ಮಡಿಕೇರಿ ಜ.7 : ಕುಮಾರಪರ್ವತದ ತಪ್ಪಲಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪಾದುಕೆಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ಪೂಜೆ ಸಲ್ಲಿಸಲಾಯಿತು. ವರ್ಷಕ್ಕೆ ಒಂದು ಬಾರಿ ಮಾತ್ರ ಕುಕ್ಕೆ ದೇಗುಲದ ವತಿಯಿಂದ ಇಲ್ಲಿ ಪೂಜೆ ನೆರವೇರುತ್ತದೆ. :ಪೌರಾಣಿಕ ಹಿನ್ನೆಲೆ: ಕುಮಾರಪರ್ವತದಲ್ಲಿ ಕುಮಾರಸ್ವಾಮಿಯು ತಾರಕಾದಿ ರಾಕ್ಷಸರನ್ನು ಕೊಂದು ಕತ್ತಿಯ ಅಲಗನ್ನು ಕುಮಾರಪರ್ವತದಲ್ಲಿ ಹುಟ್ಟುವ ಕುಮಾರಧಾರಾ ನದಿಯಲ್ಲಿ ತೊಳೆದನು. ಬಳಿಕ ಷಣ್ಮುಖನು ವಾಸುಕಿಯೊಂದಿಗೆ ಕುಕ್ಕೆ ಕ್ಷೇತ್ರದಲ್ಲಿ ನೆಲೆಯಾದನು ಎಂದು ಕ್ಷೇತ್ರ ಪುರಾಣ ಉಲ್ಲೇಖಿಸಿದೆ. ತಾರಕಾದಿ ರಾಕ್ಷಸರನ್ನು ಕುಮಾರಸ್ವಾಮಿ ಈ ಪರ್ವತ ಶ್ರೇಣಿಯಲ್ಲೇ ವಧೆ ಮಾಡಿದನು. ಈ ಪರ್ವತ ಶ್ರೇಣಿಯಲ್ಲೇ ತ್ರಿಮೂರ್ತಿಗಳ ಸಮ್ಮುಖದಲ್ಲಿ ಮಾರ್ಗಶಿರ ಶುದ್ಧ ಷಷ್ಠಿ(ಚಂಪಾಷಷ್ಠಿ)ಯ ದಿನ ದೇವೇಂದ್ರನ ಮಗಳಾದ ದೇವಸೇನೆಯನ್ನು ಷಣ್ಮುಖನಿಗೆ ವಿವಾಹ ಮಾಡಿಸಿ ಪಟ್ಟಾಭಿಷೇಕ ಮಾಡಿಸಲಾಯಿತು. ಈ ಅಭಿಷೇಕದ ನೀರು ಮುಂದೆ ಹರಿದು ಕುಮಾರಧಾರಾ ನದಿಯಾಯಿತು ಎಂದೂ ಪುರಾಣಗಳು ಉಲ್ಲೇಖಿಸಿವೆ. ಕುಮಾರಪರ್ವತದಲ್ಲಿ ಷಣ್ಮುಖನಿಗೆ ವಿವಾಹವಾದ ಪ್ರದೇಶದಲ್ಲಿ ಈಗಲೂ ಸುಬ್ರಹ್ಮಣ್ಯನ ಪಾದಗಳು ಇವೆ. ಇದನ್ನು ಕುಮಾರಪಾದ ಎನ್ನುತ್ತಾರೆ. ಇದರ ಪಕ್ಕದಲ್ಲಿ ವಾಸುಕಿಯೂ ಗೋಚರಿತವಾಗಿದೆ. ಇದಕ್ಕೆ…
ಲೇಖಕ: admin
ಕುಶಾಲನಗರ ಜ.7 : ಕುಶಾಲನಗರದ ಅಲ್ ಇಹ್ಸಾನ್ ಕಮಿಟಿ ವತಿಯಿಂದ ೧೪ ನೇ ವರ್ಷದ ಬಡ ಹೆಣ್ಣು ಮಕ್ಕಳ ವಿವಾಹ ಕಾರ್ಯಕ್ರಮವನ್ನು ಕುಶಾಲನಗರದ ಶಾಧಿ ಮಹಿಲ್ ನಲ್ಲಿ ನಡೆಸಲಾಯಿತು. ಅಲ್ ಇಹ್ಸಾನ್ ಕಮಿಟಿ ಅಧ್ಯಕ್ಷರಾದ ಎಮ್.ಇ.ಮುಸ್ತಫಾರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಬಡ ಹೆಣ್ಣುಮಕ್ಕಳ ವಿವಾಹ ಕಾರ್ಯಕ್ರಮ ನೆರವೇರಿಸಲಾಯಿತು. ವಧುವಿಗೆ ೪೦ ಗ್ರಾಂ ಚಿನ್ನ, ವಸ್ತ್ರ ಹಾಗೂ ವರನಿಗೆ ವಸ್ತ್ರವನ್ನು ವಿತರಿಸಲಾಯಿತು. ಈ ಕುರಿತು ಮಾತನಾಡಿದ ಅಲ್ ಇಹ್ಸಾನ್ ಕಮಿಟಿ ಅಧ್ಯಕ್ಷ ಎಮ್.ಇ.