ಲೇಖಕ: admin

ಮಡಿಕೇರಿ ಜ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಉದ್ಘಾಟನಾ ಕಾರ್ಯಕ್ರಮವು ಜ.12 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ. ಮಂತರ್ ಗೌಡ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ತು ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಬಿ.ಎಂ.ಸರಸ್ವತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೋರನ ಸರಸ್ವತಿ ಪ್ರಕಾಶ್, ನೆಹರು ಯುವ…

Read More

ಮಡಿಕೇರಿ ಜ.6 : ಕುಶಾಲನಗರ ಪುರಸಭೆಯ ನಗರ ಬಡಜನರ ಕಲ್ಯಾಣಕ್ಕಾಗಿ ಶೇ.7.25 ರ ಅನುದಾನದಡಿ ಕುಶಾಲನಗರ ಪುರಸಭೆ ವ್ಯಾಪ್ತಿಯ ನಗರ ಬಡಜನರ ಕಲ್ಯಾಣಕ್ಕಾಗಿ ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ 1 ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು 3 ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ ಸಲ್ಲಿಸಬೇಕು. ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ. ಈ ಸೌಲಭ್ಯ ಪಡೆದುಕೊಳ್ಳಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜನವರಿ, 9 ರ ಸಂಜೆ 5.30 ಗಂಟೆಯೊಳಗೆ ಮುಖ್ಯಾಧಿಕಾರಿ ಪುರಸಭೆ, ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆಯಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಜ.6 : ಧರ್ಮದ ವಿಚಾರದಲ್ಲಿ ಪರಸ್ಪರ ಕಿತ್ತಾಡುತ್ತಾ ಹಗೆ ಸಾಧಿಸುತ್ತಾ ಕೋಮು ಸೌಹಾರ್ದತೆ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಮಸೀದಿ ಆಡಳಿತ ಮಂಡಳಿಯೊಂದು ಅಯ್ಯಪ್ಪ ವ್ರತಧಾರಿಗಳಿಗೆ ಆಸರೆ ನೀಡುವ ಮೂಲಕ ಸಾಮರಸ್ಯ ಮೆರೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 5 ಮಂದಿ ಅಯ್ಯಪ್ಪ ವ್ರತಧಾರಿಗಳು ಮೋಟಾರ್ ಬೈಕ್‍ನಲ್ಲಿ ಶಬರಿಮಲೆಗೆ ಯಾತ್ರೆ ಕೈಗೊಂಡಿದ್ದರು. ರಾತ್ರಿ ವಿರಾಜಪೇಟೆ ತಾಲೂಕಿನ ತಿತಿಮತಿ ಸಮೀಪದ ಎಡತ್ತರ ಗ್ರಾಮ ತಲುಪಿದ ಇವರುಗಳಿಗೆ ಮಳೆಯ ನಡುವೆ ಕಾಡುಗಳಿಂದ ಕೂಡಿದ, ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಮುಂದಕ್ಕೆ ಸಾಗಿದಾಗ ಅಲ್ಲಿ ಲಿವಾಉಲ್ ಹುದಾ ಜುಮಾ ಮಸೀದಿ ಹಾಗೂ ಮದರಸ ಕಾಣಸಿಕ್ಕಿದೆ. ಅಲ್ಲಿಗೆ ತೆರಳಿದ ಇವರುಗಳು ತಂಗಲು ಅವಕಾಶ ಕೇಳಿದ್ದಾರೆ. ಈ ಸಂದರ್ಭ ಮಸೀದಿಯ ಅಧ್ಯಕ್ಷ ಉಸ್ಮಾನ್, ಖತೀಬ್ ಖಮರುದ್ದೀನ್ ಅನ್ವಾರಿ ಹಾಗೂ ಮಸೀದಿಯ ಪದಾಧಿಕಾರಿಗಳು ವ್ರತಧಾರಿಗಳ ಕೋರಿಕೆಗೆ ಸ್ಪಂದಿಸಿ ಎಲ್ಲಾ ಸೌಕರ್ಯವನ್ನು ಒದಗಿಸಿ ಮಸೀದಿ ಬಳಿಯಲ್ಲೇ ಪೂಜೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ. ಅಲ್ಲದೆ ರಾತ್ರಿ ತಂಗಲು ಮದರಸದಲ್ಲಿ ಅವಕಾಶ…

