ಲೇಖಕ: admin

ಮಡಿಕೇರಿ ಡಿ.13 : ವಾಲ್ನೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಸ್ಥಳೀಯ ಬೆಳೆಗಾರ ಭುವನೇಂದ್ರ ಎಂಬುವವರ ತೋಟಕ್ಕೆ ದಾಳಿ ಮಾಡಿದ ಸುಮಾರು 9ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕೃಷಿ ಬೆಳೆಗಳನ್ನು ನಾಶ ಮಾಡಿದೆ. ಏಳು ವರ್ಷಗಳಾಗಿರುವ 100 ಕ್ಕೂ ಅಧಿಕ ಅಡಿಕೆ ಗಿಡಗಳು, ಕಾಫಿ ಗಿಡ, ಕಾಳು ಮೆಣಸು ಬಳ್ಳಿಗಳನ್ನು ಧ್ವಂಸ ಮಾಡಿದೆ. ಸುತ್ತಮುತ್ತಲ ತೋಟ ಮತ್ತು ಗದ್ದೆಗಳಿಗೂ ಲಗ್ಗೆ ಇಟ್ಟಿರುವ ಕಾಡಾನೆಗಳು ಕೃಷಿಕರ ಕೈಗೆ ಬಂದ ಫಸಲನ್ನು ಬಾಯಿಗೆ ಬಾರದಂತೆ ಮಾಡಿವೆ. ಈ ಭಾಗದ ಬೆಳೆಗಾರರಿಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಗ್ರಾಮಸ್ಥರು ಹಾಗೂ ಕಾರ್ಮಿಕರು ಆತಂಕದಿಂದಲೇ ದಿನದೂಡಬೇಕಾದ ಪರಿಸ್ಥಿತಿ ಬಂದೊದಗಿದೆ. ಕಾಡಾನೆ ಹಾವಳಿ ಕುರಿತು ಬೇಸರ ವ್ಯಕ್ತಪಡಿಸಿರುವ ಭುವನೇಂದ್ರ, ಅರಣ್ಯ ಇಲಾಖೆ ತಕ್ಷಣ ಈ ಭಾಗದ ರೈಲ್ವೆ ಕಂಬಿಯ ಬೇಲಿಗಳನ್ನು ದುರಸ್ತಿ ಪಡಿಸಬೇಕೆಂದು ಒತ್ತಾಯಿಸಿದರು. ಕಾಡಾನೆಗಳ ದಾಳಿಯಿಂದಲೇ ಬೇಲಿಗಳು ಹಾನಿಗೊಳಗಾಗಿದ್ದು, ಇಲಾಖೆ ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು. ಕಾಡಾನೆ ಹಾವಳಿಯಿಂದ…

Read More

ಪುತ್ತೂರು ಡಿ.13 : ಆಧುನಿಕ ಜೀವನ ಪದ್ದತಿಗೆ ಮಾರುಹೋಗಿರುವ ಯುವ ಜನತೆ ಕೃಷಿ ಕ್ಷೇತ್ರವನ್ನು ಕಡೆಗಣಿಸಿದೆ. ಇದರಿಂದಾಗಿ ಕೆಲವು ವಿಷಯಗಳಲ್ಲಿ ನುರಿತ ಕೆಲಸಗಾರರೇ ಸಿಗುತ್ತಿಲ್ಲ. ಅಡಿಕೆಗೆ ಔಷದ ಸಿಂಪಡಣೆ ಅಡಿಕೆ ಕೊಯ್ಲು, ತೆಂಗಿನಕಾಯಿ ಕೊಯ್ಲು ಮುಂತಾದ ನಾಜೂಕಿನ ಕೆಲಸಗಳನ್ನು ಬೆರಳೆಣಿಯಷ್ಟು ಮಂದಿಯಷ್ಟೇ ಮಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ಮನಗಂಡು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ರ‍್ಟಿಫೀಶಿಯನ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಗಳ ತಂಡವು ಹೊಸ ಆಲೋಚನೆಯೊಂದಿಗೆ ಇದಕ್ಕೊಂದು ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ತಯಾರಿಸಿದ ಯೋಜನಾ ವರದಿಗೆ ಸ್ಟಾರ್ಟ್ ಅಪ್ ಚಾಲೆಂಜಸ್ ಸ್ಪರ್ಧೆಯಲ್ಲಿ ಒಂದು ಲಕ್ಷ ರೂಗಳ ನಗದು ಬಹುಮಾನ ಲಭಿಸಿದೆ. ಕೆಎಸ್‌ಡಿಸಿ ಕರ್ನಾಟಕ ಸರ್ಕಾರ, ಯುಎನ್‌ಡಿಪಿ, ಕೌಶಲ್ಯ ಕರ್ನಾಟಕ, ಸೆವೆನ್ತ್ ಸೆನ್ಸ್, ಎಸ್‌ಎಪಿ ಲ್ಯಾಬ್ಸ್ ಇಂಡಿಯಾ ಲಿಮಿಟೆಡ್, ಕೋಡ್ ಉನ್ನತಿ ಮತ್ತು ಎಜೆಐಇಟಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಎ ಜೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಯೋಜನೆಯನ್ನು ಮಂಡಿಸಿ…