ಮುಸ್ತಫಾ, ಪ್ರತೀ ವರ್ಷದಂತೆ ಈ ಬಾರಿಯೂ ಬಡ ಹೆಣ್ಣುಮಕ್ಕಳ ವಿವಾಹವನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಆರ್ಥಿಕವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಹಾಗೆಯೇ ಅಲ್ ಇಹ್ಸಾನ್ ನ ಪದಾಧಿಕಾರಿಗಳಿಗೆ ಹಾಗೂ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು. ಈ ಸಂದರ್ಭ ಕುಶಾಲನಗರದ ಧರ್ಮುಗುರುಗಳಾದ ನಾಸೊರ್ ಫೈಜಿ಼, ದಾರುಲ್ ಉಲೂಂ ಮದ್ರಸದ ಪ್ರಾಂಶುಪಾಲರಾದ ತಮ್ಲೀಕ್ ದಾರಿಮಿ, ದಾರುಲ್ ಉಲೂಂ ಕಮಿಟಿ ಪದಾಧಿಕಾರಿಗಳು, ಅಲ್ ಇಹ್ಸಾನ್ ಕಮಿಟಿ ಪದಾಧಿಕಾರಿಗಳು ಹಾಗೂ ಇನ್ನಿತರರು ಇದ್ದರು.
ಮಡಿಕೇರಿ ಜ.7 : ರಾಜ್ಯ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಜ.8 ರಂದು ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ರಾಷ್ಟ್ರಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜ.7 : ರೋಟರಿ ರಸ್ತೆ ಸುರಕ್ಷತಾ ಅಭಿಯಾನದಡಿಯಲ್ಲಿ ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಎರಡು ಸೂಚನಾ ಫಲಕಗಳನ್ನು ಅಳವಡಿಸಲಾಯಿತು. ಮೈಸೂರು ಕಡೆಯಿಂದ ಮಡಿಕೇರಿ ನಗರ ಪ್ರವೇಶಿಸುವ ಮತ್ತು ಮಡಿಕೇರಿ ನಗರದಿಂದ ಸಿದ್ದಾಪುರ ಕಡೆಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ ಫಲಕಗಳನ್ನು ಹಾಕಲಾಗಿದೆ. ಮಡಿಕೇರಿ ನಗರದ ಸಂಚಾರಿ ಪೊಲೀಸ್ ಠಾಣಾ ಎಎಸ್ಐ ನಂದ ಹಾಗೂ ರೋಟರಿ ವುಡ್ಸ್ ನ ಅಧ್ಯಕ್ಷ ವಸಂತ್ ಕುಮಾರ್ ಜಂಟಿಯಾಗಿ ಫಲಕಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಎಎಸ್ಐ ನಂದ ರಸ್ತೆ ಸುರಕ್ಷತಾ ಅಭಿಯಾನ ಒಂದು ನಿಲ್ಲದ ಪ್ರಕ್ರಿಯೆಯಾಗಿದೆ. ಇದು ಸದಾ ನಡಿಯುತ್ತಿರಬೇಕು, ಆ ಮೂಲಕ ಜನ ಜಾಗೃತಿಯನ್ನು ಮೂಡಿಸುತ್ತಿರಬೇಕು ಎಂದರು. ರೋಟರಿ ಸಂಸ್ಥೆ ನಡೆಸುತ್ತಿರುವ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪೊಲೀಸ್ ಇಲಾಖೆಯೊಂದಿಗೆ ಸೇರಿಕೊಂಡು ರಸ್ತೆ ಸುರಕ್ಷತೆ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವೆಂದರು. ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಮಾತನಾಡಿ ರೋಟರಿ ಸಂಸ್ಥೆ ಹಲವಾರು ಜನೋಪಯೋಗಿ…
