ಮಡಿಕೇರಿ ಜ.6 : ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಉಪಟಳ ಆರಂಭಗೊಂಡಿದ್ದು, ಹಸುವೊಂದು ಸಾವನ್ನಪ್ಪಿದೆ. ಪೊನ್ನಂಪೇಟೆ ತಾಲ್ಲೂಕಿನ ನಿಡುಗಂಬ ಗ್ರಾಮದಲ್ಲಿ ಹಾಡಹಗಲೇ ದಾಳಿ ಮಾಡಿದ ಹುಲಿಗೆ ಹಸು ಬಲಿಯಾಗಿದೆ. ಸ್ಥಳೀಯ ನಿವಾಸಿ ಚೆನಿಯಪಂಡ ಬೋಪಣ್ಣಿ ಬೋಪಯ್ಯ ಎಂಬುವವರಿಗೆ ಸೇರಿದ ಹಸವಿದಾಗಿದೆ. ಗದ್ದೆಯಲ್ಲಿ ಹಸು ಮೇಯುತ್ತಿದ್ದಾಗ ಹುಲಿ ದಾಳಿ ಮಾಡಿದೆ. ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಅರಣ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಲೇಖಕ: admin
ವಿರಾಜಪೇಟೆ ಜ.6 : ವಿರಾಜಪೇಟೆಯ ಕಾವೇರಿ ಸ್ಕೂಲ್ ವಾರ್ಷಿಕೋತ್ಸವ ಸಮಾರಂಭ “ಪ್ರಣವಂ ಭಾರತ್” ಸಂಭ್ರಮದಿಂದ ನಡೆಯಿತು. ನಗರದ ಸೆರೆನಿಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕಾವೇರಿ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷೆ ಕಾವೇರಿ ಮುತ್ತಣ್ಣ, ವಿದ್ಯಾರ್ಥಿಗಳು ಓದಿಗೆ ಹೆಚ್ಚಿನ ಒತ್ತು ನೀಡಿ, ನಿರಂತರ ಕಲಿಕೆಯಿಂದ ಜ್ಞಾನವನ್ನು ವೃದ್ದಿಸಿಕೊಳ್ಳುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಸಾಧಕರಾಗಿ ಹೊರಹೊಮ್ಮುವಂತೆ ಕರೆ ನೀಡಿದರು. ವಿರಾಜಪೇಟೆ ಕ್ಷೇತ್ರ ಸಮನ್ವಯ ಅಧಿಕಾರಿ ವನಜಾಕ್ಷಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಾಲೆಗಳು ಹೊಣೆಗಾರಿಕೆಯ ಪಾತ್ರ ವಹಿಸುತ್ತವೆ. ಮತ್ತು ಇದರಲ್ಲಿ ಮಕ್ಕಳ ಪೋಷಕರು ಜವಾಬ್ದಾರಿಯೂ ಇದೆ. ಮಕ್ಕಳು ತಮ್ಮ ಪೋಷಕರನ್ನು ಹೆಚ್ಚಾಗಿ ಅನುಕರಣೆ ಮಾಡುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳು ತಮ್ಮ ಜೀವನವನ್ನು ಕಟ್ಟಿಕೊಳ್ಳುವವರೆಗೆ ಪೋಷಕರು ತಮ್ಮ ಅಭ್ಯಾಸಗಳಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯವೆಂದು ಸಲಹೆ ನೀಡಿದರು. ಕಾವೇರಿ ಸ್ಕೂಲ್ನ ಕಾರ್ಯದರ್ಶಿ ಪಿ.ಎನ್.ವಿನೋದ್ ಮಾತನಾಡಿ, ಕಳೆದ ಐದು ವರ್ಷಗಳಿಂದ ಶಾಲಾ ವಾರ್ಷಿಕೋತ್ಸವವನ್ನು ಆಯೋಜಿಸದ ಹಿನ್ನೆಲೆಯಲ್ಲಿ ಈ ವರ್ಷ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ದೇಶವನ್ನು…
ಮಡಿಕೇರಿ ಜ.6 : ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸರ ಕ್ರಮವನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡಿವೈಎಸ್ಪಿ ಕಚೇರಿ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, “ನಾನು ರಾಮಭಕ್ತ ನನ್ನನ್ನು ಕೂಡ ಬಂಧಿಸಿ” ಎಂದು ಘೋಷಣೆಗಳನ್ನು ಕೂಗಿದರು. ರಾಮ ಜನ್ಮಭೂಮಿ ಹೋರಾಟದ ಹಳೆಯ ಪ್ರಕರಣಗಳಿಗೆ ಮರುಜೀವ ನೀಡುವ ಮೂಲಕ ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ಸಮಾಜ ಘಾತುಕ ಮತಾಂಧ ಸಂಘಟನೆಗಳ ಅಪರಾಧ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಸರ್ಕಾರ ಹಿಂದೂಗಳ ವಿಚಾರದಲ್ಲಿ ಭಾವನೆಗಳನ್ನು ಕೆಣಕುತ್ತಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ.ಹರಿಪ್ರಸಾದ್ ಅವರು ಕೋಮು ಪ್ರಚೋದನೆಯ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವೇದಿಕೆಯ ಪ್ರಮುಖರು ಆರೋಪಿಸಿದರು. ಶ್ರೀರಾಮ ಮಂದಿರಕ್ಕಾಗಿ ಹೋರಾಡಿದ ರಾಮಭಕ್ತರನ್ನು ಮಂದಿರ ಉದ್ಘಾಟನೆಯ ಶುಭ ಸಂದರ್ಭದಲ್ಲೇ ಬಂಧಿಸುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಕಾನೂನು ಮೀರಿ…
Testing news post
ನಾಪೋಕ್ಲು ಜ.6 : ನರಿಯಂದಡ ಗ್ರಾಮದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಮಭಕ್ತ ಸಮಿತಿಯ ಸದಸ್ಯರು ವಿತರಿಸಿದರು. ಗ್ರಾಮದ ಭಗವತಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ, ಗ್ರಾಮದ ಒಂದು ಹಾಗೂ ಎರಡನೇ ಬ್ಲಾಕಿನ ಮನೆ ಮನೆಗೆ ತೆರಳಿ ಮಂತ್ರಾಕ್ಷತೆಯನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಮಂತ್ರಾಕ್ಷತೆಯ ಉದ್ದೇಶ ಹಾಗೂ ಪಾಲನೆಯ ಬಗ್ಗೆ ವಿವರಿಸಿದರು. ಈ ಸಂದರ್ಭ ಭಗವತಿ ದೇವಸ್ಥಾನದ ಅಧ್ಯಕ್ಷ ಬಟ್ಟಿಯಂಡ ಜಯರಾ೦, ರಾಮಭಕ್ತ ಸಮಿತಿಯ ಸದಸ್ಯ ಕುಕ್ಕೆಮನೆ ನಾರಾಯಣಮೂರ್ತಿ, ಪ್ರಮುಖರಾದ ಮಕ್ಕಿ ಮನೆ ಸುದೀರ್, ಚೆಯ್ಯಂಡ ಲವ ಅಪ್ಪಚ್ಚು, ಮುಂಡಿಯೊಳಂಡಿ ದಿನು ಚಂಗಪ್ಪ, ಬೆಳಿಯ೦ಡ್ರ ಹರಿಪ್ರಸಾದ್, ಶರಣು, ರಾಜಾರಾಮ್ , ಬಟ್ಟಿಯಂಡ ಅಶೋಕ್ , ಸತೀಶ್, ಸಂಪತ್ ಮತ್ತಿತರರು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.6 : ಪೊನ್ನಂಪೇಟೆ ತಾಲ್ಲೂಕಿನ ಜನ ಸ್ಪಂದನ ಸಭೆಯು ಜ.9 ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ದ.ಕೊಡಗಿನ ಟಿ.ಶೆಟ್ಟಿಗೇರಿಯ ಕೊಡವ ಸಮಾಜದಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜ.6 : ಜವಳಿ ಅಭಿವೃದ್ಧಿ ಆಯುಕ್ತಾಲಯ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಡಿಕೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಒಂದು ವಾರಗಳ ಕಾಲ (ಜನವರಿ 12 ವರೆಗೆ) ಏರ್ಪಡಿಸಿರುವ ‘ಕಾವೇರಿ ವಸ್ತ್ರಸಿರಿ’ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಚರಕದಲ್ಲಿ ಕಣಿಕೆ ಸುತ್ತುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಆಧುನಿಕತೆ ಬೆಳೆದಂತೆ ಕೈಮಗ್ಗ ನೇಕಾರರು ಸಂಕಷ್ಟವನ್ನು ಎದುರಿಸುತ್ತಿದ್ದು, ಕೈಮಗ್ಗ ನೇಕಾರರಿಗೆ ಸರ್ಕಾರದಿಂದ ಹಲವು ಸಹಾಯಧನ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ನೇಕಾರರಿಗೆ ಸಹಾಯಧನದಡಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಕೈಮಗ್ಗ ಉತ್ಪನ್ನಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು. ಇಂದಿನ ಕೂಲಿಯನ್ನು ಗಮನಿಸಿದರೂ ಸಹ ಕನಿಷ್ಠ 500 ರೂ. ಸಿಗುತ್ತದೆ. ಅಂತಹದ್ದಲ್ಲಿ ಒಂದು ಸೀರೆ ತಯಾರು ಮಾಡಲು ಕನಿಷ್ಠ ಎರಡು ದಿನ…
ಮಡಿಕೇರಿ ಜ.5 : ಮೂರ್ನಾಡು ಬಾಡಗ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಸ್ಥಳೀಯ ಕೃಷಿಕರ ಗದ್ದೆಗಳಿಗೆ ದಾಳಿ ಮಾಡುತ್ತಿರುವ ಕಾಡಾನೆಗಳ ಹಿಂಡು ಬೆಳೆಯನ್ನು ತಿಂದು ತೇಗುತ್ತಿವೆ. ಗ್ರಾಮದ ಕೃಷಿಕ ಪಾಂಡಂಡ ಗಣೇಶ್ ಗಣಪತಿ ಅವರ ಗದ್ದೆಗೆ ನುಗ್ಗಿದ ಕಾಡಾನೆಗಳು ಭತ್ತದ ಬೆಳೆಯನ್ನು ನಾಶಪಡಿಸಿವೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಕೊಯ್ಲು ಮಾಡಿದ್ದ ಭತ್ತದ ಫಸಲು ಕಾಡಾನೆ ಪಾಲಾಗಿದೆ. ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಜ.5 : ಆರನೇ ತರಗತಿಗೆ ಪ್ರವೇಶಕ್ಕೆ ಜನವರಿ, 20 ರಂದು ಕೊಡಗು ಜಿಲ್ಲೆಯ ಆರು ಕೇಂದ್ರಗಳಲ್ಲಿ ನಡೆಯಲಿರುವ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ನೋದಾಯಿತ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ನವೋದಯ ವಿದ್ಯಾಲಯ ಸಮಿತಿಯು ತನ್ನ ಅಧಿಕೃತ ವೆಬ್ಸೈಟಿನಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ https:/navodaya.gov.in ಈ ಸೈಟಿನಿಂದ ನೇರವಾಗಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೋಳ್ಳಲು ಸಾಧ್ಯವಾಗದ ಅಭ್ಯರ್ಥಿಗಳು ತಮ್ಮ ಮಗ ಮಗಳು ಓದುತ್ತಿರುವ ಶಾಲೆ ಅಥವಾ ನವೋದಯ ವಿದ್ಯಾಲಯವನ್ನು ಸಂಪರ್ಕಿಸಬಹುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಒ.ಎಂ. ಪಂಕಜಾಕ್ಷನ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9611862835, 8840383521 ಸಂಪರ್ಕಿಸಬಹುದು.
ಮಡಿಕೇರಿ ಜ.5 : ಪ್ರಾಚೀನ ಆದಿಮ ಸಂಜಾತ ಸೂಕ್ಷ್ಮ ಜನಾಂಗ ಕೊಡವರನ್ನು ವಿಶ್ವ ರಾಷ್ಟ್ರ ಸಂಸ್ಥೆಯ ನಿರ್ಣಯ 217A (III) ರನ್ವಯ ಮಾನ್ಯತೆ ನೀಡಿ ಕೊಡವರ ಸ್ವಯಂ-ನಿರ್ಣಯದ ಹಕ್ಕುಗಳನ್ನು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಗೌರವಿಸಬೇಕು ಮತ್ತು ಖಾತರಿಪಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಒತ್ತಾಯಿಸಿದೆ. ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುವ ಧರಣಿ ಸತ್ಯಾಗ್ರಹ ನಡೆಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಅಂತರರಾಷ್ಟ್ರೀಯ ಕಾನೂನಿನಡಿ ಕೊಡವರಿಗೆ ಮಾನ್ಯತೆ, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡಬೇಕೆಂದು ಒತ್ತಾಯಿಸಿದರು. ಸಂವಿಧಾನದ ಆರ್ಟಿಕಲ್ 244 R/W 6ನೇ ಮತ್ತು 8ನೇ ಶೆಡ್ಯೂಲ್ ಪ್ರಕಾರ, ಕೊಡವರು ಸ್ಥಳೀಯ ಕೊಡವ ಜನರ ಸಾಂಪ್ರದಾಯಿಕ ಮತ್ತು ಅವಿಭಾಜ್ಯ ತಾಯ್ನಾಡಿನ ಹಕ್ಕನ್ನು ಹೊಂದಿದ್ದಾರೆ. ಇದು ಸ್ವಯಂ ಆಳ್ವಿಕೆಯೊಂದಿಗೆ ಕೊಡವಲ್ಯಾಂಡ್ ಜಿಯೋ-ರಾಜಕೀಯ ಸ್ವಾಯತ್ತ ಪ್ರದೇಶವನ್ನು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಸಿಎನ್ಸಿ ರೂಪಿಸಿದೆ ಎಂದು ನಾಚಪ್ಪ ಹೇಳಿದರು. ಈ ಹಕ್ಕೊತ್ತಾಯಗಳ ಪರ ಪ್ರತಿಪಾದಿಸಿರುವ ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ…






