ಮಡಿಕೇರಿ ಏ.23 NEWS DESK : ಪ್ರತಿಭೆ ಮತ್ತು ಕ್ರೀಡಾ ಚೈತನ್ಯ ಹೊಮ್ಮಿಸಿದ ಸಮಾಗಮ ಬೇಸಿಗೆ ಶಿಬಿರ ವಿವಿಧ ಕಲಾ ಪ್ರದರ್ಶನದೊಂದಿಗೆ ಸಮಾಪನಗೊಂಡಿತು. ನಗರದ ಕೊಡಗು ವಿದ್ಯಾಲಯದಲ್ಲಿ 22 ದಿನಗಳಿಂದ ನಡೆದ ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ವಿಜೃಂಭಣೆಯ ತೆರೆ ಬಿದ್ದಿತು. ಸಮಾಗಮ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಪಿಕಲ್ಬಾಲ್ ತರಬೇತುದಾರರು ಹಾಗೂ ಕರ್ನಾಟಕ ರಾಜ್ಯ ಪಿಕಲ್ಬಾಲ್ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿ ಮತ್ತು ಏಷ್ಯಾ ಪಿಕಲ್ಬಾಲ್ ಮಹಾಸಂಘದ ಉಪಾಧ್ಯಕ್ಷ ರಜತ್ ಕಂಕರ್ ಎಂ. ಆರ್ ಆಗಮಿಸಿದ್ದರು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಜತ್ ಕಂಕರ್ , ಪೋಷಕರು ಮಕ್ಕಳೊಂದಿಗೆ ಸಮಯ ಕಳೆಯಬೇಕು ಹಾಗೂ ಅವರೊಂದಿಗೆ ಆಟವಾಡಬೇಕು ಎಂದು ಸಲಹೆ ನೀಡಿದರು. ಎಂಟು ವರ್ಷ ಮೇಲ್ಪಟ್ಟವರು ಪಿಕಲ್ಬಾಲ್ ಕ್ರೀಡೆಗಳಲ್ಲಿ ಭಾಗವಹಿಸಬಹುದು ಎಂದೂ ರಜತ್ ಕಂಕರ್ ಅವರು ಮಾಹಿತಿ ನೀಡಿದರು. ಈ ಕ್ರೀಡೆಯಲ್ಲಿ ಹಲವಾರು ವಿಭಾಗಗಳಿದ್ದು ಎಲ್ಲರಿಗೂ ಅವಕಾಶಗಳಿವೆ ಎಂದರು.ಮಕ್ಕಳು ವರ್ಷಪೂರ್ತಿ ಓದುವುದಷ್ಟೇ ಸಾಕಾಗುವುದಿಲ್ಲ,…
ಲೇಖಕ: admin
ಮಡಿಕೇರಿ NEWS DESK ಏ.23 : ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆಯ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ರೆನಿತ್ ಎಂ. 617 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾನೆ, ಅಲ್ಲದೆ ಜಿಲ್ಲೆಗೆ 5ನೇ ಸ್ಥಾನ ಪಡೆದುಕೊಂಡಿದ್ದಾನೆ. ರೆನಿತ್ ಎಂ. ಪೊಲೀಸ್ ಅಧಿಕಾರಿ ಕುಶಾಲನಗರದ ನಿವಾಸಿ ಮಂಜುನಾಥ್ ಹಾಗೂ ತಾರಾಮಣಿ ದಂಪತಿಯ ಪುತ್ರ.