ಮಡಿಕೇರಿ ಜ.6 : ಬೆಂಗಳೂರಿನಲ್ಲಿ ನಡೆಯುತ್ತಿರುವ ಅಸೋಸಿಯೇಷನ್ ಆಫ್ ಓಟೋಲರಿಂಗೋಲಜಿಸ್ಟ್ ಆಫ್ ಇಂಡಿಯಾದ (AOICON) 75ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಕೊಡಗಿನ ಸಂಸ್ಕೃತಿ ಸಿರಿಯ ಆಕರ್ಷಿಸಿತು. ಬೆಂಗಳೂರಿನ ಸ್ವಿಸ್ ಟೌನ್ ನ ಕ್ಲಾಕ್ಸ್ ಎಕ್ಸೋಟಿಕಾ ಸೆಂಟರ್ ನಲ್ಲಿ ಜ.5ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೊಡಗಿನ ಸಂಸ್ಕೃತಿ ಬಿಂಬಿಸುವ ಮದುಮಗ, ಮದುಮಗಳು, ಬೇಟೆಗಾರ, ಬಿಳಿ ಮತ್ತು ಕಪ್ಪು ಕುಪ್ಯಾಧಾರಿಗಳು ಗಮನ ಸೆಳೆದರು. ಕೊಡವ ಸಂಸ್ಕೃತಿಯ ಆಭರಣಗಳ ವಿವರಣೆ ಸಹಿತ ಫ್ಯಾಶನ್ ಶೋ, ಕೊಡವ ಹಾಡಿನ ನೃತ್ಯ, ವಾಲಗ ನೃತ್ಯ ಕೊಡಗಿನ ನಟಿ, ನಿರ್ಮಾಪಕಿ, ಸಹ ನಿರ್ದೇಶಕಿ, ಕವಿಯತ್ರಿ ಈರಮಂಡ ಹರಿಣಿ ವಿಜಯ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತಿ ಸಿರಿ ಬಳಗ ಮೂರ್ನಾಡುವಿನ ಸದಸ್ಯರಾದ ತೋರೆರ ನಳಿನಿ ಅಯ್ಯಪ್ಪ, ಕೋಲೆಯಂಡ ನಿಶಾ ಮೋಹನ್, ಹೈ ಕೋರ್ಟ್ ನ್ಯಾಯವಾದಿ ಆನೇಡ ಹರೀಶ್ ಗಣಪತಿ, ತೋತಿಯಂಡ ಕಿರಣ್ ಸೋಮಣ್ಣ, ಅಮ್ಮಾಟಂಡ ದೇವಯ್ಯ, ವಿಂದ್ಯಾ ದೇವಯ್ಯ ಸೇರಿದಂತೆ 25 ಮಂದಿಯ ತಂಡ ಕೊಡವ ಸಂಸ್ಕೃತಿಯನ್ನು ಪ್ರತಿಬಿಂಬಿಸಿ ನೆರೆದಿದ್ದ ಗಣ್ಯರು…
ಮಡಿಕೇರಿ ಜ.6 : ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಮೃತ ನಗರೋತ್ಥಾನ ಯೋಜನಾ ಕಾಮಗಾರಿಯನ್ನು ಪರಿಶೀಲಿಸಿದರು. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜ್ ಅವರು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ಹಾಗೂ ಪಿಎಂಸಿ ಅವರ ಜೊತೆ ಸ್ಥಳ ಪರಿಶೀಲಿಸಿದರು. ನಗರಸಭೆ ವ್ಯಾಪ್ತಿಯಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ ರಾಜಕಾಲುವೆಗೆ ನಿರ್ಮಿಸಲಾದ ಮಳೆ ನೀರು ಚರಂಡಿ, ವಾರ್ಡ್ ನಂ 1 ರ ಆನಂದ್ ಮನೆಯಿಂದ ಸುಮತ್ ಮನೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ವಾರ್ಡ್ ನಂ.5 ರಲ್ಲಿ ಆಟೋ ಯಲ್ಲಪ್ಪ ಮನೆಯಿಂದ ಕಸ್ತೂರಿ ಮನೆ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು ಹಾಗೂ ಸ್ಥಳದಲ್ಲಿಯೇ ಕೋರ್ ಕಟ್ಟಿಂಗ್ ಮಾಡಿಸಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ಗುಣಮಟ್ಟದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರಿಕೆವಹಿಸಿ ಕಾಮಗಾರಿ ನಿರ್ವಹಿಸುವಂತೆ ಕಾಮಗಾರಿಗಳ ಉಸ್ತುವಾರಿ ಹೊತ್ತಿರುವ ಕಾರ್ಯಪಾಲಕ ಅಭಿಯಂತರರು ಮತ್ತು ಪಿ.