Read More

ಮಡಿಕೇರಿ ಡಿ.13 :  ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸದಸ್ಯರ ಹಿತರಕ್ಷಾ ಸಮಿತಿ ಮನವಿಯ ಮೇರೆಗೆ  ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘದ ಸಮಾಪನ ಆದೇಶವನ್ನು ರದ್ದುಪಡಿಸಿ, ಆಡಳಿತ ಅಧಿಕಾರಿಯವರನ್ನ ನೇಮಕ ಮಾಡಿ ಸಮಿತಿಗೆ ಕೂಡಲೇ ಸಂಘವನ್ನು ರೈತರಿಗೆ ವಾಪಸ್ಸು ನೀಡುವಂತೆ ಒತ್ತಾಯಿಸಿ  ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ  ಸಹಕಾರಿ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಡನೆ ಬೆಳಗಾವಿ ಸುವರ್ಣ ಸೌಧದಲ್ಲಿ ಸಭೆ ನಡೆಸಿದರು. ಮನವಿಗೆ ತ್ವರಿತವಾಗಿ ಸ್ಪಂದಿಸಿ ಸಂಘವನ್ನು ಪುನಶ್ಚೇತನಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ  ಎ.ಎಸ್. ಪೊನ್ನಣ್ಣ,  ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ  ಸಂಘ ಕಾಫಿ ಬೆಳೆಗಾರರ ಪರವಾಗಿ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿದೆ.

Read More

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ಲಾಲ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾದವ್ ಅವರಿಗೆ ರಾಜ್ಯಪಾಲ ಮಂಗುಭಾಯ್ ಪಟೇಲ್ ಪ್ರಮಾಣ ವಚನ ಬೋಧಿಸಿದರು. ಈ  ಸಂದರ್ಭ ಶಾಸಕರಾದ ರಾಜೇಂದ್ರ ಶುಕ್ಲ ಹಾಗೂ ಜಗದೀಶ್ ದೇವ್ಡ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Read More

ಕುಶಾಲನಗರ ಡಿ.13 :  ಕೂಡುಮಂಗಳೂರು ಮತ್ತು ವಾಲ್ನೂರು-ತ್ಯಾಗತೂರು ಗ್ರಾ.ಪಂ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಜಿಲ್ಲಾ ಸಮಾಲೋಚಕರು ಭೇಟಿ ನೀಡಿ, ನದಿ ಪಾತ್ರದ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಡಿ.13 : ಕೆದಕಲ್ ಗ್ರಾಮದ ಶ್ರೀ ಭದ್ರಕಾಳೇಶ್ವರಿ ದೇವಾಲಯದಲ್ಲಿ ಡಿ.18 ರಂದು ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಉತ್ಸವ ನಡೆಯಲಿದೆ. ಶ್ರೀ ಭದ್ರಕಾಳೇಶ್ವರಿ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಯಿಂದಲೇ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ನವಕಳಶ ಪೂಜೆ, ನಾಗರಕಟ್ಟೆಯಲ್ಲಿ ಷಷ್ಠಿ ಪೂಜೆ, ಮಹಾಬಲಿ ಪೀಠಕ್ಕೆ ಅಭಿಷೇಕ, ಮಹಾಮಂಗಳಾರತಿ ನೆರವೇರಲಿದ್ದು, ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು, ಅಧ್ಯಕ್ಷ ಹಾಗೂ ಆಡಳಿತ ಮಂಡಳಿ ಸದಸ್ಯರು ಕೋರಿದ್ದಾರೆ.

