ಮಡಿಕೇರಿ ಡಿ.11 : ಅತ್ಯಂತ ಸೂಕ್ಷ್ಮ ಜನಾಂಗ ಕೊಡವರಿಗೆ ಸಾಂವಿಧಾನಿಕ ಭದ್ರತೆಯ ಅಗತ್ಯವಿದೆ, ಈ ದೇಶದ ಸಂವಿಧಾನವೊಂದೇ ಕೊಡವರ ಗುರುಪೀಠವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮೈಸೂರಿನ ಜಯಲಕ್ಷ್ಮಿ ಪುರಂನ ಕೊಡವ ಸಹಕಾರ ಭವನದಲ್ಲಿ ನಡೆದ ಕೊಡವ ವಿದ್ಯಾರ್ಥಿ ಸಂಘಗಳ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೊಡವರಿಗೆ ಕೊಡವ ಗುರುಪೀಠ ಇರಬೇಕು ಎನ್ನುವ ಅಭಿಪ್ರಾಯಗಳಿದೆ. ಆದರೆ ಈ ಹೇಳಿಕೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕೊಡವ ಬುಡಕಟ್ಟು ಸಮುದಾಯದ ಸಾಮಾಜಿಕ ನಂಬಿಕೆಗಳು ಹಾಗೂ ಪೂರ್ವಜರ ಆರಾಧನಾ ಮಾದರಿಗಳಿಗೆ ವಿರುದ್ಧವಾಗಿದೆ. ಈ ರೀತಿಯ ಪ್ರಸ್ತಾಪಗಳು ಸಾಂವಿಧಾನಿಕ ನೈತಿಕತೆಯನ್ನು ಬುಡಮೇಲು ಮಾಡುವ ಪ್ರಯತ್ನವಾಗಿದೆ. ಕೊಡವರು ಭಾರತೀಯ ಶ್ರೇಷ್ಠ ಸಂವಿಧಾನದ ಮೂಲಕವಷ್ಟೇ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದರು. ರಾಜ್ಯದ ವೈಫಲ್ಯ ಮತ್ತು ದುರಾಡಳಿತವನ್ನು ಮುಚ್ಚಿ ಹಾಕಲು, ಕೊಡವರ ಹಾದಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿದೆ. ಸಿಎನ್ಸಿಯ ಸಾಂವಿಧಾನಿಕ ಬೇಡಿಕೆಗಳ ಕುರಿತು ಕೊಡವ ಜನರ ಮೂಲಕವೇ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ ಎಂದು…
ಲೇಖಕ: admin
ಗೋಣಿಕೊಪ್ಪಲು,ಡಿ.11 : ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಮೃತ ಪ್ರದೀಪ್ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ.5 ಲಕ್ಷ ಜಮಾ ಮಾಡಲಾಗಿದೆ. ಪ್ರದೀಪ್ ಪತ್ನಿಯ ಪಂಚವಳ್ಳಿ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಖಾತೆಗೆ ರೂ.5 ಲಕ್ಷ ಜಮಾ ಮಾಡಿರುವುದಾಗಿ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಆಪ್ತರಾದ ಕೆ.ಎಸ್.ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ಶಾಸಕ ಪೊನ್ನಣ್ಣ, ಮಾಜಿ ಎಂ.ಎಲ್.ಸಿ ಅರುಣ್ ಮಾಚಯ್ಯ ಮುಂತಾದವರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಮೃತ ಪ್ರದೀಪ್ ಗೆ ಇಬ್ಬರು ಮಕ್ಕಳಿದ್ದು ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಮಡಿಕೇರಿ ಡಿ.11 : ಕವನ ಓದುವ ಜೊತೆಗೆ ಕೇಳುಗರ ಸಂಕಟವನ್ನು ಕವನ ವಾಚಿಸುವ ಕವಿಗಳು ಅರಿಯಬೇಕು ಎಂದು ಸಾಹಿತಿ ಭಾರದ್ವಾಜ್.ಕೆ.ಆನಂದತೀರ್ಥ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಸಮೀಪದ ಹೆಬ್ಬಾಲೆ ಬನಶಂಕರಿ ಹಬ್ಬದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ವತಿಯಿಂದ ಬನಶಂಕರಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಲೇ ಕವಿಗೋಷ್ಠಿಗಳಿಗೆ ಸಾರ್ವಜನಿಕರು ಬರುವುದು ಕಡಿಮೆ. ಅಂತಹುದರಲ್ಲಿ ಕವಿಗಳು ತಮಗೆ ಇಷ್ಟ ಬಂದ ಹಾಗೆ ಬರೆದು ಜನರಲ್ಲಿ ಸಾಹಿತ್ಯ ಆಸಕ್ತಿಯನ್ನು ಮತ್ತಷ್ಟು ಕಡಿಮೆ ಮಾಡಬಾರದು