ಮಡಿಕೇರಿ ನ.30 : ಸೋಮವಾರಪೇಟೆ – ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಐಗೂರು ಸಮೀಪದ ಸೇತುವೆ (ಕಬ್ಬಿಣ ಸೇತುವೆ) ಹಾನಿಗೊಳಗಾದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ಲೇಖಕ: admin
ಬಾಳೆಲೆ ನ.30 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪುಷ್ಪರ್ಚನೆ ಮಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಯನ್.ಕೆ.ಪ್ರಭು ಪ್ರಾಸ್ತಾವಿಕ ಮಾತನಾಡಿ, ಕನಕದಾಸರಿಗೆ ಶ್ರೀ ಶ್ರೀ ಕೃಷ್ಣನ ಮೇಲೆ ಇದ್ದ ಅಪಾರ ಭಕ್ತಿ ಮತ್ತು ಪ್ರೀತಿಯ ಬಗ್ಗೆ ವಿವರಿಸಿ, ಉಡುಪಿ ಶ್ರೀಕೃಷ್ಣ ದೇವಾಲಯದ ಕಥೆಯನ್ನು ಹೇಳಿದರು. ನಂತರ ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ಮಾತನಾಡಿ, ದಾಸ ಸಾಹಿತ್ಯ ದ ಮೂಲಕ ಜಾತಿ, ಮತ, ಕುಲಗಳ ಬೇಧ, ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ, ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಮಹಾನ್ ಸಂತ ಕನಕದಾಸರೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶಿಕ್ಷಕರಾದ ಪಡಿಞರಂಡ ಪ್ರಭು ಕುಮಾರ್, ಸುಬ್ಬಯ್ಯ, ಬೆಂಡಿಕ್ಟಪರ್ನಾಡಿಸ್, ಉಪನ್ಯಾಸಕರಾದ ಪವಿ ಬೋಧಕೇತರ ಸಿಬ್ಬಂದಿಗಳಾದ ಮಮತಾ, ಸುರೇಶ್ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕರಾದ ತಿಮ್ಮರಾಜು ಸ್ವಾಗತಿಸಿ, ನಿರೂಪಿಸಿದರು.
ಮಡಿಕೇರಿ ನ.30 : ಮಡಿಕೇರಿ ನಗರದ ವಿವಿಧ ಬಡಾವಣೆಗಳಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು. ವಾರ್ಡ್ ನಂಬರ್ 6 ಮತ್ತು ಇಂದಿರಾ ನಗರ, ಚಾಮುಂಡೇಶ್ವರಿ ನಗರಗಳಿಗೆ ಭೇಟಿ ನೀಡಿ ರಸ್ತೆ ಕಾಮಗಾರಿಗಳು ಮತ್ತು ಚರಂಡಿ ತಡೆಗೋಡೆ, ಫಾರಂ 3 ಸಮಸ್ಯೆ, ಪಟ್ಟೆ, ಅಂಗನವಾಡಿಗೆ ಬೇಕಾದ ಸೂಕ್ತ ಜಾಗವನ್ನು ಪರಿಶೀಲಿಸಿದರು. ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮತ್ತು ನಗರಸಭೆ ಸದಸ್ಯ ಬಿ.ವೈ.ರಾಜೇಶ್, ನಗರ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಕೆ.ಯು. ರಜಾಕ್, ಪ್ರಕಾಶ್ ಆಚಾರ್ಯ, ಜಿ.ಸಿ.ಜಗದೀಶ್, ಚುಮ್ಮಿ ದೇವಯ್ಯ, ಎಸ್.ಐ.ಮುನೀರ್ ಅಹಮದ್, ಕವನ್ ಕೋತೊಳಿ, ಜುಲೆಕಾಬಿ, ಮುದ್ದುರಾಜ್, ಕೆ.ಜಿ.ಪೀಟರ್ , ರಿಯಾಜುದ್ದಿನ್, ಪಾಪು ರವಿ, ಮಡಿಕೇರಿ ನಗರ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ ಹಾಜರಿದ್ದರು.
