ಲೇಖಕ: admin

ಮಡಿಕೇರಿ, NEWS DESK ಏ.04:-ಪ್ರಸವ ಪೂರ್ವ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಸಂಬಂಧ ದೂರುಗಳು ಕೇಳಿ ಬಂದಲ್ಲಿ ನಿಯಮಾನುಸಾರ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಅವರು ಎಚ್ಚರಿಸಿದ್ದಾರೆ. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರ ಕಚೇರಿಯಲ್ಲಿ ಶನಿವಾರ ನಡೆದ ಪಿಸಿ ಮತ್ತು ಪಿಎನ್‍ಡಿಟಿ(ಪ್ರಸವ ಪೂರ್ವ ಲಿಂಗ ಪತ್ತೆ ಮತ್ತು ಹತ್ಯೆ ಕಾಯ್ದೆ) ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸವ ಪೂರ್ವ ಲಿಂಗ ಪತ್ತೆ ಮಾಡಬಾರದು. ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಸಮತೋಲನವಾಗಿರಬೇಕು. ಆ ನಿಟ್ಟಿನಲ್ಲಿ ಗರ್ಭಿಣೀಯರು ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಶಿಶುವಿನ ಬೆಳವಣಿಗೆ ಮತ್ತು ತಾಯಿಯ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಎನ್‍ಪೋರ್ಸ್‍ಮೆಂಟ್ ಅಧಿಕಾರಿ ಡಾ.ಎನ್.ಆನಂದ್ ಅವರು ಜಿಲ್ಲೆಯಲ್ಲಿ 28 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಆಗಾಗ ಭೇಟಿ ನೀಡಿ ತಪಾಸಣೆ ನಡೆಸಲಾಗುತ್ತದೆ ಎಂದರು. ಹೊಸದಾಗಿ ಸ್ಕ್ಯಾನಿಂಗ್ ಕೇಂದ್ರ…

Read More

ಮಡಿಕೇರಿ, NEWS DESK ಏ.4 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹಾಕತ್ತೂರು- ಮರಗೋಡು ರಸ್ತೆಯಲ್ಲಿ ನಡೆದಿದೆ. ಕಟ್ಟೆಮಾಡು ಗ್ರಾಮದ ಬಿದ್ರುಪಣೆ ಸೋಮಣ್ಣ ಅವರ ಕಿರಿಯ ಪುತ್ರ ಪ್ರವೀಣ್ (35) ಎಂಬುವವರೇ ಮೃತ ದುರ್ದೈವಿ. ಶುಕ್ರವಾರ ರಾತ್ರಿ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಪ್ರವೀಣ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಉಳಿದವರಿಗೂ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಶಾಲನಗರ, ಏ.4: ಜನಗಣತಿ ಕಾರ್ಯವು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಕಾನೂನು‌ ಬದ್ಧ ಕೆಲಸವಾಗಿದೆ. ಶಿಕ್ಷಕರು ಉತ್ತಮ ಕರ್ತವ್ಯದೊಂದಿಗೆ ಜನಗಣತಿ ಕಾರ್ಯವನ್ನು ಯಶಸ್ವಿಯಾಗಿಸಿ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ಶನಿವಾರ ಮನವಿ ಮಾಡಿದರು. ಕುಶಾಲನಗರ ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿರುವ ಮೇಲ್ವಿಚಾರಕರು ಹಾಗೂ ಗಣತಿದಾರರಿಗೆ ಮೂರು ದಿನಗಳ ಕಾಲ ಮನೆಪಟ್ಟಿ ಹಾಗೂ ಜನಗಣತಿ ಕಾರ್ಯದ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಗಣತಿ ಕಾರ್ಯವನ್ನು ಶಿಕ್ಷಕರು ಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 164 ಬ್ಲಾಕ್ ಗಳನ್ನು ಗುರುತಿಸಿದ್ದು, 30 ಮಂದಿ ಮೇಲ್ವಿಚಾರಕರು ಹಾಗೂ 174 ಗಣತಿದಾರರು ಗಣತಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ನೇಮಕಗೊಂಡಿರುವ ಗಣತಿದಾರರು ಮೊದಲ ಹಂತದ ಮನೆ ಪಟ್ಟಿ ಕಾರ್ಯದಲ್ಲಿ ನಿಗದಿ ಪಡಿಸುವ ಪ್ರದೇಶಗಳ ನಕ್ಷೆಯನ್ನು ಸಮರ್ಪಕವಾಗಿ…

