ಲೇಖಕ: admin

ಮಡಿಕೇರಿ ನ.30 :  ಪ್ರಣಾಮ್ ಭಾರತ ವತಿಯಿಂದ ಡಿ.3 ರಂದು  ಮಡಿಕೇರಿಯಲ್ಲಿ ಹಾಸ್ಯ ಸಂಜೆ ಎಂಬ “ಸ್ಟ್ಯಾಂಡ್ ಅಪ್ ಕಾಮಿಡಿ” ವಿನೂತನ ಕಾರ್ಯಕ್ರಮ ನಡೆಯಲಿದೆ. ನಗರದ   ಭಾರತೀಯ ವಿದ್ಯಾಭವನದ ಸಂಭಾಂಗಣದಲ್ಲಿ ಸಂಜೆ 5 ಗಂಟೆಗೆ  ನಡೆಯಲಿರುವ ಕಾರ್ಯಕ್ರಮದಲ್ಲಿ  ಕಾದಂಬರಿಕಾರ ಭಾರದ್ವಾಜ ಆನಂದತೀರ್ಥ,  ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ರೇಡಿಯೋ ಎಫ್ ಎಮ್ ಖ್ಯಾತಿಯ ಆರ್ಜೆ ತ್ರಿಶೂಲ್ ಕಂಬಳ, ಡಿಜಿಟಲ್ ಮಾರ್ಕೆಟಿಂಗ್ ತಜ್ಞ ರಿತೇಶ್ ನೂಜಿಬೈಲು, ಕಾರ್ಯಕ್ರಮ ನಿರೂಪಕಿ ಅಕ್ಷತಾ ಶೆಟ್ಟಿ, ಯುವ ಪ್ರತಿಭೆ ಅಬ್ದುಲ್ ಕೌಸರ್  ವೀಕ್ಷಕರನ್ನು ನಗಿಸುವ ಹೊಣೆ ಹೊತ್ತಿದ್ದಾರೆ. ಇದು ಇಡೀ ಕುಟುಂಬದವರು ಒಟ್ಟಾಗಿ ಕುಳಿತು ರಂಜನೆಯನ್ನು ಪಡೆಯಬಹುದಾದ ಹಾಸ್ಯ ಕಾರ್ಯಕ್ರಮಮವಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮದ ಆಯೋಜಕರು ಮನವಿ ಮಾಡಿದ್ದಾರೆ.  ಟಿಕೆಟ್ ಕಾಯ್ದಿರಿಸಲು ಆಸಕ್ತರು 9380869836 ಸಂಖ್ಯೆಗೆ ಕರೆ ಮಾಡಲು ಕೋರಿಕೊಳ್ಳಲಾಗಿದೆ.

