ಲೇಖಕ: admin

ಮಡಿಕೇರಿ ಡಿ.15 : ಕನ್ನಡ ಚಿತ್ರರಂಗದ ಖ್ಯಾತ ನಟ ದಿ.ಡಾ.ವಿಷ್ಣುವರ್ಧನ್ ಅವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಿಸಬೇಕೆಂದು ಒತ್ತಾಯಿಸಿ ಡಿ.17 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಕೊಡಗು ಜಿಲ್ಲೆಯ ವಿಷ್ಣು ಅಭಿಮಾನಿಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿಯ ಜಿಲ್ಲಾಧ್ಯಕ್ಷ ರಫೀಕ್ (ದಾದಾ) ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಡಾ.ವಿಷ್ಣುವರ್ಧನ್ ಅವರು ನಿಧನ ಹೊಂದಿ ಇಷ್ಟು ವರ್ಷಗಳೇ ಕಳೆದರೂ ಸ್ಮಾರಕವನ್ನು ನಿರ್ಮಿಸದೆ ಇರುವುದು ವಿಷಾದನೀಯ. ಈ ನಿರ್ಲಕ್ಷ್ಯ ಧೋರಣೆ ಅಭಿಮಾನಿಗಳಿಗೆ ಅತೀವ ದು:ಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲೇ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿ ವಿಷ್ಣು ಅಭಿಮಾನಿಗಳಿಂದ ಭಾನುವಾರ ಬೃಹತ್ ಪ್ರತಿಭಟನೆ ನಡೆಯಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿಗೆ ತೆರಳಿ ಸ್ಮಾರಕಕ್ಕಾಗಿ…

Read More

ವಿರಾಜಪೇಟೆ ಡಿ.15 : ಕುಂದಾ ಮನೆಯಪಂಡ ಕುಟುಂಬದ ಆಶ್ರಯದಲ್ಲಿ ಮನೆಯಪಂಡ ಐನ್‍ಮನೆ ಸಮೀಪದಲ್ಲಿರುವ ಮುದರೆ ಪಾಲ ಮೈದಾನದಲ್ಲಿ ಮನೆಯಪಂಡ ಕುಟುಂಬದ ಪುತ್ತರಿ ಒತ್ತೋರ್ಮೆ ಕೂಟ ನಡೆಯಿತು. ನಿವೃತ್ತ ಎಸ್.ಪಿ ಮುಕ್ಕಾಟ್ಟಿರ ಅಪ್ಪಯ್ಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕುಟುಂಬದ ಅಧ್ಯಕ್ಷ ಮನೆಯಪಂಡ ರಾಜ ಸೋಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಆಚಾರ, ವಿಚಾರ, ಪದ್ಧತಿ, ಪರಂಪರೆ ಉಳಿಸಿ ಬೆಳೆಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು. ನಮ್ಮ ಎಲ್ಲ ಕುಟುಂಬದವರು ಐನ್‍ಮನೆಯಲ್ಲಿ ನಡೆಯುವ ಕಾರ್ಯಕ್ರಮಗಳು, ಗುರು ಕಾರೋಣ, ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತಾಗಬೇಕು ಎಂದು ಕಿವಿಮಾತು ಹೇಳಿದರು. ಪಟ್ಟೆದಾರ ಮನೆಯಪಂಡ ಸಿದ್ದು ನಾಚಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭ ಐನ್‍ಮನೆ, ಗುರುಮಠ, ಗಣಪತಿ ಗುಡಿಯಲ್ಲಿ ಪ್ರತಿದಿನ ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಂಡು ಬರುತ್ತಿರುವ ಮನೆಯಪಂಡ ಬೊಳ್ಳು ಬೆಳ್ಳಿಯಪ್ಪ, ಅವರ ಪತ್ನಿ ಮಧು ಬೆಳ್ಳಿಯಪ್ಪ, ಮಕ್ಕಳಾದ ಆಧಿತ್ಯ ಅಯ್ಯಣ್ಣ, ಆದರ್ಶ ಕುಟ್ಟಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸಾಂಪ್ರಾದಾಯಿಕ ಪೀಚೆಕತ್ತಿ ನೀಡಿ ಗೌರವಿಸಲಾಯಿತು. ಅಲ್ಲದೇ ಸೇನೆಯಲ್ಲಿ…

Read More

ಮಡಿಕೇರಿ ಡಿ.15 : ಮಾನವ ಬಂಧುತ್ವ ವೇದಿಕೆ ವತಿಯಿಂದ ಡಿ.18 ರಂದು ‘ಕಲ್ಯಾಣ ರಾಜ್ಯದ ಪರಿಕಲ್ಪನೆ ಸತ್ಯ ಮತ್ತು ಮಿಥ್ಯೆಗಳು’ ಎನ್ನುವ ವಿಷಯವನ್ನು ಆಧರಿಸಿ ನಗರದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ವಿಭಾಗೀಯ ಸಂಚಾಲಕ ಸತೀಶ್ ಕುಮಾರ್ ಸರ್ವರಿಗು ಸಮಪಾಲು, ಸರ್ವರಿಗು ಸಮ ಬಾಳು ಎಂಬ ತತ್ತ್ವದ ಮೇಲೆ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ‘ಕಲ್ಯಾಣ ರಾಜ್ಯ’ ಎಂಬ ಪರಿಕಲ್ಪನೆ ನಮ್ಮ ರಾಜ್ಯ ಮತ್ತು ದೇಶದಲ್ಲಿ ಯಾವ ಪ್ರಮಾಣದಲ್ಲಿ ಅನುಷ್ಟಾನಗೊಂಡಿದೆ ಎನ್ನುವ ಅಂಶದ ಬಗ್ಗೆ ವಿಚಾರ ಸಂಕಿರಣದಲ್ಲಿ ಬೆಳಕು ಚೆಲ್ಲಲಾಗುವುದು ಎಂದರು. ನಗರದ ಕೂರ್ಗ್ ಕಮ್ಯೂನಿಟಿ ಹಾಲ್‍ನಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳುವ ವಿಚಾರ ಸಂಕಿರಣವನ್ನು ಚಿಂತಕರು, ಸಾಹಿತಿಗಳು ಮತ್ತು ಇತಿಹಾಸ ಸಂಶೋಧಕರಾದ ಕೆ.ಆರ್.ವಿದ್ಯಾಧರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ವಹಿಸಲಿದ್ದಾರೆ. ಮೊದಲ ಗೋಷ್ಠಿಯಲ್ಲಿ ಕರ್ನಾಟಕ ಕಾರ್ಮಿಕ ಚಳವಳಿಯ ನಾಯಕರಾದ ಬೆಂಗಳೂರಿನ ಡಾ.ಪ್ರಕಾಶ್ ಅವರು ‘ಕಲ್ಯಾಣ ರಾಜ್ಯದ ಪರಿಕಲ್ಪನೆ ಮತ್ತು ಕಾರ್ಪೋರೇಟ್ ಶಕ್ತಿಗಳ…