ಎಂ.ಸಿರವರಿಗೆ ನಿರ್ದೇಶನ…
ಮಡಿಕೇರಿ ಜ.6 : ಅಯೋಧ್ಯೆಯ ಶ್ರೀ ರಾಮಮಂದಿರದ ಪ್ರತಿಷ್ಠಾಪನೆಯಂದು ಅಭಿಷೇಕ ಮಾಡಲು ದೇಶಾದ್ಯಂತ ಪವಿತ್ರ ಸಪ್ತನದಿಗಳ ತೀರ್ಥವನ್ನು ಸಂಗ್ರಹಿಸುತ್ತಿದ್ದು, ದಕ್ಷಿಣ ಭಾರತದ ಪುಣ್ಯನದಿ ಕಾವೇರಿ ಮಾತೆಯ ಪವಿತ್ರ ತೀರ್ಥವನ್ನು ಅಖಿಲ ಭಾರತೀಯ ಸಂತ ಸಮಿತಿಯ ಕರ್ನಾಟಕ ಘಟಕ, ತಮಿಳುನಾಡು ಘಟಕ ಹಾಗೂ ಕೊಡಗು ಜಿಲ್ಲಾ ಘಟಕ, ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಘಟಕದ ಪದಾಧಿಕಾರಿಗಳು ತಲಕಾವೇರಿಯಲ್ಲಿ ಸ್ವೀಕರಿಸಿದರು. ಶನಿವಾರದಂದು ತಲಕಾವೇರಿಯಲ್ಲಿ ತಮಿಳುನಾಡು ರಾಜ್ಯದ ಮಾಯಿಲದುತ್ತುರೆ ಜಿಲ್ಲೆಯ ಧರ್ಮಾಪುರಂ ಅಧೀನಂನ ಪೀಠಾಧಿಪತಿ ಮಸಿಲಮಣಿ ದೇಸಿಗ ಜ್ಞಾನ ಸಂಬಂಧ ಸ್ವಾಮೀಜಿ ಅವರು ಹೋಮ ಹವನದೊಂದಿಗೆ ಕಾವೇರಿ ಮಾತೆಯ ನಾಮಜಪ ಮಾಡಿ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಪವಿತ್ರ ತೀರ್ಥವನ್ನು ಬ್ರಹ್ಮಕುಂಡಿಕೆಯಿಂದ ತಲಕಾವೇರಿ ದೇವಾಲಯದ ಪ್ರಧಾನ ಅರ್ಚಕರಾದರಿಂದ ಸ್ವೀಕರಿಸಿದರು. ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಅಧ್ಯಕ್ಷ ಮಂಗಳೂರಿನ ಓಂ ಶ್ರೀ ಮಠದ ಗುರುಗಳಾದ ಮಹಾಮಂಡಲೇಶ್ವರ ಶ್ರೀ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಸಹ ಅಧ್ಯಕ್ಷೆ ಮಾತಾಶ್ರೀ ಶಿವಜ್ಞಾನಮಹಿ ಸರಸ್ವತಿ , ತಮಿಳುನಾಡು ರಾಜ್ಯದ ಸಂತ…
ಮಡಿಕೇರಿ ಜ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಜ.8 ರಂದು ಮಧ್ಯಾಹ್ನ 2 ಗಂಟೆಗೆ ಪೊನ್ನಂಪೇಟೆ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಎಸ್.ಮಧು ಬಂಗಾರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಚಿವರಾದ ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷರಾದ ಎಚ್.ವಿ.ಗಿರಿಜಾ ಇತರರು ಪಾಲ್ಗೊಳ್ಳಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ…
