ಮಡಿಕೇರಿ ಡಿ.11 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಡಿ.16 ರಿಂದ ಡಿ.19 ರವರೆಗೆ ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ.16 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ಭಗಂಡೇಶ್ವರ ದೇವಾಲಯದಲ್ಲಿ ಡಿ.17 ರಂದು ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನಡೆಯಲಿದೆ. ಡಿ.18 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.19 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ ಶ್ರೀ ಮಹಾವಿಷ್ಣು…
ಲೇಖಕ: admin
ಮಡಿಕೇರಿ, ಡಿ. 11 : ಯುವ ಜನಾಂಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತೆ ಮೂಟೇರ ಪುಷ್ಪಾವತಿ ಕಿವಿಮಾತು ಹೇಳಿದರು. ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ವಿದ್ಯಾಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ವಿದ್ಯಾಭ್ಯಾಸಕ್ಕೆ ಒತ್ತು ನೀಡುವ ಮೂಲಕ ಉನ್ನತ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು ಎಂದು ನುಡಿದರು. ಆಧುನಿಕತೆ ಬೆಳೆಯುತ್ತಿದ್ದು, ಗೌಡ ವಿದ್ಯಾಸಂಘವನ್ನು ಕೂಡ ಆಧುನೀಕರಣಗೊಳಿಸುವತ್ತ ಗಮನ ಹರಿಸಬೇಕೆಂದು ಪುಷ್ಪಾವತಿ ಸಲಹೆ ನೀಡಿದರು. ಮೈಸೂರು ರಂಗಾಯಣದ ಹಿರಿಯ ಕಲಾವಿದೆ ದೇವಜನ ಗೀತಾ ಮೋಂಟಡ್ಕ ಮಾತನಾಡಿ, ಮಕ್ಕಳನ್ನು ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬರು ಗುರುಹಿರಿಯರನ್ನು ಗೌರವಿಸಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾನಿಧಿ ದಾನಿಗಳಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಮಂಞಂಡ್ರ ರೇಖಾ ಉಲ್ಲಾಸ್ ಮಾತನಾಡಿ, ಮಕ್ಕಳು ಸದಾ ಹಸನ್ಮುಖರಾಗಿರಬೇಕು. ಸಾಧಿಸುವ ಛಲವನ್ನು ಹೊಂದಿರಬೇಕು ಎಂದು ಹೇಳಿದರು. ಕೆ.ಎಂ.ಟಿ. ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ, ಕೊಡಗು ಗೌಡ…
ಮಡಿಕೇರಿ ಡಿ.11 : ಕೊಡಗು ಮೊಗೇರ ಫುಟ್ಬಾಲ್ ಕ್ಲಬ್ ವತಿಯಿಂದ ಪ್ರಥಮ ಬಾರಿಗೆ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-1 ರ ಪಂದ್ಯಾವಳಿಯಲ್ಲಿ ಫಿಯೋನೆಕ್ಸ್ ಎಫ್ಸಿ ಸೋಮವಾರಪೇಟೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 6 ಆಟಗಾರರನ್ನೊಳಗೊಂಡಂತೆ 8 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಿತು. ಫೈನಲ್ ಪಂದ್ಯದಲ್ಲಿ ಫಿಯೋನೆಕ್ಸ್ ಎಫ್ಸಿ ಸೋಮವಾರಪೇಟೆ ಮತ್ತು ಮೊಗೇರ ಎಫ್ಸಿ ಪಾಲಿಬೆಟ್ಟ ತಂಡಗಳು ಪೂರ್ಣಾವಧಿಯಲ್ಲಿ ಯಾವುದೇ ಗೋಲು ದಾಖಲಿಸದೇ ಸಮಬಲ ಸಾಧಿಸಿತು. ನಂತರ ನಡೆದ ಪೆನಾಲ್ಟಿ ಶೂಟೌಟ್ನಲ್ಲಿ 2-0 ಗೋಲುಗಳ ಅಂತರದಲ್ಲಿ ಫಿಯೋನೆಕ್ಸ್ ಎಫ್ಸಿ ತಂಡ ಗೆಲುವು ಸಾಧಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದರೆ, ಮೊಗೇರ ಎಫ್ಸಿ ಪಾಲಿಬೆಟ್ಟ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫಿಯೋನೆಕ್ಸ್ ಎಫ್ಸಿ ಸೋಮವಾರಪೇಟೆ ತಂಡ ಮಾನ್ವಿಕ್ ಎಫ್ಸಿ ತಂಡವನ್ನು 3-0 ಗೋಲುಗಳಿಂದ ಮಣಿಸಿತು. ಫಿಯೋನೆಕ್ಸ್ ಎಫ್ಸಿ ಪರ ಪ್ರಶಾಂತ್ 3 ಹ್ಯಾಟ್ರಿಕ್ ಗೋಲು ದಾಖಲಿಸಿದ…
