ಲೇಖಕ: admin

ಪುತ್ತೂರು ಡಿ.12 : ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರವು ಸೊರಗಿದೆ ಎನ್ನುವ ಮಾತಿದೆ ಇದು ಸಂಪೂರ್ಣ ತಪ್ಪು, ಇತರ ಕ್ಶೇತ್ರಗಳ ವ್ಯಾಪಕ ಬೆಳವಣಿಗೆಯಿಂದ ಹಾಗನಿಸುತ್ತಿದೆ ಎಂದು ಬೆಂಗಳೂರಿನ ಶಂಕರನಾರಾಯಣ ಗ್ರೂಪ್‌ನ ಮುಖ್ಯಸ್ಥ ಪಿ ಆರ್ ಸೆಲ್ವ ಗಣೇಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ನಿರ್ಮಾಣ ಕ್ಷೇತ್ರದಲ್ಲಿನ ಇತ್ತೀಚಿನ ಹೊಸತನಗಳು ಹಾಗೂ ಗುಣಮಟ್ಟದ ಮಾನದಂಡಗಳು ಎನ್ನುವ ವಿಷಯದ ಬಗ್ಗೆ 5 ದಿನಗಳ ಕೌಶಲ್ಯ ಉದ್ದೀಪನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಿಯೂ ಸಲ್ಲುವ ಸಿವಿಲ್ ಇಂಜಿನಿಯರುಗಳ ಸೇವೆ ಮತ್ತು ತ್ಯಾಗ ಮಹತ್ತರವಾದದ್ದು ಎಂದರು. ದೇಶದ ನಿರ್ಮಾಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು ಸಿವಿಲ್ ಇಂಜಿನಿಯರುಗಳಿಗೆ ಇನ್ನೂ ಹೆಚ್ಚಿನ ಬೇಡಿಕೆ ಬರಲಿದೆ ಎಂದರು. ಸಂಪ್ರದಾಯ ಮತ್ತು…

Read More

ಪುತ್ತೂರು ಡಿ.12 : ಸಿವಿಲ್ ಇಂಜಿನಿಯರಿಂಗ್ ಕ್ಷೇತ್ರವು ಸೊರಗಿದೆ ಎನ್ನುವ ಮಾತಿದೆ ಇದು ಸಂಪೂರ್ಣ ತಪ್ಪು, ಇತರ ಕ್ಶೇತ್ರಗಳ ವ್ಯಾಪಕ ಬೆಳವಣಿಗೆಯಿಂದ ಹಾಗನಿಸುತ್ತಿದೆ ಎಂದು ಬೆಂಗಳೂರಿನ ಶಂಕರನಾರಾಯಣ ಗ್ರೂಪ್‌ನ ಮುಖ್ಯಸ್ಥ ಪಿ ಆರ್ ಸೆಲ್ವ ಗಣೇಶ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ನಿರ್ಮಾಣ ಕ್ಷೇತ್ರದಲ್ಲಿನ ಇತ್ತೀಚಿನ ಹೊಸತನಗಳು ಹಾಗೂ ಗುಣಮಟ್ಟದ ಮಾನದಂಡಗಳು ಎನ್ನುವ ವಿಷಯದ ಬಗ್ಗೆ 5 ದಿನಗಳ ಕೌಶಲ್ಯ ಉದ್ದೀಪನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಿಯೂ ಸಲ್ಲುವ ಸಿವಿಲ್ ಇಂಜಿನಿಯರುಗಳ ಸೇವೆ ಮತ್ತು ತ್ಯಾಗ ಮಹತ್ತರವಾದದ್ದು ಎಂದರು. ದೇಶದ ನಿರ್ಮಾಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು ಸಿವಿಲ್ ಇಂಜಿನಿಯರುಗಳಿಗೆ ಇನ್ನೂ ಹೆಚ್ಚಿನ ಬೇಡಿಕೆ ಬರಲಿದೆ ಎಂದರು. ಸಂಪ್ರದಾಯ ಮತ್ತು…

