ಮಡಿಕೇರಿ ಡಿ.6 : ನಗರದ ಕೊಡಗು ವಿದ್ಯಾಲಯದಲ್ಲಿ ಡಿ.9 ರಂದು ವಾಷಿ೯ಕ ಕ್ರೀಡಾ ದಿನಾಚರಣೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30 ಗಂಟೆಗೆ ಕ್ರೀಡಾ ದಿನಾಚರಣೆಯನ್ನು ಶಾಲಾ ಮೈದಾನದಲ್ಲಿ ನಿವೃತ್ತ ಏರ್ ಮಾಷ೯ಲ್ ಕೆ.ಸಿ.ಕಾಯ೯ಪ್ಪ ಉದ್ಘಾಟಿಸಲಿದ್ದಾರೆ. ವಿದ್ಯಾಥಿ೯ಗಳಿಂದ ಪಥಸಂಚಲನ, ವಿವಿಧ ರೀತಿಯ ಕ್ರೀಡೆಗಳು, ಪ್ರತಿಭಾ ಪ್ರದಶ೯ನ ಸೇರಿದಂತೆ ವಿವಿಧ ಕಾಯ೯ಕ್ರಮಗಳು ನಡೆಯಲಿದೆ ಎಂದು ಕೊಡಗು ವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಲೇಖಕ: admin
ಗೋಣಿಕೊಪ್ಪಲು ಡಿ.6 : ಮನಸು ಶಾಂತಿಯುತವಾಗಿ ಕೂಡಿರಲು ಕವಿತೆಗಳ ಓದಿನಿಂದ ಸಾಧ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಅಭಿಪ್ರಾಯಪಟ್ಟರು. ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು, ಸಾಹಿತ್ಯ ಸಂವರ್ಧಕ ಪರಿಷತ್ತು, ಛಂದೋಬದ್ಧ ಕಾವ್ಯ ಸೌಂವರ್ದಕ ಪರಿಷತ್ತು, ಬೊಮ್ಮಲಿಂಗೇಶ್ವರ ಪ್ರಕಾಶನ, ಕಲಾ ಉತ್ಸವ ಕೊಡಗು, ಸಹಯೋಗ ದಲ್ಲಿ ವಿರಾಜಪೇಟೆ ನಗರದ ಮೊಗರಗಲ್ಲಿಯಲ್ಲಿ ನಡೆದ ಕವಿ ಜಗದೀಶ್ ಜೋಡುಬೀಟಿ ಇವರ ಪುಸ್ತಕ ಪರಿಚಯ ಕವಿಗಳೊಂದಿಗೆ ಸಂವಾದ, ಕವಿಗೋಷ್ಠಿ ಮತ್ತು ಜಾನಪದ ಗೀತೆ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕದನವನ್ನತಡೆಯುವ ಶಕ್ತಿ ಮತ್ತು ಸಂತಾನವನ್ನು ನಡೆಸುವ ಯುಕ್ತಿ ಕಾವ್ಯದೊಳಡಾಗಿದೆ. ಪ್ರತಿಯೊಬ್ಬರ ಮನಸಿನಲ್ಲೂ ಕಾವ್ಯ ನೆಲೆನಿಂತಾಗ ಈ ಸಮಾಜದ ಸಂಘರ್ಷಗಳಿಂದ ಹೊರಗುಳಿದು ಉತ್ತಮ ಮಾನವೀಯ ಬಾಂಧವ್ಯವನ್ನು ಗಟ್ಟಿಗೊಳಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ನೊಂದವರ ಬೆಂದವರ ಹೃದಯಗಳನ್ನು ಅರಿತುಕೊಂಡಗ ಕವಿ ಹೃದಯಗಳು ಕಾವ್ಯ ರಚಿಸಬೇಕು. ವಚಾಳಿತನವನ್ನು ಬಿಟ್ಟು ಮೌನತೆಯನ್ನು ಅಪ್ಪಿಕೊಂಡಾಗ ಕವಿತೆಗಳು ಅರಳುತ್ತದೆ ಎಂದರು. ನಿವೃತ ಪ್ರಾಂಶುಪಾಲ ನಾಟಕ ಭಾರ್ಗವ ಕೆಂಪರಾಜು ಮಾತನಾಡಿ, ಮನುಷ್ಯ ಜೀವನದ ಪಾರಂಪರಿಕ ಹಿನ್ನೆಲೆಯಲ್ಲಿ ಕಾವ್ಯವನ್ನ ಅಪ್ಪಿಕೊಂಡಾಗಿದೆ.…
ಗೋಣಿಕೊಪ್ಪ ಡಿ.6 : ಶಿಕ್ಷಣದಿಂದ ಮಾತ್ರ ಈ ಸಮಾಜದಲ್ಲಿ ಸಮಾನತೆಯ ಮೌಲ್ಯಾಧಾರಿತ ಬದುಕು ನಡೆಸಲು ಸಾಧ್ಯ ಎಂದು ಕಾವೇರಿ ಕಾಲೇಜು ಉಪನ್ಯಾಸಕ ವನಿತ್ ಕುಮಾರ್ ತಿಳಿಸಿದರು. ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ನಿಟ್ಟೂರು ಗ್ರಾ.