ಮಡಿಕೇರಿ ಡಿ.8 : ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ‘ಮಹಾ ಪರಿನಿರ್ವಾಣ ದಿನ’ವನ್ನು ಆಚರಿಸಲಾಯಿತು. ನಗರಸಭೆ ಪೌರಾಯುಕ್ತ ವಿಜಯ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಅಂಬೇಡ್ಕರ್ ಅವರ ವಿಚಾರಧಾರೆ ತಿಳಿಸಿಕೊಟ್ಟರು. ತಾಲ್ಲೂಕಿನ ಸಮಾನ ಮನಸ್ಕರು, ಸಮಾಜ ಚಿಂತಕರು, ಎಲ್ಲ ಸರ್ವ ಜನಾಂಗ ಸೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿದರು. ಪ್ರಮುಖರಾದ ಮೋಹನ್ ಮೌರ್ಯ, ಹುಸೇನ್, ಜನಾರ್ಧನ್, ಜಯರಾಮ್, ಪ್ರೇಮಕುಮಾರ್, ಚಂದ್ರಮೌಳಿ ಹಾಗೂ ಅಶೋಕಪುರ ಹಾಗೂ ಉಕ್ಕುಡ ಗ್ರಾಮಸ್ಥರು ಸೇರಿ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. ವಕೀಲರು ಹಾಗೂ ಚಿಂತಕರಾದ ಕುನ್ನಿ ಅಬ್ದುಲ್ಲಾ, ಪ್ರಮುಖರಾದ ಹರೀಶ್ ಕಾಳಯ್ಯ ಮತ್ತು ಡಿಎಸ್ಎಸ್ ದಿವಾಕರ್, ಜಿ.ಎಸ್.ವಿನಯ್ ಕುಮಾರ್, ಹಿರಿಯರಾದ ಪ್ರೊ.ಅಥಿನಿ ಮಹದೇವ, ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಯೋಗೇಶ್ ಕುಮಾರ್, ಶಿಕ್ಷಣ ಅಧಿಕಾರಿ ಕೃಷ್ಣಪ್ಪ, ಇತರರು ಇದ್ದರು.
ಲೇಖಕ: admin
ಮಡಿಕೇರಿ ಡಿ.8 ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಡಿ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಲೋಕ ಅದಾಲತ್ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ…
ಚೆಟ್ಟಳ್ಳಿ ಡಿ.8 : ಉತ್ತರ ಭಾರತದಲ್ಲೇ ಹೆಚ್ಚಾಗಿ ಬೆಳೆಯುವ ಮಾರುಟ್ಟೆಯಲ್ಲಿ ಬಲು ಬೇಡಿಯ ವಿದೇಶಿಹಣ್ಣು ಲಿಚ್ಚಿ ಕೊಡಗಿನ ವಾತಾವರಣಕ್ಕೆ ಸೂಕ್ತ ವೆನಿಸಿದೆ. ದೇಶವಿದೇಶಗಳಲ್ಲು ಅಪರೂಪವೆಂಬಂತೆ ಡಿಸಂಬರ್ ತಿಂಗಳಲ್ಲಿ ಕೊಡಗಿನಲ್ಲಿ ಕಂಡುಬರುವ ಆಫ್ಸೀಜನ್ ಹಣ್ಣಾಗಿದೆ ಎಂದು ಭಾರತೀಯ ತೋಟಗಾರಿಕಾ ಸಂಸ್ಥೆಯ ನಿರ್ದೇಶಕರಾದ ಡಾ ಬಿಕಾಸ್ದಾಸ್ ಹೇಳಿದರು. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ನಡೆದ ಆಫ್ ಸೀಜನ್ ಲಿಚ್ಚಿ ಹಣ್ಣಿನ ಕ್ಷೇತ್ರೋತ್ಸವ ಹಾಗೂ ಬೇಸಾಯ ಕ್ರಮಗಳ ಕುರಿತು ನಡೆದ ಲಿಚ್ಚಿ ಹಣ್ಣಿನ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಲವು ವರ್ಷಗಳಿಂದ ಚೆಟ್ಟಳ್ಳಿ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ವಿವಿಧ ಬಗೆಯ ಲಿಚ್ಚಿಬೆಳೆಯನ್ನು ಪ್ರಾಯೋಗಿಕವಾಗಿ ಬೆಳೆಸಲಾಗುತ್ತಿದ್ದು, ವಿದೇಶಗಳಲ್ಲಿ ಜೂನ್ತಿಂಗಳಲ್ಲಿ ಲಿಚ್ಚಿ ಫಸಲು ನೀಡಿದರೆ ಕೊಡಗಿನ ವಾತಾವರಣದಲ್ಲಿ ಡಿಸೆಂಬರ್ ತಿಂಗಳಲ್ಲಿ ಫಸಲು ಬರುತ್ತಿದೆ. ಆದರೂ ಲಿಚ್ಚಿ ಬೆಳೆಯ ಅಭಿವೃದ್ಧಿಯಾಗಿಲ್ಲ. ಮುಂದಿನ ದಿನಗಳಲ್ಲಿ ಲಿಚ್ಚಿ ಅಭಿವೃದ್ಧಿಗೆ ಕೇಂದ್ರಿಯ ತೋಟಗಾರಿಕಾ ಕೇಂದ್ರದ ವತಿಯಿಂದ ಬೆಳೆಗಾರರ ಸಹಕಾರದೊಂದಿಗೆ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದೆಂದರು. ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮುಖ್ಯಸ್ಥ…
ಮಡಿಕೇರಿ ಡಿ.8 : ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಪದ ಬಳಕೆಯ ಕ್ರಮವನ್ನು ರಾಜ್ಯ ಗೆಜೆಟ್ನಲ್ಲಿ ಅಧಿಕೃತವಾಗಿ ನಮೂದಿಸುವಾಗ “ಕೆ” ಆವೃತ್ತಿಯ “ಕೊಡವ” ಪದವನ್ನು ಮಾತ್ರ ದಾಖಲಿಸಿ, “ಸಿ” ಆವೃತ್ತಿಯ “ಕೊಡವ” ಪದವನ್ನು ಉಲ್ಲೇಖಿಸಿಲ್ಲ. ಅರ್ಜಿದಾರ ಸಂಘಟನೆಯ ಹೆಸರನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಗೆ ಬದಲಾಗಿ “ರಾಷ್ಟ್ರೀಯ ಕೊಡವ ಪರಿಷತ್ತು” ಎಂದು ವಿಕೃತಿಗೊಳಿಸಲಾಗಿದೆ. ಈ ದೋಷಗಳನ್ನು ಸರಿಪಡಿಸದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ನ್ಯಾಷನಲ್ ಕೌನ್ಸಿಲ್/ಸಿಎನ್ಸಿ ಸಂಘಟನೆಯ 14 ವರ್ಷಗಳ ಸುದೀರ್ಘ ರಾಜಕೀಯ ಮತ್ತು ಕಾನೂನು ಹೋರಾಟದ ನಂತರ ಸರ್ಕಾರಿ ದಾಖಲೆಗಳಲ್ಲಿ “ಕೊಡವ” ಪದ ಬಳಕೆಯ ಕ್ರಮವನ್ನು ರಾಜ್ಯ ಗೆಜೆಟ್ನಲ್ಲಿ ನಮೂದಿಸಲಾಗಿದೆ. ಕೊಡವ ಹೆಗ್ಗುರುತನ್ನು ಶಾಸನಬದ್ಧವಾಗಿ ಅನುಮೋದಿಸುವ ಮತ್ತು ಎಲ್ಲಾ ಕ್ಷೇತ್ರದಲ್ಲಿ ಕೊಡವ ಅಸ್ತಿತ್ವವನ್ನು ಮರುಸ್ಥಾಪಿಸುವ ಪ್ರಕ್ರಿಯೆ ಸಿಎನ್ಸಿಯ ದೊಡ್ಡ ಸಾಧನೆಯಾಗಿದೆ. ‘ಕೊಡಗರು’ ಬದಲಿಗೆ ತನ್ನ ಶಾಸ್ತ್ರೀಯ ನಾಮಕರಣ “ಕೊಡವ” ಎಂದು ಮರುಸ್ಥಾಪಿಸುವಲ್ಲಿ ತೊಡಗಿಸಿಕೊಂಡ ಎಲ್ಲರಿಗೂ ಸಿಎನ್ಸಿ ಕೃತಜ್ಞತೆ ಸಲ್ಲಿಸುತ್ತದೆ.…
