ಲೇಖಕ: admin

ಮಡಿಕೇರಿ ಡಿ.5 : 67 ನೇ ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಯು ಜ.3 ರಿಂದ 8 ರವರೆಗೆ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಕೂಡಿಗೆ, ಪೊನ್ನಂಪೇಟೆ ಮತ್ತು ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿ ಆಯೋಜನೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರ ಮಟ್ಟದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಆಗಮಿಸುವ ಕ್ರೀಡಾಪಟುಗಳು, ತೀರ್ಪುಗಾರರು ಹಾಗೂ ತರಬೇತಿದಾರರು ಹೀಗೆ ಎಲ್ಲರಿಗೂ ವಸತಿ, ಉಪಹಾರ, ಊಟ, ಬಿಸಿನೀರು, ಶೌಚಾಲಯ ಹೀಗೆ ಪ್ರತಿಯೊಂದನ್ನು ಸಹ ಕಲ್ಪಿಸಬೇಕಿದ್ದು, ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಸೂಚಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊತೆ…

Read More

ಕಡಂಗ ಡಿ.5 :  ಕೊಡಗು ಜಿಲ್ಲೆಯ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಕೊಟ್ಟಮುಡಿ ಮರ್ಕಝ್ ನ ನೂತನ ಕಾಲೇಜು ಕಟ್ಟಡ ಮತ್ತು ವಿದ್ಯಾರ್ಥಿನಿಯರ ಹಾಸ್ಟೆಲ್ ಉದ್ಘಾಟನಾ ಸಮಾರಂಭವು 2024ನೇ ಜ.3 ರಂದು ಉದ್ಘಾಟನೆ ನಡೆಯಲಿದೆ ಎಂದು ನೆಡುವುಸದಾಗಿ ಕೊಡಗು ಜಿಲ್ಲಾ ಖಾಜಿ  ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ದುಬೈನಲ್ಲಿ  ಘೋಷಿಸಿದ್ದಾರೆ. ಮರ್ಕಝಲ್ ಹಿದಾಯ ಕೊಟ್ಟಮುಡಿ ಯುಎಇ ರಾಷ್ಟ್ರೀಯ ಸಮಿತಿ ಆಯೋಜಿಸಿದ ಯುಎಇ ಯೂನಿಯನ್ ದಿನಾಚರಣೆ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಹಕೀಮ್ ಅಝಹರಿ ಉಸ್ತಾದರು ಉದ್ಘಾಟಿಸಿದರು. ಜಲೀಲ್ ನಿಜಾಮಿ ಉಸ್ತಾದ್ ಅದ್ಯಕ್ಷತೆ ವಹಿಸಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಇಸ್ಮಾಯಿಲ್ ಸಖಾಫಿ ಉಸ್ತಾದರು ಮುಖ್ಯ ಭಾಷಣ ಮಾಡಿದರು. ಸಭೆಯಲ್ಲಿ ಕೊಡಗು ಸುನ್ನೀ ವೆಲ್ಫೇರ್ ಅಧ್ಯಕ್ಷ ಕೆ.ಕೆ.ಉಸ್ಮಾನ್ ಹಾಜಿ, ದುಬೈ ಜೋನಲ್ ಅಧ್ಯಕ್ಷ ಶಾಫಿ ಸಖಾಫಿ, ಅಹಮದ್ ಚಾಮೆ,ಮುಂತಾದ ಗಣ್ಯರು ಹಾಜರಿದ್ದರು. ವರದಿ : ನೌಫಲ್ ಕಡಂಗ 

