ಮಡಿಕೇರಿ ಡಿ.14 : ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ” ಎಂಬ ಘೋಷವಾಕ್ಯದೊಂದಿಗೆ ವಿರಾಜಪೇಟೆ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ನಡೆಯಿತು. ವಿರಾಜಪೇಟೆ ಚೌಕಿಯಲ್ಲಿ “ಬೇಟಿ ಬಚಾವ್ ಬೇಟಿ ಪಡಾವ್” ಎಂಬುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭ ಪಶು ವೈದ್ಯಾಧಿಕಾರಿ ಡಾ.ರಾಕೇಶ್ ಮಾತನಾಡಿ, ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡಲು ಮಾತ್ರ ಸೀಮಿತವಲ್ಲ, ಇಂದು ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಿದ್ದಾರೆ ಎಂದರು. ಗಡಿಯಾರ ಕಂಬದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಮೊಹಮದ್ ರಾಫಿ, ಹೆಣ್ಣು ಮಕ್ಕಳ ಮೇಲಿನ ಶೋಷಣೆ ನಿಲ್ಲಬೇಕು, ಶಿಕ್ಷಣವನ್ನು ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದರು. ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಅಭಿಯಾನದಲ್ಲಿ ಮಾತನಾಡಿದ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಗೀತಾ, ಹೆಣ್ಣು ಮಕ್ಕಳ ಸ್ವರಕ್ಷಣೆಯ ಬಗ್ಗೆ ಅರಿವು ಮೂಡಿಸಿದರು. ಪೊಲೀಸ್ ಠಾಣೆಯ ಸಹಾಯಕ ದೂರವಾಣಿ ಸಂಖ್ಯೆಯಾದ 112 ಗೆ ಕರೆ…
ಲೇಖಕ: admin
ಮಡಿಕೇರಿ ಡಿ.14 : ಕರ್ನಾಟಕ ಸ್ಪೋರ್ಟ್ಸ್ ಅಸೋಷಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ಆಶ್ರಯದಲ್ಲಿ ಮೈಸೂರಿನ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಕೌಶಿ ಕಾವೇರಮ್ಮ ಚಿನ್ನದ ಪದಕ ಪಡೆದುಕೊಂಡಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೌಶಿ ಕಾವೇರಮ್ಮ ವಿರಾಜಪೇಟೆ ಕಾವೇರಿ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ವಿದುಷಿ ಹೇಮಾವತಿ ಕಾಂತರಾಜ್ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ. ಈಕೆ ರೋಟರಿ ಸಂಸ್ಥೆಯ ಸಹಾಯಕ ವಿ.ಡಿ.ಸೀಮ ಮತ್ತು ರೋಟರಿ ಸಂಸ್ಥೆಯ ವಾಹನ ಚಾಲಕ ವಿ.ಡಿ.ಡಾಲಿ ದಂಪತಿಯರ ಪುತ್ರಿ.
ಮಡಿಕೇರಿ ಡಿ.14 : ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರ್ನಾಟಕ ಸರ್ಕಾರದ ಇಂಧನ ಸಚಿವರ ಗಮನ ಗಮನ ಸೆಳೆದರು. ಸದನದ ಪ್ರಶ್ನೋತ್ತರ ವೇಳೆಯಲ್ಲಿ ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಾಕಿ ಉಳಿದಿರುವ 10 ಹೆಚ್.ಪಿ ವರೆಗಿನ ವಿದ್ಯುತ್ ಬಿಲ್ ಸಂಪೂರ್ಣ ಮನ್ನಾ ಮಾಡುವ ಬಗ್ಗೆ, ಕಾಫಿ ಬೆಳೆಗಾರರಿಗೆ ಅನುಕೂಲವಾಗುವ ಸೋಲಾರ್ ಪಂಪ್ ಸೆಟ್ ಗಳಿಗೆ ಅವಕಾಶ ಕಲ್ಪಿಸುವ ವ್ಯವಸ್ಥೆ ಹಾಗೂ ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ವಿಶೇಷವಾದ ಗಮನ ಹರಿಸಲು ಮನವಿ ಮಾಡಿದರು.
ಸೋಮವಾರಪೇಟೆ ಡಿ.14 : ವೀರಶೈವ ಸಮಾಜ ಹಾಗೂ ಬಸವೇಶ್ವರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂಗಳ ವಾದ್ಯಗಳೊಂದಿಗೆ ನಂದಿದ್ವಜ ಮೆರವಣಿಗೆಯ ನಂತರ, ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.