Read More

ಮಡಿಕೇರಿ ಜ.6 : ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ವರದಿ ಸಂಗ್ರಹಿಸುವ ಉದ್ದೇಶದಿಂದ “ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ” ಎಂಬ ಗ್ರಾಮ ಸಂಪರ್ಕ ಕಾರ್ಯಕ್ರಮವನ್ನು ಆಮ್ ಆದ್ಮಿ ಪಾರ್ಟಿ ಆರಂಭಿಸಿದೆ. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿದ ಪ್ರಮುಖರು ಗ್ರಾಮಸ್ಥರಿಂದ ಮಾಹಿತಿ ಪಡೆದರು. ಪೊನ್ನಂಪೇಟೆ ತಾಲ್ಲೂಕಿನ ಬಿರುನಾಣಿ, ಪೂಕಳ, ತೆರಾಲು, ಬೀರುಗ, ಕುಟ್ಟ, ಕೆ.ಬಾಡಗ, ನಾಲ್ಕೇರಿ, ಕಾನೂರು, ಬಾಳೆಲೆ ಮತ್ತು ನಿಟ್ಟೂರು ಗ್ರಾಮಗಳಿಗೆ ಭೇಟಿ ನೀಡಲಾಯಿತು. ಸರ್ಕಾರಿ ಶಾಲೆ ಮತ್ತು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳು, ಶಿಕ್ಷಕರು, ಆಸ್ಪತ್ರೆ ಸಿಬ್ಬಂದಿಗಳ ಸ್ಥಿತಿಗತಿ, ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಭೋಜಣ್ಣ ಸೋಮಯ್ಯ ಅವರು, ಬಹಳಷ್ಟು ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ ಇದೆ, ಶಿಕ್ಷಕರ ಕೊರತೆ ಕಾಡುತ್ತಿದೆ. ಪೂಕಳ, ಬಾಡಗರಕೇರಿ, ಕಲ್ಕೂರು, ತೆರಾಲು…

Read More

ಮಡಿಕೇರಿ ಜ.6 :  ಚೆoಬು ಗ್ರಾಮದ ಊರುಬೈಲ್ ನಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಲಾಯಿತು. ಈ ಸಂದರ್ಭ  ಊರುಬೈಲ್ ನ ಉಪ ವಸತಿಯ ಮಹಿಳೆಯರು ಮಂತ್ರಾಕ್ಷತೆ ವಿತರಿಸಲು ಆಗಮಿಸಿದ ರಾಮ ಭಕ್ತರನ್ನ ಆರತಿ ಬೆಳಗಿ ಬರಮಾಡಿಕೊಂಡರು. ಪಂಚಾಯತ್ ಸದಸ್ಯ ಊರುಬೈಲು ವಸಂತ, ನಿದಿಂಜಿ ರವಿಕುಮಾರ್, ವಿಜಯ ನಿದಿಂಜಿ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಜ.6 : ರಾಮನಗರ ಪಿರಮಿಡ್ ಧ್ಯಾನ ಮಂದಿರ ಹಾಗೂ ವಿವಿಧ ಜಿಲ್ಲೆಗಳ ಪಿರಮಿಡ್ ಕೇಂದ್ರಗಳ ಪಿರಮಿಡ್ ಮಾಸ್ಟರ್ಸ್‍ಗಳಿಂದ ಜ.7 ರಂದು ಮಡಿಕೇರಿಯಲ್ಲಿ “ಅನಾಪಾನಸತಿ ಧ್ಯಾನ” ಉಚಿತ ಧ್ಯಾನ ಶಿಬಿರ ನಡೆಯಲಿದೆ. ನಗರದ ಓಂಕಾರ ಸದನದಲ್ಲಿ ಮಧ್ಯಾಹ್ನ 3 ರಿಂದ ಸಂಜೆ 6ರ ತನಕ ನಡೆಯಲಿರುವ ಶಿಬಿರದ ಅಧ್ಯಕ್ಷತೆಯನ್ನು ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ.ರಾಜೇಂದ್ರ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಮಾಜಿ ಅಧ್ಯಕ್ಷ ಎಂ.ಪಿ.ಕೃಷ್ಣರಾಜು ಪಾಲ್ಗೊಳ್ಳಲಿದ್ದಾರೆ ಎಂದು ಶಿಬಿರದ ಸಂಯೋಜಕ ಹೆಚ್.ಎಂ.ಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Read More