ಮಡಿಕೇರಿ ನ.30 : ಮಂದ್ ಮಾನಿಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸಲು ಹಾಗೂ ಹಬ್ಬಹರಿದಿನಗಳಲ್ಲಿ ಜನಾಂಗ ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಪುಗಳನ್ನು ತೊಡಲು ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಕರೆ ನೀಡಿದರು. ಪೊನ್ನಂಪೇಟೆ ಸಮೀಪದ ಬೊಟ್ಟಿಯತ್ ನಾಡ್ ದೇವಮಕ್ಕಡ ಬಾಣೆ ಪುತ್ತರಿ ಕೋಲ್ ಮಂದ್ ಸಂದರ್ಭ ಮಂದ್’ಗಳ ಅಧ್ಯಯನಕ್ಕಾಗಿ ಭೇಟಿ ನೀಡಿ ಮಾತನಾಡಿದ ಅವರು, ಗೌಡ ಕೊಡವ ಜನಾಂಗ ಈ ದೇಶದಲ್ಲಿಯೇ ಒಂದು ವಿಶಿಷ್ಟ ಜನಾಂಗವಾಗಿದ್ದು, ನಶಿಸಿ ಹೋಗುತ್ತಿರುವ ಶ್ರೀಮಂತ ಸಂಸ್ಕೃತಿಯನ್ನು ಉಳಿಸುವ ಬೆಳೆಸುವಲ್ಲಿ ಯುವಜನಾಂಗ ಮುಂದಾಗಬೇಕಿದೆ ಎಂದು ಹೇಳಿದರು. ಕೊಡಗಿನ ಮಂದ್’ಗಳ ಬಗ್ಗೆ ಸಂಶೋಧನೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಂದ್’ಗಳ ಬೆಳವಣಿಗೆಗೆ ಸರ್ಕಾರದ ಮಟ್ಟದಲ್ಲಿ ತನ್ನ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿದರು. ನಮ್ಮ ಸಂಸ್ಕೃತಿ ಉಡುಗೆ ತೊಡುಗೆಗಳ ಬಗ್ಗೆ ನಮಗೆ ಕೀಳರಿಮೆ ಇರಬಾರದು. ಮೊದಲು ನಾವು ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು. ಹಾಗಾದರೆ ಮಾತ್ರ ಒಂದು ಜನಾಂಗದ ಉಳಿವು ಸಾಧ್ಯ ಎಂದರು. ಈ ಸಂದರ್ಭದಲ್ಲಿ ಹುದೂರುವಿನ ತಕ್ಕ ಹಾಗೂ ಅಬೊಟ್ಟಿಯತ್ ನಾಡ್ ತಕ್ಕರಾದ…
ಮಡಿಕೇರಿ ನ.29 : ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರ ಉಳಿದು ಪುಸ್ತಕ ಓದುವ ಹವ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯ ಜಗತ್ತನ್ನು ಬೆಳಗಿಸಬೇಕು. ಮಾತ್ರವಲ್ಲದೆ ಕನ್ನಡ ಸಂಘಗಳು ವಿದ್ಯಾರ್ಥಿಗಳಲ್ಲಿ ಸಾಹಿತ್ಯಕ ಮೌಲ್ಯಗಳನ್ನು ರೂಪಿಸಿ ಸಾಹಿತ್ಯ ಸೃಷ್ಟಿಗೆ ಪೂರಕ ವಾತಾವರಣವನ್ನು ನಿರ್ಮಿಸಬೇಕು. ಬರಹಗಾರರರಂತೆ ಓದುಗರ ಸಂಖ್ಯೆಯನ್ನು ಹೆಚ್ಚಿಸುವ ಪ್ರಯತ್ನಗಳು ನಡೆಯಬೇಕಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಅಭಿಪ್ರಾಯಪಟ್ಟರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗ ಆಯೋಸಿದ ಕನ್ನಡ ಸಂಘದ ಉದ್ಘಾಟನೆ, “ಅಕ್ಷರ ಬಿತ್ತಿ” ಗೋಡೆ ಪತ್ರಿಕೆಯ ಬಿಡುಗಡೆ ಹಾಗೂ ನನ್ನ ನೆಚ್ಚಿನ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಿ, ನಾಡು, ನುಡಿ, ಸಂಕಥನದ ಕುರಿತು ಮಾತನಾಡಿದರು. ಅಕ್ಷರ ಬಿತ್ತಿ ವಿದ್ಯಾರ್ಥಿ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಪ್ರಜಾವಾಣಿ ಜಿಲ್ಲಾ ವರದಿಗಾರ ಕೆ.ಎಸ್.ಗಿರೀಶ್ ಬರವಣಿಗೆಯ ಸಾಧ್ಯತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್…