Read More

ಮಡಿಕೇರಿ ಡಿ.15 : ದಕ್ಷಿಣ ಕೊಡಗಿನಲ್ಲಿ ವರ್ಷದ ಹಿಂದೆ ‘ಪೊನ್ನಂಪೇಟೆ ತಾಲ್ಲೂಕು’ ರಚನೆಯಾಗಿದೆ. ಆದರೆ ನೂತನ ತಾಲ್ಲೂಕಿಗೆ ಮತ್ತು ಇಲ್ಲಿನ ಜನತೆಗೆ ದೊರಕಬೇಕಾದ ಯಾವುದೇ ಸೌಲಭ್ಯಗಳು ಇಲ್ಲಿಯವರೆಗೆ ತಲುಪಿಲ್ಲವೆಂದು ಸಾರ್ವಜನಿಕ ಹಿತರಕ್ಷಣಾ ಸಮಿತಿ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ, ವಿವಿಧ ಸಂಘಟನೆಗಳ ಹೋರಾಟದಿಂದ ಪೊನ್ನಂಪೇಟೆ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ. ನೂತನ ತಾಲ್ಲೂಕು ಕಚೇರಿ ಆರಂಭಿಸಿರುವ ಸರಕಾರ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಲ್ಲ. ಈಗ ಇರುವ ಸಿಬ್ಬಂದಿಗಳ ಸಂಖ್ಯೆ ಬೆರಳೆಣಿಕೆಯಷ್ಟಿದ್ದು, ಇದರಿಂದ ಅಗತ್ಯ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಹಿಂದಿನಂತೆ ವಿರಾಜಪೇಟೆ ತಾಲ್ಲೂಕು ಕಚೇರಿಗೆ ತೆರಳುವ ಅನಿವಾರ್ಯತೆ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪೊನ್ನಂಪೇಟೆ ತಾಲ್ಲೂಕು ಕಚೇರಿಯಲ್ಲಿರುವ ಕೆಲವೇ ಸಿಬ್ಬಂದಿಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಹಳಷ್ಟು ಕೆಲಸಗಳಿಗೆ ವಿರಾಜಪೇಟೆ ತಾಲ್ಲೂಕು ಕಚೇರಿಗೆ ತೆರಳುವಂತೆ ಸೂಚಿಸುತ್ತಾರೆ. ಸರ್ವೇ ವಿಭಾಗವು ವಿರಾಜಪೇಟೆಯಿಂದ ಪೊನ್ನಂಪೇಟೆಗೆ ವರ್ಗಾವಣೆಯಾಗದೇ ಇರುವುದರಿಂದ ಈ ವ್ಯಾಪ್ತಿಯ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ತಕ್ಷಣ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲು ಕ್ರಮ…

Read More

ಮಡಿಕೇರಿ ಡಿ.15 : ವಿಶ್ವ ರಾಷ್ಟ್ರ ಸಂಸ್ಥೆಯ ಜಾಗತಿಕ ಅಲ್ಪಸಂಖ್ಯಾತ ಜನಾಂಗಗಳ ಹಕ್ಕುಗಳ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 14ನೇ ವರ್ಷದ “ಗನ್ ಕಾರ್ನಿವಲ್ ತೋಕ್ ನಮ್ಮೆ”ಯನ್ನು ಡಿ.18 ರಂದು ನಾಪೋಕ್ಲು ಕೊಳಕೇರಿಯ ನೂರಂಬದ ನಾಡ್ ನಲ್ಲಿ ಆಚರಿಸಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಪದೀಯ ಹಬ್ಬವಾಗಿ ತೋಕ್ ನಮ್ಮೆಯನ್ನು ಅತಿ ಉತ್ಸಾಹದಿಂದ ಆಚರಿಸುವ ಮೂಲಕ ಕೋವಿ ಹೊಂದುವ ಕೊಡವರ ಹಕ್ಕನ್ನು ಪ್ರತಿಪಾದಿಸಲಾಗುವುದು ಎಂದಿದ್ದಾರೆ. ಕೊಳಕೇರಿಯ ನೂರಂಬದ ನಾಡ್ ನಲ್ಲಿರುವ ರಮ್ಮಿ ನಾಣಯ್ಯ ಹಾಗೂ ರೀನಾ ನಾಣಯ್ಯ ಅವರ ಕಾವೇರಿ ಎಸ್ಟೇಟ್ ನ ಕಾವೇರಿ ನದಿ ದಂಡೆಯಲ್ಲಿ ನಮ್ಮೆ ನಡೆಯಲಿದೆ. ಕೋವಿಗಳನ್ನು ಸಾಂಪ್ರದಾಯಿಕ ಹೂವುಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗಾಗಿ ಗುಂಡು ಹಾರಿಸುವ ಸ್ಪರ್ಧೆ ನಡೆಯಲಿದೆ. ನಮ್ಮೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಂದೂಕುಗಳನ್ನು ಪ್ರದರ್ಶಿಸುವುದರಿಂದ ಪ್ರತಿಯೊಬ್ಬರು ಬಂದೂಕು ಸಹಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಾಚಪ್ಪ ಮನವಿ…