ಮಡಿಕೇರಿ ಜ.6 : ಹಿರಿಯ ಪತ್ರಕರ್ತ ಕೋವರ್ ಕೊಲ್ಲಿ ಇಂದ್ರೇಶ್, ಸಹೋದರಿ ಕೆ.ಸಿ.ಸವಿತ , ಸಹೋದರರಾದ ಕೆ.ಸಿ ಸುಂದ್ರೇಶ್‌ ಮತ್ತು ಕೆ.ಸಿ ಚಂದ್ರೇಶ್‌ ತಮ್ಮ ತಾಯಿ ಶ್ರೀಮತಿ ಬಿ.ಸಿ.ಪುಷ್ಪಲತಾ ಚಂದ್ರಶೇಖರ್‌ ಅವರ ಹೆಸರಿನಲ್ಲಿ ಕೊಡಗು ಪ್ರೆಸ್ ಕ್ಲಬ್ ನಲ್ಲಿ ನೂತನ ದತ್ತಿ ಪ್ರಶಸ್ತಿ ಸ್ಥಾಪಿಸಿದ್ದು, ದತ್ತಿ ಹಣ ರೂ.1 ಲಕ್ಷ ದ ಚೆಕ್‌ ಅನ್ನು ಪ್ರೆಸ್ ಕ್ಲಬ್ ಗೆ ಹಸ್ತಾಂತರಿಸಿದರು. ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೆಸ್ ಕ್ಲಬ್ ಖಜಾಂಚಿ ಬೊಳ್ಳಜಿರ ಬಿ. ಅಯ್ಯಪ್ಪ ಅವರು ಚೆಕ್ ಸ್ವೀಕರಿಸಿದರು. ಕ್ಲಬ್ ಸದಸ್ಯರಿಗೆ ಪ್ರತಿ ವರ್ಷವೂ ದತ್ತಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿದ್ದು, ಮಾನವೀಯ ವರದಿ ವಿಭಾಗದ ಅತ್ಯುತ್ತಮ ವರದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈಗಾಗಲೇ ಪ್ರೆಸ್ ಕ್ಲಬ್ ನಲ್ಲಿ ಎರಡು ದತ್ತಿ ಪ್ರಶಸ್ತಿ ಇದೆ ಎಂದು ತೇಜಸ್ ಮಾಹಿತಿ ನೀಡಿದರು. ಕೋವರ್ ಕೊಲ್ಲಿ ಇಂದ್ರೇಶ್ ಮಾತನಾಡಿ, 1998 ರಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ತಮ್ಮ ತಂದೆ…

Read More

ಮಡಿಕೇರಿ ಜ.6 : ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸರ ಕ್ರಮವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯ ವಿರಾಜಪೇಟೆ ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿರಾಜಪೇಟೆ ಪೊಲೀಸ್ ಉಪ ಅಧಿಕ್ಷಕರ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಯುವ ಘಟಕದ ಪ್ರಮುಖ ಸುನೀಲ್, ರಾಷ್ಟ್ರವೇ ಪ್ರಸ್ತುತ ಪ್ರಭು ಶ್ರೀ ರಾಮಚಂದ್ರರ ಭೌವ್ಯ ಮಂದಿರ ನಿರ್ಮಾಣ ಉದ್ಘಾಟನೆಯ ಹೊಸ್ತಿಲ್ಲಿದೆ. ಇಂತಹ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧನ ಮಾಡಿ ಹಿಂದೂ ಸಮಾಜಕ್ಕೆ ಕಳಂಕ ತರುವಂತೆ ಮಾಡಿರುವುದು ಖಂಡನೀಯ ಎಂದರು. ಹಬ್ಬದ ವಾತವರಣದಲ್ಲಿರುವ ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದು, ಹಿಂದೂಗಳನ್ನು ಧಮನ ಮಾಡುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು. ಹಿಂದೂಗಳ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ಸಂಘಟನೆಯ ವತಿಯಿಂದ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಹಿಂದೂ…