ಮಡಿಕೇರಿ ಏ.23 NEWS DESK : ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಸುಬ್ರಹ್ಮಣ್ಯ – ಚಾಮಾ೯ಡಿ ಘಾಟ್ ಗಾಗಿ ಬೈಕ್ ರೈಡ್ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಪ್ರಮುಖರಾದ ಬಿ.ಜಿ. ಅನಂತಶಯನ, ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್, ನಿದೇ೯ಶಕರಾದ ಹರೀಶ್ ಕಿಗ್ಗಾಲು, ರಂಜಿತ್ ಕಿಗ್ಗಾಲು, ಚೇಂದ್ರಿಮಾಡ ವಿನು, ಕಶ್ಯಪ್ ಮತ್ತು ಚೇತನ್ ಪಾಲ್ಗೊಂಡಿದ್ದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೖತ್ತದಲ್ಲಿ ಬೈಕ್ ರೈಡ್ ಗೆ ರೋಟರಿ ಜಿಲ್ಲೆಯ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ, ಮತ್ತು ರೋಟರಿ ವುಡ್ಸ್ ಮಾಜಿ ಅಧ್ಯಕ್ಷ ವಸಂತ್ ಕುಮಾರ್ ಚಾಲನೆ ನೀಡಿದರು. ಸಂಪಾಜೆ ಮಾಗ೯ವಾಗಿ ಸುಬ್ರ್ರಹ್ಮಣ್ಯ ತಲುಪಿದ ಬೈಕ್ ರೈಡರ್ ಗಳನ್ನು ಸುಬ್ರಹ್ಮಣ್ಯ ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಯಪ್ರಕಾಶ್ , ನಿದೇ೯ಶಕರಾದ ಚಂದ್ರಶೇಖರ್,. ರೋಹಿತ್ ಮತ್ತು ಸದಸ್ಯರು ಸ್ವಾಗತಿಸಿದರು. ಚಾಮಾ೯ಡಿ ಘಾಟ್ ಗಾಗಿ ಬಂದ ರೈಡರ್ ಗಳನ್ನು ಸೋಮವಾರಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ವೀಣಾ ಮನೋರ್, ನಿದೇ೯ಶಕ ದಿನೇಶ್ , ಆಶಾ ಪುಟ್ಟರಾಜು ಮತ್ತು ಸದಸ್ಯರು…
ಮಡಿಕೇರಿ NEWS DESK ಏ.23 : ಕೊಡಗು ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಎಸ್ಸೆಸ್ಸೆಲ್ಸಿಯ ಒಟ್ಟು 625 ಅಂಕಕ್ಕೆ 621 ಅಂಕವನ್ನು ಪಡೆದು ಪ್ರಥಮ ಸ್ಥಾನ ಹೊಂದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಲಿನ್ಸಿ ದೇಚಮ್ಮ ಟಿ.ಟಿ. ಅವರು 621, ಹಾಗೆಯೇ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢ ಶಾಲೆಯ ಸಿಂಚನ ಕೆ.ಐ. ಅವರು 621 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ಡೀನ್ ಸೆಲ್ವ ಡಿ’ಸೋಜ 620, ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಪ್ರೌಢ ಶಾಲೆಯ ಶಿವಾನಿ ಶಾರದಮಣಿ, ವಿರಾಜಪೇಟೆಯ ಕಾವೇರಿ ಪ್ರೌಢಶಾಲೆಯ ಯು.ಎಸ್.ಶ್ರೀವತ್ಸ, ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢ ಶಾಲೆಯ ಸಿದ್ಧಾರ್ಥ ಕಾವೇರಪ್ಪ ಇವರು 619 ಅಂಕ ಪಡೆದಿದ್ದಾರೆ. ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢ ಶಾಲೆಯ ಸೋನಶ್ರೀ ಕೆ.ಇ., ಗೋಣಿಕೊಪ್ಪ ಸೆಂಟ್ ಥಾಮಸ್ ಪ್ರೌಢ ಶಾಲೆಯ ನಮನ ಈ ಇಬ್ಬರು 618 ಅಂಕ ಪಡೆದಿದ್ದಾರೆ. ಉಳಿದಂತೆ ಸೋಮವಾರಪೇಟೆಯ ಅವರ್ ಲೇಡಿ…
