ಲೇಖಕ: admin

ಬೆಂಗಳೂರು ಡಿ.26 : ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Read More

ಬೆಂಗಳೂರು ಡಿ.26 : ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್  ಮತ್ತಿತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು.

Read More

ಬೆಂಗಳೂರು ಡಿ.26 :  ರಾಜ್ಯದ ಆಡಳಿರೂಢ ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಓರ್ವ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ನಡೆಯಿತು. ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್…

Read More

ಮಡಿಕೇರಿ ಡಿ.26 : ವ್ಯಕ್ತಿಯೊಬ್ಬರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಪಾಜೆ ಸಮೀಪ ಕೊಯನಾಡಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಬಂಡಡ್ಕ ಗಣಪಯ್ಯ ಎಂಬುವವರ ಪುತ್ರ ಮಹೇಶ್ (36) ಮೃತ ವ್ಯಕ್ತಿ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More

ಕಡಂಗ ಡಿ.26 :  ಫೋರ್ ಸ್ಟಾರ್ ಯುವಕ ಸಂಘದ ವತಿಯಿಂದ ಫೆ.10 ಮತ್ತು 11 ರಂದು  ಎಡಪಾಲ ಪ್ರೀಮಿಯರ್ ಕ್ರಿಕೆಟ್ ಲೀಗ್  10ನೇ ಆವೃತಿಯ ಕ್ರಿಕೆಟ್ ಪಂದ್ಯಾವಳಿಯುಎಡಪಾಲ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಇ ಪಿ ಎಲ್ ವ್ಯವಸ್ಥಾಪಕ ಹನೀಫ ಎರಟೆಂಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು. ಪಂದ್ಯಾವಳಿಯನ್ನು  ಉಸ್ಮಾನ್ ರಾಶಿದ್ ಶಂಸುದ್ದೀನ್ ನಜ್ಹೀರ್ ನವಾಜ್ಹ್  ನಡೆಸಿಕೊಡಲಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯ  ವ್ಯಕ್ತಿಗಳನ್ನು ಸನ್ಮಾನಿಸಿ, ಗೌರವಿಸಲಾಗುವುದೆಂದರು. ಸುದ್ದಿಗೋಷ್ಠಿಯಲ್ಲಿ ಇ ಪಿ ಎಲ್  ಪ್ರಮುಖರಾದ  ಅಬ್ದುಲ್ಲ, ಶೂಕೂರ್, ಸಿಯಬ್, ಉಸ್ಮಾನ್  ಉಪಸ್ಥಿತರಿದ್ದರು. ವರದಿ : ನೌಫಲ್ ಕಡಂಗ  

Read More

ನಾಪೋಕ್ಲು ಡಿ.26 : ಬಲ್ಲಮಾವಟಿ ಗ್ರಾ.ಪಂ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನೇತಾಜಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟ ಹಾಗೂ ಅಂತರ ಗ್ರಾಮ ಹಾಕಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ನೆಲಜಿ–ಎ ತಂಡದ ವಿರುದ್ಧ ಆಟವಾಡಿದ ಬಲ್ಲಮಾವಟಿ ತಂಡವು 1-0 ಅಂತರದಿಂದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪೇರೂರು-ಎ ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹಾಕಿ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಕಾಫಿ ಬೆಳೆಗಾರ ಮೂವೇರ ನಾಣಪ್ಪ ನೀಡಿದ ರೋಲಿಂಗ್ ಟ್ರೋಫಿ ಹಾಗೂ ಅಪ್ಪಚೆಟ್ಟೋಳಂಡ ಕುಟುಂಬ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ನೆಲಜಿ-ಎ ತಂಡಕ್ಕೆ ಮೂವೇರ ನಾಣಪ್ಪ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ವಿವಿಧ ಗ್ರಾಮಗಳ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ಹಗ್ಗ ಜಗ್ಗಾಟದ ಪಂದ್ಯದ ಅಂತಿಮ ಸ್ಪರ್ಧೆಯಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿಗಳಿಸಿತು. ದೊಡ್ಡಪುಲಿಕೋಟು ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ಇವರಿಗೆ ನೆರವಂಡ…

