ಲೇಖಕ: admin

ಕಡಂಗ  ಡಿ.4 :   ಬೆಂಗೂರು ಗ್ರಾ.ಪಂ ವ್ಯಾಪ್ತಿಯ ಚೇರಂಬಾಣೆ ಯ ವಿವಿಧ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಚೇರಂಬಾಣೆಯ ಅರುಣಾ ಪದವಿ ಪೂರ್ವ ಕಾಲೇಜಿನ  ದ್ವಾರದ ಮುಂಭಾಗದಿಂದ ತೋಮಸ್ ಮನೆಯವರೆಗಿನ ರಸ್ತೆ, ಮಸೀದಿ ರಸ್ತೆ, ಪಟ್ಟಮಾಡ ಸತ್ಯ ಮನೆಯ ಮುಂಭಾಗದ ರಸ್ತೆ  ಸೇರಿಸಿ ಒಟ್ಟು 10 ಲಕ್ಷ ವೆಚ್ಚದ ಕಾಮಗಾರಿಗೆ  ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ವಿಜೇತರಿಗೆ ಬಹುಮಾನ ವಿತರಣೆ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಹಕರಿಸುವುದಾಗಿ ಶಾಸಕರು  ಭರವಸೆ ನೀಡಿದರು. ಬ್ಲಾಕ್ ಅಧ್ಯಕ್ಷ  ಕೆ.ಎ.ಇಸ್ಮಾಯಿಲ್, ಪಂಚಾಯಿತಿ ಅಧ್ಯಕ್ಷೆ ಮಿಲನ್ ಮುತ್ತಣ್ಣ, ವಾರ್ಡಿನ ಸದಸ್ಯರುಗಳಾದ ಕೆ.ಎಂ. ಬಶೀರ್, ಕೆ.ಕೆ.ಬಿಂದು,  ಬಿ.ಜಿ.ಸೋಮಣ್ಣ ,  ವಲಯ ಅಧ್ಯಕ್ಷ  ಕುಂಚೆಟ್ಟಿರ ರಮೇಶ್, ಪಕ್ಷದ ಹಿರಿಯರು, ಸ್ಥಳೀಯ ನಿವಾಸಿಗಳು ಹಾಜರಿದ್ದರು. ವರದಿ : ನೌಫಲ್ ಕಡಂಗ   

Read More

ಮಡಿಕೇರಿ ಡಿ.4 :   ಕೆ.ಎಂ.ಎಫ್. ಫ್ರೆಂಡ್ಸ್ ವತಿಯಿಂದ ಡಿ.9 ಮತ್ತು 10 ರಂದು  ಜಿಲ್ಲೆಯಲ್ಲಿ ಪ್ರಥಮ ಬಾರಿಗೆ  ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್  ನಡೆಯಲಿದೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ  ಒಟ್ಟು ಎಂಟು  ತಂಡಗಳು ಪಾಲ್ಗೊಳ್ಳಲಿದ್ದು, ಇಶಾನಿ. ಎಫ್. ಸಿ., ಗೋಣಿಕೊಪ್ಪ. ಜನನಿ. ಎಫ್, ಸಿ, ಮಡಿಕೇರಿ. ಮಾನ್ವಿಕ್. ಎಫ್. ಸಿ.ಅಮ್ಮತಿ, ಟೀಮ್ ಹಂಟರ್ಸ್ ಮರಗೋಡು, ಮೊಗೇರ ಎಫ್. ಸಿ, ಪಾಲಿಬೆಟ್ಟ, ಫಿಯೋನೆಕ್ಸ್ ಎಫ್. ಸಿ. ಸೋಮವಾರಪೇಟೆ, ಎ.ಎಂ. ಎಫ್. ಸಿದ್ದಾಪುರ, ಹಾಗೂ ಭಗವತಿ, ಎಫ್. ಸಿ, ಹಾಲುಗುಂದ, ತಂಡಗಳ ನಡುವೆ ಪಂದ್ಯಗಳು ನಡೆಯಲಿವೆ. ಪಂದ್ಯಾವಳಿಯಲ್ಲಿ ವಿಜೇತವಾಗುವ ತಂಡಕ್ಕೆ  25 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 15 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ ಸೇರಿದಂತೆ ವೈಯಕ್ತಿಕ ಟ್ರೊಫಿಗಳು ನೀಡಲಾಗುವುದು. ಮೊಗೇರ ಸೇವಾ ಸಮಾಜದ ಅಧ್ಯಕ್ಷ ಜನಾರ್ಧನ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಮಾಜದ ಮಾಜಿ ಅಧ್ಯಕ್ಷ ಹಾಗೂ ತುಳು ಸಾಹಿತ್ಯ ಅಕಾಡಮಿಯ ಸದಸ್ಯ …