ಮಡಿಕೇರಿ ಡಿ.11 : ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನಾಚರಣೆ ಪ್ರಯುಕ್ತ ಜ.14 ರಂದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಸನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಕೆ.ಕೆ.ಸೋಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೊಡಗಿನಲ್ಲಿ ಪ್ರಥಮ ಬಾರಿಗೆ ಸೂರ್ಯ ನಮಸ್ಕಾರ ಚಾಲೆಂಜ್ ಸ್ಪರ್ಧೆಯನ್ನು ಏರ್ಪಡಿಸಿ ಜನಮೆಚ್ಚುಗೆಗೆ ಪಾತ್ರವಾಗಿತ್ತು. ಈ ಬಾರಿಯೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಯೋಗದಿಂದ ನಿರೋಗದ ಕಡೆ ಸಾಗುವ, ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಯೋಗದ ಮಹತ್ವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಗೋಣಿಕೊಪ್ಪಲಿನ ಕೈಕೇರಿ ಗ್ರಾಮದ ಭಗವತಿ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಎಂದರು. ಸ್ಪರ್ಧೆಯು ಸೀನಿಯರ್, ಜೂನಿಯರ್ ಮತ್ತು ಸಾರ್ವಜನಿಕ ಎಂಬ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಪ್ರಥಮ ವಿಜೇತರಿಗೆ ರೂ.15 ಸಾವಿರ ನಗದು, ದ್ವಿತೀಯ ರೂ.10 ಸಾವಿರ ನಗದು ಹಾಗೂ ತೃತೀಯ ವಿಜೇತರಿಗೆ ರೂ.5 ಸಾವಿರ ನಗದು ಬಹುಮಾನ…
ಮಡಿಕೇರಿ ಡಿ.11 : ಧನ್ಯಶ್ರೀ ನೃತ್ಯ ಕಲಾನಿಕೇತನ ವತಿಯಿಂದ ಡಿ.15 ರಂದು ಭರತನಾಟ್ಯ ಕಲಾವಿದೆ ಪ್ರೇಕ್ಷ ಭಟ್ ಅವರ “ಭರತನಾಟ್ಯ ರಂಗಪ್ರವೇಶ” ಕಾರ್ಯಕ್ರಮ ನಡೆಯಲಿದೆ. ಮಡಿಕೇರಿಯ ಶ್ರೀಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಸನದ “ನಾಟ್ಯಶ್ರೀ” ಭಾರತೀಯ ಸಂಗೀತ ನೃತ್ಯ ಕಲಾ ಶಾಲೆಯ ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ ಹಾಗೂ ಪೊನ್ನಂಪೇಟೆ ನಿನಾದ ವಿದ್ಯಾಸಂಸ್ಥೆಯ ಚೇಂದಿರ ನಿರ್ಮಲ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ. ಕಲಾವಿದರು, ಕಲಾ ಆಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರೇಕ್ಷ ಭಟ್ ಅವರ ಪೋಷಕರಾದ ವಿದ್ಯಾಶ್ರೀ ಹಾಗೂ ಎನ್.ಸಿ.ಅಶೋಕ್ ಭಟ್ ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.11 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳಿಂದ ಚೇರಂಬಾಣೆಯ ಅರುಣ ಪಿಯು ಕಾಲೇಜಿನಲ್ಲಿ ಪಿಯುಸಿ ನಂತರದ ಅವಕಾಶಗಳು ಕುರಿತು ಕಾರ್ಯಕ್ರಮ ನಡೆಯಿತು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜ್ ಮತ್ತು ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೀನುಗಾರಿಕೆ ಇಲಾಖೆಯ ಸಹಾಯಕಿ ನಿರ್ದೇಶಕಿ ಮಿಲನ ಭರತ್, ಎಸ್ಎಸ್ಎಲ್ಸಿ ಮತ್ತು ಪಿಯುಸಿಯ ನಂತರ ಇರುವ ಶೈಕ್ಷಣಿಕ ಅವಕಾಶಗಳು ಮತ್ತು ಉದ್ಯೋಗ ಆಧಾರಿತ ಶಿಕ್ಷಣದ ಕುರಿತು ಮಾಹಿತಿ ನೀಡಿದರು. ಎಲ್ಲರ ಬಳಿ ಸುಲಭವಾಗಿ ಲಭ್ಯವಿರುವ ಮೊಬೈಲ್ ಅನ್ನು ಶೈಕ್ಷಣಿಕ ಮತ್ತು ಔದ್ಯೋಗಿಕ ಮಾಹಿತಿ ಪಡೆಯುವ ಸಲುವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದದರು. ಬೆಂಗೂರು ಗ್ರಾ.