ವಿರಾಜಪೇಟೆ ಡಿ.8 : ಏಡ್ಸ್ ಕುರಿತು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳು ಅವಶ್ಯಕವಾಗಿವೆ ಎಂದು ವಿರಾಜಪೇಟೆ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಯತಿರಾಜ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ವಿರಾಜಪೇಟೆ ತಾಲೋಕು ಆರೋಗ್ಯ ಇಲಾಖೆ, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್. ಎಸ್., ಯುವ ರೆಡ್ ಕ್ರಾಸ್, ವೈಯುಕ್ತಿಕ ಕೌನ್ಸೆಲ್ಲಿಂಗ್ ಘಟಕಗಳ ಸಹಯೋಗದಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ-2023 ರಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬರು ಆರೋಗ್ಯ ಜಾಗೃತಿ ಹೊಂದಿರಬೇಕು. ಆರೋಗ್ಯವಂತ ಸಮಾಜದಿಂದ ಮಾತ್ರ ಸ್ವಾಸ್ತ್ಯ ಸಮಾಜದ ರಚನೆ ಸಾಧ್ಯವಾಗುತ್ತದೆ ಎಂದರು. ಏಡ್ಸ್ ಒಂದು ಮಾರಕ ರೋಗ ಎನ್ನುವುದಕ್ಕಿಂತ ಅದರ ಕುರಿತು ಜಾಗೃತಿ ಅವಶ್ಯಕ ವಾಗಿದೆ. ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಾಧ್ಯ. ಸರ್ಕಾರಿ ಆಸ್ಪತ್ರೆಯ ಐಸಿಟಿಸಿ ಘಟಕ ಹಾಗೂ ಆರೋಗ್ಯ ಉಪಕೇಂದ್ರಗಳಲ್ಲಿ ಎಚ್.ಐ.ವಿ ಪರೀಕ್ಷಾ ಕೇಂದ್ರಗಳಿದ್ದು,…
ಮೂರ್ನಾಡು ಡಿ.8 : ಸಾಂದೀಪಿನಿ ವಿದ್ಯಾಪೀಠದದಲ್ಲಿ ನಡೆದ ಕರಾಟೆ ಪರೀಕ್ಷೆಯಲ್ಲಿ ವಿದ್ಯಾಪೀಠದ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಪದಕ ಮತ್ತು ವಿವಿಧ ಬೆಲ್ಟ್ಗಳನ್ನು ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫುಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 19 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ವಿದ್ಯಾಪೀಠದ ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ವಿವಿಧ ರೀತಿಯ ಕರಾಟೆ ಬೆಲ್ಟ್ಗಳನ್ನು ವಿತರಿಸಿದರು. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫುಕರಾಟೆ ಶಾಲೆಯ ಭಾರತದ ಮುಖ್ಯ ತರಬೇತುದಾರ ದೇವರಾಜ್, ಸಾಂದೀಪಿನಿ ವಿದ್ಯಾಪೀಠದ ಕಾರ್ಯದರ್ಶಿ ಕೆ.ಆರ್ಯೋಗೇಶ್, ಸೌಜನ್ಯಯೋಗೇಶ್, ಕರ್ನಾಟಕ ತರಬೇತುದಾರ ಹಾಗೂ ವಿದ್ಯಾಪೀಠದ ಕರಾಟೆ ಶಿಕ್ಷಕ ನಾಟೋಳಂಡ ನಂಜುಂಡ, ಕೊಡಗು ಜಿಲ್ಲಾ ತರಬೇತುದಾರರಾದ ವೇಣು ಮತ್ತು ಸತೀಶ್ ಈ ಸಂದರ್ಭದಲ್ಲಿ ಹಾಜರಿದ್ದರು.