Read More

ಕುಶಾಲನಗರ ಡಿ.15 :  ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ರಾಜ್ಯ ಮಟ್ಟದ ಡಾ. ಎಚ್.ನರಸಿಂಹಯ್ಯ ಪ್ರಶಸ್ತಿಗೆ ಕುಶಾಲನಗರದ ವಿವೇಕಾನಂದ ಕಾಲೇಜು ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ  ಎನ್.ಎನ್.ಶಂಭುಲಿಂಗಪ್ಪ ಭಾಜನರಾಗಿದ್ದಾರೆ. 2023 ನೇ ಸಾಲಿನ ಪ್ರಶಸ್ತಿಗೆ ರಾಜ್ಯದಲ್ಲಿ 37 ಸಾಧಕರು ಆಯ್ಕೆಯಾಗಿದ್ದು, ಕೊಡಗು ಜಿಲ್ಲೆಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಶಂಭುಲಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ  ಹುಲಿಕಲ್ ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.29 ಮತ್ತು 30 ರಂದು ರಾಯಚೂರಿನಲ್ಲಿ ನಡೆಯಲಿರುವ ಪರಿಷತ್ತಿನ ಮೂರನೇ ರಾಜ್ಯಮಟ್ಟದ ವಾರ್ಷಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ  ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.

Read More

ವಿರಾಜಪೇಟೆ ಡಿ.15 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ವಿರಾಜಪೇಟೆ ತಾಲೂಕು ವಿರಾಜಪೇಟೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಕೆದಮುಳ್ಳೂರು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ ತೋಮರ ಸಮುದಾಯ ಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ವಿರಾಜಪೇಟೆ ಸ.ಪ್ರ,ದ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಕೆ.ಬಸವರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ಸಂಸ್ಕೃತಿ ಧಾರ್ಮಿಕ ಆಚರಣೆ ಮಹತ್ವ, ಧರ್ಮ ಕಾರ್ಯಗಳಿಂದ ಆಗುವ ಒಳಿತುಗಳ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೆ.ಧ.ಗ್ರಾ. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು, ವಿಮಾ ಕಾರ್ಯಕ್ರಮ, ವಿಪತ್ತು ನಿರ್ವಹಣೆ ಕಾರ್ಯಕ್ರಮ, ಮಾಶಾಸನ, ನಮ್ಮೂರು ನಮ್ಮ ಕೆರೆ, ಜನ ಮಂಗಲ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಪೂಜಾ ಸಮಿತಿ ಅಧ್ಯಕ್ಷ ಕೆ.ಎಸ್.ಅರುಣ ಅಧ್ಯಕ್ಷತೆಯಲ್ಲಿ…

Read More

ಮಡಿಕೇರಿ ಡಿ.15 :  ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿರುವ ಕೊಡಗಿನ ಕರ್ನಲ್ ಮಂಡೆಪಂಡ ಸ್ಮಿತಾ ಅಯ್ಯಪ್ಪ (ತವರುಮನೆ ಮೇವಡ) ಅವರು ಕಮಾಂಡಿಂಗ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದಾರೆ. ಜಮ್ಮು ಕಾಶ್ಮೀರದ ರಜೋರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು 356 ಎ.ಸಿ. ಬೆಟಾಲಿಯನ್‌ನ ಕಮಾಂಡಿಂಗ್ ಅಧಿಕಾರಿಯಾಗಿ ಡಿ.12 ರಂದು ನಿಯೋಜನೆ ಗೊಂಡಿದ್ದಾರೆ. ಇವರು ಕರ್ನಲ್ ಅಯ್ಯಪ್ಪ ಅವರ ಪತ್ನಿ.