Read More

ಮಡಿಕೇರಿ ಡಿ.4 :  ಬಿಟ್ಟಂಗಾಲದ ರೋಟರಿ ಫ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ  ವಿಜ್ಞಾನ ಮಾದರಿಗಳ ಪ್ರದರ್ಶನ ಸ್ಪರ್ಧೆ ನಡೆಯಿತು.  ಸ್ಪರ್ಧೆಯು ಪ್ರಾಥಮಿಕ ಮತ್ತು ಪ್ರೌಢಶಾಲೆ ಎರಡು ಹಂತದಲ್ಲಿ ನಡೆಯಿತು. ಪ್ರಾಥಮಿಕ ವಿಭಾಗದಲ್ಲಿ ರೋಟರಿ ಪ್ರಾಥಮಿಕ ಶಾಲೆ ಪ್ರಥಮ, ತ್ರಿವೇಣಿ ಶಾಲೆ ದ್ವಿತೀಯ, ಕಾವೇರಿ ಶಾಲೆ ತೃತೀಯ ಬಹುಮಾನ ಪಡೆದುಕೊಂಡರೆ, ಪ್ರೌಢಶಾಲಾ ವಿಭಾಗದಲ್ಲಿ ಬ್ರೈಟ್ ಪಬ್ಲಿಕ್ ಶಾಲೆ ಪ್ರಥಮ, ರೋಟರಿ ಫ್ರೌಢಶಾಲೆ ಬಿಟ್ಟಂಗಾಲ ದ್ವಿತೀಯ, ಮೌಂಟನ್ ವ್ಯೂ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದುಕೊಂಡರು.   ಕಾರ್ಯಕ್ರಮದಲ್ಲಿ ಮುಖ್ಯ  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ  ಪ್ರಕಾಶ್,  ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಕರೆ ನೀಡಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳಾದ ಗೀತಾಂಜಲಿ, ಸಂಸ್ಥೆಯ ವಿದ್ಯಾರ್ಥಿಗಳ ಶಿಸ್ತು, ಅಚ್ಚುಕಟ್ಟುತನಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಾಗಲಿ ಎಂದು ಆಶಿಸಿದರು. ತೀರ್ಪುಗಾರರಾಗಿ ಆಗಮಿಸಿದ ದೇವಣಗೇರಿ ಫ್ರೌಢಶಾಲೆಯ ಶಿಕ್ಷಕಿ ಪ್ರಮಿಳ  ಮಕ್ಕಳ ಪ್ರಯತ್ನ ಮತ್ತು ಶಿಕ್ಷಕರ…

Read More

ಮಡಿಕೇರಿ ಡಿ.4 :   ಕೊಡವ ಹಾಗೂ ಕೊಡವ ಭಾಷಿಕ ಜನಾಂಗ ಇಗ್ಗುತಪ್ಪ ದೇವರ ಪುತ್ತರಿ ದೇವ ಕಟ್ಟ್ ನ್ನು ತಪ್ಪದೆ ಪಾಲನೆ ಮಾಡಲು ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕರೆ ನೀಡಿದರು. ಪೊನ್ನಂಪೇಟೆ ತಾಲ್ಲೂಕಿನ ಕುಂದಾ ಸಮೀಪದ ಬೊಟ್ಟಿಯತ್ ಮೂಂದ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್’ಗೆ ಸೇರಿದ “ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್”ನ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿವರ್ಷ ಪುತ್ತರಿ ನಮ್ಮೆಗೆ ಹದಿನೈದು ದಿವಸ ಮುಂಚಿತವಾಗಿ ಅಮಾವಾಸ್ಯೆಯ ದಿನದಂದು ಇಗ್ಗುತಪ್ಪ ದೇವರ ಮೂಲಸ್ಥಾನವಾದ “ಮಲ್ಮ” ಬೆಟ್ಟದಲ್ಲಿ ಶ್ರದ್ಧಾಭಕ್ತಿಯಿಂದ  ತಕ್ಕಮುಖ್ಯಸ್ಥರು ಸೇರಿ ಪುತ್ತರಿ ಹಬ್ಬದ “ದೇವ ಕಟ್ಟ್” ಅನ್ನು ಹಾಕಲಾಗುತ್ತದೆ. ಈ ಸಂದರ್ಭದಲ್ಲಿ ಜಿಲ್ಲೆಯ ಜನರಿಗೆ ಒಂದಷ್ಟು ಕಟ್ಟುಪಾಡುಗಳನ್ನು ಕೂಡ ವಿಧಿಸಲಾಗುತ್ತದೆ ಹಾಗೂ ಅದನ್ನು ದೇವರ ಮುಂದೆ ಒಪ್ಪಿಸಲಾಗುತ್ತದೆ. ಆದರೆ ಇದನ್ನು ಜಿಲ್ಲೆಯ ಮಂದಿ ಸರಿಯಾಗಿ ಪಾಲನೆ ಮಾಡುತ್ತಿಲ್ಲ, ಇದರಿಂದ ಜಿಲ್ಲೆಯಲ್ಲಿ ಅನಾದಿಕಾಲದಿಂದಲೂ ಬದುಕು ಕಟ್ಟಿಕೊಂಡಿರುವ…