Read More

ನಾಪೋಕ್ಲು ಡಿ.26 : ಸಂತಮೇರಿ ಮಾತೆಯ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಧರ್ಮ ಗುರು ಜ್ಞಾನಪ್ರಕಾಶ್ ದೇವಾಲಯದಲ್ಲಿ ವಿಶೇಷ ಪೂಜೆ ಪ್ರಾರ್ಥನೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಕ್ರಿಸ್ತ ಯೇಸುವಿ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಅವರಂತೆ ಬದುಕಿ ಬಾಳಬೇಕು ಎಂದರು. ಬೇರೆಯವರ ಭಾವನೆ ಅರ್ಥ ಮಾಡಿಕೊಂಡು ಅವರ ಕಷ್ಟಕ್ಕೆ ಸ್ಪಂದಿಸುವಂತಾಗ ಬೇಕೆಂದರು. ಬೇರೆಯವರ ಕಣ್ಣಲ್ಲಿ ಕಣ್ಣೀರು ತರಿಸದೆ ನಾವು ಸುಖವಾಗಿ ಬದುಕಿ ಬೇರೆಯವರು ಸುಖವಾಗಿ ಬದುಕುವಂತೆ ನಾವು ಯೋಚಿಸಿ ಬದುಕುವುದೇ ಕ್ರೈಸ್ತರ ಜೀವನ ಎಂದರು. ಈ ಸಂದರ್ಭ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಭವ್ಯವಾಗಿ ಅಲಂಕರಿಸಿ ಆಕರ್ಷಕ ಗೋದಲ್ಲಿಯನ್ನು ನಿರ್ಮಿಸಲಾಗಿತ್ತು. ಸ್ಪರ್ಧ ವಿಜೇತರು :: ಕಾರ್ಯಕ್ರಮದಲ್ಲಿ ಯೇಸುವಿನ ಜನನದ ಗೋದಲಿ ನಿರ್ಮಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಥಮ ಜಾಲಿ ಶರ್ಲಿ, ದ್ವಿತೀಯ ಸ್ಥಾನ ಕೆ.ಜೆ.ರಾಯ್, ತೃತೀಯ ಅಹಿಲ್ ಜೋಸೆಫ್ ಬಹುಮಾನ ಪಡೆದರು. ಸ್ಪರ್ಧೆಯ ವಿಜೇತರಿಗೆ ಧರ್ಮ ಗುರು ಜ್ಞಾನಪ್ರಕಾಶ್ ಬಹುಮಾನ ವಿತರಿಸಿದರು. ಕ್ರೈಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ…

Read More

ನಾಪೋಕ್ಲು ಡಿ.26 : ಉತ್ತಮ ಶಿಕ್ಷಣದಿಂದ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ ಎಂದು ಕಕ್ಕಬ್ಬೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆಟೊಳಿರ ಪಿ.ಕುಟ್ಟಪ್ಪ ಹೇಳಿದರು. ಕಕ್ಕಬ್ಬೆ ವಿದ್ಯಾ ಸಂಸ್ಥೆಯಲ್ಲಿ ಜರುಗಿದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆ ಇನ್ನಿತರ ಚಟುವಟಿಕೆಗಳಲ್ಲೂ ಹೆಚ್ಚಿನ ಆಸಕ್ತಿ ವಹಿಸಿ ಮುಂದುವರಿಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಅತಿಥಿಗಳಾಗಿ ಕಕ್ಕಬೆ ಗ್ರಾ.ಪಂ ಅಧ್ಯಕ್ಷ ಪೊಂಗೇರ ಶಿಲ್ಪ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದರು. ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಪಯಡಿ ಹಂಸ ಬಾತ್ಮಿದಾರರಾದ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಪರದಂಡ ಸದಾ ನಾಣಯ್ಯ, ಚೋಯಮಾಡ0ಡ ನಾಣಯ್ಯ, ಅಂಜಪರವಂಡ ಎ.ಕುಶಾಲಪ್ಪ ಇನ್ನಿತರರು ಹಾಜರಿದ್ದರು. ಗಣ್ಯರು ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನಗಳನ್ನು ವಿತರಿಸಿ ಶುಭ ಹಾರೈಸಿದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ನಡೆದ ಸಾಮೂಹಿಕ ಅಂಗಸಾಧನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡಿ.ಅನಿಲ್ ರಾಜ್ ಶಾಲಾ ವರದಿ ವಾಚಿಸಿದರು. ಪ್ರಾಥಮಿಕ ಶಾಲಾ ವಿಭಾಗದ ವರದಿಯನ್ನು ಶಿಕ್ಷಕಿ ಕೆ.ಬಿ.ಲೀಲಾವತಿ…

Read More

ಬೆಂಗಳೂರು ಡಿ.26: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2023-24ನೇ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಿದೆ. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಮೇಲ್ kar-temperance@gmail.com ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ॥ ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಡಿ.26 : ಮೂಲತಃ ಮೇಕೇರಿ ಗ್ರಾಮದ ನಿವಾಸಿಗಳು, ಪ್ರಸ್ತುತ  ಪೋಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ   ರಕ್ತದಾನಿ ಬಿ.ಯಂ.ರಾಮಪ್ಪ ಅವರು ಇದೇ ಡಿ.29 ರಂದು ದಾಖಲೆಯ 50ನೇ ಬಾರಿಗೆ ರಕ್ತದಾನ ಮಾಡಲಿದ್ದಾರೆ. ಮೇಕೇರಿಯ ಶ್ರೀ ಸ್ವಾಗತ ಯುವಕ ಸಂಘದ ನೇತೃತ್ವದಲ್ಲಿ  ನಡೆಯಲಿರುವ 12 ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಅವರು ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಲಿದ್ದಾರೆ. ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಇದೇ ಕಾರ್ಯಕ್ರಮದಲ್ಲಿ ರಾಮಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ. ಕೊಡಗು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್  ಅವರು  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Read More