Read More

ನಾಪೋಕ್ಲು ಡಿ.15 : ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಹೊಟೇಲ್, ಬೇಕರಿ, ಅಂಗಡಿ ,ಕ್ಯಾಂಟೀನ್ ಗಳ ಒಣ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಕೊಡಬೇಕು ತಪ್ಪಿದ್ದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಂಚಾಯಿತಿಯಿಂದ ಹಲವಾರು ಬಾರಿ ಈ ಹಿಂದೆ ನೋಟಿಸಿ ನೀಡಲಾಗಿದ್ದರು ಕೂಡ ಪದೇ ಪದೇ ತ್ಯಾಜಗಳನ್ನು ರಸ್ತೆ ಬದಿಗೆ ಹಾಗೂ ಪಂಚಾಯತಿಯ ಮುಂಭಾಗದಲ್ಲಿ ಸುರಿಯುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಒಣ ಮತ್ತು ದ್ರವ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಪಂಚಾಯಿತಿಯ ಕಸದ ವಾಹನಕ್ಕೆ ಇಲೇವಾರಿ ಮಾಡುವಂತೆ ತಿಳಿಸಿದರು. ಹಸಿ ಕಸ ಮತ್ತು ಒಣ ಕಸ ವಿಂಗಡನೆ ಮಾಡದಿದ್ದಲ್ಲಿ ಪಂಚಾಯಿತಿಯಿಂದ ಕಸವನ್ನು ಸ್ವೀಕರಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿರುವ ಅವರು, ಬಟ್ಟೆ ಬ್ಯಾಗ್ಗಳನ್ನು ಉಪಯೋಗಿಸುವುದರ ಮೂಲಕ ಪ್ಲಾಸ್ಟಿಕ್ ನಿಷೇಧಕ್ಕೆ ಪಂಚಾಯಿತಿಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಮನವಿ ಮಾಡಿದ ಅವರು, ಪ್ಲಾಸ್ಟಿಕ್ ಬಳಕ್ಕೆ ಕಂಡು ಬಂದರೆ ಪಂಚಾಯಿತಿಯಿಂದ…

Read More

ಸೋಮವಾರಪೇಟೆ ಡಿ.15 : ಅಂಗಡಿ ಮಳಿಗೆ ಹರಾಜು ವಿಚಾರದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂಬ ವಿಚಾರ ಇಂದು ಪ್ರತಿಭಟನೆಯ ಸ್ವರೂಪ ಪಡೆದುಕೊಂಡಿತು. ಅಧಿಕಾರಿಗಳ ವಿರುದ್ಧ ಘೋಷಣೆ, ಮಾತಿನ ಚಕಮಕಿ ನಡೆಯಿತು. ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಭಾಗದ 60 ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳು  ಚುನಾಯಿತ ಜನಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಹರಾಜಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ ಸದಸ್ಯರು ಹರಾಜು ಪ್ರಕ್ರಿಯೆ ಮುಂದೂಡಿ ಹಾಗೂ ಸಭೆ ಕರೆಯಿರಿ ಎಂದು ಮನವಿ ಮಾಡಿದರೂ ಸ್ಪಂದಿಸದ ಆಡಳಿತಾಧಿಕಾರಿ ಕ್ರಮ ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಬೆಳಗ್ಗಿನಿಂದಲೇ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಡಳಿತಾಧಿಕಾರಿ  ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದರು. 12 ಗಂಟೆಗೆ ಆಗಮಿಸಿದ ಆಡಳಿತಾಧಿಕಾರಿಯನ್ನುದ್ದೇಶಿಸಿ ಮಾತನಾಡಿದ ಪ್ರತಿಭಟನಾಕಾರರು ಹಿಂದಿನ ಸಭೆಯಲ್ಲಿ ನಮ್ಮ ಅಭಿಪ್ರಾಯ ತಪ್ಪಾಗಿ ನಿರ್ಣಯ ಮಾಡಿದ್ದೀರಿ, ನಂತರ ಎರಡು ಸಭೆಗಳನ್ನು ಮುಂದೂಡಿದ್ದೀರಿ, ನಮ್ಮನ್ನು ಕಡೆಗಣಿಸಿ ಹರಾಜು ಕರೆದಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಹರಾಜು…

Read More