀಡಿ ಸನ್ಮಾನಿಸಿ, ಗೌರವಿಸಿದರು. ಶೈನಿ ಡಿಸೋಜ ಅವರ ಸಾಧನೆಯ ಬಗ್ಗೆ ಕೆದಕಲ್ ಗ್ರಾ.ಪಂ.ಅಧ್ಯಕ್ಷ ಆನಂದ, ಉಪಾಧ್ಯಕ್ಷೆ ಪಾರ್ವತಿ ಸೋಮಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಾತನಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಗ್ರಾಮಸ್ಥರು ಹಾಜರಿದ್ದರು.
ಲೇಖಕ: admin
ಸುಂಟಿಕೊಪ್ಪ,ಡಿ.16 : ಕ್ರಿಸ್ಮಸ್ ಹಬ್ಬದ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಧರ್ಮಗುರು, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರಿದರದು. ಕ್ರೈಸ್ತ ಭಾಂದವರು ಡಿಸೆಂಬರ್ ಮಾಸದಲ್ಲಿ ಮನೆಗಳಿಗೆ ಸುಣ್ಣ ಬಣ್ಣ ಬಳಿದು ವಿವಿಧ ಬಗೆಯ ನಕ್ಷತ್ರಗಳನ್ನು ಮನೆಯ ಮೇಲ್ಚಾವಣಿಗಳ ಮೇಲೆ ಅಳವಡಿಸುವುದು. ಮನೆಗಳಲ್ಲಿ ಕ್ರಿಸ್ತನ ಜನನದ ಸ್ಥಳವಾದ ಗೋದಾಲಿ (ದನದಕೊಟ್ಟಿಗೆ) ನಿರ್ಮಾಣವಾದರೆ, ಮಹಿಳೆಯರು ವಿವಿಧ ಬಗೆ ಬಗೆಯ ತಿಂಡಿ ಖಾದ್ಯಗಳನ್ನು ತಯಾರಿಸುವ ಸಡಗರ ಸಂಭ್ರಮಕ್ಕೆ ಅಣಿಯಾಗುತ್ತಿರುವಂತೆಯೇ ಸಾಂತಕ್ಲಾಸ್ ಅವರನ್ನು ಒಳಗೊಂಡ ಕ್ಯಾರೋಲ್ಸ್ ತಂಡವು ಆಗಮಿಸಿ ಮನೆಗಳಿಗೆ ಆರ್ಶಿವಚನ ನೀಡಿ ಮನೆಯ ಮಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದೇ ಈ ಹಬ್ಬದ ವಿಶೇಷತೆಯಾಗಿದೆ. ವಿಶ್ವದಾದ್ಯಂತ 2023 ರ ಕ್ರಿಸ್ತರ ಜನನದ ಹಬ್ಬವನ್ನು ಸಡಗರ ಸಂಭ್ರಮದಲ್ಲಿ ಆಚರಿಸಲು ಅಣಿಗೊಳ್ಳುತ್ತಿದೆ. ಅದೇ ರೀತಿಯ ಸುಂಟಿಕೊಪ್ಪ ದೇವಾಲಯದಲ್ಲಿಯೂ ಕ್ರೈಸ್ತ ಧರ್ಮಗರುಗಳು, ಕ್ರೈಸ್ತ ದೇವಾಲಯ…
ಗೋಣಿಕೊಪ್ಪ ಡಿ.15 : ಉತ್ತಮ ಪುಸ್ತಕಗಳನ್ನು ಓದುವುದರಿಂದ ಖಿನ್ನತೆಯಿಂದ ಹೊರಬರಲು ಸಾಧ್ಯ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ತಿಳಿಸಿದರು. ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂಕಗಳಿಗಾಗಿ ಶಿಕ್ಷಣದ ಉದ್ದೇಶವನ್ನು ಈಡೇರಿಸಿಕೊಳ್ಳದೆ, ಉತ್ತಮ ಜೀವನ ಸಾಗಿಸಲು ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯಬೇಕು ಎಂದು ಹೇಳಿದರು. ವಿವೇಕಾನಂದ, ಗಾಂಧಿ, ಅಂಬೇಡ್ಕರ್ ಅಂತ ಜೀವನ ಮಾದರಿ ಪುಸ್ತಕಗಳ ಓದಿನಿಂದ ಪ್ರೇರಣೆ ಹೊಂದುವ ಮೂಲಕ ಬದುಕನ್ನ ಉತ್ಕೃಷ್ಟಗೊಳಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ಶಿಕ್ಷಣಕಷ್ಟೇ ಸೀಮಿತವಾಗದೆ ಸಮಾಜದ ಹೊರಗಿನ ನಡೆಯ ಬಗ್ಗೆ ತಿಳಿದುಕೊಳ್ಳುತ್ತಾ ಬದುಕನ್ನು ಅನುಭವಿಸಬೇಕು ಎಂದು ಹೇಳಿದರು. ಒಬ್ಬ ವ್ಯಕ್ತಿಯ ಬದುಕಿನಲ್ಲಿ ಬದಲಾವಣೆಯನ್ನು ಕಂಡುಕೊಳ್ಳಲು ಪುಸ್ತಕಗಳ ಓದಿನಿಂದ ಸಾಧ್ಯವಾಗಬಲ್ಲದು. ಉತ್ತಮ ಪುಸ್ತಕಗಳಿಗಿಂತ ಬೇರೆ ಸ್ನೇಹಿತರಿರಲು ಸಾಧ್ಯವಿಲ್ಲ. ಒಮ್ಮೆ ಓದಿನ ರುಚಿ ಹೆಚ್ಚಿಸಿಕೊಂಡಾಗ ಖಿನ್ನತೆಗೆ ಒಳಗಾಗುವುದನ್ನು ತಪ್ಪಿಸುವುದರ ಜತೆಗೆ ಇದರ ಪರಿಣಾಮದಿಂದ ಮಾದಕ ವ್ಯಸನಿಗಳಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಸಲಹೆ ನೀಡಿದರು. ಗೋಣಿಕೊಪ್ಪ ಪೊಲೀಸ್ ಠಾಣಾ…
ಮಡಿಕೇರಿ ಡಿ.15 : ಮಡಿಕೇರಿ ಎಂಎಸ್ಎಂಇ (ಮಿನಿಸ್ಟ್ರಿ ಆಫ್ ಮೈಕ್ರೋ, ಸ್ಮಾಲ್ ಅಂಡ್ ಮೀಡಿಯಂ ಎಂಟರ್ ಪ್ರೈಸಸ್) ವತಿಯಿಂದ 6 ವಾರಗಳ ಉಚಿತ “ಹೊಲಿಗೆ” ತರಬೇತಿ ಕಾರ್ಯಕ್ರಮವು “ಶ್ರೀ ಸದ್ಗುರು ವಿದ್ಯಾಸಂಸ್ಥೆ”ಯಲ್ಲಿ ನಡೆಯಿತು. ಮಂಗಳೂರು ಎಂಎಸ್ಎಂಇನ ಸಹಾಯಕ ನಿರ್ದೇಶಕರಾದ ಸುಮನ್ ಎಸ್.ರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಹರೀಶ್, ಗಂಗಾದರ್ ನಾಯಕ್, ಲೀಡ್ ಬ್ಯಾಂಕ್ ಮ್ಯಾನೆಜರ್ ಹಾಜರಿದ್ದರು. “ಸದ್ಗುರು ವಿದ್ಯಾಸಂಸ್ಥೆ” ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಎಸ್.ಎಂ.ಇ ಯ ಅಸಿಸ್ಟೆಂಟ್ ಡೈರೆಕ್ಟರ್ ರವರಾದ ಸುಮನ್ ರಾಜ್ ಹಾಗೂ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಿ.ಎಸ್.ಡಿ.ಓ ಉಮಾ ಪಾಲ್ಗೊಂಡು ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಮಡಿಕೇರಿ ಡಿ.15 : ‘ಯಾವುದೇ ಭಾಷೆಯನ್ನು ಭೌದ್ಧಿಕವಾಗಿ ಸಂಪಾದಿಸಬೇಕು ಮತ್ತು ಬೆಳೆಸಬೇಕು, ಆ ಮೂಲಕ ಭಾಷೆಯನ್ನು ಉಳಿಸಲು ಸಾಧ್ಯ. ಅರೆಭಾಷೆಯ ಬಗ್ಗೆ ಹೆಚ್ಚು ಹೆಚ್ಚು ಅಧ್ಯಯನ ನಡೆಯಬೇಕು ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಗೌಡ ಸಮಾಜ-ಸಂಘಟನೆಗಳ ಸಹಯೋಗದಲ್ಲಿ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಅರೆಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಅರೆಭಾಷೆ ಮಾತಾಡುವುದರ ಜೊತೆಗೆ, ಓದುವ ಮತ್ತು ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಲೇಖನ, ಕಥೆ, ಕವನ, ಬರೆಯುವ ಮೂಲಕ ಅರೆಭಾಷೆ ಬೆಳವಣಿಗೆಗೆ ಮುಂದಾಗಬೇಕಿದೆ ಎಂದು ಸಲಹೆ ನೀಡಿದರು. ಅರೆಭಾಷೆಯಲ್ಲಿ ಪದಕೋಶ, ವಿಶ್ವಕೋಶ, ಪಾರಂಪರಿಕ ವಸ್ತುಕೋಶ ಹೀಗೆ ಹಲವು ಪುಸ್ತಕಗಳನ್ನು ಪ್ರಕಟಿಸುವ ಮೂಲಕ ಅರೆಭಾಷೆ ಬೆಳವಣಿಗೆಗೆ ಶ್ರಮಿಸಲಾಗಿದೆ. ಅವುಗಳನ್ನು ಅಧ್ಯಯನ…
ಕಡಂಗ ಡಿ.15 : ಅರಪಟ್ಟು ಶ್ರೀ ಉಮಾ ಮಹೇಶ್ವರಿ ದೇವಾಲಯದಲ್ಲಿ ಕಾರ್ತಿಕ ದೀಪೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಗ್ರಾಮದ ದೇವಸ್ಥಾನದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಊರಿನ ಭಕ್ತರು ದೇವಾಲಯದ ಸುತ್ತಲೂ ಹಣತೆಯನ್ನಿರಿಸಿ ದೀಪ ಹಚ್ಚಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪೂಜೆಯ ಅಂಗವಾಗಿ ಸಾಮೂಹಿಕ ರುದ್ರಾಭಿಷೇಕ, ಮಹಾಪೂಜೆ ನಡೆಯಿತು. ಪೂಜಾ ಕೈಂಕಾರ್ಯವನ್ನು ಅರ್ಚಕರಾದ ಕೀರ್ತಿಶ್ ಹಾಗೂ ಅಖಿಲೇಶ್ ಸಹೋದರರು ನಡೆಸಿಕೊಟ್ಟರು. ದೇವಸ್ಥಾನ ಸಮಿತಿ ಅಧ್ಯಕ್ಷ ನೆರಪಂಡ ಚಿತ್ರ ಬೆಳ್ಳಿಯಪ್ಪ ಹಾಗೂ ಪದಾಧಿಕಾರಿಗಳು ಹಾಜರಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ಕೋಡಿರ ಪಿ.ಅಪ್ಪಣ್ಣ ಹಾಗೂ ಸಂಸಾರ ಇವರ ಸೇವಾರ್ಥವಾಗಿ ಅನ್ನ ಸಂತರ್ಪಣೆ ನಡೆಯಿತು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್
ಮಡಿಕೇರಿ ಡಿ.15 : ಹಿರಿಯ ನಾಗರಿಕರ ವೇದಿಕೆಯ ಮಹಾಸಭೆಯು ಡಿ.23 ರಂದು ಬೆಳಗ್ಗೆ 11 ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಹಿರಿಯರ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿದ ಮಾರಮಡ ಮಾಚಮ್ಮ ಅವರನ್ನು ಸನ್ಮಾನಿಸಲಾಗುತ್ತದೆ. ಡಾ.ಎಚ್.ಆರ್.ಸರಸ್ವತಿ ಅವರು ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆ ಹಿರಿಯರಿಗೆ ಹೇಗೆ ಪರಿಣಾಮಕಾರಿಯಾಗಬಲ್ಲದು ಎಂಬುದನ್ನು ತಿಳಿಸಲಿದ್ದಾರೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ತಿಮ್ಮಯ್ಯ ತಿಳಿಸಿದ್ದಾರೆ.