Read More

ವಿರಾಜಪೇಟೆ ನ.30 : ಸಮೀಪದ ಆರ್ಜಿ ಗ್ರಾಮದ ಕಲ್ಲುಬಾಣೆ ಬದ್ರಿಯಾ ಶಾಲೆಯಲ್ಲಿ, ಮಕ್ಕಳ ಸಂತೆ ನಡೆಯಿತು. ತಾಜಾ ಸೊಪ್ಪು, ಮನೆಯಲ್ಲಿ ಬೆಳಸಿದ ತರಕಾರಿ, ಹಣ್ಣುಗಳು, ಮಕ್ಕಳಿಂದಲೇ ತಯಾರಿಸಲ್ಪಟ್ಟ ಐಸ್‍ಕ್ರೀಂ, ಬೋಂಡ, ಬಜ್ಜಿ, ಫ್ರೂಟ್ ಸಲಾಡ್ ಆಕರ್ಷಣೀಯವಾಗಿತ್ತು. ಮಕ್ಕಳಲ್ಲಿ ಕಂಡು ಬಂದ ಸ್ಪರ್ಧಾತ್ಮಕ ಮನೋಭಾವ ಗ್ರಾಹಕರ ಗಮನ ಸೆಳೆಯಿತು. ಮಕ್ಕಳಲ್ಲಿ ಕುಶಲತೆ, ಸಂವಹನ ಕಲೆ, ಸಾಮಾಜಿಕ ಬದುಕಿನೊಂದಿಗೆ ಒಡನಾಟದ ಕೌಶಲ್ಯವನ್ನು ಕಲಿಸುವುದರೊಂದಿಗೆ, ಅವರಲ್ಲಿ ಸೃಜನಶೀಲತೆಯನ್ನು ಅನಾವರಣಗೊಳಿಸುವ ಉದ್ದೇಶದಿಂದ, ಈ ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಚಿಣ್ಣರು, ಗ್ರಾಹಕರ ಬಳಿ ಹಣ ಪಡೆದು ವ್ಯಾಪಾರ-ವಹಿವಾಟು ನಡೆಸಿದ್ದು, ಮಕ್ಕಳು ವ್ಯಾಪಾರ ಮಾಡಿ ಖುಷಿಪಟ್ಟರು. ಈ ಸಂದರ್ಭ ಮಾತನಾಡಿದ ಮುಖ್ಯೋಪದ್ಯಾಯರಾದ ಮಹದೇವ್, ವಿದ್ಯಾರ್ಥಿಗಳಿಗೆ ಲಾಭ ನಷ್ಟದ ಪರಿಚಯ, ವ್ಯವಹಾರ ಜ್ಞಾನ, ಸ್ವಚ್ಛತೆಯ ಪರಿಕಲ್ಪನೆ ಮೂಡಿಸಲು ಮಕ್ಕಳ ಸಂತೆ ಉಪಯುಕ್ತವಾಗುತ್ತದೆ. ಶಾಲೆಗಳಲ್ಲಿ ಆಟ-ಪಾಠದ ಜೊತೆಗೆ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಮಕ್ಕಳಿಗೆ ಮುಂಬರುವ ದಿನಗಳಲ್ಲಿ ತಮ್ಮ ಬದುಕು ಹೇಗೆ ಕಟ್ಟಿಕೊಳ್ಳಬೇಕೆಂಬುವುದು ಅನುಭವ ದೊರೆತಂತಾಗುತ್ತದೆ ಎಂದು ಹೇಳಿದರು. ಗ್ರಾ.ಪಂ ಸದಸ್ಯ ಶಹಧೀರ್…

Read More

ಮಡಿಕೇರಿ ನ.30  :  ಕನ್ನಡ ನಾಡಿನ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಭಕ್ತ ಕನಕದಾಸರ ಕೊಡುಗೆ ಅಪಾರವಾಗಿದ್ದು, ಕನಕದಾಸರ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ  ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜದ ಸಹಕಾರದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ‘ಕನಕದಾಸರ ಜಯಂತ್ಯುತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಂದಿನ ಮೊಬೈಲ್ ತಂತ್ರಜ್ಞಾನ ಯುಗದಲ್ಲಿಯೇ ಸಮಾಜದಲ್ಲಿ ಹಲವು ತಾರತಮ್ಯಗಳನ್ನು ನೋಡುತ್ತೇವೆ. ಆ ನಿಟ್ಟಿನಲ್ಲಿ ಹಲವು ಶತಮಾನಗಳ ಹಿಂದೆ ಬಸವಣ್ಣ, ಅಲ್ಲಮಪ್ರಭು ಸೇರಿದಂತೆ ಹಲವು ವಚನಕಾರರು, ಹಾಗೆಯೇ ದಾಸ ಶ್ರೇಷ್ಠ ಕನಕದಾಸರು ಸೇರಿದಂತೆ ಹಲವರು ಸಾಮಾಜಿಕ ನ್ಯೂನತೆಗಳನ್ನು ಸರಿಪಡಿಸಲು ಶ್ರಮಿಸಿರುವುದು ಶ್ಲಾಘನೀಯ ಕಾರ್ಯ. ಆ ನಿಟ್ಟಿನಲ್ಲಿ ಸಾಹಿತ್ಯ, ಕೀರ್ತನೆಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದು ಡಾ.ಮಂತರ್ ಗೌಡ ಹೇಳಿದರು. ಶರಣರು, ದಾಸರ ವಿಚಾರ ಧಾರೆಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ದಾಸರ ಕೀರ್ತನೆಗಳು ಸಮಾಜದಲ್ಲಿನ…