ಪಂ ಸಭಾಂಗಣದಲ್ಲಿ ನಡೆದ 67ನೇ ಮಾಹ ಪರಿನಿರ್ಮಾಣ ಮತ್ತು ಸಂವಿಧಾನ ಕುರಿತು ಜನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಶೋಷಿತ ಸಮುದಾಯಗಳು ಬದುಕು ನಡೆಸಲು ಜ್ಞಾನದ ಅಗತ್ಯವಿದೆ. ಅಂಬೇಡ್ಕರ್ ಹಾದಿಯಲ್ಲಿ ಕಲಿಕೆಯ ಪ್ರಾಮುಖ್ಯ ತೆಯನ್ನು ತಿಳಿದುಕೊಳ್ಳಬೇಕು ಎಂದರು. ದುಷ್ಚಟಗಳಿಂದ ದೂರ ಉಳಿದು ಗೌರವಿತವಾಗಿ ಬದುಕು ನಡೆಸಲು ಚಿಂತಿಸಬೇಕು. ವಿದ್ಯಾರ್ಹತೆಯಿಂದ ಉತ್ತಮ ಉದ್ಯೋಗ ಪಡೆದು ಆರ್ಥಿಕವಾಗಿ ಚೇತರಿಸಿಕೊಳ್ಳಲು ಪ್ರಯತ್ನಿಸಬೇಕು ಇದರಿಂದ ಮತ್ತೊಂಬರ ಮುಂದೆ ಕೈಚಾಚುವುದು ತಪ್ಪುತ್ತದೆ ಎಂದು ಹೇಳಿದರು. ನೋಟರಿ, ವಕೀಲ ಕಾಶಿಯಪ್ಪ ಮಾತನಾಡಿ ಸಂವಿಧಾನ ರಚನೆ ಮಾಡಿದ ಅಂಬೇಡ್ಕರ್ ಹಿಂದೂಳಿದ ಸಮೂದಯಗಳು ಸಮಾನತೆಯ ಬದುಕು ನಡೆಸಲು ಅರ್ಹರಗಾಬೇಕು ಎಂಬ ಚಿಂತಿಸಿದರು. ಪರಿಣಾಮ ಇಂದು ಸರ್ಕಾರಿ ಕೆಲಸಗಳ ಅಧಿಕಾರಿ, ಸಿಬ್ಬಂದಿಗಳಗುತ್ತಿದ್ದಾರೆ ಇದು ಉತ್ತಮ ಬೆಳವಣಿಗೆ ಎಂದು ಹೇಳಿದರು.…
ಮಡಿಕೇರಿ ಡಿ.6 : ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪ ಯೋಜನೆ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೆಲವು ಇಲಾಖೆಗಳು ಭೌತಿಕ ಪ್ರಗತಿ ಸಾಧಿಸಿದ್ದು, ಆರ್ಥಿಕ ಪ್ರಗತಿಯನ್ನು ಕೂಡಲೇ ಸಾಧಿಸುವಂತೆ ಸೂಚಿಸಿದರು. ವೈಯಕ್ತಿಕ ಫಲಾನುಭವಿಗಳು ಆಯ್ಕೆ ಮಾಡದಿದ್ದಲ್ಲಿ, ಕೂಡಲೇ ಆಯ್ಕೆ ಮಾಡಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬಡವರಿಗಾಗಿ ಮೀಸಲಿಡುವ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಆಶಯಗಳನ್ನು ಅರ್ಥ ಮಾಡಿಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನಾ ಕಾರ್ಯಕ್ರಮವನ್ನು ಅರ್ಹರಿಗೆ ತಲುಪಿಸಬೇಕು. ವಿವಿಧ ಇಲಾಖೆ ಕಾರ್ಯಕ್ರಮಗಳು ನಿಗದಿಯಂತೆ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ…
ಮಡಿಕೇರಿ ಡಿ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67 ನೇ ‘ಮಹಾ ಪರಿನಿರ್ವಾಣ ದಿನ’ ಕಾರ್ಯಕ್ರಮವು ಬುಧವಾರ ನಡೆಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶ್ರೇಷ್ಠ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗೌರವ ಸಲ್ಲಿಸಿ ಮಾತನಾಡಿ ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು, ಜೊತೆಗೆ ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಸಹ ಪ್ರಸ್ತುತವಾಗಿವೆ ಎಂದು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ, ಚಲನಶೀಲತೆ ಮತ್ತು ಕ್ರೀಯಾಶೀಲತೆ ಸ್ವಲ್ಪವನ್ನಾದರೂ ಅನುಸರಿಸಿದರೆ ಪ್ರತಿಯೊಬ್ಬರೂ ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಬರೆದಿರುವ ಪುಸ್ತಕಗಳನ್ನು…
