ಮಡಿಕೇರಿ ಡಿ.4 : ನೀರು ಗಂಟಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಮಡಿಕೇರಿ ನಗರಸಭೆಯ ಸದಸ್ಯ ಉಮೇಶ್ ಸುಬ್ರಮಣಿ ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.3ರ ರಾತ್ರಿ ಈ ಘಟನೆ ನಡೆದಿದ್ದು, ನೀರು ಗಂಟಿ ಅನಿಲ್ ಕುಮಾರ್ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇವರು ನೀಡಿರುವ ದೂರಿನ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮದುವೆ ಮನೆಯೊಂದರ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಉಮೇಶ್ ಸುಬ್ರಮಣಿ ಅವರು ನನ್ನ ಹಣೆಗೆ ಹಲ್ಲೆ ಮಾಡಿದಲ್ಲದೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಲೇಖಕ: admin
ಮಡಿಕೇರಿ ಡಿ.4 : ಪೊನ್ನಂಪೇಟೆ 66/11 ಕೆವಿ ಮತ್ತು ಶ್ರೀಮಂಗಲ 33/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ಡಿಸೆಂಬರ್, 06 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ಹರಿಶ್ಚಂದ್ರಪುರ, ರಾಜಾಪುರ, ಮಳ್ಳೂರು, ನಿಟ್ಟೂರು, ಕೊಟ್ಟಗೇರಿ, ಬಿಳೂರು, ದೇವನೂರು ನಲ್ಲೂರು, ಹೆಬ್ಬಾಲೆ, ಹರಿಹರ, ಕುಮೂಟೂರು, ನೋಖ್ಯ, ಮಾಯಾಮುಡಿ, ಬಾಳೆಲೆ ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಕಾನೂರು, ಕುಟ್ಟ, ಕೆ.ಕೆ.ಆರ್, ಟೀ ಎಸ್ಟೇಟ್, ತೆರಾಲು, ಪರಕಟಕೇರಿ ಬಿರುನಾಣಿ, ಬಾಡಗರಕೇರಿ, ನೆಮ್ಮಲೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
ಮಡಿಕೇರಿ ಡಿ.4 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗವನ್ನು ಜಿಲ್ಲೆಯಲ್ಲಿ ಮತ್ತಷ್ಟು ಸಂಘಟಿಸುವ ಉದ್ದೇಶದಿಂದ ಕೊಡಗಿನ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಪಿ.ಎ.ಹನೀಫ್ ತಿಳಿಸಿದರು. ಮಡಿಕೇರಿ ಬ್ಲಾಕ್ಗೆ ಕೆ.ಜಿ.ಪೀಟರ್, ವಿರಾಜಪೇಟೆ ಬ್ಲಾಕ್ಗೆ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್ಗೆ ಎಂ.ಎ.ಶಮೀರ್, ಕುಶಾಲನಗರ ಬ್ಲಾಕ್ಗೆ ಕೆ.ಇ.ಅಬ್ದುಲ್ ರಜಾಕ್, ನಾಪೋಕ್ಲು ಬ್ಲಾಕ್ಗೆ ಎ.ಎಂ.ಉಮ್ಮರ್, ಸೋಮವಾರಪೇಟೆ ಬ್ಲಾಕ್ಗೆ ಅಕ್ಮಲ್ ಪಾಷ ಅವರನ್ನು ನೇಮಿಸಲಾಗಿದೆ. ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನದಂತೆ, ಜಿಲ್ಲೆಯ ಇಬ್ಬರು ಶಾಸಕರು ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಈ ನೇಮಕಾತಿ ಅಂತಿಮಗೊಳಿಸಲಾಗಿದೆ ಎಂದು ಹೇಳಿದರು. ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪದಾಧಿಕಾರಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಮಡಿಕೇರಿ ಡಿ.5 : ಕುಂಜಿಲ ಯೂತ್ ಕ್ಲಬ್ ವತಿಯಿಂದ ಡಿ.14 ರಿಂದ 17 ರವರೆಗೆ “ನಾಲ್ಕುನಾಡು ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾವಳಿಯು ನಾಪೋಕ್ಲುವಿನಲ್ಲಿ ನಡೆಯಲಿದೆ ಎಂದು ಕುಂಜಿಲ ಗ್ರಾ.