ಕುಶಾಲನಗರ ನ.29 : ಜಮ್ಮು ಮತ್ತು ರಜೌರಿಯಲ್ಲಿ ಉಗ್ರರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾದ ಕ್ಯಾ. ಪ್ರಾಂಜಲ್ ಅವರಿಗೆ ಕುಶಾಲನಗರದ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಸ್ಕೌಟ್ಸ್ ನ ಶಾಲೆಯ ಘಟಕ ಹಾಗೂ ಶಾಲೆಯ ಎನ್.ಎಸ್.ಎಸ್.ಘಟಕದ ವತಿಯಿಂದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಎಂ.ವಿ.ಪ್ರಾಂಜಲ್ ಗೆ ನಮನ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಎಸ್ಡಿಎಂಸಿ ಅಧ್ಯಕ್ಷ ಎ.ಎಂ.ಜವರಯ್ಯ, ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ.ಸುಲೋಚನ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಸಲ್ಲಿಸಲಾಯಿತು. ಹುತಾತ್ಮ ಯೋಧ ಎಂ.ವಿ.ಪ್ರಾಂಜಲ್ ಅವರ ಕರ್ತವ್ಯ ನಿಷ್ಠೆ, ದೇಶ ಪ್ರೇಮ ಹಾಗೂ ತ್ಯಾಗ ಬಲಿದಾನದ ಕುರಿತು ಮಾತನಾಡಿದ ಗೈಡ್ಸ್ ಸಂಸ್ಥೆಯ ಸಹಾಯಕ ಕಮೀಷನರ್ ಸಿ.ಎಂ.ಸುಲೋಚನ ಮಾತನಾಡಿ, ಈ ನುಡಿ ನಮನ ಕಾರ್ಯಕ್ರಮದಿಂದ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಸಾಧ್ಯವಾಗುತ್ತದೆ ಎಂದರು. ನಿವೃತ್ತ ಮುಖ್ಯೋಪಾಧ್ಯಾಯ ಎಂ.ಎಚ್.ನಜೀರ್ ಅಹ್ಮದ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು,…
ಮಡಿಕೇರಿ, ನ.29 : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್ಕೌಂಟರ್ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಕ್ಯಾ.ಎಂ.ವಿ.ಪ್ರಾಂಜಲ್ ಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗೌರವ ನಮನ ಸಲ್ಲಿಸಲಾಯಿತು. ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆ ಕುರಿತು ಗುಣಗಾನ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಬಾಲ್ಯದಿಂದಲೂ ಅವರು ಸೈನ್ಯಕ್ಕೆ ಸೇರುವ ಕನಸು ಕಂಡಿದ್ದರು, ತಮ್ಮ ಗುರಿಗೆ ಸಮರ್ಪಿತರಾಗಿದ್ದರು. ಸ್ಕೌಟ್ ಆಗಿ, ಅವರ ಬದ್ಧತೆ ಅಚಲವಾಗಿತ್ತು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಹೆಮ್ಮೆಪಡುತ್ತಿದ್ದರು ಎಂದರು. ಪ್ರಾಂಜಲ್ ನಿಜವಾಗಿಯೂ ಅಸಾಧಾರಣ ಮತ್ತು ಅವರ ನಿಧನವು ಅಪಾರ ನಷ್ಟವಾಗಿದೆ, ಡಿಪಿಎಸ್…
ಮಡಿಕೇರಿ ನ.29 : ಮಡಿಕೇರಿ ನಗರಸಭೆ ಆಡಳಿತ ವೈಫಲ್ಯವನ್ನು ಎದುರಿಸುತ್ತಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶ ಮಾಡಿ ವ್ಯವಸ್ಥೆಯನ್ನು ಸರಿ ಪಡಿಸಬೇಕೆಂದು ನಗರಸಭೆಯ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರಸಭೆಯಲ್ಲಿ 16 ಸ್ಥಾನಗಳ ಮೂಲಕ ಬಿಜೆಪಿ ಬಹುಮತದಿಂದ ಅಧಿಕಾರ ನಡೆಸುತ್ತಿದ್ದರೂ ನಾಗರೀಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲವೆಂದು ಟೀಕಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಆಡಳಿತ ವ್ಯವಸ್ಥೆ ನಿಂತ ನೀರಾಗಿದೆ, ನಗರದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ರಸ್ತೆಗಳು ಹೊಂಡ, ಗುಂಡಿಗಳಾಗಿವೆ, ಅಶುಚಿತ್ವದ ವಾತಾವರಣ ಮಿತಿ ಮೀರಿದೆ. ನಗರಸಭೆಯ ಕಚೇರಿಗಳಲ್ಲಿ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಳೆದ ಒಂದು ವರ್ಷದಿಂದ ಸರ್ವರ್ ಸಮಸ್ಯೆ ಅತಿಯಾಗಿ ಕಾಡುತ್ತಿದ್ದರೂ ಇಲ್ಲಿಯವರೆಗೆ ಆಡಳಿತ ಮಂಡಳಿ ತಾಂತ್ರಿಕವಾಗಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಕಾಳಜಿಯನ್ನು ತೋರುತ್ತಿಲ್ಲ. ಸಿಬ್ಬಂದಿಗಳ ಕೊರತೆಯ ನಡುವೆ ಇರುವ ಸಿಬ್ಬಂದಿಗಳ ವಿಶ್ವಾಸವನ್ನು ಗಳಿಸುವಲ್ಲಿ ಆಡಳಿತ ನಡೆಸುತ್ತಿರುವವರು ವಿಫಲರಾಗಿದ್ದಾರೆ. ಅಧಿಕಾರಿಗಳು ಹಾಗೂ ಸದಸ್ಯರುಗಳ ನಡುವೆ ಹೊಂದಾಣಿಕೆ ಇಲ್ಲದೆ ಇರುವುದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಆಮೆಗತಿಯಲ್ಲಿ ಸಾಗುತ್ತಿದೆ. ಅಧ್ಯಕ್ಷರು…
ಮಡಿಕೇರಿ ನ.29 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗ ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಸ್ವಾಮಿ ಅವರ ಪರವಾಗಿ ವಕೀಲ ಕೀರನ್ ನಾರಾಯಣ್ ಅವರು ನ್ಯಾಯಾಲಯದ ಮುಂದೆ ವಿಷಯ ಮಂಡಿಸಿದರು. ಕೇಂದ್ರ ಸರ್ಕಾರದ ಪ್ರತಿನಿಧಿಗಳು ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಿದ ಕೋರ್ಟ್, ವಿಚಾರಣೆಯನ್ನು 2024 ಜ.25 ಕ್ಕೆ ಮುಂದೂಡಿತು. ಇದೇ ಸಂದರ್ಭ ಕರ್ನಾಟಕ ಸರ್ಕಾರಕ್ಕೂ ಸೂಚನೆ ನೀಡಿದ ನ್ಯಾಯಾಲಯ ಇಂದಿನಿಂದ ಮೂರು ವಾರಗಳಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು ಎಂದು ನಿರ್ದೇಶಿಸಿತು. ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ. ::: ಹೋರಾಟಕ್ಕೆ ಜಯ :::…
ಮಡಿಕೇರಿ ನ.29 : ಬರದ ಪರಿಸ್ಥಿತಿ ಇರುವ ಕಾರಣ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ಸಂಸದರಾದ ಪ್ರತಾಪ್ ಸಿಂಹ ಅವರು ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯ 5 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಬರ ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 35 ಕೋಟಿ ರೂ. ಇದ್ದು, ಇತ್ತೀಚೆಗೆ ಸರ್ಕಾರ 7.50 ಕೋಟಿ ರೂ. ಬಿಡುಗಡೆ ಮಾಡಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಒದಗಿಸಲಾಗುವುದು. ಹಾಗೆಯೇ…