ಮಡಿಕೇರಿ ಡಿ.15 : ಪೊನ್ನಂಪೇಟೆ 66/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸ ಬೇಕಾಗುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಡಿ.16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11 ಕೆವಿ ವಿರಾಜಪೇಟೆ, 33/11 ಕೆವಿ ಸಿದ್ದಾಪುರ, 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಡಿ.15 : ಗ್ರಾಮೀಣ ಹೋಂ-ಸ್ಟೇಗಳನ್ನು ಉತ್ತೇಜಿಸುವ ಸಲುವಾಗಿ ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯವು ಗ್ರಾಮೀಣ ಹೋಂ-ಸ್ಟೇಗಳ ಪ್ರಚಾರಕ್ಕಾಗಿ ರಾಷ್ಟ್ರೀಯ ಕಾರ್ಯತಂತ್ರವನ್ನು ಪ್ರಾರಂಭಿಸಿದ್ದು, ಇದರ ಪರ್ಯಾಯ ರೂಪವಾಗಿ ಗ್ರಾಮೀಣ ಹೋಂ-ಸ್ಟೇಗಳ ಪ್ರಚಾರ, ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಲು ಕೇಂದ್ರೀಯ ನೋಡಲ್ ಏಜೆನ್ಸಿ ಮೂಲಕ ಪ್ರವಾಸೋದ್ಯಮ ಸಚಿವಾಲಯವು ಅತ್ಯುತ್ತಮ ಗ್ರಾಮೀಣ ಹೋಂ ಸ್ಟೇ ಸ್ಪರ್ಧೆ-2024 ನ್ನು ನಡೆಸುತ್ತಿದ್ದು, ಅತ್ಯುತ್ತಮ ಗ್ರಾಮೀಣ ಹೋಂ ಸ್ಟೇ ಸ್ಪರ್ಧೆಗೆ ವಿಭಾಗಗಳನ್ನು ಗುರುತಿಸಲಾಗಿದೆ. ರೋಮಾಂಚಕ ಗ್ರಾಮ, ಹಸಿರು, ಸಮುದಾಯ ಚಾಲಿತ, ಮಹಿಳಾ ನೇತೃತ್ವ ಘಟಕ, ಪರಂಪರೆ ಮತ್ತು ಸಂಸ್ಕೃತಿ ಫಾರ್ಮ್ ಸ್ಟೇ, ಕಾಟೇಜ್, ಆಯುರ್ವೇದ ಮತ್ತು ಸ್ವಾಸ್ಥ್ಯ, ದೇಶೀಯ ವಾಸ್ತುಶಿಲ್ಪ, ಎಲ್ಲವನ್ನು ಒಳಗೊಂಡ ಅಭ್ಯಾಸಗಳು, ಕ್ಲಸ್ಟರ್, ಜವಾಬ್ದಾರಿಯುತ ಅಭ್ಯಾಸಗಳು, ಟ್ರೀ ಹೌಸ್, ವಿಲಾ ಈ ವಿಭಾಗಗಳಡಿಯಲ್ಲಿ ನಾಮ ನಿರ್ದೇಶನವನ್ನು ಹೋಂ-ಸ್ಟೇ ಮಾಲೀಕರು ಭರ್ತಿ ಮಾಡಿ ಅರ್ಜಿಯನ್ನು ವೆಬ್ಸೈಟ್ https://www.rural.tourism.gov.in ಮುಖಾಂತರ ಸಲ್ಲಿಸಬಹುದು. ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ…
ಮಡಿಕೇರಿ ಡಿ.15 : ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ/ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳು ಮತ್ತು…