Read More

ಮಡಿಕೇರಿ ಡಿ.12 : ಪಾಲಿಬೆಟ್ಟದಲ್ಲಿ ಕೂರ್ಗ್ ಫೌಂಡೇಶನ್ ಹಾಗೂ ಬಾಲಿವುಡ್ ನಟ ಮಿಲಿಂಡ್ ಸೋಮನ್ ಅವರ ಸಹಯೋಗದಲ್ಲಿ ನಡೆದ 7ನೇ ಆವೃತ್ತಿಯ ಬರಿಗಾಲಿನ ಮ್ಯಾರಥಾನ್‍ನಲ್ಲಿ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ವಿಶೇಷ ಶಾಲೆಯ 10 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮ್ಯಾರಥಾನ್‍ನಲ್ಲಿ ಯುಎಸ್‍ಎ, ನೆದಲ್ರ್ಯಾಂಡ್, ಐರ್ಲೆಂಡ್, ಸಿಂಗಾಪುರ್, ಮಲೇಷ್ಯಾ ರಾಷ್ಟ್ರಗಳು ಹಾಗೂ ಕೇರಳ, ತಮಿಳುನಾಡು, ದೆಹಲಿ, ಮುಂಬೈ, ಕೋಲ್ಕತಾ ರಾಜ್ಯಗಳು ಹಾಗೂ ಜಿಲ್ಲೆಯಿಂದ ಸೇರಿ 200ಕ್ಕೂ ಹೆಚ್ಚು ಮಂದಿ ಹಾಗೂ ಪಾಲ್ಗೊಂಡಿದ್ದರು. ಪಾಲಿಬೆಟ್ಟ, ಹೊಸಳ್ಳಿ, ಅಬ್ಬೂರು, ಚೆನ್ನಂಗಿ, ಚನ್ನಯ್ಯನಕೋಟೆ ಸುತ್ತಮುತ್ತಲ ಗ್ರಾಮಗಳ ರಸ್ತೆಗಳಲ್ಲಿ ಬರಿಗಾಲಿನ ಓಟದಲ್ಲಿ ಪಾಲ್ಗೊಂಡು ಸ್ಪರ್ಧಾಳುಗಳು ಗುರಿ ಮುಟ್ಟಿದರು.

Read More

ಮಡಿಕೇರಿ ಡಿ.12 :  ಕರಿಕೆ ಗ್ರಾ.ಪಂ ವ್ಯಾಪ್ತಿಯಲ್ಲಿ ರಾತ್ರಿ ಸುರಿದ  ಗಾಳಿ ಮಳೆಗೆ ಚೆತ್ತುಕಾಯ ಮುಖ್ಯ ರಸ್ತೆಯಲ್ಲಿ ಮರಬಿದ್ಧು ಎರಡು ವಿದ್ಯುತ್ ಕಂಬಗಳು ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳಿಗೆ ಹಾನಿಯಾದ್ದರಿಂದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಗೊಂಡಿದ್ದು, ಸಂಬಂಧಿಸಿದ ಅಧಿಕಾರಿಗಳ ಪರಿಶೀಲಿಸಿ ನೂತನ ಕಂಬಗಳನ್ನು ಅಳವಡಿಸಲು  ಕ್ರಮ ಕೈಗೊಳ್ಳುವಂತೆ  ಗ್ರಾಮಸ್ಥರು ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.12 :  ರೋಟರಿ ಮಿಸ್ಟಿ ಹಿಲ್ಸ್ ನಾ ಜೋನಲ್ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ  ಧೃತಿ ಪೂಜಾರಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಇವಳು ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ನೃತ್ಯ ಸoಯೋಜಕಿ  ಪ್ರೀತ ಕೃಷ್ಣ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.

Read More

ಸುಂಟಿಕೊಪ್ಪ ಡಿ.12 : ಬಾಲ ಪ್ರತಿಭೆ ಶ್ರೀಶಾ ಮತ್ತು ಅವರ ಪೋಷಕರು ಯೋಧರನ್ನು ಸ್ಮರಿಸುವುದರೊಂದಿಗೆ ಮತ್ತೆ ‘ಹುಟ್ಟಿ ಬನ್ನಿ ಯೋಧರೆ’ ಎಂಬ ಕಾರ್ಯಕ್ರಮದಲ್ಲಿ ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಪಿನ್ ರಾವತ್ ಮತ್ತು ಹುತಾತ್ಮ ವೀರ ಯೋಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಬಾಲ ಪ್ರತಿಭೆ ಶ್ರೀಶಾ, ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರ ಸೇನಾಧಿಕಾರಿಗಳ ಸಾಧನೆಯನ್ನು ಮೆಲುಕು ಹಾಕಿದರು. ಬಿಪಿನ್ ರಾವತ್ ಅವರ ವಿದ್ಯಾಭ್ಯಾಸ, ಸೇನೆಯಲ್ಲಿ ಅವರ ಶೌರ್ಯ, ಸಾಹಸಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದಲ್ಲದೇ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಅವರ ಬಗ್ಗೆ ಮಾಹಿತಿ ನೀಡಿದರು. ಶ್ರೀಶಾ ಅವರ ಪೋಷಕರಾದ ಶಿಜು, ಸಂಧ್ಯಾ, ಸಪಾಯಿ ಕರ್ಮಚಾರಿ ಜಿಲ್ಲಾಧ್ಯಕ್ಷ ಆರ್.ರಂಗಸ್ವಾಮಿ, ಹರದೂರು ಗ್ರಾ.ಪಂ ಸದಸ್ಯ ಬಿ.ಡಿ.ಪದ್ಮನಾಭ, ಕೊಡಗು…