ಪಂ ಉಪಾಧ್ಯಕ್ಷ ಬಡ್ಡೀರ ಸೋಮಣ್ಣ ಮಾತನಾಡಿ, ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಆತ್ಮವಿಶ್ವಾಸವನ್ನು ಹೆಚ್ಚಿಸಿ ಬದುಕನ್ನು ರಚನಾತ್ಮಕವಾಗಿ ಕಟ್ಟಿಕೊಳ್ಳಲು ಸಹಕರಿಸುತ್ತದೆ ಎಂದರು. ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ದಿನಪತ್ರಿಕೆಗಳನ್ನು, ಗ್ರಂಥಾಲಯಗಳನ್ನು…
ಮಡಿಕೇರಿ ಡಿ.11 : ಸಮಾಜಸೇವೆ ಮೂಲಕ ಸಮಾಜದಲ್ಲಿ ನಾವು ಶಾಶ್ವತವಾಗಿ ಸ್ಮರಣೀಯರಾಗಲು ಸಾಧ್ಯ ಇದೆ ಎಂದು ಮಡಿಕೇರಿಯ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ನಗರದ ಕಾಯ೯ಪ್ಪ ಕಾಲೇಜಿನ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ವಲಯ 6 ರ ಸಾಂಸ್ಕೃತಿಕ ಸ್ಪಧೆ೯ ಕಲಾಪವ೯ವನ್ನು ಉದ್ಘಾಟಿಸಿ ಮಾತನಾಡಿದ ಅವರು,, ಸಾಮಾಜಿಕ ಬದಲಾವಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ, ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ ,ಬಾಬಾ ಆಮ್ಟೆ, ಮಥರ್ ಥೆರೆಸಾ, ಸ್ವಾಮಿ ವಿವೇಕಾನಂದ ಅವರಂಥ ಅನೇಕ ಮಹಾನೀಯರು ಪ್ರತೀಯೋವ೯ರ ಜೀವನದ ಆದಶ೯ವಾಗಬೇಕು ಎಂದು ಕರೆ ನೀಡಿದರು. ಸಾಮಾಜಿಕ ಚಳವಳಿಗಳ ಮೂಲಕ ದೇಶವನ್ನು ಸುಭದ್ರಗೊಳಿಸುವಲ್ಲಿ ಸಾಕಷ್ಟು ಮಹನೀಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಇಂಥ ಮಹನೀಯರ ಜೀವನಾದಶ೯ಗಳನ್ನು ವಿದ್ಯಾಥಿ೯ ದಿಸೆಯಲ್ಲಿಯೇ ಹೇಳಿಕೊಡಬೇಕೆಂದು ಅನಿಸಿಕೆ ವ್ಯಕ್ತಪಡಿಸಿದ ಮೇಜರ್ ಡಾ. ಬಿ.ರಾಘವ, ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಮೂಲಕ ಶಿಕ್ಷಣ, ಆರೋಗ್ಯ,…
ಪುತ್ತೂರು ಡಿ.11 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯ ಪುತ್ತೂರು ಕೇಂದ್ರ ಇದರ ಸಂಯುಕ್ತ ಆಶ್ರಯದಲ್ಲಿ ನಿರ್ಮಾಣ ಕ್ಷೇತ್ರದಲ್ಲಿನ ಇತ್ತೀಚಿನ ಹೊಸತನಗಳು ಹಾಗೂ ಗುಣಮಟ್ಟದ ಮಾನದಂಡಗಳು ಎನ್ನುವ ವಿಷಯದ ಬಗ್ಗೆ 5 ದಿನಗಳ ಕೌಶಲ್ಯ ಉದ್ದೀಪನಾ ಕಾರ್ಯಾಗಾರವನ್ನು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಏರ್ಪಡಿಸಲಾಗಿದೆ. ಕಾರ್ಯನಿರತ ಸಿವಿಲ್ ಇಂಜಿನಿಯರುಗಳು, ಗುತ್ತಿಗೆದಾರರು, ಮೇಲ್ವಿಚಾರಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಂಶೋಧನಾ ನಿರತರಿಗೆ ಅನುಕೂಲವಾಗುವ ಈ ವಿಚಾರಸಂಕಿರಣವನ್ನು ಡಿಸೆಂಬರ್ 12 ರಿಂದ 16ರ ವರೆಗೆ ನಡೆಸಲಾಗುತ್ತದೆ. ದಿನಾಂಕ 12.12.2023ರ ಬೆಳಿಗ್ಗೆ 9.30ಕ್ಕೆ ಕಾರ್ಯನಿರತ ಸಿವಿಲ್ ಇಂಜಿನಿಯರುಗಳಿಗೆ ಕಾರ್ಯಾಗಾರ ನಡೆಯಲಿದ್ದು ದ.ಕ ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್.ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ. ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ಡಾ.ಯಶೋದಾ ರಾಮಚಂದ್ರ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ದಿನಾಂಕ 13.12.2023ರ ಬೆಳಿಗ್ಗೆ 9.30ಕ್ಕೆ ಗುತ್ತಿಗೆದಾರರಿಗೆ ಹಾಗೂ ಮೇಲ್ವಿಚಾರಕರಿಗೆ…