ಮಡಿಕೇರಿ ಏ.23 NEWS DESK : ಕಠಿಣ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಬಹುದು ಎಂದು ತೋರಿಸಿಕೊಟ್ಟ ಭಗೀರಥ ಅವರ ಪ್ರಯತ್ನ ಮನುಕುಲಕ್ಕೆ ಮಾದರಿಯಾಗಿದೆ ಎಂದು ಚಿಂತಕರು ಹಾಗೂ ಸಾಹಿತಿಗಳಾದ ಚಿ.ನಾ.ಸೋಮೇಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗಂಗೆಯನ್ನು ಧರೆಗಿಳಿಸಿ ಗಂಗಾ ನದಿಯನ್ನಾಗಿಸಿ ಜನರ ನೀರಿನ ದಾಹ ತೀರಿಸಿದ ಭಗೀರಥರು ಪ್ರಯತ್ನ ಶೀಲತೆಯ ರೂಪಕವಾಗಿ ನಿಲ್ಲುತ್ತಾರೆ. ಅತ್ಯಂತ ಕಠಿಣವಾದ ಅಥವಾ ಅಸಾಧ್ಯವೆನಿಸುವ ಕಾರ್ಯವನ್ನು ಅಚಲವಾದ ಛಲ ಮತ್ತು ನಿರಂತರ ಪರಿಶ್ರಮದಿಂದ ಸಾಧಿಸುವ ಭಗೀರಥ ಅವರ ಪ್ರಯತ್ನದ ಮೂಲಕ ಯುವ ಸಮೂಹ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಕುಶಾಲನಗರದ ಬಿ.ಸಿ.ಶಂಕರಯ್ಯ ಅವರು ಉಪನ್ಯಾಸ ನೀಡಿ, ಭಗೀರಥನು ಪೌರಾಣಿಕ ರಾಜ. ತನ್ನ ಪೂರ್ವಜರ ಭೀಕರ ಅಂತ್ಯವನ್ನು ತಿಳಿದು, ತನ್ನ ಪೂರ್ವಜರಿಗೆ ಸದ್ಗತಿ ಪ್ರಾಪ್ತಿಯಾಗಲಿಲ್ಲವೆಂಬ ವಿಷಾದದಿಂದ ತನ್ನ ಮಂತ್ರಿಗೆ…
ಮಡಿಕೇರಿ ಏ.23 NEWS DESK : ಮನೆ ಸಂಸಾರದಲ್ಲಿ ಓದು-ಬರಹದಂತಹ ಅಭ್ಯಾಸಗುಣಗಳು ಒಳ್ಳೆಯ ಸಂಸ್ಕಾರಕ್ಕೆ ದಾರಿ ತೋರಿಸಬಲ್ಲದು. ಇದರಿಂದ ಒಳ್ಳೆಯ ಸಂಸ್ಕೃತಿಯು ರೂಪುಗೊಳ್ಳುವುದೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಭಿಪ್ರಾಯಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ 8ನೇ ಕೊಡವ ಪುಸ್ತಕ ಪತ್ತಾಯ ಉದ್ಘಾಟಿಸಿ ಮಾತನಾಡಿದ ಮಹೇಶ್ ನಾಚಯ್ಯ, ಒಂದು ಒಳ್ಳೆಯ ಸಂಸ್ಕøತಿಯಿಂದ ಜನರು ಒಂದು ಕುಟುಂಬದಲ್ಲಿ ಉತ್ತಮ ಪರಿಸರ ಹೊಂದಬಹುದು. ಮೊದಲು ಮನೆಯಿಂದಲೇ ಸಂಸ್ಕಾರವನ್ನು ಕಲಿಯಬೇಕು. ಯಾವುದೇ ಭಾಷೆಯಲ್ಲಿ ಪರಿಣತಿ ಹೊಂದಿದ್ದರೂ ಮುಖ್ಯ ಭಾಷೆ ಕೊಡವ ಭಾಷೆ ಮನೆಯ ವ್ಯವಹಾರಿಕ ಭಾಷೆಯಾಗಿರಬೇಕು. ಮಾತೃ ಭಾಷೆಯ ಮೇಲಿನ ಕೀಳರಿಮೆ ಸಲ್ಲದು. ಇದು ತಂದೆ-ತಾಯಿಯನ್ನು ಕಡೆಗಣಿಸಿದಂತೆ. ಕೊಡವ ಭಾಷೆಯಲ್ಲಿ ತನ್ನದೇ ಆದ ನಾಲ್ಕು ಸಾವಿರದಷ್ಟು ಮೂಲ ಶಬ್ಧಗಳಿವೆ. ಅವೆಲ್ಲದರ ಬಳಕೆಯಾದಲ್ಲಿ ಭಾಷೆಗೆ ತನ್ನತನ ಉಳಿಯಲು ಸಾಧ್ಯವಾಗುತ್ತದೆ. ಕೊಡವ ಪುಸ್ತಕ ಪತ್ತಾಯ ಅಕಾಡೆಮಿಯ ನೂತನ ಯೋಜನೆಯಾಗಿದ್ದು ಕೊಡವ ಸಮಾಜಗಳಲ್ಲಿ ಐನ್ಮನೆಗಳಲ್ಲಿ ಇದರ ಸ್ಥಾಪನೆಗೆ ಸಂಬಂಧಪಟ್ಟವರು…