Read More

ಸೋಮವಾರಪೇಟೆ ಡಿ.12 : ಕಾಫಿ ಬೆಳೆಗಾರರ 10 ಹೆಚ್.ಪಿ. ಪಂಪ್‍ಸೆಟ್‍ಗಳಿಗೆ ಷರತ್ತಿಲ್ಲದೆ ಉಚಿತ ವಿದ್ಯುತ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣ ಜೇಸಿ ವೇದಿಕೆಯಲ್ಲಿ ಧರಣಿ ಪ್ರತಿಭಟನೆ ನಡೆಯಿತು. 2006ರಿಂದಲೂ ಉಚಿತ ವಿದ್ಯುತ್‍ಗಾಗಿ ರೈತ ಸಂಘ ಹೋರಾಟ ಮಾಡುತ್ತಿದೆ. ಕಳೆದ ವರ್ಷದ ಬೆಳಗಾವಿ ಅಧಿವೇಶನದಲ್ಲಿ ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅನೇಕ ಷರತ್ತುಗಳನ್ನು ಹಾಕಿ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದರು. ಕೊನೆಗೂ ಸರ್ಕಾರದ ಆದೇಶವಾಗಲಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಬೆಳಗಾವಿ ಅಧಿವೇಶನದಲ್ಲೇ ಉಚಿತ ವಿದ್ಯುತ್ ನೀಡುವ ಆದೇಶ ಹೊರಬೀಳಬೇಕು. ಈ ಬಗ್ಗೆ ಜಿಲ್ಲೆಯ ಶಾಸಕರಾದ ಡಾ.ಮಂತರ್‍ಗೌಡ ಮತ್ತು ಎ.ಎಸ್.ಪೊನ್ನಣ್ಣ ಕಾಫಿ ಬೆಳೆಯುವ ಜಿಲ್ಲೆಗಳ ಶಾಸಕರ ಸಹಕಾರದೊಂದಿಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲೇಬೇಕು ಎಂದು ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಆಗ್ರಹಿಸಿದರು. ಉಚಿತ ವಿದ್ಯುತ್ ಸಿಗುವ ನಿರೀಕ್ಷೆಯಿಂದ ಸಣ್ಣ ರೈತರು ಪಂಪ್‍ಸೆಟ್‍ಗಳ…

Read More

ಮಡಿಕೇರಿ ಡಿ.12 : ಸಮಾಜಸೇವೆ ಮೂಲಕ ಸಮಾಜದಲ್ಲಿ ನಾವು ಶಾಶ್ವತವಾಗಿ ಸ್ಮರಣೀಯರಾಗಲು ಸಾಧ್ಯ ಇದೆ ಎಂದು ಮಡಿಕೇರಿಯ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ನಗರದ ಕಾಯ೯ಪ್ಪ ಕಾಲೇಜಿನ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ವಲಯ 6 ರ ಸಾಂಸ್ಕೃತಿಕ ಸ್ಪಧೆ೯ ಕಲಾಪವ೯ವನ್ನು ಉದ್ಘಾಟಿಸಿ ಮಾತನಾಡಿದ ಅವರು,, ಸಾಮಾಜಿಕ ಬದಲಾವಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ, ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ ,ಬಾಬಾ ಆಮ್ಟೆ, ಮಥರ್ ಥೆರೆಸಾ, ಸ್ವಾಮಿ ವಿವೇಕಾನಂದ ಅವರಂಥ ಅನೇಕ ಮಹಾನೀಯರು ಪ್ರತೀಯೋವ೯ರ ಜೀವನದ ಆದಶ೯ವಾಗಬೇಕು ಎಂದು ಕರೆ ನೀಡಿದರು. ಸಾಮಾಜಿಕ ಚಳವಳಿಗಳ ಮೂಲಕ ದೇಶವನ್ನು ಸುಭದ್ರಗೊಳಿಸುವಲ್ಲಿ ಸಾಕಷ್ಟು ಮಹನೀಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಇಂಥ ಮಹನೀಯರ ಜೀವನಾದಶ೯ಗಳನ್ನು ವಿದ್ಯಾಥಿ೯ ದಿಸೆಯಲ್ಲಿಯೇ ಹೇಳಿಕೊಡಬೇಕೆಂದು ಅನಿಸಿಕೆ ವ್ಯಕ್ತಪಡಿಸಿದ ಮೇಜರ್ ಡಾ. ಬಿ.ರಾಘವ, ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಮೂಲಕ ಶಿಕ್ಷಣ, ಆರೋಗ್ಯ,…