Read More

ವಿರಾಜಪೇಟೆ ಡಿ.5 : ಗೋಣಿಕೊಪ್ಪಲು ಕಾವೇರಿ ವಿದ್ಯಾಸಂಸ್ಥೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಸಂಘ, ಐಕ್ಯೂಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕಾವೇರಿ ವಿದ್ಯಾಸಂಸ್ಥೆಯ ಉಪನ್ಯಾಸಕರು ಹಾಗೂ ಸಿಬ್ಬಂದಿಗಳಿಗೆ ನಡೆದ ಪುತ್ತರಿ ಕಪ್ ಕ್ರೀಡಾಕೂಟದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡ ಸಾಧನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿರಾಜಪೇಟೆ ಕಾವೇರಿ ಕಾಲೇಜು ತಂಡವು ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟದಲ್ಲಿ ಪ್ರಥಮ ಸ್ಥಾನ ಹಾಗೂ ಕ್ರಿಕೆಟ್ ಹಾಗೂ ಥ್ರೋ ಬಾಲ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ಬಹುಮಾನ ಪಡೆದುಕೊಂಡಿತು. ಈ ಸಂದರ್ಭ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಜರಿದ್ದರು.

Read More

ಬೆಂಗಳೂರು ಡಿ.5 :  ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್  ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಲಾಯಿತು. ಸಿಎಂ ಸಿದ್ದರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ್ ಅವರು ಪ್ರಾಂಜಲ್‌ ಅವರು ಕುಟುಂಬಕ್ಕೆ ಚೆಕ್ ನೀಡಿದರು. ಈ ಬಗ್ಗೆ ಟ್ವೀಟ್‌  ಮಾಡಿರುವ  ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ.ಪ್ರಾಂಜಲ್” ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ಪ್ರಾಣವನ್ನು ಪಣಕ್ಕೆ ಇಟ್ಟು ದೇಶ ಕಾಯುವ ಯೋಧರ ಬಗ್ಗೆ ನಮಗೆ ಅಪಾರವಾದ ಗೌರವ-ಅಭಿಮಾನ ಇದೆ, ಅಷ್ಟೇ ಗೌರವ ಮತ್ತು ಕಾಳಜಿ ಯೋಧರ ಕುಟುಂಬ ವರ್ಗದ ಬಗ್ಗೆಯೂ ಇದೆ. ಯೋಧರ ಸಾವು – ನೋವು ಮುಂದಿಟ್ಟುಕೊಂಡು ರಾಜಕಾರಣ ಮಾಡುವವರು ನಾವಲ್ಲ. ಕೆಲವರು ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದಷ್ಟೇ ಹಾರೈಸಬಲ್ಲೆ  ಎಂದು  ಹೇಳಿದ್ದಾರೆ.

Read More

ಮಡಿಕೇರಿ ಡಿ.5 :  ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ವತಿಯಿಂದ ವಿರಾಜಪೇಟೆಯಲ್ಲಿ  ಮನೆ ಮನೆ ಕವಿಗೋಷ್ಠಿ, ಜಾನಪದ ಗೀತೆ ಗಾಯನ, ಪುಸ್ತಕ ಪರಿಚಯ ಮತ್ತು ಕವಿಗಳೊಂದಿಗೆ ಸಂವಾದ  ಕಾರ್ಯಕ್ರಮ ನಡೆಯಿತು. ಸಮೂಹ ಮತ್ತು ಕಲಾ ಉತ್ಸವ ಕೊಡಗು-2023ರ ಕನ್ನಡ  ಪ್ರಾಯೋಜಕತ್ವದಲ್ಲಿ‌ ವಿರಾಜಪೇಟೆಯ  ಮೊಗರಗಲ್ಲಿ  ಕಲಾ ಪ್ರದರ್ಶನ ಸ್ಥಳದಲ್ಲಿ ನಡೆದ ಕಾರ್ಯಕ್ರಮವನ್ನು ವಿರಾಜಪೇಟೆ ಕ್ಷೇತ್ರದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್‌  ಉದ್ಘಾಟಿಸಿದರು. ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ನಿವೃತ್ತ ಪ್ರಾಂಶುಪಾಲ ನಾಟಕ ಭಾರ್ಗವ ಕೆಂಪರಾಜು ಹಾಜರಿದ್ದರು. ಗಿರೀಶ್ ಕಿಗ್ಗಾಲು ಆಶಯ ನುಡಿಯಾಡಿದರು. ಮನೆ ಮನೆ ಕಾವ್ಯಗೋಷ್ಠಿ ಪರಿಷತ್ತು ಬಳಗದ ಸಂಸ್ಥಾಪಕ ಪಿ.ಎಸ್. ವೈಲೇಶ  ಸ್ವಾಗತಿಸಿದರು. ನಿರೂಪಣೆಯನ್ನು ಎ.ವಿ.ಮಂಜುನಾಥ್, ಭಾಗ್ಯವತಿ ಮತ್ತು ಶಿವಮ್ಮ ವೈಲೇಶ್ ನಿರ್ವಹಿಸಿದರು. ಬಳಗದ ನಲ್ವತ್ತಕ್ಕೂ ಹೆಚ್ಚು ಕವಿಗಳು ಮತ್ತು ಗಾಯಕರು ಭಾಗವಹಿಸಿದರು.          