Read More

ಕುಶಾಲನಗರ, NEWS DESK, ಏ.04 : 113 ವರ್ಷಗಳ ಸುಧೀರ್ಘ ಜೀವಿತಾವಧಿಯಲ್ಲಿ ತಮ್ಮ ಬದುಕನ್ನು ಸಮಾಜ ಸೇವೆಗೆ ಅರ್ಪಿಸುವ ಮೂಲಕ ಜಗತ್ತಿಗೆ ಆದರ್ಶರಾದವರು ಡಾ.ಶಿವಕುಮಾರ ಸ್ವಾಮೀಜಿ ಎಂದು ವಿರಾಜಪೇಟೆ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬಣ್ಣಿಸಿದರು. ಕುಶಾಲನಗರದ ಸಿದ್ದಗಂಗಾ ಭಕ್ತಮಂಡಳಿ ಹಾಗೂ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ರಥಬೀದಿಯ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಡಾ.ಶಿವಕುಮಾರ ಸ್ವಾಮೀಜಿ ಯವರ 119 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಶ್ರೀಗಳು, ಇಡೀ ನಾಡು ಬರಗಾಲದಲ್ಲಿ ನಲುಗಿದ್ದ ಸಂದರ್ಭ ಅಲ್ಲಿ ಕಲಿಯುತ್ತಿದ್ದ ಬಡ ಮಕ್ಕಳ ಹೊಟ್ಟೆ ತುಂಬಿಸಲು ಹಳ್ಳಿ ಹಳ್ಳಿಗಳಿಗೆ ಪಾದಯಾತ್ರೆ ನಡೆಸಿ ಜೋಳಿಗೆ ಹಿಡಿದು ಭಿಕ್ಷಾಟನೆ ಮಾಡಿ ತಂದ ದವಸದಲ್ಲಿ ಮಕ್ಕಳ ಹೊಟ್ಟೆ ತುಂಬಿಸುತ್ತಿದ್ದರು. ನರ್ಸರಿ ಯಿಂದ ಉನ್ನತ ಶಿಕ್ಷಣದವರೆಗೂ ನಾನಾ ಶಿಕ್ಷಣ ಸಂಸ್ಥೆಗಳನ್ನು ತೆರೆದ ಸಿದ್ದಗಂಗಾ ಶ್ರೀಗಳು, ಬಡ ಮಕ್ಕಳಿಗೆ ಉಚಿತವಾಗಿ ವೈದ್ಯಕೀಯ ಶಿಕ್ಷಣ ನೀಡಲು ಸಾಧ್ಯವಾಗದ ಕಾರಣ ವೈದ್ಯಕೀಯ ಕಾಲೇಜನ್ನು ಡಾ.ಶಿವಕುಮಾರ ಸ್ವಾಮೀಜಿ ಗಳು ತೆರೆದಿರಲಿಲ್ಲ.…

Read More

ವಿರಾಜಪೇಟೆ ಏ.3 NEWS DESK : ವಿರಾಜಪೇಟೆ ನಗರದಲ್ಲಿ ಹನುಮ ಜಯಂತಿ ಪ್ರಯುಕ್ತ ವಿರಾಜಪೇಟೆಯ ಹನುಮ ಜಯಂತಿ ಆಯೋಜನಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಶೋಭಾಯಾತ್ರೆ ಸಹಸ್ರಾರು ಭಕ್ತರ ನಡುವೆ ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಹನುಮ ಭಕ್ತರು ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಗರದ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಶ್ರೀ ಬಾಲಾಂಜನೇಯ ದೇವಾಸ್ಥಾನದಲ್ಲಿ ಮಧ್ಯಾಹ್ನ ಪೂಜೆ ನೆರೆವೇರಿದ ಬಳಿಕ ಹನುಮನ ಮೂರ್ತಿ ಹೊತ್ತ ಬೆಳ್ಳಿರಥಕ್ಕೆ ಚಾಲನೆ ದೊರೆಯಿತು. ವಿರಾಜಪೇಟೆಯ ವಿಧಾನ ಪರಿಷತ್ ಸದಸ್ಯರಾದ ಮಂಡೆಪಂಡ ಸುಜಾ ಕುಶಾಲಪ್ಪ ಅವರು, ಪೂಜೆ ಸಲ್ಲಿಸಿ ಈಡುಗಾಯಿ ಹಾಕುವುದರ ಮೂಲಕ ಚಾಲನೆ ನೀಡಿದರು. ವಿವಿಧ ಚಂಡೆ ಮೇಳ ಹಾಗೂ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯನ್ನು ಹೊತ್ತ ರಥದ ವಾಹನದೊಂದಿಗೆ ಮೆರವಣಿಗೆ ಮೂಲಕ ನಗರದ ಛತ್ರಕೆರೆ ಸಮೀಪವಿರುವ ವೀರಾಂಜನೇಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವೀರಾಂಜನೇಯ ದೇವರಿಗೆ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಸಾಗಿ ಬಂದು ತೆಲುಗರ ಬೀದಿಯಲ್ಲಿರುವ ಮಾರಿಯಮ್ಮ ದೇವಾಲಯದ ಬಳಿ ಸಂಗಮಗೊಂಡಿತು. ಅಪಾರ ಜನಸ್ತೋಮದೊಂದಿಗೆ ಮಾರಿಯಮ್ಮ…