ನಾಪೋಕ್ಲು ಡಿ.11 : ಸಮೀಪದ ಚೆರಿಯಪರಂಬು- ಕಲ್ಲುಮೊಟ್ಟೆ ರಸ್ತೆ ಕಾಮಗಾರಿ ಆರಂಭಗೊಂಡಿದ್ದು, ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಅಂಬೇಡ್ಕರ್ ಯುವಕ ಸಂಘದ ಸತತ ಪ್ರಯತ್ನದಿಂದ ಶಾಸಕ ಪೊನ್ನಣ್ಣ ಅವರ ಮುತುವರ್ಜಿಯಿಂದ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆರಂಭಗೊಂಡಿದೆ. ಆದರೆ ನಿರ್ಮಾಣವಾಗುತ್ತಿರುವ ರಸ್ತೆ ಉತ್ತಮ ಗುಣಮಟ್ಟದಿಂದ ಕೂಡಿಲ್ಲ. ರಸ್ತೆ ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟು ಕಳಪೆ ಕಾಮಗಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು. ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಚೆರಿಯ ಪರಂಬು ಬಶೀರ್ ಆಲಿ ಮಾತನಾಡಿ, ರಸ್ತೆ ಕಾಮಗಾರಿ ಕೈಗೊಳ್ಳುತ್ತಿದ್ದಂತೆ ಬಿರುಕು ಬಿಟ್ಟು ಕಳಪೆ ಕಾಮಗಾರಿ ಆಗುತ್ತಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕಾಮಗಾರಿ ನಡೆಯುವ ಸಂದರ್ಭ ಕಾಮಗಾರಿಗಳ ವಿವರ ಗಳ ಮಾಹಿತಿಯನ್ನು ನೀಡಬೇಕಾಗಿದೆ. ಈ ಬಗ್ಗೆ ಇಂಜಿನಿಯರ್ ಅಶೋಕ ಹಾಗೂ ಗ್ರಾ.ಪಂ ಗ್ರಾಮ ಅಭಿವೃದ್ಧಿ ಅಧಿಕಾರಿ(ಪಿಡಿಒ) ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ…
ಕುಶಾಲನಗರ ಡಿ.11: ಶಿವಮೊಗ್ಗದ ನೆಹರು ಒಳಾಂಗಣ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಶಾಲನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕುಶಾಲನಗರದ ಇಂಪನ 14 ವರ್ಷದ ವಯೋಮಿತಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬ್ರಿಜೇಶ್, ಹಾಗೂ ತೆವೀನ್ ದ್ವಿತೀಯ ಸ್ಥಾನ ಪಡೆದರೆ. ಹಿತೇಶ್ ಹಾಗೂ ಮುಕುಂದ್ ತೃತೀಯ ಬಹುಮಾನ ಪಡೆದುಕೊಂಡರು. ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಜಿಲ್ಲೆಯಿಂದ ಪ್ರತಿನಿಧಿಸಿದ ಕುಶಾಲನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ 11 ವಿದ್ಯಾರ್ಥಿಗಳ ಫೈಕಿ ಸಂಸ್ಥೆಯ ವಿದ್ಯಾರ್ಥಿಗಳು ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ, ಎರಡು ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಥಮ ಸ್ಥಾನ ಪಡೆದ ಸಂಸ್ಥೆಯ ಇಂಪನಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇವರುಗಳಿಗೆ ಕರಾಟೆ ತರಬೇತುದಾರರಾದ ಸಂಕೇತ್ ತರಬೇತಿಯನ್ನು ನೀಡಿದ್ದರು. ಕುಶಾಲನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ…