ನಾಪೋಕ್ಲು ಡಿ.14 : ಸ್ಕೌಟ್ಸ್ ಮತ್ತು ಗೈಡ್ಸ್ ಸನಿವಾಸ-2023 ಶಿಬಿರವು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಕ್ಕಳು ಬಾಲ್ಯದಲ್ಲಿಯೇ ಶಿಸ್ತು ಮತ್ತು ಮೌಲ್ಯಗಳನ್ನು ರೂಪಿಸಿಕೊಳ್ಳಲು ಶಿಬಿರ ಸಹಕಾರಿಯಾಗಿದೆ. ಬೌದ್ಧಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ, ಪ್ರತಿ ಮಗುವು ಉತ್ತಮ ನಾಗರೀಕನಾಗಲು ಸಾಧ್ಯ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಂ.ಧನಂಜಯ, ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಜೀವನ ಕೌಶಲ್ಯಗಳನ್ನು ತಿಳಿದುಕೊಂಡು ಬಾಳಿನಲ್ಲಿ ಅಳವಡಿಸಿಕೊಳ್ಳಲು ಪ್ರೇರಣೆ ಸಿಗುವಂತಾಗುತ್ತದೆ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಶುಭ ಹಾರೈಸಿ, ದ್ವಿತೀಯ ಸೋಪಾನ ಮತ್ತು ತೃತೀಯ ಸೋಪಾನ ಪರೀಕ್ಷೆಗಳ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸ್ಕೌಟ್ ಎ.ಡಿ.ಸಿ.ಹಾರಿಸ್, ಸ್ಕೌಟ್ ಮತ್ತು ಗೈಡ್ ನಲ್ಲಿ ತಮಗಾದ ಅನುಭವಗಳನ್ನು…
ಮಡಿಕೇರಿ ಡಿ.14 : ಪ್ರಜಾಪ್ರಭುತ್ವದ ದೇಗುಲದಂತ್ತಿರುವ ಸಂಸತ್ ಭವನಕ್ಕೆ ನುಗ್ಗಿದ ಇಬ್ಬರು ವ್ಯಕ್ತಿಗಳು ಬಣ್ಣದ ಹೊಗೆಯ ಸ್ಪ್ರೇ ಬಳಸಿ ಆತಂಕ ಸೃಷ್ಟಿಸಿರುವುದು ಖಂಡನೀಯವೆಂದು ತಿಳಿಸಿರುವ ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಭದ್ರತಾ ಲೋಪಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಂಸತ್ ಭವನಕ್ಕೆ ಸೂಕ್ತ ಭದ್ರತೆ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಸುಮಾರು 22 ವರ್ಷಗಳ ಹಿಂದೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭಯೋತ್ಪಾದಕರ ದಾಳಿ ನಡೆದಿತ್ತು. ಇದೀಗ ಮತ್ತೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ವ್ಯಕ್ತಿಗಳು ಸಂಸತ್ ಭವನದೊಳಗೆ ನುಗ್ಗಿದ್ದಾರೆ. ಇದು ಕೇಂದ್ರ ಸರ್ಕಾರದ ಬೇಜವಾಬ್ದಾರಿತನಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಸಂಸತ್ ಭವನಕ್ಕೇ ಭದ್ರತೆ ನೀಡಲಾಗದವರು ದೇಶದ ಜನತೆಗೆ ಭದ್ರತೆ ನೀಡಲು ಸಾಧ್ಯವೇ ಎಂದು ಪ್ರಶ್ನಿಸಿರುವ ಭೋಜಣ್ಣ ಸೋಮಯ್ಯ, ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಮೂಲಕ ವ್ಯಕ್ತಿಗಳು ಪಾಸ್ ಪಡೆದಿರುವ ಪ್ರಕರಣ ಇಡೀ…
ನಾಪೋಕ್ಲು ಡಿ.14 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಗಡಿ ಪ್ರಾಧಿಕಾರ ಮತ್ತು ಕರಿಕೆ ಗ್ರಾ.ಪಂ ಸಂಯುಕ್ತ ಆಶ್ರಯದಲ್ಲಿ ಗಡಿ ಉತ್ಸವ ನಡೆಸುವ ಬಗ್ಗೆ ಕರಿಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕರಿಕೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ನಾಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಉತ್ಸವವನ್ನು ಜನವರಿ 8 ರಂದು ಎಳ್ಳುಕೊಚ್ಚಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಗಡಿ ಭಾಗವಾದ ಕರಿಕೆಯಲ್ಲಿ ಕನ್ನಡ ಧ್ವಜಾರೋಹಣ, ನಾಡು ನುಡಿಯ ಜಾನಪದ ಕಲಾತಂಡಗಳ ಮೆರವಣಿಗೆ ಕಾರ್ಯಕ್ರಮದೊಂದಿಗೆ ಗಡಿಭಾಗದ ಸಮಸ್ಯೆಗಳು ಅಹವಾಲುಗಳ ಬಗ್ಗೆ, ವಿಚಾರಗೋಷ್ಠಿ, ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡ ಒಂದು ದಿನದ ಗಡಿ ಉತ್ಸವವನ್ನುನಡೆಸಲಾಗುವುದು ಎಂದು ತಿಳಿಸಿದರು. ಗಡಿ ಉತ್ಸವಕ್ಕೆ ಶಾಸಕರುಗಳನ್ನು, ಸಂಬಂಧಪಟ್ಟ ಅಧಿಕಾರಿಗಳನ್ನು ಬರಮಾಡಿಕೊಂಡು ಅವರ ಸಮ್ಮುಖದಲ್ಲಿ ವಿಚಾರಗೋಷ್ಠಿ ನಡೆಸಿ, ಗಡಿ ಭಾಗದ ಸಮಸ್ಯೆ ಗಳಿಗೆ ಸಂಬಂಧ ಪಟ್ಟ ನಿರ್ಣಯ ಮಂಡನೆ ಮಾಡಿ…