Read More

ವಿರಾಜಪೇಟೆ ಡಿ.4 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕಾನೂರು ವಲಯದ ಕುಟ್ಟ ಗ್ರಾ.ಪಂ ಸಭಾಂಗಣದಲ್ಲಿ ಭದ್ರ ಮತ್ತು ಜ್ಞಾನಜ್ಯೋತಿ ಕೇಂದ್ರಗಳ ಸದಸ್ಯರುಗಳಿಗೆ “ಸ್ವ ಉದ್ಯೋಗದೊಂದಿಗೆ ಸ್ವಾವಲಂಬನೆಯ ಮೂಲಕ ಮಹಿಳೆಯರ ಬದುಕು ಹಸನಾಗಿಸಲು” ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಆತ್ಮಯೋಜನೆ ರಾಜ್ಯಮಟ್ಟದ ಸದಸ್ಯೆ ರೋಹಿಣಿ ಸುಬ್ಬಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸ್ವ ಉದ್ಯೋಗ ತರಬೇತಿಗಳನ್ನು ನಿರಂತರವಾಗಿ ಹಮ್ಮಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಗ್ರಾಮೀಣ ಮಹಿಳೆಯರ ಪಾಲಿನ ಆಶಾಕಿರಣವಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಇಂದು ಸ್ವ ಉದ್ಯೋಗ ಅನ್ನುವುದು ಅತ್ಯಂತ ಪ್ರಚಲಿತ ಹಾಗೂ ಸರ್ವರಿಗೂ ಸಲ್ಲುವ ಉದ್ಯೋಗವಾಗಿದೆ. ಇಂದಿನ ದಿನಗಳಲ್ಲಿ ವಿಶೇಷವಾಗಿ ಮಹಿಳೆಯರು ಹಲವಾರು ವಿಧದ ಸ್ವ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ತಮ್ಮ ಸ್ವಾವಲಂಬನೆಯ ಬದುಕನ್ನು ತಾವೇ ಕಟ್ಟಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೂಡಾ ಈ ಹಾದಿಯಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.…

Read More

ವಿರಾಜಪೇಟೆ ಡಿ.4 : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಕ್ಯಾ. ಎಂ.ವಿ.ಪ್ರಾಂಜಲ್ ಅವರಿಗೆ ಎಸ್‍ಎಂಎಸ್ ವಿದ್ಯಾ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಗೌರವ ನಮನ ಸಲ್ಲಿಸಲಾಯಿತು. ಎಸ್‍ಎಂಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟೊ, ಸ್ಕೌಟ್ ಶಿಕ್ಷಕ ಭೀಮಯ್ಯ ಕೆ.ಎಸ್, ಗೈಡ್ ಕ್ಯಾ.ಮೈಥಿಲಿ ರಾವ್, ಎನ್‍ಸಿಸಿ ಅಧಿಕಾರಿ ಲವ ಕುಮಾರ್, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕ್ಯಾ. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕ್ಯಾಂಡಲ್ ದೀಪವನ್ನು ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಎಸ್‍ಎಂಎಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ಕುಸುಮ್ ಟಿಟೊ, ಹುತಾತ್ಮರ ಕುಟುಂಬಕ್ಕೆ ದುಃಖವನ್ನ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ದೇಶಕ್ಕೋಸ್ಕರ ತನ್ನ ಪ್ರಾಣ ತ್ಯಾಗ ಮಾಡಿದಂತಹ ಇಂಥವರ ಹೆಸರು ಅಮರವಾಗಿರಲಿದೆ. ಪ್ರತಿಯೊಬ್ಬರು ದೇಶದ ಮೇಲೆ ಅಭಿಮಾನ ಶಿಸ್ತು ಒಳ್ಳೆಯ ಗುಣಗಳನ್ನು ಬೆಳೆಸಿಕೊಂಡು ಸಾಗಬೇಕು ಎಂದು ಕರೆ ನೀಡಿದರು.  