ಪಂ ಮಾಜಿ ಅಧ್ಯಕ್ಷ ವೈ.ಕೆ.ಹಂಸ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 21 ಗ್ರಾಮ ಪಂಚಾಯಿತಿಗಳಿಗೆ ಒಳಪಟ್ಟ ನಾಲ್ಕುನಾಡಿನ ಪಂದ್ಯಾವಳಿ ಇದಾಗಿದ್ದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಮೈದಾನದಲ್ಲಿ 10 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ ಎಂದರು. 7 ಓವರ್ ಗಳ ಪಂದ್ಯಾವಳಿ ಲೀಗ್ ಮಾದರಿಯಲ್ಲಿ ನಡೆಯಲಿದೆ. ಡಿ.14ರಂದು ಬೆಳಗ್ಗೆ 8 ಗಂಟೆಗೆ ಕುಂಜಿಲ ಪೈನರಿ ಜಮಾಅತ್ ಅಧ್ಯಕ್ಷ ಶೌಕತ್ ಆಲಿ ಪಂದ್ಯಾವಳಿಯನ್ನು ಉದ್ಘಾಟಿಲಿಸಲಿದ್ದು, ಅತಿಥಿಗಳಾಗಿ ನಿವೃತ್ತ ಶಿಕ್ಷಕಿ ರೇಖಾ ಹಾಗೂ ಕ್ಲಬ್ನ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಡಿ.17ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕುಂಜಿಲ ಪೈನರಿ ಜಮಾಅತ್ ಅಧ್ಯಕ್ಷ ಶೌಕತ್ ಆಲಿ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಎ.ಎ.ಹಂಸ, ಇಸ್ಮಾಯಿಲ್, ನಾಸೀರ್ ಮಕ್ಕಿ…
ಮಡಿಕೇರಿ ಡಿ.4 : ಮಡಿಕೇರಿಯ ಡಿಪಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ನಾಕೌಟ್ ಮಾದರಿಯ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಜೆಡ್ಎಕ್ಸ್ ತಂಡ “ಮಿಸ್ಟಿ ಕಪ್-2023” ಅನ್ನು ತನ್ನದಾಗಿಸಿಕೊಂಡಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ದೇವರಕೊಲ್ಲಿ ಬ್ರದರ್ಸ್ ತಂಡ ದ್ವಿತೀಯ ಸ್ಥಾನ, ಮೋರಿಕಲ್ಲು ಅಜಿತ್ ಗೆಳೆಯರ ತಂಡ ತೃತೀಯ ಹಾಗೂ ಮುಳಿಯ ಜ್ಯುವೆಲ್ಸ್ ತಂಡ ನಾಲ್ಕನೇ ಬಹುಮಾನವನ್ನು ಗೆದ್ದುಕೊಂಡಿತು. ರಾಷ್ಟ್ರೀಯ ತರಬೇತುದಾರ ಮಂಜುನಾಥ್ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭಕೋರಿದರು. ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಇಂದು ಜನಪ್ರಿಯ ಕ್ರೀಡೆಯಾಗಿದೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆಯಿದ್ದು, ಡಿಪಿ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಪಂದ್ಯಾವಳಿಯನ್ನು ಆಯೋಜಿರುವುದು ಶ್ಲಾಘನೀಯ ಎಂದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಭಾರತದ ಪುರಾತನ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿ ದೇಶಕ್ಕೆ ಸಾಕಷ್ಟು ಕ್ರೀಡಾ ಪ್ರತಿಭೆಗಳನ್ನು ನೀಡಿ ಕ್ರೀಡಾ ಕ್ಷೇತ್ರದಲ್ಲಿ ಖ್ಯಾತಿಯನ್ನು ತಂದು ಕೊಟ್ಟಿದೆ. ಗ್ರಾಮೀಣ ಜನರು ಬಹಳ ಇಷ್ಟಪಡುವ ಕಬಡ್ಡಿ…