Read More

ಮಡಿಕೇರಿ ಡಿ.13 : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಡಿ.18 ರಂದು “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ” ನಡೆಯಲಿದೆ. ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಬೆಳಿಗ್ಗೆ 9 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 10 ಗಂಟೆಗೆ ಶ್ರೀ ಗುಳಿಗ ದೇವರ ವೆಳ್ಳಾಟಂ, 10.30 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬ್ರಮಣ್ಯ ದೇವರ ಶ್ರೀ ಬೂತ ಬಲಿ, 12.20 ಗಂಟೆಗೆ ಮಹಾಮಂಗಳಾರತಿ ಜರುಗಲಿದ್ದು, ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನೆರವೇರಲಿದೆ. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯ ದೇವಾಲಯ ಸಮಿತಿ, ಉತ್ಸವ ಸಮಿತಿ ಹಾಗೂ ಮಹಿಳಾ ವೇದಿಕೆ ಕೋರಿದೆ.…

Read More

ಮಡಿಕೇರಿ ಡಿ.13 :  ವಿರಾಜಪೇಟೆ ತಾಲೂಕು ಅಮ್ಮತಿ ವಲಯದ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್  ವತಿಯಿಂದ  ಕಣ್ಣಂಗಾಲ  ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ  “ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ಹಾಗೂ ಒಕ್ಕೂಟ ಪದಗ್ರಹಣ ಕಾರ್ಯಕ್ರಮ  ನಡೆಯಿತು. ಕಾರ್ಯಕ್ರಮದಲ್ಲಿ ನಂಜನಗೂಡು ಧಾರ್ಮಿಕ ಉಪನ್ಯಾಸಕ  ಯೋಗಾನಂದ ಸ್ವಾಮಿ ಮಾತನಾಡಿ ನಮ್ಮ ಸಂಸ್ಕೃತಿ ಹಿರಿಮೆ ಹಾಗೂ ಧರ್ಮದ ಬಗ್ಗೆ ಉಪನ್ಯಾಸ ನೀಡಿದರು. ಲೀಲಾವತಿ ಮಾತನಾಡಿ,  ಗ್ರಾಮ ಅಭಿವೃದ್ಧಿ ಯೋಜನೆಯಿಂದ ನಡೆಸಲಾಗುವ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ವಿಕಾಸ ಕಾರ್ಯಕ್ರಮಗಳು ವಿಮಾ ಕಾರ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಹೊಸದಾಗಿ ಜವಾಬ್ದಾರಿ ಪಡೆದುಕೊಂಡ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಕಣ್ಣಂಗಾಲ ಸಾಮೂಹಿಕ ಸತ್ಯನಾರಾಯಣ ಪೂಜೆ ಸಮಿತಿ ಅಧ್ಯಕ್ಷರಾದ ಬಿ.ಎಸ್.ರೇಖಾ  ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಣ್ಣಂಗಾಲ ಗ್ರಾ.ಪಂ ಅಧ್ಯಕ್ಷ  ಗ್ರೀಷ್ಮ ರಂಜನ್ ಕುಮಾರ್, ಹಚ್ಚಿನಾಡು ಪ್ರಗತಿಪರ ಕೃಷಿಕ…

