ವಿರಾಜಪೇಟೆ ಜ.2 : ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳ್ಳಿ ಮತ್ತು ಬೆಂಗಳೂರಿನ ಸಮಾಜಮುಖಿ ಪ್ರಕಾಶನ ವತಿಯಿಂದ ಕುಪ್ಪಳ್ಳಿಯಲ್ಲಿ ಆಯೋಜಿಸಲಾಗಿರುವ “ವಿಚಾರ ಕ್ರಾಂತಿಯ ಹಗಲಿರುಳು ಚಿಂತನ” ಶಿಬಿರಕ್ಕೆ ವಿರಾಜಪೇಟೆ ತಾಲೂಕಿನ ಪತ್ರಕರ್ತೆ ಹಾಗೂ ಸಾಹಿತಿ ರಜಿತ ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಜ.6 ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದ್ದು, ರಾಜ್ಯದ ವಿವಿಧೆಡೆಗಳಿಂದ ಖ್ಯಾತ ಸಾಹಿತಿಗಳು, ಲೇಖಕರು ಶಿಬಿರದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೇಖಕ: admin
ಮಡಿಕೇರಿ ಜ.2 : ಕವಯತ್ರಿ ಕೃಪಾ ದೇವರಾಜ್ ಅವರ ಹೊಸ ಕೃತಿ “ಕಾರ್ಪಣ್ಯದ ಹೂವು” ಕವನ ಸಂಕಲನ ಬಿಡುಗಡೆಗೊಂಡಿತು. ಕಣಿವೆಯ ಸುಂದರ ಪರಿಸರದಲ್ಲಿ ನಡೆದ ಅನೌಪಚಾರಿಕ ಸಭೆಯೊಂದರಲ್ಲಿ ಸಾಹಿತಿ ಭಾರದ್ವಾಜ್ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಸರಳ ವ್ಯಕ್ತಿತ್ವದ ಬರಹಗಾರರಿಂದ ಆಪ್ತ ಬರಹಗಳು ಹೊರ ಹೊಮ್ಮುತ್ತವೆ ಎಂದರು. ಬೆಂಗಳೂರಿನ ಲೇಖಕ ಇರ್ಫಾನ್ ಮಾತನಾಡಿ, ಕೊಡಗಿನ ಸುಂದರ ಪರಿಸರ ಲೇಖರಿಗೆ ಸುಂದರ ವಿಷಯ ಒದಗಿಸುತ್ತದೆ ಎಂದು ತಿಳಿಸಿದರು. ಲೇಖಕಿ ಕೃಪಾದೇವರಾಜ್ ಮಾತನಾಡಿ, ಸರಳತೆ ಬಯಸುವ ತಾನು, ಕಥಾ ಸಂಕನವನ್ನೂ ಅದ್ಧೂರಿಯಾಗಿ ಬಿಡುಗಡೆ ಮಾಡಲು ಬಯಸಲಿಲ್ಲ ಎಂದು ಹೇಳಿದರು. ಬರಹಗಾರ ನೌಶದ್ ಜನ್ನತ್, ಪರ್ತಕರ್ತ ಬಿ.ಜಿ. ಅನಂತಶಯನ, ಚುಟುಕ ಕವಿ ಹಾ.ತಿ. ಜಯಪ್ರಕಾಶ್ ಮಾತನಾಡಿದರು. ಕವನ ಸಂಕಲನದಲ್ಲಿ ಕನ್ನಡದಲ್ಲಿ ಮಂತ್ರ ಪಠಿಸುವ ಏಕೈಕ ಅರ್ಚಕ ವಾಗ್ಮಿ ಹಿರೇಮಗಳೂರು ಕಣ್ಣನ್ ಅವರ ಮುನ್ನುಡಿ, ಖ್ಯಾತ ಬರಹಗಾರ್ತಿ ಮಂಗಳನಾಡಿಗ್ ಅವರ ನುಡಿ ಅಡಕವಾಗಿರುವುದು ವಿಶೇಷ.