Read More

ಸೋಮವಾರಪೇಟೆ, ಡಿ.5: ಶಿಕ್ಷಕರ ಹುದ್ದೆ ಕೇವಲ ವೃತ್ತಿ ಅಲ್ಲ, ಅದೊಂದು ಶ್ರೇಷ್ಠ ಸೇವೆ. ಈ ದಿಸೆಯಲ್ಲಿ ಶಿಕ್ಷಕರು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಸೋಮವಾರಪೇಟೆ ತಾಲ್ಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರ( ಬಿ.ಆರ್.ಸಿ.)ದ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಹುದ್ದೆಯಿಂದ ಮುಂಬಡ್ತಿ ಹೊಂದಿ ತಾಲ್ಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಛೇರಿಯ ಸಿಬ್ಬಂದಿಯೊಂದಿಗೆ ಶೈಕ್ಷಣಿಕ ಹಾಗೂ ಆಡಳಿತ ವ್ಯವಸ್ಥೆ ಕುರಿತು ಸಮಾಲೋಚನೆ ನಡೆಸಿ ಶೈಕ್ಷಣಿಕ ಪ್ರಗತಿ ಕುರಿತು ಚರ್ಚಿಸಿ ಮಾತನಾಡಿದರು. ನೂತನ ಬಿಇಓ ಭಾಗ್ಯಮ್ಮ ಅವರು, ಪ್ರಭಾರ ಬಿಇಓ ಎಂ.ವಿ.ಮಂಜೇಶ್ ಅವರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು,  ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಶಾಲೆಯ ಪ್ರಗತಿಯೊಂದಿಗೆ ವೃತ್ತಿ ಬದ್ಧತೆ ತೋರುತ್ತಿರುವುದು ಶ್ಲಾಘನೀಯ ಎಂದರು. ಪ್ರತಿಯೊಬ್ಬ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮುಖ್ಯ. ಇದರಿಂದ…

Read More

ಮಡಿಕೇರಿ ಡಿ.5 : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಹುದ್ದೆಯನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು. ಸಂಘದ ರಾಜ್ಯಾಧ್ಯಕ್ಷ ಹನುಮಂತ ಗೌಡ ಕಲ್ಮಣಿ ಹಾಗೂ ಜಿಲ್ಲಾಧ್ಯಕ್ಷ ಎಂ.ಎ.ಶ್ಯಾಮ್ ಪ್ರಸಾದ್, ಅವರ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅತಿಥಿ ಉಪನ್ಯಾಸಕರು ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದ ಸಂಘದ ರಾಜ್ಯಾಧ್ಯಕ್ಷ ಹನುಮಂತ ಗೌಡ ಕಲ್ಮಣಿ ರಾಜ್ಯದಾದ್ಯಂತ ಇರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅತಿಥಿ ಉಪನ್ಯಾಸಕರನ್ನು ಜೀತದಂತೆ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸುವ ಭರವಸೆ ನೀಡಿದ್ದರು. ಇಂದು ಸ್ವತ: ಸಿದ್ದರಾಮಯ್ಯ…

Read More

ಮಡಿಕೇರಿ ಡಿ.5 : ಪೊನ್ನಂಪೇಟೆಯ ಸರ್ವದೈವತಾ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಬಿ.ಎಸ್.ಸೃಷ್ಟಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ಈ ಸಂದರ್ಭದಲ್ಲಿ ಶಾಲಾ ಸಂಯೋಜಕರಾದ ಅಮೃತ, ದೈಹಿಕ ಶಿಕ್ಷಕಿ ಮೋನಿಕಾ ಕಾವೇರಿ ಉಪಸ್ಥಿತರಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ, ಅಭಿನಂದಿಸಿದರು.