ಮಡಿಕೇರಿ ಡಿ.6 : ಮಡಿಕೇರಿ ನಗರಸಭೆಯ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಡಿ 2023-24 ನೇ ಸಾಲಿನ ಅನುಮೋದಿತ ಕ್ರಿಯಾ ಯೋಜನೆಯಂತೆ ಶೇ.24.10 ರ ಪರಿಶಿಷ್ಟ ಜಾತಿ/ ಪಂಗಡದ, ಶೇ.7.25 ರ ನಗರ ಬಡ ಜನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇ.5 ರ ಅಂಗವಿಕಲರ ಅಭಿವೃದ್ದಿ ಯೋಜನೆಯಡಿ ವೈಯಕ್ತಿಕ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹಾಗೂ ಮುಂದೆ ಅಗತ್ಯ ಪಡಿಸಬಹುದಾದ ಇತರೆ ದಾಖಲಾತಿಗಳನ್ನು ನೀಡುವ ಷರತ್ತಿಗೆ ಒಳಪಡಿಸಿದೆ. ಅರ್ಜಿ ಸಲ್ಲಸಲು ಡಿಸೆಂಬರ್, 26 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ನಗರಸಭೆ ಕಚೇರಿಯಲ್ಲಿ ಪಡೆಯಬಹುದಾಗಿದೆ. ಶೇ.24.10 (ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮ): ನಿವೇಶನ ಹೊಂದಿರುವ ಫಲಾನುಭವಿಗಳ ಮನೆಯ ಮೇಲ್ಚಾವಣಿ ದುರಸ್ತಿಗಾಗಿ ಸಹಾಯಧನ ನೀಡುವುದು. 4.16 ಲಕ್ಷ ರೂ. ಕಾಯ್ದಿರಿಸಲಾಗಿದೆ. ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಮನೆಯ ಕಂದಾಯ ರಶೀದಿ, ನಮೂನೆ-3 ಕಡ್ಡಾಯವಾಗಿ ಫಲಾನುಭವಿಯ ಹೆಸರಿನಲ್ಲಿರ…
ಮಡಿಕೇರಿ ಡಿ.6 : ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ 2023-24 ನೇ ಸಾಲಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿದ್ದು, ಅರ್ಹ ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರಿರುವ ನವಕಾನೂನು ಪದವೀಧರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ದಾಖಲೆ ಪ್ರತಿಗಳೊಂದಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು ಮಡಿಕೇರಿ ಮತ್ತು 2 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು ಮಡಿಕೇರಿ(ಕಾರ್ಯ ನಿರ್ವಹಣೆ ವಿರಾಜಪೇಟೆ), ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ, ಸೋಮವಾರಪೇಟೆ, ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ, ಪೊನ್ನಂಪೇಟೆ ಹಾಗೂ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ, ಕುಶಾಲನಗರ ಇಲ್ಲಿಗೆ ಸಂಬಂಧಪಟ್ಟ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ, 12 ಕೊನೆಯ ದಿನವಾಗಿದೆ.…