ಮಡಿಕೇರಿ ಏ.23 NEWS DESK : ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಮತಾಂತರ ಮತ್ತು ದೌರ್ಜನ್ಯ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಮತಾಂತರ, ಲವ್ ಜಿಹಾದ್, ಕಾರ್ಪೋರೇಟ್ ಜಿಹಾದ್, ಲ್ಯಾಂಡ್ ಜಿಹಾದ್, ಗೋ ಹತ್ಯೆ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಂವಿಧಾನ ಬಾಹಿರವಾಗಿರುವ ಇಂತಹ ಘಟನೆಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕೆಲವು ಜಿಮ್ ಗಳಲ್ಲಿ ಹಿಂದೂ ಹೆಣ್ಣು ಮಕ್ಕಳಿಗೆ ತರಬೇತಿ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ. ಕೆಲವು ಘಟನೆಗಳನ್ನು ವಿಡಿಯೋ ಚಿತ್ರೀಕರಿಸಿ ಮತಾಂತರ, ಗೋಮಾಂಸ ಸೇವನೆ ಸಹಿತ ಭಯೋತ್ಪಾದಕ ಕೃತ್ಯಗಳಿಗೂ ಹಿಂದೂ ಹೆಣ್ಣು ಮಕ್ಕಳನ್ನು ಬಳಸಿಕೊಳ್ಳುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನಾಕಾರರು ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಸಲ್ಲಿಸಿದರು. ಜಿಲ್ಲಾ…
ಮಡಿಕೇರಿ ಏ.23 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.24 ರ ಪಂದ್ಯಗಳು. *ಮೈದಾನ 1* ಬೆಳಿಗ್ಗೆ 9 ಗಂಟೆಗೆ ಕೋಳೆರ ಮತ್ತು ಗೀಜಿಗಂಡ, 10ಕ್ಕೆ ಪಾರುವಂಡ ಮತ್ತು ಮಂದೇಯಂಡ (ಮಾದಾಪುರ), 11ಕ್ಕೆ ಮೂಕಳೆರ ಮತ್ತು ಮುಕ್ಕಾಟಿರ (ಬೆಳ್ಳೂರು ಹರಿಹರ) ಹಾಗೂ 12 ಗಂಟೆಗೆ ಕೊಟ್ಟಂಗಡ ಮತ್ತು ಮೂಕೊಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕುಂಬಳದಾಳು) ಮತ್ತು ನೆರವಂಡ, 10ಕ್ಕೆ ಮಾಳೇಟಿರ (ಕೆದಮುಳ್ಳೂರು) ಮತ್ತು ತಂಬುಕುತ್ತಿರ, 11ಕ್ಕೆ ಕರಿನೆರವಂಡ ಮತ್ತು ನಂದಿನೆರವಂಡ ಹಾಗೂ 12 ಗಂಟೆಗೆ ಅಲಮೇಂಗಡ ಮತ್ತು ದಾಸಂಡ *ಮೈದಾನ 3* (ಮಹಿಳಾ ಕ್ರಿಕೆಟ್) ಬೆಳಿಗ್ಗೆ 9 ಗಂಟೆಗೆ ಮಾಚಿಮಂಡ ಮತ್ತು ಪಾಸುರ, 10ಕ್ಕೆ ಮಾಚಮಾಡ (ತಾವಳಗೇರಿ) ಮತ್ತು ಮುಕ್ಕಾಟಿರ (ಹರಿಹರ), 1ಕ್ಕೆ ಮೇವಡ ಮತ್ತು ಓಡಿಯಂಡ ಹಾಗೂ 3 ಗಂಟೆಗೆ ಚೆಕ್ಕೇರ ಮತ್ತು ಕಂಬೀರಂಡ