Read More

ವಿರಾಜಪೇಟೆ ಡಿ.12 :   ಹೆಗ್ಗಳ ಗ್ರಾಮದಲ್ಲಿರುವ ಎಡಮಕ್ಕಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ವಾರ್ಷಿಕ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಮೊದಲ ದಿವಸ ದೀಪಾರಾಧನೆ ಹಾಗೂ ಮಹಾಪೂಜೆ ಸೇವೆಗಳು ನಡೆಯಿತು. ಎರಡನೇ ದಿವಸ ದೇವಾಲಯದಲ್ಲಿ ಗಣಪತಿ ಹೋಮ, ಧ್ವಜಾರೋಹಣ ಹಾಗೂ ಮಹಾಪೂಜೆ  ನಡೆಯಿತು. ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆ ಮಾಡಲಾಯಿತು. ಸಂಜೆ ದೀಪಾರಾಧನೆ ಹಾಗೂ ಎಡಮಕ್ಕಿ ಸಾರ್ವಜನಿಕ ಮೈದಾನದಿಂದ ತಾಲಪ್ಪೊಲಿ ಮೆರವಣಿಗೆ ನಡೆಯಿತು.  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ನೆರೆದಿದ್ದರು. ರಾತ್ರಿ ಮಾನಂದವಾಡಿಯ ಶ್ರೀ ಭಗವತಿ ಚಂಡೆ ವಾದ್ಯಮ್ ರಿಂದ ತಾಯಂಭಗಂ ಸೇವೆ ಜರುಗಿತು. ಮಹಾಪೂಜೆ ಅನ್ನದಾನ ಕಾರ್ಯಕ್ರಮ ನಡೆದವು.  ಮಾತ್ರವಲ್ಲದೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಹೇಶ್, ಮಹಿ ಕೂರ್ಗ್ ಇವರಿಂದ ಸಿಡಿಮದ್ದಿನ ಪ್ರದರ್ಶನ ನಡೆಯಿತು.  ವಾರ್ಷಿಕ ಮಹೋತ್ಸವದಲ್ಲಿ ಕೊಡಗು ಜಿಲ್ಲೆ, ಕೇರಳ, ತಮಿಳುನಾಡಿನಿಂದಲೂ ಭಕ್ತರು ಆಗಮಿಸಿದ್ದರು.  ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಮುಖ್ಯ ತಂತ್ರಿಗಳಾದ ಬ್ರಹ್ಮಶ್ರೀ ಮುಳ್ಳಪಲ್ಲಿ ಕೃಷ್ಣನ್ ನಂಬೂದಿರಿ…

Read More

ಸೋಮವಾರಪೇಟೆ ಡಿ.12 : ಗೌಡಳ್ಳಿ ಗ್ರಾ.ಪಂ, ಬೆಂಗಳೂರು ಮಕ್ಕಳ ಕಲ್ಯಾಣ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹಾಗೂ ನಾವು ಪ್ರತಿಷ್ಠಾನದ ವತಿಯಿಂದ ಗೌಡಳ್ಳಿ ಪ್ರೌಢಶಾಲೆ ಸಭಾಂಗಣದಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಶುಂಠಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎರಡು ಕೊಠಡಿಯ ಮೇಲ್ಚಾವಣಿಯ ಮರಗಳು ಗೆದ್ದಲು ಹಿಡಿದಿದ್ದು, ಯಾವಾಗ ಬೇಕಾದರೂ ಕುಸಿದು ಬೀಳಬಹುದು ಎಂದು 5ನೇ ತರಗತಿ ಶ್ರೀನಿಧಿ ಹೇಳಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಬಂದು ನೋಡಿ ಹೋಗುತ್ತಾರೆ. ಆದರೆ ದುರಸ್ತಿ ಕೆಲಸ ಮಾಡಿಸಿಲ್ಲ. ಮಕ್ಕಳ ಜೀವಹಾನಿಯಾದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದರು. ಪಂಚಾಯಿತಿ ವತಿಯಿಂದ ಇಂಗು ಗುಂಡಿ ನಿರ್ಮಾಣ ಮಾಡಲಾಗಿದೆ. ಆದರೆ ಪೈಪ್ ಅಳವಡಿಸಿಲ್ಲ. ಶಾಲಾ ಆವರಣ ವಾಸನೆಯಿಂದ ಕೂಡಿದೆ. ಗ್ರಾಮೀಣ ಭಾಗದಿಂದ ಮಕ್ಕಳು ಕಾಲ್ನಡಿಗೆಯಲ್ಲೇ ಬರಬೇಕು. ಮಳೆಗಾಲದಲ್ಲಿ ಛತ್ರಿ ಮತ್ತು ಸ್ವೆಟ್ಟರ್ ನೀಡಬೇಕು. ಹಾಗೂ ಎಲ್ಲಾ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿದರು.…

Read More