Read More

ಚೆಟ್ಟಳ್ಳಿ ಡಿ.5 :   ಭಾರತೀಯ ತೋಟಗಾರಿ‌ಕಾ ಸಂಶೋದನಾ ಸಂಸ್ಥೆ, ಕೇಂದ್ರೀಯ ತೋಟಗಾರಿಕಾ ಕೇಂದ್ರ ಚೆಟ್ಟಳ್ಳಿಯಲ್ಲಿ ಹಣ್ಣುಗಳ- ಅಖಿಲ ಭಾರತ ಸಂಘಟಿತ ಸಂಶೋದನಾ ಯೋಜನೆಯಡಿ ಡಿ.7ರಂದು ಆಫ್ ಸೀಜನ್‌ ಲಿಚ್ಚಿ ಹಣ್ಣಿನ  ಕ್ಷೇತ್ರೋತ್ಸವ ಹಾಗೂ ಬೇಸಾಯ ಕ್ರಮಗಳ ಬಗ್ಗೆ ಕಾರ್ಯಾಗಾರ ನಡೆಯಲಿದೆ ಎಂದು  ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಕೇಂದ್ರದ ಮೇಲ್ವಿಚಾರಕ  ಡಾ. ರಾಜೇಂದಿರನ್ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರಿನ ಐಸಿಎರ್ – ಐಐಹೆಚ್ ಆರ್ ನ ನಿರ್ದೇಶಕ  ಡಾ.ಸಂಜಯ್ ಕುಮಾರ್ ಸಿಂಗ್ ವಹಿಸಲಿದ್ದು, ಮುಖ್ಯಅತಿಥಿಗಳಾಗಿ ಐಸಿಏಅರ್ – ಎನ್ಆರ್ ಸಿಯ ನುರಿತ ತಜ್ಞರು ಹಾಗೂ ನಿರ್ದೇಶಕ  ಡಾ.ಬಿಕಾಸ್ ದಾಸ್, ಅತಿಥಿಗಳಾಗಿ ಎಐಸಿಆರ್ ಪಿ ಆನ್ ಫೂಟ್ ಐಸಿಎರ್ – ಐಐಹೆಚ್ ಆರ್ ಬೆಂಗಳೂರಿನ ಪ್ರೋಜೆಕ್ಟ್ ಕೋಡಿನೇಟರ್ ಡಾ.ಪ್ರಕಾಶ್ ಪಾಟಿಲ್, ಪ್ರಗತಿಪರ ಕಾಫಿಬೆಳೆಗಾರ ಹಾಗೂ ಕಾಫಿ ಮಂಡಳಿಯ ಮಾಜಿ ಅಧ್ಯಕ್ಷ ಬೋಸ್ ಮಂದಣ್ಣ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ವಸ್ತುಪ್ರದರ್ಶನ, ಕ್ಷೇತ್ರ ಭೇಟಿ, ರತ-ವಿಜ್ಞಾನಿಗಳ ಸಂವಾದ, ಲಿಚ್ಚಿಯಲ್ಲಿ ಗರ್ಡಲಿಂಗ್ ತಂತ್ರಜ್ಞಾನದ ‌ಮಾಹಿತಿ ಕಾರ್ಯಾಗಾರ ನಡೆಯಲಿದೆ. ಆಫ್…

Read More

ಸೋಮವಾರಪೇಟೆ ಡಿ.5 : ಸೋಮವಾರಪೇಟೆ ತಾಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್.ಭಾಗ್ಯ  ಅಧಿಕಾರ ಸ್ವೀಕರಿಸಿದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್ ನೂತನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ತಾಲ್ಲೂಕು ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Read More