ಮಡಿಕೇರಿ ಡಿ.6 : ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದಂತೆ ಮಡಿಕೇರಿ ನಗರಸಭೆಗೆ ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ನ್ನು ಹೊರಗುತ್ತಿಗೆ/ ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಉಳ್ಳವರು ಸ್ವಯಂ ಅರ್ಜಿ ಮತ್ತು ದೃಢೀಕೃತ ದಾಖಲೆಗಳೊಂದಿಗೆ ಡಿ.20 ರೊಳಗೆ ಅರ್ಜಿ ಸಲ್ಲಿಸಬೇಕು. ಇದು ಪೂರ್ಣವಾಗಿ ತಾತ್ಕಾಲಿಕ ಹೊರಗುತ್ತಿಗೆ ಹುದ್ದೆಯಾಗಿರುತ್ತದೆ. ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ ಪ್ರಥಮ ಆದ್ಯತೆಯನ್ನು (3) ಕ್ಕೆ ದ್ವಿತೀಯ ಆದ್ಯತೆಯನ್ನು (2) ಕ್ಕೆ ಹಾಗೂ ತೃತೀಯ ಆದ್ಯತೆಯನ್ನು (1) ಕ್ಕೆ ನೀಡಲಾಗುವುದು. ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಎಸ್ಸಿ(ಕಂಪ್ಯೂಟರ್ ಸೈನ್ಸ್)/ ಬಿಸಿಎ, ಎಂಎಸ್ಸಿ(ಕಂಪ್ಯೂಟರ್ ಸೈನ್ಸ್) ಅಥವಾ ಬಿಇ(ಕಂಪ್ಯೂಟರ್ ಸೈನ್/ಐಟಿ/ಎಂಸಿಎ) ವಿದ್ಯಾರ್ಹತೆ ಹೊಂದಿರಬೇಕು. ನಿಗದಿತ ಮಾಸಿಕ ಕನಿಷ್ಠ ವೇತನ ರೂ.20584 ಆಗಿರುತ್ತದೆ. ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸುವವರು ಮಾತ್ರ ಸೇವಾ ಶುಲ್ಕವನ್ನು ನಮೂದಿಸುವುದು. ಈ ನಿಗಧಿತ ವೇತನವು ಪ್ರಥಮ ವರ್ಷಕ್ಕೆ ನಿಗಧಿಯಾಗಿದ್ದು, ಮುಂದಿನ ವರ್ಷಗಳಿಗೆ ಸರ್ಕಾರವು ನಿಗಧಿ ಪಡಿಸಿರುವಂತೆ/ ಪಡಿಸುವಂತೆ ಸೇವೆಯನ್ನು ಆಧರಿಸಿ ಪರಿಷ್ಕರಿಸಲಾಗುವುದು.…
ಮಡಿಕೇರಿ ಡಿ.6 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನದ ಅಂಗವಾಗಿ ನೇತ್ರದಾನ, ದೇಹದಾನ ನೋಂದಾವಣಿ ಮತ್ತು ರಕ್ತದಾನ ಕಾರ್ಯಕ್ರಮ ನಡೆಯಿತು. ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರವನ್ನು ಗಣ್ಯರು ಉದ್ಘಾಟಿಸಿದರು. ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್, ರಕ್ತನಿಧಿ ವಿಭಾಗದ ಮುಖ್ಯಸ್ಥ ಡಾ.ಕೆ.ಪಿ.ಕರುಂಬಯ್ಯ, ಲಯನ್ಸ್ ಪ್ರಾಂತೀಯ ಅಧ್ಯಕ್ಷ ನವೀನ್ ಅಂಬೆಕಲ್ಲು, ದಲಿತಾ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಹಾಜರಿದ್ದರು. ಕಾರ್ಯಕ್ರಮದಲ್ಲಿ 12 ಮಂದಿ ನೇತ್ರದಾನ, 3 ಮಂದಿ ದೇಹದಾನಕ್ಕೆ ನೋಂದಾಯಿಸಿಕೊಂಡರು.
ಊಟದ ನಂತರ ಮಜ್ಜಿಗೆಯನ್ನು, ರಾತ್ರಿಯಲ್ಲಿ ಹಾಲನ್ನು ಮತ್ತು ಹಗಲಲ್ಲಿ ನೀರನ್ನು ಕುಡಿಯುವುದರಿಂದ ಮನುಷ್ಯನಿಗೆ ಯಾವ ಕಾಯಿಲೆಯೂ ಬರುವುದಿಲ್ಲ. ಇಂಥ ಮಹತ್ವವನ್ನು ಹೊಂದಿರುವ ಹಾಲನ್ನು ಸೇವಿಸುವುದರಿಂದ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ. “ಗೋಮಾತೆ “ಎಂದು ಪೂಜಿಸುವ ಹಸುವಿನ ಕ್ಷೀರ ಶ್ರೇಷ್ಠವಾದದ್ದು. ಹಸುಳೆಯಾಗಿದ್ದಾಗ ತಾಯಿಯ ಎದೆಯ ಹಾಲನ್ನು ಕುಡಿದ ಮನುಷ್ಯ ದೊಡ್ಡವನಾದ ಮೇಲೆ ಕುಡಿಯುವುದು ಗೋಮಾತೆಯ ಹಾಲು. ಇಂತಹ ಹಾಲಿನಲ್ಲಿ ಬಹಳಷ್ಟು ಔಷಧೀಯ ತತ್ವಗಳಿವೆ. ದಿನಾಲು ಹಾಲು ಕುಡಿಯುವುದರಿಂದ ಬೆಳೆಯುವ ಮಕ್ಕಳ ಮೂಳೆಯ ಶಕ್ತಿ ವೃದ್ಧಿಸುತ್ತದೆ ಮತ್ತು ಮೆದುಳಿನ ಸಂಪೂರ್ಣ ಬೆಳವಣಿಗೆಗೆ ಹಾಲು ಉತ್ತಮವಾದ ಆಹಾರವಾಗಿದೆ. ಬಹಳಷ್ಟು ಪೋಷಕಾಂಶಗಳನ್ನು ಹೊಂದಿರುವ ಹಾಲು ಒಂದು ಸಂಪೂರ್ಣ ಆಹಾರವಾಗಿದೆ. ಹಾಲು ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ಹಲವಾರು ವಿಟಮಿನ್ ಗಳನ್ನು ಹೊಂದಿದೆ. ಕೇವಲ ಹಸುಗಳು ಮಾತ್ರವಲ್ಲದೆ ಇನ್ನೂ ಬಹಳಷ್ಟು ಸಸ್ತನಿಗಳು ಹಾಲನ್ನು ಉತ್ಪತ್ತಿ ಮಾಡುತ್ತವೆ. ಆದರೆ ಅವುಗಳಲ್ಲಿ ಅನಾದಿಕಾಲದಿಂದಲೂ ನಾವು ಸೇವಿಸುತ್ತಾ ಬಂದಿರುವಂತಹ ಹಸುವಿನ ಹಾಲು ಪ್ರಾಮುಖ್ಯತೆಯನ್ನು ಪಡೆದಿದೆ. ಹಿಂದೂ ಧರ್ಮದಲ್ಲಿ ಹಸುವಿನ ಹಾಲನ್ನು ಕೇವಲ ಆಹಾರವನ್ನಾಗಿ ನೋಡದೆ ಅನೇಕ…