Read More

ವಿರಾಜಪೇಟೆ ಏ.3 NEWS DESK : ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ವಿರಾಜಪೇಟೆ ಇವರ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಶಾಲಿ ಪ್ರಮೋದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಿನ ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ. ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಹೆಣ್ಣುಮಕ್ಕಳ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು. ಆರೋಗ್ಯವಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಹಾಗಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಲು ಮುಖ್ಯ. ಹಾಗೆಯೇ ನಮ್ಮ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಿಕೊಡಬೇಕು. ಇದರಿಂದ ಮಕ್ಕಳು ಸುಸಂಸ್ಕøತರಾಗಿ ಬೆಳೆಯಲು ಸಾದ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರಲ್ಲದೆ ಮಹಿಳಾ ಸಮಾಜದ ಅಧ್ಯಕ್ಷೆಯಾಗಿ ತಮ್ಮ ಅತ್ತೆ ದಿ. ಲೀಲಾವತಿ ಆಸ್ರಣ್ಣ ಅವರ ಸಾಮಾಜಿಕ ಬದ್ದತೆ, ಸಮಾಜದ ಮೇಲೆ ಇದ್ದ ಅವರ ಹಿತಾಶಕ್ತಿ ಹಾಗೂ ಕಾಳಜಿ, ಸೇರಿದಂತೆ…

Read More

ವಿರಾಜಪೇಟೆ ಏ.3 NEWS DESK : ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗ ದೇವಸ್ಥಾನದಲ್ಲಿ ಏ.10 ರಂದು ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ 5 ನೇ ವಾರ್ಷಿಕೋತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ, ಪ್ರಧಾನ ಕಳಶ ಪೂಜೆ, ವಿಷ್ಣು ಸಹಸ್ರನಾಮ, ತುಳಸಿ ಅರ್ಚನೆ, ಕಳಶ ಅಭಿಷೇಕ, ಬೆಳ್ಳಿಯ ಕವಚ ಸಮರ್ಪಣೆ, ಬಳಿಕ ಬೆಳಿಗ್ಗೆ 10 ಗಂಟೆಯಿಂದ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಸತ್ಯನಾರಾಯಣ ಪೂಜೆಗೆ ಹೆಸರು ನೀಡುವವರು ದೇವಾಲಯದಲ್ಲಿ ಹೆಸರನ್ನು ನೀಡಬಹುದು. ಮಧ್ಯಾಹ್ನ 12.30ಕ್ಕೆ ದೇವರ ಅಲಂಕಾರ ಪೂಜೆ ನಡೆಯುತ್ತದೆ. ಬಳಿಕ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಪ್ರಸಾಧ ವಿನಿಯೋಗ ನಂತರ ಅನ್ನ ಸಂತಾರ್ಪಣೆ ನಡೆಯಲಿದೆ.ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದ್ದಾರೆ.