ನಾಪೋಕ್ಲು ಡಿ.8 : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಬಲಮುರಿ ಗ್ರಾಮದ ತೌಫಿಕ್ ಹಾಗೂ ಕಾಂತೂರು ಗ್ರಾಮದ ತಿಮ್ಮಯ್ಯ ಎಂಬವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪಾರಾಣೆ- ಬಲಮುರಿ ಸಂಪರ್ಕ ರಸ್ತೆಯ ಬಲಮುರಿ ಗ್ರಾಮದ ಸೇತುವೆ ಕೆಳ ಭಾಗದ ರಸ್ತೆಯ ಬಳಿ ಗಾಂಜಾ ಸೇವಿಸಿದ್ದ ಸಂಶಯದ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಫಾರೆನ್ಶಿಕ್ ವಿಭಾಗದ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಆರೋಪಿಗಳು ಗಾಂಜಾ ಸೇವನೆ ಮಾಡಿದ್ದು ದೃಡಪಟ್ಟಿದೆ. ಈ ಹಿನ್ನಲೆ ಆರೋಪಿಗಳ ವಿರುದ್ಧ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಡಿ.8 : 2022ರಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ತೀತಿರ ಶರ್ಮಿಲಿ ಅಪ್ಪಚ್ಚು ನಿರ್ಮಾಣದ “ಭೀರ್ಯ” ಕೊಡವ ಚಲನಚಿತ್ರಕ್ಕೆ ಪ್ರತಿಷ್ಠಿತ “ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್” ಪ್ರಶಸ್ತಿ ದೊರೆತಿದೆ. ಬೆಂಗಳೂರಿನ ರಾಜಾಜಿನಗರದ ಒರಿಯನ್ ಮಹಲ್’ನ ಪಿ.ವಿ.ಆರ್ ಚಿತ್ರಮಂದಿರದಲ್ಲಿ ನಡೆದ ಸಮಾರಂಭದಲ್ಲಿ “ಭೀರ್ಯ” ಕೊಡವ ಚಲನಚಿತ್ರದ ನಿರ್ಮಾಪಕಿ ತೀತಿರ ಶರ್ಮಿಲಿ ಅಪ್ಪಚ್ಚು, ಕಾಂತಾರ ಸಿನಿಮಾ ಖ್ಯಾತಿಯ ನಿರ್ದೇಶಕ ರಿಷಭ್ ಶೆಟ್ಟಿ ಅವರಿಂದ ಪ್ರಶಸ್ತಿಯನ್ನು ಪಡೆದುಕೊಂಡರು. ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಉದ್ಘಾಟನೆ ಮಾಡಿದ್ದರು. ಕಾಂತರ ಸಿನಿಮಾ ಖ್ಯಾತಿಯ ನಟ ನಿರ್ದೇಶಕ ರಿಷಭ್ ಶೆಟ್ಟಿ, ಶ್ರೀನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್ ಹಾಗೂ ಅನಿತಾ ರೆಡ್ಡಿ, ಹರ್ಷಿತಾ, ನಂದಿತಾ ಹಾಗೂ ಆಶೋಕ್, ಸುಂದರ್ ರಾಜ್, ವಸಿಷ್ಠ ಸಿಂಹ, ಶರಣ್, ಶಿವಕುಮಾರ್, ವಿನೋದ್ ರಾಜ್, ಭವ್ಯ, ಅನುಪ್ರಭಾಕರ್, ಪ್ರೇಮಾ, ವಿಜಯಲಕ್ಷ್ಮಿ, ಹರಿಪ್ರಿಯಾ, ವನಿತಾ ವಾಸು, ಹಿನ್ನೆಲೆ ಗಾಯಕರಾದ ಬಿ.ಕೆ…
ಕಡಂಗ ಡಿ.7 : ಕರಡ ಫ್ರೆಂಡ್ಸ್ ವತಿಯಿಂದ ನಡೆದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಕಡಂಗ ಫ್ರೆಂಡ್ಸ್ ತಂಡ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಕರಡ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕಡಂಗ ಫ್ರೆಂಡ್ಸ್ ತಂಡ, ಕುಂಜಿಲ ತಂಡ ವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪಂದ್ಯಾವಳಿಗೆ ಪ್ರಾಥಮಿಕ ಶಾಲಾ ಶಿಕ್ಷಕಿ ದಮಯಂತಿ ಮತ್ತು ಐತಿಚಂಡ ಪ್ರಕಾಶ್ ಕಾರ್ಯಪ್ಪ ಚಾಲನೆ ನೀಡಿದರು. ಈ ಸಂದರ್ಭ ಪಾಂಡಂಡ ರಘುಪತಿ, ದರ್ಶನ್, ಅರ್ಜುನ್, ಸುಬ್ರಮಣಿ ಮತ್ತಿತರು ಗಣ್ಯರು ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಡಿ.7 : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗಿನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಆದೇಶವನ್ನು ಜ.1 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ಸಾರ್ವಜನಿಕರು ಬದಲಿ ರಸ್ತೆಯಾದ ನೇಗಳ್ಳಿ-ಕರ್ಕಳ್ಳಿ-ಕಾರೇಕೊಪ್ಪ-ಕೂಡಿಗೆ ರಸ್ತೆ ಮಾರ್ಗವನ್ನು ಬಳಸುವುದು. ಈ ಬಗ್ಗೆ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.