ಮಡಿಕೇರಿ ಜ.6 : ಪ್ರಸಕ್ತ(2023-24) ಸಾಲಿಗೆ ವಕ್ಫ್ ನೋಂದಾಯಿತ/ ಸಂಘ ಕಾಯ್ದೆಯಡಿ ನೋಂದಾಯಿತ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ 13 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜೊತೆ 2 ವರ್ಷಗಳ ಕಾಲ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು (ಆನ್ಲೈನ್-ಆಪ್ಲೈನ್ ಕೋಚಿಂಗ್) ನೀಡಲು ಹಾಗೂ ಎಸ್ಎಸ್ಎಲ್ಸಿ, ಪಿಯುಸಿ, ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ/ ಎನ್ಐಒಎಸ್, ದೂರ ಶಿಕ್ಷಣ ಮೂಲಕ ನೀಡುವುದಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಮದರಸಾ ಸಂಸ್ಥೆಗಳಿಂದ ಅರ್ಜಿ ಸಲ್ಲಿಸಲು https://dom.karnataka.gov.in ಮೂಲಕ ಅರ್ಹ ನೋಂದಾಯಿತ ಮದರಸಾಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಮದರಸಾ ಸಂಸ್ಥೆಗಳು ರಾಜ್ಯದಲ್ಲಿ ವಕ್ಫ್ ನೋಂದಾಯಿತ/ ಇತರೆ ಸಂಘ ಸಂಸ್ಥೆ ಕಾಯ್ದೆಯಡಿ ನೋಂದಾಯಿತ ಮದರಸಾ ಸಂಸ್ಥೆಯಾಗಿರಬೇಕು. ಮದರಸಾದಲ್ಲಿ 40 ಅರ್ಹ ವಿದ್ಯಾರ್ಥಿಗಳಿರಬೇಕು. ಮದರಸಾಗಳು ತರಗತಿ ಕೊಠಡಿಗಳೊಂದಿಗೆ ವಸತಿ ಸೌಲಭ್ಯ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜನವರಿ, 20 ಕೊನೆಯ ದಿನವಾಗಿದೆ. ಹೆಚ್ಚಿನ…
ಮಡಿಕೇರಿ ಜ.6 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 5 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (https://sevasindhu.karnataka.gov.in/Sevasindhu/DepartmentServicesKannada) ಪೋರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಜನವರಿ, 30 ಕೊನೆಯ ದಿನವಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ 03 ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕಿನ ರಾಜೇಶ್- 8073192914, ಸೋಮವಾರಪೇಟೆ ತಾಲ್ಲೂಕಿನ ಹರೀಶ್ ಟಿ.ಆರ್– 9008685129 ಹಾಗೂ ವಿರಾಜಪೇಟೆ ತಾಲ್ಲೂಕಿನ ಪ್ರಥನ್…