ಮಡಿಕೇರಿ ಡಿ.4 : ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದಲ್ಲಿ ಡಿ.7 ಮತ್ತು 8 ರಂದು ‘ಜೀವ ಸಂಕುಲಗಳ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆ, ಅವುಗಳ ಪ್ರಸ್ತುತತೆ ಮತ್ತು ಭವಿಷ್ಯದ ನಿರೀಕ್ಷೆಗಳು’ ವಿಷಯಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ, ಜೀವವೈವಿಧ್ಯತೆಯ ಕೇಂದ್ರವಾದ ಪಶ್ವಿಮಘಟ್ಟ ಅರಣ್ಯ ಪ್ರದೇಶಗಳು ನಿಧಾನವಾಗಿ ನಶಿಸುತ್ತಿದ್ದು, ಇವುಗಳ ಸಂರಕ್ಷಣೆಯ ಹಿನ್ನೆಲೆಯಲ್ಲಿ ಆಯೋಜಿತ ಸಮ್ಮೇಳನದಲ್ಲಿ ಸ್ವ್ವಿಟ್ಜರ್ಲ್ಯಾಂಡ್, ಯುಕೆ, ಜರ್ಮನಿ, ಫಿಲಿಪೈನ್ಸ್, ಇಟಲಿ ಸೇರಿದಂತೆ ದೇಶ ವಿದೇಶಗಳ 150ಕ್ಕೂ ಹೆಚ್ಚಿನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸಮ್ಮೇಳನದಲ್ಲಿ ಪ್ರಮುಖವಾಗಿ ಜೀವ ವೈವಿಧ್ಯತೆಯ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆ, ಮಾನವ ವನ್ಯಪ್ರಾಣಿ ಸಂಘರ್ಷ, ಜೀವ ವೈವಿಧ್ಯ ಸಂರಕ್ಷಣೆಯಲ್ಲಿ ದೂರ ಸಂವೇದನೆ ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆಯ ಪಾತ್ರ, ಬಿದಿರಿನ ಸಂಪನ್ಮೂಲ ಮತ್ತು ಅದರ ಸುಸ್ಥಿರ ಬಳಕೆ, ಜೈವಿಕ ಸಂಪನ್ಮೂಲಗಳು ಮತ್ತು…
ಮಡಿಕೇರಿ ಡಿ.4 : ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳ ಮೂಲಕ ಕೊಡಗು ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನ ಬಿಡುಗಡೆಯಾಗದಿರುವ ಬಗ್ಗೆ ದೃಢಪಟ್ಟಿರುವುದರಿಂದ, ಸತ್ಯಕ್ಕೆ ದೂರವಾದ ಹೇಳಿಕೆ ನೀಡುತ್ತಾ ಬರುತ್ತಿರುವ ಸಂಸದ ಪ್ರತಾಪ ಸಿಂಹ ಅವರು ಕ್ಷೇತ್ರದ ಜನತೆಯಲ್ಲಿ ಕ್ಷಮೆ ಕೋರಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯಲ್ಲಿ ಕಳೆದ ಸೆಪ್ಟೆಂಬರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಪ್ರತಾಪ ಸಿಂಹ ಅವರು, ಬಿಜೆಪಿ ಅವಧಿಯಲ್ಲಿ ಘೋಷಿಸಿದ ಕೊಡವ ಅಭಿವೃದ್ಧಿ ನಿಗಮಕ್ಕೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದರು. ಅದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರು, ನಿಗಮಕ್ಕೆ ಯಾವುದೇ ಹಣ ಬಿಡುಗಡೆಯಾಗಿಲ್ಲವೆಂದು ತಿಳಿಸಿದ್ದರು. ಆದರೂ ಸಂಸದರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡೇ ಬರುತ್ತಿದ್ದರು. ಇದೀಗ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ನಾನು ಮಾಹಿತಿ ಹಕ್ಕಿನಿಂದ ಪಡೆದ ದಾಖಲೆಗಳು ಹಣ ಬಿಡುಗಡೆಯಾಗಿಲ್ಲ ಎನ್ನುವುದನ್ನು ದೃಢೀಕರಿಸಿದೆಯೆಂದು ಸ್ಪಷ್ಟಪಡಿಸಿದರು. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಸುವರ್ಣ ಕರ್ನಾಟಕ ಭವನ ಮತ್ತು…
