ಮಡಿಕೇರಿ ಡಿ.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ ಮತ್ತು ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆಯು ‘ಸಾಮಾಜಿಕ ಪ್ರಗತಿ ಸಾಧಿಸಲು ವಿಶೇಷ ಚೇತನರನ್ನು ಒಳಗೊಂಡ ಸಮಾಜ ರೂಪಿಸುವುದು’ ಎಂಬ ಘೋಷವಾಕ್ಯದೊಂದಿಗೆ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಓಂಕಾರ ಸದನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
ಮಡಿಕೇರಿ ಡಿ.2 NEWS DESK : 2025-26ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಆಧಾರದ ಮೇಲೆ ಟಿಜಿಟಿ ವಿಜ್ಞಾನ, ಟಿಜಿಟಿ ಕಂಪ್ಯೂಟರ್ ವಿಜ್ಞಾನ, ಕುಕ್ ಮತ್ತು ಎಂಟಿಎಸ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಡಿ.5 ರಂದು ಬೆಳಗ್ಗೆ 10.30 ಗಂಟೆಗೆ ಕೇಂದ್ರ ಸರ್ಕಾರದ ಶಿಕ್ಷಣ ನೇಮಕಾತಿಯ ಪ್ರಕಾರ, ಕಾರ್ಮಿಕ ಸಚಿವಾಲಯದ ಮಾನದಂಡಗಳ ಪ್ರಕಾರ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9611862835 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಡಿ.2 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ‘ವಿಪ್ರ ಕ್ರೀಡೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಚಂದ್ರ ಮೂಗೂರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿಪ್ರ ಬಾಂಧವರಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಬೆರೆಯಲು ಇದೊಂದು ಸದವಕಾಶವಾಗಿದ್ದು, ವಿಪ್ರ ಬಾಂಧವರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಪ್ರ ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ಡಿ.7ರಂದು ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಗಳು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣ(ಮ್ಯಾನ್ಸ್ ಕಾಂಪೌಂಡ್)ದÀಲ್ಲಿ ವಿವಿಧ ವಿಭಾಗಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪುರುಷರ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್, 50 ವರ್ಷ ಮೇಲ್ಪಟ್ಟವರ ವಿಭಾಗ, ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಅದೇ ದಿನ…
ಮಡಿಕೇರಿ ಜ.2 NEWS DESK : ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಸಮಾರೋಪಗೊಂಡಿತು. ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಬೋರಲಿಂಗಯ್ಯ ಪಾಲ್ಗೊಂಡು ಮಾತನಾಡಿ ಕ್ರೀಡೆ ಇರಲಿ, ಯಾವುದೇ ಸನ್ನಿವೇಷ ಇರಲಿ ಸವಾಲನ್ನು ಸಮತೋಲನದಲ್ಲಿ ತೆಗೆದುಕೊಂಡು ಹೋಗುವ ಮನಸ್ಥಿತಿ ಎಲ್ಲರಲ್ಲೂ ಇರಬೇಕೆಂದು ಸಲಹೆ ನೀಡಿದರು. ನಮ್ಮ ಆರೋಗ್ಯವನ್ನು ಕಾಪಾಡಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಗೆದ್ದಾಗ ಸಂತೋಷಪಡುತ್ತೇವೆ. ಆದರೆ ಸೋಲನುಭವಿಸಿದಾಗ ಅದನ್ನುಸವಾಲಾಗಿತೆಗೆದುಕೊಳ್ಳುವ ಮನಸ್ಥಿತಿ ಕಡಿಮೆಯಿದೆ. ಆದ್ದರಿಂದ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಕರೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇದ್ದರು. ಪುರುಷರಿಗೆ ನಡೆದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಧರ್ಮ ವಿರಾಜಪೇಟೆ ಪ್ರಥಮ, ಸಂಜು ಮಡಿಕೇರಿ ದ್ವಿತೀಯ, ಡಿಎಆರ್ನ ವಿಜಯ್ ತೃತೀಯ ಬಹುಮಾನ ಗಳಿಸಿದರು. ಮಹಿಳೆಯರಿಗೆ ನಡೆದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭವ್ಯ ಮಡಿಕೇರಿ…
ಕಾರ್ಕಳ ಡಿ.2 NEWS DESK : ಪ್ರಸ್ತುತ ದಿನಮಾನಗಳಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಗ್ನಿ ಅವಘಡ, ಪ್ರಕೃತಿ ವಿಕೋಪಗಳಿಂದ ಸಂಭವಿಸಬಹುದಾದ ದುರ್ಘಟನೆಗಳಿಂದ ನಾವು ಹೇಗೆ ಸುರಕ್ಷಿತರಾಗಿ ನಮ್ಮನ್ನು ಕಾಪಾಡಿಕೊಳ್ಳಬೇಕು ಎಂಬ ಅರಿವನ್ನು ಮೂಡಿಸುವಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಸುರಕ್ಷತೆ ಮೊದಲು’ಎಂಬ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ವೃತ್ತಿಪರ ಅಗ್ನಿಶಾಮಕ ಮತ್ತು ಸುರಕ್ಷತಾ ಅಧಿಕಾರಿಯಾದ ಸತ್ಯರಾಜ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಸುರಕ್ಷತೆಯ ಬಗ್ಗೆ ಅರಿವನ್ನು ಮೂಡಿಸಿದರು. ಬೆಂಕಿಯಿಂದ, ನೀರಿನಿಂದ ಮತ್ತು ಅಪಘಾತಗಳು ಸಂಭವಿಸಿದಾಗ ಯಾವ ರೀತಿಯಾಗಿ ಪ್ರತಿಕ್ರಿಯೆಸಬೇಕು ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಭಯ ಮುಕ್ತರಾಗಿ ಅದನ್ನು ಎದುರಿಸುವಲ್ಲಿ ನಾವು ಹೇಗೆ ಸಿದ್ಧರಿರಬೇಕೆಂಬುದನ್ನು ತಿಳಿಯಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಹ ಸಂಸ್ಥಾಪಕರು ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ತುರ್ತು ಸಂದರ್ಭದಲ್ಲಿ ಸರಿಯಾಗಿ ಪ್ರತಿಕ್ರಿಯಿಸಿದ್ದಲ್ಲಿ ಮಾತ್ರ ಜೀವ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ನಮಗೆ ಮುಂಜಾಗೃತ ಕ್ರಮಗಳ ಬಗ್ಗೆ ತಿಳುವಳಿಕೆ…
ಮಡಿಕೇರಿ ಡಿ.2 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ವತಿಯಿಂದ ಬ್ಯಾಂಕ್ ನ ನಿರ್ದೇಶಕರಾದ ಎಸ್.ಸಿ.ಸತೀಶ್ ಅವರನ್ನು ಸನ್ಮಾನಿಸಲಾಯಿತು. ಏಲಕ್ಕಿ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಎಸ್.ಸಿ.ಸತೀಶ್ ಅವರು ಜಯಶಾಲಿ ಆದ ಕಾರಣ ಬ್ಯಾಂಕಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಸತೀಶ್ ಪೈ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿ. ಇವರ ರಾಜಕೀಯ ಜೀವನ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಸತೀಶ್ ಪೈ ಹಾರೈಸಿದರು. ಸಮಾರಂಭದಲ್ಲಿ ಉಪಾಧ್ಯಕ್ಷರಾದ ಕೆ.ಆರ್.ನಾಗೇಶ್, ಬ್ಯಾಂಕಿನ ನಿರ್ದೇಶಕರುಗಳಾದ ರಾಜೇಶ್ ಯಲ್ಲಪ್ಪ, ಬಿ.ಕೆ.ಜಗದೀಶ್, ಸಿ.ಕೆ.ಬಾಲಕೃಷ್ಣ, ಕನ್ನಂಡ ಸಂಪತ್, ಬಿ.ಯಂ.ರಾಜೇಶ್, ಗಿರೀಶ್, ರೋಶನ್, ಮಹೇಶ್ ಜೈನಿ, ಗೋಪಾಲ ಕೃಷ್ಣ, ಪ್ರತಿಭಾ ಶೆಟ್ಟಿ, ಮಾಚಮ್ಮ ಮತ್ತು ಬ್ಯಾಂಕ್ ನ ಮೆನೇಜರ್ ಪದ್ಮನಾಭ ಕಿಣಿ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಹಾಜರಿದ್ದರು.
ಸೋಮವಾರಪೇಟೆ ಡಿ.2 NEWS DESK : ಹನುಮ ಜಯಂತಿ ಅಂಗವಾಗಿ ಪಟ್ಟಣದ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ದೇವಾಲಯದ ಪ್ರದಾನ ಅರ್ಚಕ ಶ್ರೀ ನಂಜುಂಡೇಶ್ವರ ಅವರ ಪುರೋಹಿತ್ವದಲ್ಲಿ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಅರ್ಚನೆ ನಡೆಯಿತು. ನಂತರ ಅರ್ಚಕ ಶ್ರೀ ಉಡುಪ ಮತ್ತು ತಂಡದವರಿಂದ ಮಾರುತಿ ಹೋಮ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಪಿ.ಗೋಪಾಲ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎಲ್.ಸೀತಾರಾಂ, ಸಮಿತಿ ಕಾರ್ಯದರ್ಶಿ ನಂದಕುಮಾರ್, ಸದಸ್ಯರುಗಳಾದ ರಾಘವ, ಸುರೇಶ್, ಹಾಲಪ್ಪ, ಗಣೇಶ್ ಹಾಗೂ ಮುಂತಾದವರು ಹಾಜರಿದ್ದರು.
ಬೆಂಗಳೂರು ಡಿ.2 NEWS DESK : ಉತ್ತಮ ತರಬೇತಿ, ತರಬೇತುದಾರರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವನಿಕ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಹಗಲಿರುಳು ಶ್ರಮಿಸಬೇಕು. ಏಳು ಕೋಟಿ ಕನ್ನಡಿಗರಿರುವ ಕರ್ನಾಟಕದಿಂದ ಪದಕ ಗೆಲ್ಲುವುದು ಅಸಾಧ್ಯವೇನಲ್ಲ. ಕ್ರೀಡೆಗಳ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಲಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ನಗದು ಬಹುಮಾನ, ಶ್ರೇಣಿ 1 ಅಥವಾ 2 ರಲ್ಲಿ ಸರ್ಕಾರಿ ಉದ್ಯೋಗ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ., ಕಂಚು ಪದಕ ವಿಜೇತರಿಗೆ 3 ಕೋಟಿ ರೂ. ನಗದು ಬಹುಮಾನ…
ಬೆಂಗಳೂರು ಡಿ.2 NEWS DESK : ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. :: ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ :: ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ…
ಮಡಿಕೇರಿ ಡಿ.2 NEWS DESK : ಮಡಿಕೇರಿಯ ಕಲಾವಿದೆ ಚಿತ್ರಾ ರವಿಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮತ್ತು ಕರ್ನಾಟಕದ ಸುದ್ದಿ ಪತ್ರಿಕೆಗಳ ಸಂಘದಿಂದ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಕಲಾವಿದೆ ಚಿತ್ರಾ ರವಿಗೆ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಿದರು.