ಮಡಿಕೇರಿ ಏ.23 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.23 ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* (ಲಾಲು ಮುದ್ದಯ್ಯ ಮೈದಾನ) ತಂಬುಕುತ್ತಿರ ಮತ್ತು ಚಿರಿಯಪಂಡ ತಂಡಗಳ ನಡುವಿನ ಪಂದ್ಯದಲ್ಲಿ 26 ರನ್ ಗಳಿಂದ ತಂಬುಕುತ್ತಿರ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ತಂಬುಕುತ್ತಿರ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 74 ರನ್ ಗಳನ್ನು ಸೇರಿಸಿತು. ಚಿರಿಯಪಂಡ 6 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 48 ಗಳಿಸಿ ಸೋಲು ಅನುಭವಿಸಿತು. ಕನ್ನಂಡ ಮತ್ತು ಕರಿನೆರವಂಡ ನಡುವಿನ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ಕರಿನೆರವಂಡ ತಂಡ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರಿನೆರವಂಡ ತಂಡ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಕನ್ನಂಡ 6 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 87…
ಮಡಿಕೇರಿ ಏ.23 NEWS DESK : ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದ 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.96.54 ರಷ್ಟು ಫಲಿತಾಂಶ ಪಡೆದು, ರಾಜ್ಯದಲ್ಲಿ 8 ನೇ ಸ್ಥಾನ ಹೊಂದಿದೆ. ಕೊಡಗು ಜಿಲ್ಲೆ ಕಳೆದ ಬಾರಿ ಶೇ.82 ರಷ್ಟು ಫಲಿತಾಂಶ ಪಡೆದು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ಫಲಿತಾಂಶ ಹೆಚ್ಚಳವಾಗಿದ್ದರೂ ಸಹ, ಫಲಿತಾಂಶ ಸ್ಥಾನದಲ್ಲಿ ಪಲ್ಲಟವಾಗಿದೆ. ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದ್ದರೂ ಸಹ ಕಳೆದ ಬಾರಿಗಿಂತ ಈ ಬಾರಿ ಶೇ.14.54 ರಷ್ಟು ಫಲಿತಾಂಶ ವೃದ್ಧಿಯಾಗಿರುವುದು ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ 2904 ಬಾಲಕರಲ್ಲಿ 2776 ಉತ್ತೀರ್ಣರಾಗಿ ಶೇ.95.59 ರಷ್ಟು ಫಲಿತಾಂಶ ಪಡೆದಿದ್ದಾರೆ. ಹಾಗೆಯೇ ಪರೀಕ್ಷೆ ಬರೆದಿದ್ದ 3044 ಬಾಲಕಿಯರಲ್ಲಿ 2966 ಬಾಲಕಿಯರು ಉತ್ತೀರ್ಣರಾಗಿ ಶೇ.97.44 ರಷ್ಟು ಫಲಿತಾಂಶ ಪಡೆದಿದ್ದಾರೆ. ತಾಲ್ಲೂಕುವಾರು ಶೇಕಡ ಫಲಿತಾಂಶ ಗಮನಿಸಿದಾಗ ಮಡಿಕೇರಿ…