Read More

ವಿರಾಜಪೇಟೆ ಏ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ವಲಯದ ಬಿಟ್ಟಂಗಾಲ, ಕೆದಮುಳ್ಳುರು, ಬೇಟೋಳಿ ಕಾರ್ಯಕ್ಷೇತ್ರದ ಮಾಸಾಶನ ಫಲಾನುಭವಿಗಳಿಗೆ ಮಾತೃಶ್ರೀ ಹೇಮಾವತಿ ಅಮ್ಮನವರ ಹುಟ್ಟು ಹಬ್ಬದ ಪ್ರಯುಕ್ತ ಆರೋಗ್ಯ ವಿಚಾರಿಸಿ ಹಣ್ಣು ಹಂಪಲುಗಳನ್ನು ನೀಡಲಾಯಿತು. ತಾಲೂಕಿನಲ್ಲಿ ಇರುವ ಒಟ್ಟು 66 ಮಾಸಾಶನ ಫಲಾನುಭವಿಗಳಿಗೂ ಕೂಡ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೊಜನಾಧಿಕಾರಿ ಹರೀಶ್ ಪಿ, ಮೇಲ್ವಿಚಾರಕರದ ಶಿವಾಕುಮಾರ್, ಸೇವಾ ಪ್ರತಿನಿಧಿ ಪುಷ್ಪ ಉಪಸ್ಥಿತರಿದ್ದರು.

Read More

ಮಡಿಕೇರಿ ಏ.3 NEWS DESK :  ಮುತ್ತಪ್ಪ ಸೇವಾ ಸಂಘ ಬ್ರಹ್ಮಗಿರಿಪುರ ಕಾನೂರು ವತಿಯಿಂದ ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ ಏ.5, 6 ರಂದು ದೇವಾಲಯ ಆವರಣದಲ್ಲಿ ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಏ.5ರ ಸೋಮವಾರದಂದು ಸಂಜೆ 5.30 ಗಂಟೆಗೆ ಮುತ್ತಪ್ಪ ದೇವರ ಮಲೆ ಇಳಿಸುವುದು, ಸಂಜೆ 6 ಗಂಟೆಗೆ ಮುತ್ತಪ್ಪನ್ ಬೆಳ್ಳಾಟ್, ಸಂಜೆ 7.30 ಗಂಟೆಗೆ ಕುಟ್ಟಿಚಾತನ್ ಬೆಳ್ಳಾಟ್, ರಾತ್ರಿ 8 ಗಂಟೆಗೆ ಅನ್ನದಾನ, ರಾತ್ರಿ 9.30 ಗಂಟೆಗೆ ಕಂಡಕರ್ಣನ್ ಬೆಳ್ಳಾಟ್ ನಡೆಯಲಿದೆ. ಸೋಮವಾರ ಬೆಳಗ್ಗಿನ ಜಾವ 2 ಗಂಟೆಗೆ ಗುಳಿಗನ್ ತೆರೆ, 3 ಗಂಟೆಗೆ ಕಂಡಕರ್ಣನ್ ತೆರೆ, 6 ಗಂಟೆಗೆ ಮುತ್ತಪ್ಪನ್ ತೆರೆ ನಡೆಯಲಿದ್ದು, ಬೆಳಗ್ಗೆ 11.50 ಗಂಟೆಗೆ ದೇವರ ಉತ್ಸವ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.

Read More

ಕುಶಾಲನಗರ, ಏ.3 NEWS DESK : ರೈತರು ಕೃಷಿಯೊಂದಿಗೆ ಅರಣ್ಯ ಕೃಷಿಯನ್ನು ವೈಜ್ಞಾನಿಕವಾಗಿ ಮಾಡಿದರೆ ಕೃಷಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಕಾರ್ಯಕ್ರಮಗಳ ಸಂಘಟಕ ಪರಿಸರ ಪ್ರೇಮಿ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ವಿಭಾಗ, ಮಡಿಕೇರಿ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡಿಗೆ ಬಳಿಯ ಹುದುಗೂರು ಅರಣ್ಯ ಸಸ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕೌಶಲ್ಯ ತರಬೇತಿ ಮತ್ತು ಅರಿವು ಹಾಗೂ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೃಷಿ ಅರಣ್ಯದಿಂದ ಕೃಷಿ ಭೂಮಿಯ ಅಂತರ್ಜಲ ವೃದ್ಧಿ ಸಾಧ್ಯ. ಇಂದಿನ ಹವಾಮಾನ ವೈಪರೀತ್ಯ, ಅತಿವೃಷ್ಠಿ ಹಾಗೂ ಅಕಾಲಿಕ ಮಳೆಯಿಂದ ಒಂದು ಬೆಳೆ ಕೈಕೊಟ್ಟರೂ, ಅರಣ್ಯ ಕೃಷಿಯಿಂದ ಬರುವ ಮರಗಳ ಆದಾಯವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ.ಇದು ರೈತರ ಆದಾಯದ ವೈವಿಧ್ಯೀಕರಣಕ್ಕೆ…

Read More