ವಿಜಯಪುರ ಜ.2 : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ…
ಪುತ್ತೂರು ಜ.2 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು ಬಂಟಕಲ್ಲಿನ ಶ್ರೀ ಮಾಧ್ವ ವಾದಿರಾಜ ಇನ್ಸ್ ಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಕಲಾ, ಸಾಂಸ್ಕೃತಿಕ ಹಾಗೂ ತಂತ್ರಜ್ಞಾನ ಹಬ್ಬ ವರ್ಣೋತ್ಸವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ಮಾರ್ಗದರ್ಶನದಲ್ಲಿ ಒಟ್ಟು 35 ವಿದ್ಯಾರ್ಥಿಗಳ ತಂಡವು ಇದರಲ್ಲಿ ಪಾಲ್ಗೊಂಡಿತ್ತು. ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಬಾಗವಹಿಸಿದ ವಿದ್ಯಾರ್ಥಿಗಳು 5 ವಿಭಾಗಗಳಲ್ಲಿ ಪ್ರಥಮ ಹಾಗೂ 2 ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡು ಒಟ್ಟು ಸ್ಪರ್ಧೆಯ ಸಮಗ್ರ ಪ್ರಶಸ್ತಿಯನ್ನ್ನು ಪಡೆದುಕೊಂಡಿದ್ದಾರೆ. ಇವರಿಗೆ ಭೂಮಿಕಾ ಕಲಾ ಸಂಘದ ಸಂಯೋಜಕರಾದ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಡಾ.ಶ್ವೇತಾಂಬಿಕಾ.ಪಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಜ.2 : ಬಿಎಸ್ಎನ್ಎಲ್ ಮೈಸೂರು ವಿಭಾಗೀಯ ಸಲಹಾ ಸಮಿತಿ ಸದಸ್ಯರಾಗಿ ಮಡಿಕೇರಿಯ ಕನ್ನಂಡಬಾಣೆಯ ನಾಳನ ಕನ್ನಿಕೆ ದಿನೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕೇಂದ್ರ ಸರಕಾರದ ಸಾರ್ವಜನಿಕ ಸಂಪರ್ಕ ಸಚಿವಾಲಯ ಈ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಮಡಿಕೇರಿ ಜ.2 : ಸೋಮವಾರಪೇಟೆಯ ನೂತನ ಟರ್ಫ್ ಮೈದಾನ ಉದ್ಘಾಟನಾ ಸಮಾರಂಭವು ಜ.3 ರಂದು ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ನೂತನ ಮೈದಾನವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಕೆ.ಎ.ಅಬ್ದುಲ್ ರಜಾಕ್ ತಿಳಿಸಿದ್ದಾರೆ.
ನಾಪೋಕ್ಲು ಜ.2 : ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಕ್ರೀಡಾ ಹಾಗೂ ಸೌಹಾರ್ದ ಕೂಟ ಕಾರ್ಯಕ್ರಮ ಮೈಸೂರು ಗೌಡ ಸಮಾಜದ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಪೊನ್ನಚನ ಅಪ್ಪಯ್ಯ, ಸಂಘದ ಸದಸ್ಯರುಗಳ ಸಂಖ್ಯೆ ಗಣನೀಯ ಏರಿಕೆಯು ಸಂಘದ ಅಭಿವೃದ್ಧಿ ಹಾಗೂ ಬೆಳವಣಿಗೆಯನ್ನು ಸೂಚಿಸುತ್ತದೆ. ಸಂಘದ ಮೂಲ ಹಾಗೂ ಮುಖ್ಯ ಉದ್ದೇಶವನ್ನು ಗುರಿಯಾಗಿಟ್ಟುಕೊಂಡು ಒಗ್ಗಟ್ಟಿನಿಂದ ಶ್ರಮಿಸಬೇಕಿದೆ ಎಂದರು. ಸಂಘವು ತನ್ನದೇ ಆದ ನಿವೇಶನ ಹೊಂದುವ ಮೂಲಕ ತಮ್ಮದೇ ಆದ ಸ್ವಂತ ಕಟ್ಟಡವನ್ನು ಹೊಂದಬೇಕೆಎನ್ನುವ ಇಂಗಿತವನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಸರ್ವರ ಸಹಕಾರವನ್ನು ಕೋರಿ ಸರ್ವರ ಸಹಮತವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ವಿದ್ಯಾ ವಿಕಾಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕವಿಶ್ ಗೌಡ ಮಾತನಾಡಿ, ಕೊಡಗಿನ ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದಲ್ಲಿ ನೆಲೆಸಿದ್ದು, ಎಲ್ಲರೂ ಒಂದಾಗಿ ಸೇರಿ ನಡೆಸುತ್ತಿರುವ ಕಾರ್ಯ ಚಟುವಟಿಕೆಗಳು ಇತರರಿಗೂ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಪ್ರತಿಭಾವಂತರನ್ನು ಗುರುತಿಸಿ ಪುರಸ್ಕರಿಸುವುದು ವಿಶೇಷ…