Read More

ಮೂರ್ನಾಡು ಡಿ.4 : ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವು ಡಿ.6ರಂದು ನಡೆಯಲಿದೆ. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಅಪರಾಹ್ನ1.30ಕ್ಕೆ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿಚೀಯಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು. 

Read More

ನಾಪೋಕ್ಲು ನ.4 : ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಭಕ್ತ ಕನಕದಾಸರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಸಮೀಪದ ಕಕ್ಕಬ್ಬೆಯ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು, ಶಿಕ್ಷಕಿ ಕವಿತಾ ಮಾತನಾಡಿ ದಾಸರಲ್ಲಿಯೇ ಕನಕದಾಸರು ಅತ್ಯಂತ ಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ಇಂತಹ ಸಂತರ ಜೀವನ ಆದರ್ಶ ತತ್ವಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ಕನಕದಾಸರ ಕೀರ್ತನೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಪಾಲ್ಗೊಂಡಿದ್ದರು ವರದಿ : ದುಗ್ಗಳ ಸದಾನಂದ 

Read More

ಕುಶಾಲನಗರ ಡಿ.3 : ನಮ್ರತೆ, ಪ್ರೀತಿ, ಸಮಾನತೆ, ಆತ್ಮೀಯತೆ ಮೂಲಕ ಭಗವಂತನನ್ನು ಕಾಣಲು ಸಾಧ್ಯ ಎಂದು ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರದ ಶ್ರೀಗಣಪತಿ ದೇವಸ್ಥಾನ ಜಾತ್ರೋತ್ಸವ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಜಾನಪದ ಪರಿಷತ್ ನ ಕೊಡಗು ಜಿಲ್ಲಾ ಘಟಕ ಮತ್ತು ಕುಶಾಲನಗರ ತಾಲ್ಲೂಕು ಘಟಕದ ಸಹಯೋಗದೊಂದಿಗೆ ನಡೆದ ಜಾನಪದ ಜಾತ್ರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಸಂಬಂಧಗಳ ಕೊರತೆ ಎದ್ದು ಕಾಣುತ್ತಿದೆ. ಪ್ರತಿಯೊಬ್ಬರೂ ಮಾನವೀಯತೆ, ಪ್ರೀತಿ ವಿಶ್ವಾಸ ಬೆಳೆಸಿಕೊಳ್ಳಬೇಕು. ಪ್ರಕೃತಿಯ ಆರಾಧನೆ ಮೂಲಕ ಉತ್ತಮ ಪರಿಸರ ನಿರ್ಮಾಣ ಸಾಧ್ಯ ಎಂದ ಅವರು ಪ್ರಸಕ್ತ ಸ್ಥಿತಿಯಲ್ಲಿ ಜನಪದದ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಪ್ರಯತ್ನ ಅಗತ್ಯವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಾತ್ರೋತ್ಸವ ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಜಾನಪದ ಪರಿಷತ್ತಿನ ಕಾರ್ಯ ಚಟುವಟಿಕೆ ಇತರರಿಗೆ ಪ್ರೇರಣೆಯಾಗಿದೆ. ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಲರವವನ್ನು ಶ್ರೀಮಂತ…

Read More

ಮಡಿಕೇರಿ ಡಿ.3 : ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಮತ್ತು ಸಂಘ, ಸಂಸ್ಥೆಗಳು ನೀಡುವ ನೆರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಹಿರಿಯ ಪತ್ರಕರ್ತ ಹಾಗೂ ಕೊಡಗು ಚಾನಲ್ ಸಂಪಾದಕ ಜಿ.ವಿ.ರವಿಕುಮಾರ್ ಕರೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಅಧ್ಯಾಪಕರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಯಶಸ್ಸು ಸಾಧಿಸುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಪೋಷಕರಂತೆ ಶಿಕ್ಷಕರು ಕೂಡ ಹೆಚ್ಚು ಶ್ರಮ ವಹಿಸುತ್ತಾರೆ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದರೊಂದಿಗೆ ಶಿಕ್ಷಕರನ್ನು ಸನ್ಮಾನಿಸುವುದು ಕೂಡ ಅತಿಮುಖ್ಯ ಎಂದರು. ಶಿಕ್ಷಣಕ್ಕೆ ಆದ್ಯತೆ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದಲಿತ ಸಂಘರ್ಷ ಸಮಿತಿ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ರವಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ…

Read More