Read More

ಕುಶಾಲನಗರ ನ.30 : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ: 50 ರ ಮಹೋತ್ಸವದ ಸಂದರ್ಭದಲ್ಲಿ ಶಾಲೆಯ ಕನ್ನಡ ಭಾಷಾ ಸಂಘ, ಎನ್.ಎಸ್.ಎಸ್.ಘಟಕ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ಭಕ್ತ ಕನಕದಾಸರ ಜಯಂತಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕನಕದಾಸರ ಜೀವನ ಚರಿತ್ರೆ ಹಾಗೂ ಬದುಕು ಕುರಿತು ಮಾಹಿತಿ ನೀಡಿದ ಶಾಲೆಯ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ದಾಸರಲ್ಲಿಯೇ ಕನಕದಾಸರು ಅತ್ಯಂತ ಶ್ರೇಷ್ಠರು. ಉಳಿದ ಸಮುದಾಯಕ್ಕೆ ಮಾರ್ಗದರ್ಶಕರಾಗಿದ್ದರು. ವಿದ್ಯಾರ್ಥಿಗಳು ಅವರ ತತ್ತ್ವಾದರ್ಶ ಅಳವಡಿಸಿಕೊಳ್ಳಬೇಕು ಎಂದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್ ಮಾತನಾಡಿ, ಕನಕ ದಾಸರು ಸಾಮಾಜಿಕ ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಉತ್ತೇಜಿಸುವಲ್ಲಿ ಪ್ರವರ್ತಕರಾಗಿದ್ದರು ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಸಂತರ ಜೀವನ ಆದರ್ಶ ಹಾಗೂ ತತ್ವಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಶಿಕ್ಷಕಿಯರಾದ ಬಿ.ಎನ್.ಸುಜಾತ, ಅನ್ಸಿಲಾ ರೇಖಾ, ಶಾಲಾ ನಾಯಕಿ…

Read More

ಮಡಿಕೇರಿ ನ.30 :  ಈಚೂರಿನ ಶ್ರೀ ಕ್ಷೇತ್ರ ಪಡುವೇರಿ ದಬ್ಬೆಚ್ಚಮ್ಮ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

Read More

ಸುಂಟಿಕೊಪ್ಪ,ನ.30: ಗುಣಮಟ್ಟದ ಕಾಮಗಾರಿ ನಡೆಸz ಕಳೆಪೆ ಕಾಮಗಾರಿ ನಡೆಸಿ ಕೈತೊಳೆದುಕೊಂಡರೆ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಶಾಸಕ ಡಾ.ಮಂತರ್ ಗೌಡ ಎಚ್ಚರಿಕೆ ನೀಡಿದರು. ಮಾದಾಪುರ ಗ್ರಾ.ಪಂ ಕುಂಬೂರು ಹಾಗೂ ಮಾದಾಪುರ ರಾಜ್ಯ ಹೆದ್ದಾರಿ ಬಳಿ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು ಜನರ ಆಶೋತ್ತರಗಳನ್ನು ಹಂತ ಹಂತವಾಗಿ ನೇರವೇರಿಸಲಾಗುವುದೆಂದರು. ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರು, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಪರದಾಡುವಂತಾಗಿದ್ದು, ಜನರ ಸಮಸ್ಯೆ ಪರಿಹಾರಕ್ಕೆ ತಕ್ಷಣ ವೈದ್ಯರ ನೇಮಕ ಮಾಡಬೇಕೆಂದು ಇದೇ ಸಂದರ್ಭ ಶಾಸಕರಿಗೆ ಮನವಿ ಸಲ್ಲಿಸಿದರು. ಸ್ಥಳದಲ್ಲೇ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಕರೆ ಮಾಡಿದ ಶಾಸಕರು, ತಕ್ಷಣವೇ ವೈದ್ಯರ ನೇಮಕ ಮಾಡುವಂತೆ ಸೂಚಿಸಿದರು. ಮಾದಾಪುರ ಗ್ರಾ.ಪಂ ಗೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನೇಮಕವಾಗದೆ ಸಮಸ್ಯೆಯಾಗಿದೆ ಎಂದು ಅಧ್ಯಕ್ಷ ಮನುಬಿದ್ದಪ್ಪ ಹಾಗೂ ಸದಸ್ಯರುಗಳು ಶಾಸಕರಿಗೆ ಮನವಿ ಸಲ್ಲಿಸಿದ ಮೇರೆಗೆ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ…