ಮಡಿಕೇರಿ ಡಿ.13 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಕೊಡಗು ಜಿಲ್ಲೆಯ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಇಲ್ಲಿಯವರೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರವನ್ನು ನಿಭಾಯಿಸಬಲ್ಲ ಸಮರ್ಥ ಅಭ್ಯರ್ಥಿಗಳು ಕೊಡಗು ಜಿಲ್ಲೆಯಲ್ಲೂ ಇದ್ದಾರೆ. ರಾಜಕೀಯ ಪಕ್ಷಗಳು ಕೇವಲ ಮತಬ್ಯಾಂಕ್ ಗಾಗಿ ಕೊಡಗನ್ನು ಅವಲಂಬಿಸದೆ ಕೊಡಗಿನವರಿಗೂ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಲೋಕಸಭಾ ಕ್ಷೇತ್ರದ ಹಂಚಿಕೆಯಲ್ಲಿ ಕೊಡಗು ಅತಂತ್ರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹಿಂದೆ ಮಂಗಳೂರು ಕ್ಷೇತ್ರದೊಂದಿಗೆ ಸಹಿಸಿಕೊಂಡ ಕೊಡಗು, ಇದೀಗ ಮೈಸೂರಿನೊಂದಿಗೆ ಹೊಂದಿಕೊಂಡಿದೆ. ಆಮದು ಅಭ್ಯರ್ಥಿಗಳಿಂದ ಕೊಡಗು ಜಿಲ್ಲೆಗೆ ನ್ಯಾಯ ದೊರೆಯುವ ವಿಶ್ವಾಸ ಇಲ್ಲಿನ ಜನರಿಗಿಲ್ಲ. ಜಿಲ್ಲೆಯನ್ನು ಜ್ವಲಂತ ಸಮಸ್ಯೆಗಳು ಕಾಡಿದಾಗ ಇಲ್ಲಿಯವರೆಗಿನ ಸಂಸದರುಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಹೊರಗಿನ ಅಭ್ಯರ್ಥಿಗಳಿಗೆ ಇಚ್ಛಾಶಕ್ತಿಯ ಕೊರತೆ ಇರುತ್ತದೆ, ಆದರೆ ಸ್ಥಳೀಯರಾದರೆ ಕೊಡಗಿನ ಬಗ್ಗೆ ಕಾಳಜಿ ಇರುತ್ತದೆ ಮತ್ತು…
ಮಡಿಕೇರಿ ಡಿ.13 : ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ” ಎಂಬ ದ್ಯೇಯ ವಾಕ್ಯದಡಿಯಲ್ಲಿ ವಿರಾಜಪೇಟೆ ನಗರದಲ್ಲಿ ಮಹಿಳಾ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಚೌಕಿಯಲ್ಲಿ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಈ ಬೇಟಿ ಬಚಾವ್ ಬೇಟಿ ಪಡಾವ್ ಎಂಬುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭ ಪಶು ವೈದ್ಯಾಧಿಕಾರಿ ಡಾ.ರಾಕೇಶ್ ಮಾತನಾಡಿ, ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡಲು ಮಾತ್ರ ಅಲ್ಲ, ಅವರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ ಎಂದು ತಿಳಿಸಿದರು. ನಂತರ ವಿರಾಜಪೇಟೆಯ ಗಡಿಯಾರ ಕಂಬದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿರಾಜಪೇಟೆ ಪುರಸಭೆ ಸದಸ್ಯ ಮೊಹಮದ್ ರಾಫಿ, ಹೆಣ್ಣು ಮಕ್ಕಳ ಮೇಲಿನ ಶೋಷಣೆಯನ್ನು ನಿಲ್ಲಿಸಿ, ಅವರಿಗೆ ಶಿಕ್ಷಣವನ್ನು ನೀಡಿ. ಶಿಕ್ಷಣವನ್ನು ನೀಡಿದಾಗ ಅವರು ಎಲ್ಲಾ ರೀತಿಯಲ್ಲಿಯೂ ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು. ಮಾತ್ರವಲ್ಲದೆ ಮಹಿಳಾ ಜಾಗೃತಿಯ ವಿಭಿನ್ನ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು. ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜಾಗೃತಿ…
ಮಡಿಕೇರಿ ಡಿ.13 : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಗೌಡ ಸಮಾಜಗಳ ಒಕ್ಕೂಟ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜ ಸಂಘಟನೆಗಳ ಸಹಯೋಗದಲ್ಲಿ ‘ಅರೆಭಾಷೆ ದಿನಾಚರಣೆ’ಯು ಡಿ.15 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.