ಮಡಿಕೇರಿ ಡಿ.4 : ಕುಶಾಲನಗರದ ಸಂತ ಸೆಬಾಸ್ಟಿಯನ್ನರ ದೇವಾಲಯದಲ್ಲಿ ಕ್ರಿಸ್ಮಸ್ ಹಬ್ಬದ ಪೂರ್ವ ಸಿದ್ಧತೆಯಾಗಿ ಪ್ರಾರಂಭಿಸಲಾಗುವ ಕ್ರಿಸ್ಮಸ್ ಕಾರೋಲ್ಸ್ ಗೆ ಧರ್ಮ ಕೇಂದ್ರದ ಗುರು ಫಾದರ್ ಮಾರ್ಟಿನ್ ಚಾಲನೆ ನೀಡಿದರು. ಕ್ರೈಸ್ತ ಬಾಂಧವರು ಮನೆ ಮನೆಗೆ ತೆರಳಿ ಕ್ರಿಸ್ಮಸ್ ಸಂದೇಶ ಸಾರುವ ಗೀತೆಗಳನ್ನು ಹಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಕಾನ್ವೆಂಟ್ ಸಿಸ್ಟರ್ಸ್ ತೆರೇಸಾ, ಸಲಹಾ ಸಮಿತಿಯ ಕಾರ್ಯದರ್ಶಿ ಸೆವ್ರಿನ್ ಡಿಸೋಜ, ಸಲಹಾ ಸಮಿತಿ ಸದಸ್ಯರಾದ ಶಾಜನ್ , ಯುವಕ ಸಂಘದ ಅಧ್ಯಕ್ಷ ರಾಬಿನ್, ಖಜಾಂಚಿ ರೋಷನ್ ವಿ. ಪಿ , ಕಾರ್ಯದರ್ಶಿ ರಾಕೇಶ್, ಐಸಾಕ್ ಸಾಲಿ, ಡೇರನ್, ಆಕಾಶ್, ರೋಷನ್ ಪೌಲ್ ಸಂತೋಷ್ ಮೆಲ್ವಿನ್ ಹಾಗೂ ಮಕ್ಕಳೂ ಪಾಲ್ಗೊಂಡಿದ್ದರು.
ಮಡಿಕೇರಿ, ಡಿ.4 : ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಜತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಎಂ.ಚಂದ್ರಕಾಂತ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯತಿಯ ಸಹಯೋಗದೊಂದಿಗೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿ ನಗರದ ಸಂತ ಮೈಕಲ್ಲರ ಶಾಲೆಯಲ್ಲಿ ಕೊಡಗು ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಉತ್ತಮಪಡಿಸುವ ಕುರಿತು ಏರ್ಪಡಿಸಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಕುರಿತು ಆತ್ಮವಿಶ್ವಾಸ ಹಾಗೂ ಕಲಿಕಾ ಪ್ರೇರೇಪಣೆ ಮೂಡಿಸಬೇಕು ಎಂದರು. ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಲು ಹೆಜ್ಜೆ ಹಾಕುವ ಮೊದಲ ಪ್ರಮುಖ ಘಟ್ಟವಾಗಿದ್ದು, ಇಲ್ಲಿನ ಸಾಧನೆ ಜೀವನದ ಎಲ್ಲ ಹಂತಗಳಲ್ಲೂ ಪ್ರಭಾವ ಬೀರುತ್ತದೆ ಎಂದರು. ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ…
ಮಡಿಕೇರಿ ಡಿ.4 : ಕೊಡವ ಅಭಿವೃದ್ಧಿ ನಿಗಮಕ್ಕೆ ಹಿಂದಿನ ಬಿಜೆಪಿ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲವೆಂದು ವಿನಾಕಾರಣ ಟೀಕೆ ಮಾಡುವ ಬದಲು ಈಗ ಇರುವ ತಮ್ಮದೇ ಸರ್ಕಾರದಿಂದ ತಕ್ಷಣ ಹಣ ಬಿಡುಗಡೆ ಮಾಡಿಸಲು ಕಾಂಗ್ರೆಸ್ಸಿಗರು ಕ್ರಮ ಕೈಗೊಳ್ಳಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ಕೊಡಗು ಕಾಂಗ್ರೆಸ್ಸಿಗರು ಕೊಡವ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದಿನ ಬಸವರಾಜು ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದೆ. ಆದರೆ ಆ ಸಂದರ್ಭ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಹಣವನ್ನು ನಿಗಮಕ್ಕೆ ನೀಡಲು ಸಾಧ್ಯವಾಗಿಲ್ಲ. 2022-23 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ 10 ಕೋಟಿ ರೂ. ಅನುದಾನದಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲು ಕ್ರಿಯಾಯೋಜನೆಗೆ ಅನುಮೋದನೆ…