ಎಂದರು. ಸೋಮವಾರಪೇಟೆ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇಂತಹ ಕವಿಗೋಷ್ಠಿ ನಡೆಸುವ ಮೂಲಕ ಕನ್ನಡ ಭಾಷೆಯ ಗೌರವವನ್ನು ಹೆಚ್ಚಿಸಲಾಗುತ್ತಿದೆ. ಕೊಡಗಿನಲ್ಲಿ ಮಹಿಳಾ ಬರಹಗಾರ ಸಂಖ್ಯೆ ತುಂಬಾ ಕಡಿಮೆಯಿತ್ತು ಎನ್ನುತ್ತಿದ್ದರು, ಆದರೆ ಇವತ್ತು ಮಹಿಳೆಯರೇ ಹೆಚ್ಚು ಇರುವುದು ಸಂತಸ ತಂದಿದೆ. ಕೊಡಗು ನಿಸರ್ಗಕ್ಕೆ, ವೀರರ ನಾಡು, ಕಾವೇರಿ ನದಿ, ಸೈನಿಕರ ತವರೂರು. ಆದರೇ ಬರಹಗಾರರು ಕೂಡ ಕೇವಲ…
ಮಡಿಕೇರಿ ಡಿ.11 : ಗ್ರಾಮ ಪಂಚಾಯಿತಿಗಳ ಸರ್ವತೋಮುಖ ಅಭಿವೃದ್ದಿಗಳಿಗೆ ಸಹಕರಿಸಿ ಪ್ರಗತಿ ಸಾಧಿಸಿ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣೀತ್ ನೇಗಿ ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ ಗ್ರಾ.ಪಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಪ್ರಗತಿ ಸಾಧಿಸಲು ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಗತಿ ಸಾಧಿಸಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಶೌಚಾಲಯಗಳು ನಿರ್ಮಾಣವಾಗುತ್ತಿದ್ದು , ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಈಗಾಗಲೇ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ನೀಡಲಾಗಿದ್ದು , 3 ವರ್ಷದೊಳಗಿನ ನರೇಗಾ ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಯಲ್ಲಿ ಆರೈಕೆ ಮಾಡಬಹುದಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಪ್ರಚಾರ ಕೈಗೊಂಡು ನೋಂದಣಿ ಮಾಡಿಸುವಂತೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು. PM- ವಿಶ್ವಕರ್ಮ ಯೋಜನೆಯ ಬಗ್ಗೆ ವ್ಯಾಪಕ…
ಮಡಿಕೇರಿ ಡಿ.11 : ಬಿಲ್ಲವ ಸಮುದಾಯದ ತಂಡಗಳ ನಡುವೆ ನಡೆದ ಪೂಜಾರಿ ಪ್ರೀಮಿಯರ್ ಲೀಗ್ ಪ್ರಥಮ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಪೂಜಾರಿ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮರಗೋಡುವಿನ ಭಾರತಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಿಲ್ಲವ ಟೈಗರ್ಸ್ ಅಮ್ಮತ್ತಿ ತಂಡವನ್ನು 26 ರನ್ನಿಂದ ಮಣಿಸಿ ಪ್ರಶಸ್ತಿ ಗೆದ್ದಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಯಲ್ ಪೂಜಾರಿ ಕೊಡಗು ತಂಡ ನಿಗದಿತ 5 ಓವರ್ನಲ್ಲಿ 3 ವಿಕೆಟ್ ಕಳೆದುಕೊಂಡು 78 ರನ್ ಗಳಿಸಿತು. ಶ್ರೀನಾಥ್ ಪೂಜಾರಿ 29, ವಿನು ಪೂಜಾರಿ 18, ತ್ರಿಲೇಶ್ 17, ಬಬಿತ್ ಪೂಜಾರಿ 12 ರನ್ ಗಳಿಸಿದರು. ಗೆಲುವಿನ ಗುರಿ ಬೆನ್ನತ್ತಿದ ಬಿಲ್ಲವಟೈಗರ್ಸ್ ಅಮ್ಮತ್ತಿತಂಡ 5 ಓವರ್ನಲ್ಲಿ 5 ವಿಕೆಟ್ ಕಳೆದುಕೊಂಡು 52 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ತಂಡದ ಪರ ಶರಣ್ 21 ರನ್ ದಾಖಲಿಸಿದರು. ರಾಯಲ್ ಪೂಜಾರಿ ತಂಡದ ಬಬಿತ್ ಪೂಜಾರಿ 2 ವಿಕೆಟ್ ಕಬಳಿಸಿದರು. ಇದಕ್ಕೂ…