Read More

ಮಡಿಕೇರಿ ಡಿ.12 : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸಲು ಒತ್ತಾಯಿಸಿ ವಜಾಗೊಂಡ  ಬೋಧಕೇತರ  ಸಿಬ್ಬಂದಿಗಳು  ಪ್ರತಿಭಟನೆ ನಡೆಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದ  ಅಳುವಾರ  ಸ್ನಾತಕೋತ್ತರ ಕೇಂದ್ರ ಆರಂಭದಿಂದಲೇ  ಸೇವೆಯಲ್ಲಿದ್ದ 24 ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡಲಾಗಿದೆ. ಇದರಿಂದಾಗಿ ತಮ್ಮ ಜೀವನ ಅತಂತ್ರವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.             44. ಮಂದಿ ಬೋಧಕೇತರ ಸಿಬ್ಬಂದಿಗಳ ಪೈಕಿ 18 ಮಂದಿಯನ್ನು ‌ಮಾತ್ರ ಸೇವೆಯಲ್ಲಿ ಮುಂದುವರೆಸಿದ್ದು ಕಳೆದ ಹಲವು ವರ್ಷಗಳಿಂದ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ, ಎಲ್ಲಾ ಅರ್ಹತೆ ಹೊಂದಿರುವ ಸಿಬ್ಬಂದಿಗಳನ್ನು ಕೈಬಿಡಲಾಗಿದೆ. ಅತ್ತ ಮಂಗಳೂರು ವಿಶ್ವವಿದ್ಯಾನಿಲಯ, ಇತ್ತ ಕೊಡಗು ವಿಶ್ವವಿದ್ಯಾಲಯ ನಮ್ಮನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ  ಪ್ರತಿಭಟನಾಕಾರರು,ಸೇವಾ ಅನುಭವ, ಮಾನದಂಡಗಳನ್ನು ಪರಿಗಣಿಸದೆ ಇತ್ತೀಚೆಗೆ ನೇಮಕಗೊಂಡ ಸಿಬ್ಬಂದಿಗಳನ್ನು ಸೇವೆಯಲ್ಲಿ ಮುಂದುವರೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.   ಪ್ರತಿಭಟನಾ ನಿರತರಾದ ಸವಿತಾ ರಾಣಿ, ಕೆ.ಜೆ.ಹರೀಶ್, ಎ.ಆರ್.ಗಣೇಶ್, ಯೋಗೇಶ್…

Read More

ಮಡಿಕೇರಿ ಡಿ.12 : ದೇವಟ್ ಪರಂಬುವಿನಲ್ಲಿ ಕೊಡವರ ನರಮೇಧ ನಡೆದು 238 ವರ್ಷಗಳು ತುಂಬಿದ ಹಿನ್ನೆಲೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಹಿರಿಯರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿತು. ಸಮಾಧಿ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಅವರು 1785 ಡಿ.12 ರಂದು ಷಡ್ಯಂತ್ರದಿಂದ ಸಾವಿರಾರು ಕೊಡವರ ಹತ್ಯೆಯಾಗಿದೆ ಎಂದರು. ಮೈಸೂರು ಸೈನ್ಯವನ್ನು ವಿಶ್ವದ ಅತ್ಯಂತ ಬಲಿಷ್ಠ ಸೇನಾ ಶಕ್ತಿ ಎಂದು ಪರಿಗಣಿಸಲಾಗಿತ್ತು ಮತ್ತು ಯುರೋಪಿಯನ್ ಸೈನ್ಯಕ್ಕಿಂತ ಹೆಚ್ಚು ಶಕ್ತಿಶಾಲಿ ಸೈನ್ಯವಾಗಿತ್ತು. ಅಂತಹ ಪ್ರಬಲ ಸೈನ್ಯವು ಕೊಡವ ಯೋಧ ಜನಾಂಗವನ್ನು ಸೋಲಿಸಲು ಸಾಧ್ಯವಾಗಲಿಲ್ಲ. (“ಮೇಕಿಂಗ್ ಹಿಸ್ಟರಿ ಆಫ್ ಕರ್ನಾಟಕ” ನಲ್ಲಿ ದಾಖಲಿಸಲಾಗಿದೆ) ಕೊಡವ ಬುಡಕಟ್ಟುಗಳು ಅಂತಹ ನುರಿತ ಮತ್ತು ಅತ್ಯುತ್ತಮ ಗೆರಿಲ್ಲಾ ಯೋಧರು. ಆದರೆ ಅವರ ಮಿಲಿಟರಿ ಕೌಶಲ್ಯ ಮತ್ತು ಕುರುಡು ನಿಷ್ಠೆಯನ್ನು ಕೃತಘ್ನ ರಾಜ ಪರಿವಾರವು ವ್ಯರ್ಥಮಾಡಿತು ಮತ್ತು ದುರುಪಯೋಗಪಡಿಸಿಕೊಂಡಿತು. ಕೆಳದಿಯ ಸೈನ್ಯದ…

Read More