ನಾಪೋಕ್ಲು ಜ.2 : ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಆಗಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ ಬಡ್ಡಿರ ನಳಿನಿ ಪೂವಯ್ಯ ಹೇಳಿದರು. ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸತ್ಯ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಮಾನವೀಯತೆ ಹೊಂದಿದ ಮಾನವನನ್ನಾಗಿ ರೂಪಿಸುವುದು ಶಿಕ್ಷಕರ ಜವಾಬ್ದಾರಿ. ಪ್ರತಿಯೊಂದು ಮಗುವಿನ ಬುದ್ಧಿವಂತಿಕೆ ಭಿನ್ನವಾಗಿರುತ್ತದೆ. ಪೋಷಕರು ಮಗುವಿನಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ವಾರ್ಷಿಕೋತ್ಸವದಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಪ್ರೋತ್ಸಾಹ ದೊರೆಕಿದಂತಾಗುತ್ತದೆ. ಅಂತೆಯೇ ಹೊಸ ವರ್ಷ ಕೂಡ ಸಂಕಲ್ಪಗಳನ್ನು ಮಾಡುವಂತ ದಿನ. ಹೊಸ ವರ್ಷದ ಆಚರಣೆ ಕೇವಲ ಆಚರಣೆಯಲ್ಲಿ ಮುಗಿಯುವುದಿಲ್ಲ. ಹಿಂದಿನ ವರ್ಷಗಳ ಎಡರು ತೊಡರುಗಳನ್ನು ನೆನಪಿಸಿಕೊಂಡು ಹೊಸ ವರ್ಷದಲ್ಲಿ ಸಂಕಲ್ಪ ಮಾಡಿದಾಗ ಹೊಸ ವರ್ಷದ ಆಚರಣೆಗೆ ಒಂದು ಅರ್ಥ ಬರುತ್ತದೆ ಎಂದರು. ಪರೀಕ್ಷೆಗಾಗಿ ಉತ್ತಮ ಸಿದ್ಧತೆಗಳನ್ನು ವಿದ್ಯಾರ್ಥಿಗಳು ಇಂದಿನಿಂದಲೇ ಸಿದ್ಧಪಡಿಸಿಕೊಳ್ಳಬೇಕು. ಜೀವನದಲ್ಲಿ ಗುರಿಯಿಸಿ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು. ಪೋಷಕರು…
ಸೋಮವಾರಪೇಟೆ ಜ.2 : ಜೇಸಿ ವಲಯ 14ರ ಎಸ್ಎಂಎ ಉಪ ಚೇರ್ಮನ್ ಸೋಮವಾರಪೇಟೆ ನಿವಾಸಿ ಎ.ಆರ್.ಮಮತ ಅವರು ಜೆಸಿಐ ರಾಷ್ಟ್ರೀಯ ಅತ್ಯುತ್ತಮ ಹಿರಿಯ ಮಹಿಳಾ ಸದಸ್ಯೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಆಯೋಜಿಸಿದ್ದ ಜೆಸಿಐ ಎಸ್ಎಂಎ ರಾಷ್ಟ್ರೀಯ ಅಧಿವೇಶನದಲ್ಲಿ ರಾಷ್ಟೀಯ ಚೇರ್ಮನ್ ಪ್ರಮೋದ್ ಕುಮಾರ್ ಪ್ರಶಸ್ತಿ ವಿತರಿಸಿದರು. ರಾಷ್ಟ್ರೀಯ ಉಪ ಚೇರ್ಮನ್ ನರೆನ್ ಕಾರ್ಯಪ್ಪ, ನಿರ್ದೇಶಕ ಕೆ.ಎಸ್.ಕುಮಾರ್, ವಲಯ-14ರ ಚೇರ್ಮನ್ ವಿರೇಶ್ಬಾಬು, ನಿಯೋಜಿತ ಚೇರ್ಮನ್ ರಂಗಸ್ವಾಮಿ, ನಿಕಟಪೂರ್ವ ಚೇರ್ಮನ್ ಶಿವನಂಜಪ್ಪ, ವಲಯ ಉಪಚೇರ್ಮನ್ ಯೋಗೇಶ್ ಇದ್ದರು.
ಸೋಮವಾರಪೇಟೆ ಜ.2 : ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಪೋಷಕರ ಕ್ರೀಡಾಕೂಟದ ಮಹಿಳೆಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಟೀಮ್ ಹಣಕೋಡು ತಂಡ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದು, ತಾಕೇರಿ ಮಹಿಳೆಯರ ತಂಡ ದ್ವೀತಿಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಂಜು ಟೀಮ್ ಪ್ರಥಮ, ಶಿವಾಜಿ ತಂಡ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾವಳಿಯನ್ನು ವಿದ್ಯಾಸಂಸ್ಥೆಯ ಭಾತ್ಮೀದಾರರಾದ ಕೆ.ಎಂ.ಜಗದೀಶ್, ಪದಾಧಿಕಾರಿಗಳಾದ ರಾಮಚಂದ್ರ, ಪಿ.ಯು.ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೊನ್ಸಾಲ್ವೆಸ್, ದೈಹಿಕ ಶಿಕ್ಷಣ ಶಿಕ್ಷಕಿ ಇಂದಿರಾ ಮತ್ತು ಶಿಕ್ಷಕರುಗಳು ಇದ್ದರು.