Read More

ಸೋಮವಾರಪೇಟೆ ನ.30 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಶೇಷ ಚೇತನರ ಸಬಲೀಕರಣಕ್ಕೆ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಘ ಸಂಸ್ಥೆಗಳು, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್, ಆಯುಷ್ ಇಲಾಖೆಯ ಆಶ್ರಯದಲ್ಲಿ  ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಶೇಷ ಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜೇಶ್ ಮಾತನಾಡಿ, ವಿಶೇಷ ಚೇತನರು ತಮ್ಮ ನ್ಯೂನತೆಗಳನ್ನು ಬದಿಗೊತ್ತಿ ಸಮಾಜದೊಂದಿಗೆ ಬೆರೆಯಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಡಿ.3ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸಲಾಗುತ್ತಿದೆ. ವಿಶೇಷ ಚೇತನರಿಗೂ ಅವಕಾಶ ಲಭಿಸಬೇಕು. ಹಾಗಾದಾಗ ಮಾತ್ರ ಚೈತನ್ಯದೊಂದಿಗೆ ಸಾಧನೆ ಸಾಧ್ಯ. ಈ ನಿಟ್ಟಿನಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು. ತಾಲ್ಲೂಕು ಮಟ್ಟದ ಸ್ಪರ್ಧಾ ವಿಜೇತರಿಗೆ ಮಡಿಕೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್ ಮಾತನಾಡಿ, ವಿಶೇಷಚೇತನರ ಮನೋಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ವಿಶೇಷ ಚೇತನರ ದಿನಾಚರಣೆ ಘೋಷಿಸಿದೆ. ತಮ್ಮಲ್ಲಿರುವ…

Read More

ಸೋಮವಾರಪೇಟೆ ನ.30 : ಸೋಮವಾರಪೇಟೆ ಸೃಷ್ಟಿಯ ಚಿಗುರು ಕವಿಬಳಗ, ವಿದ್ಯಾ ನರ್ಸಿಂಗ್ ತರಬೇತಿ ಕೇಂದ್ರ ವತಿಯಿಂದ ಕವಯತ್ರಿ ಸುಮತಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷ ಕೆ.ಎನ್.ದೀಪಕ್ ಅವರನ್ನು ಸನ್ಮಾನಿಸಲಾಯಿತು. ಮಾನಸ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಬಳಗದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಬಳಗದ ಅಧ್ಯಕ್ಷ ನ.ಲ.ವಿಜಯ, ಕನ್ನಡಸಿರಿ ಬಳಗದ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ನರ್ಸಿಂಗ್ ತರಬೇತಿ ಕೇಂದ್ರದ ವ್ಯವಸ್ಥಾಪಕ ಸುಲೈಮಾನ್ ಮತ್ತು ಬಳಗದ ಪದಾಧಿಕಾರಿಗಳು ಹಾಜರಿದ್ದರು.

Read More

ಬೆಂಗಳೂರು ನ 30: ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ವೈದ್ಯರಿಗೆ ಹೃದಯಸ್ಪರ್ಷಿ ಕಿವಿಮಾತು ಹೇಳಿದರು.‌ ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ…

Read More

ಬೆಂಗಳೂರು ನ.30 :   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ “ಸಂತ ಶ್ರೇಷ್ಠ ಕನಕದಾಸ ಜಯಂತಿ”ಯ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

Read More