Read More

ಪುತ್ತೂರು ಜ.6 : ತಂತ್ರಜ್ಞಾನಗಳು ಬದಲಾದಂತೆ ಕ್ರೀಡಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿವೆ. ಮ್ಯಾಟ್ ಅಂಕಣಗಳು, ನಿಖರ ಫಲಿತಾಂಶವನ್ನು ನೀಡಬಲ್ಲ ಎಲೆಕ್ಟ್ರಾನಿಕ್ ತಂತ್ರಜ್ಞಾನಗಳು ಬಳಕೆಯಾಗುತ್ತಿದ್ದು, ಕ್ರೀಡಾ ಕ್ಷೇತ್ರದ ಉನ್ನತಿಗೆ ಸಹಕಾರಿಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ಖೋಖೋ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಆಟವನ್ನು ಕ್ರೀಡಾಸ್ಫೂರ್ತಿಯಿಂದ ಆಡಬೇಕು ಮತ್ತು ಅಲ್ಲಿನ ಘಟನೆಗಳನ್ನು ಕ್ರೀಡಾಂಗಣದಿಂದ ಹೊರ ಹೋಗುವಾಗ ಮರೆತುಬಿಡಬೇಕು ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಕ್ರೀಡೆಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ದೈಹಿಕ ಸ್ಥಿರತೆಯನ್ನು ನೀಡುವಲ್ಲಿ ಸಹಕಾರಿಯಾಗಿದೆ. ತನ್ಮೂಲಕ ಶಾರೀರಿಕ ದೃಡತೆ ಮತ್ತು ಆತ್ಮವಿಶ್ವಾಸವನ್ನು ಇದು ಹೆಚ್ಚಿಸುತ್ತದೆ ಎಂದರು. ಕಾಲೇಜು ಪಾಠದ ಜತೆಗೆ ಪಠ್ಯೇತರ ವಿಷಯಗಳಿಗೂ ಸಮಾನ ಅವಕಾಶವನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು…

Read More

ಮಡಿಕೇರಿ ಜ.6 :  ಜೆಸಿಐ ಭಾರತದ ವಲಯ 14ರಲ್ಲಿರುವ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ 13ನೇ ಅಧ್ಯಕ್ಷರಾಗಿ ಬಲ್ಯಮಂಡೂರು ಗ್ರಾಮದ ಪೆಮ್ಮಂಡ ಮಂಜು ಬೋಪಣ್ಣ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. 2023ನೇ ಸಾಲಿನ ಘಟಕ ಅಧ್ಯಕ್ಷ ಮುಕ್ಕಾಟಿರ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ  ಘಟಕದ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, 2024ನೇ ಸಾಲಿಗೆ ನೂತನ ಘಟಕಾಡಳಿತ ಮಂಡಳಿ ಪದಾಧಿಕಾರಿಗಳನ್ನು  ಆಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ಬೊಜ್ಜಂಗಡ ಎಂ.ಚಂಗಪ್ಪ ಹಾಗೂ ಘಟಕದ ಕಾರ್ಯದರ್ಶಿಯಾಗಿ ಮೂರನೇ ಬಾರಿಗೆ ಚೆಟ್ಟೋಳಿರ ಶರತ್ ಸೋಮಣ್ಣ ಅವರನ್ನು  ಪುನರಾಯ್ಕೆಗೊಳಿಸಿತು. ಘಟಕದ ಉಪಾಧ್ಯಕ್ಷರಾಗಿ  ಹೆಚ್.ಆರ್. ಸತೀಶ್ (ನಿರ್ವಹಣೆ), ಟಿ.ಜೆ. ಆಂಟೋನಿ (ತರಬೇತಿ), ಎಲ್.ಎನ್.ಅಣ್ಣಪ್ಪ  (ಅಭಿವೃದ್ಧಿ ಮತ್ತು ಬೆಳವಣಿಗೆ),  ಕೆ.ಯು. ತನು ತಿಮ್ಮಯ್ಯ (ಕಾರ್ಯಕ್ರಮ),  ಸಿ.ಬಿ.ಸೋಮಣ್ಣ (ವ್ಯವಹಾರ),  ಟಿ. ಜಿ ಗಿರೀಶ್ (Pಡಿ & ಮಾರ್ಕೆಟಿಂಗ್)  ಜಂಟಿ ಕಾರ್ಯದರ್ಶಿಯಾಗಿ ಟಿ.ಎಸ್. ಸುಜಿತ್ ನೇಮಕ ಮಾಡಲಾಯಿತು. ನಿರ್ದೇಶಕರಾಗಿ ಎಂ.ಪಿ. ಬೋಪಣ್ಣ, ಪಿ.ಬಿ.ಗೌತಮ್, ಕೆ.ಎಲ್.ಅಕ್ಷಯ್,  ಜಿ.ಪಿ. ಸ್ವಾಮಿ, ಟಿ.ಜಿ.ಲಿಖಿತ್ ಕುಮಾರ್ ಅವರನ್ನು…

Read More