ಸುಂಟಿಕೊಪ್ಪ ಡಿ.11 : ಸುಂಟಿಕೊಪ್ಪ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ದ್ವಾರಕ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಜ.4 ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಡಿ.11 : ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ರೋಟರಿ ಜಿಲ್ಲೆ 3181 ರ ಕ್ರೀಡಾಕೂಟದಲ್ಲಿ ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ನ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅವರು ದಾಖಲೆಯ ಐದು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. 50ವರ್ಷ ಮೇಲ್ಪಟ್ಟವರಿಗಾಗಿ ನಡೆದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟ, ಭಾರದ ಗುಂಡು ಎಸೆತ ಮತ್ತು 400 ಮೀಟರ್ ನಡಿಗೆಯಲ್ಲಿ ಪ್ರಥಮ ಬಹುಮಾನ ಗಳಿಸುವ ಮೂಲಕ ಅಜಿತ್ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. ರೋಟರಿ ಜಿಲ್ಲೆ 3181ರ ಕೊಡಗು, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮೂಡಬಿದ್ರೆ ಆಳ್ವಾಸ್ ಕಾಲೇಜ್ ನ ಅಥ್ಲೆಟಿಕ್ಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜಿತ್ ನಾಣಯ್ಯ ಬಹುಮಾನ ಪಡೆದರು.
ಮಡಿಕೇರಿ ಡಿ.11 : . ಪೊನ್ನಂಪೇಟೆ ತಾಲೂಕು ಬಾಳಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಪಿ.ಜಿ ಜಾನಕಿ ಮತ್ತು ಗೌರವ ಕೋಶಾಧಿಕಾರಿಯಾಗಿ ಚಂದ್ರಕಲಾ ವಿಷ್ಣುಮೂರ್ತಿ ಆಯ್ಕೆಯಾಗಿದ್ದಾರೆ. ಹೋಬಳಿ ಅಧ್ಯಕ್ಷರಾದ ಪಡಿಞಾರಂಡ ಪ್ರಭು ಮತ್ತು ತಾಲೂಕು ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಅವರ ಶಿಫಾರಸ್ಸು ಮೇರೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಡಿ.11 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಡಿಸೆಂಬರ್, 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ.ಜವರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕರಾದ ಎಚ್.ಪಿ.ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ…
ಮಡಿಕೇರಿ ಡಿ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಪಬ್ಲಿಕ್ ಶಾಲೆ, ಪೊನ್ನಂಪೇಟೆ ಇವರ ಸಯುಕ್ತ ಆಶ್ರಯದಲ್ಲಿ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ದತ್ತಿನಿಧಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ ಕಾರ್ಯಕ್ರಮವು ಡಿ.12 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯ ಪದವಿಪೂರ್ವ ಕಾಲೇಜು ಕೆಪಿಎಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ದತ್ತಿದಾನಿಗಳಾದ ಬೆಂಗಳೂರಿನ ಆರ್.ನಾಗೇಂದ್ರ ಕಾಮತ್, ಆರ್.ರಾಜಾರಾವ್ ಮತ್ತು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ…






