ಮಡಿಕೇರಿ NEWS DESK ಜು.12 : ನಮ್ಮ ದೇಶ ನಮ್ಮ ಹೆಮ್ಮೆ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸಮರ್ಥ ಕನ್ನಡಿಗರು ( ನೋಂ ), ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಮರ್ಥ ಕನ್ನಡಿಗರು (ನೋಂ) ಕೊಡಗು ಜಿಲ್ಲಾ ಘಟಕದ ವತಿಯಿಂದ ವಿವಿಧ ಸ್ಪರ್ಧೆಗಳು. ಆಗಸ್ಟ್ ಒಂಭತ್ತರಂದು ಮಡಿಕೇರಿಯ ಲಯನ್ಸ್ ಹಾಲ್ ನಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆ, ಪಿ ಯು ಸಿ ವಿಭಾಗದ ಮಕ್ಕಳಿಗೆ ‘ನಮ್ಮ ದೇಶ ನಮ್ಮ ಹೆಮ್ಮೆ ‘ಎನ್ನುವ ವಿಷಯದ ಬಗ್ಗೆ ಐದು ನಿಮಿಷ ಕಾಲಾವಕಾಶದಲ್ಲಿ ಭಾಷಣ ಮಾಡುವ ಸ್ಪರ್ಧೆ ಮತ್ತು ಮಹಿಳೆಯರಿಗೆ ವೈಯಕ್ತಿಕ ಗಾಯನ (ಎಸ್ .ಜಾನಕಿ ಯವರು ಹಾಡಿರುವ ಕನ್ನಡ ಗೀತೆಯನ್ನು ಕರೋಕೆ ಬಳಸಿ ಅಥವಾ ಬಳಸದೆ ಮೂರು ನಿಮಿಷಗಳಲ್ಲಿ ಹಾಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಮರ್ಥ ಕನ್ನಡಿಗರು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಒಂದರಿಂದ ನಾಲ್ಕನೇ ತರಗತಿ(1-4) ಐದರಿಂದ ಏಳನೇ ತರಗತಿ ( 5-7) ಎಂಟರಿಂದ ಹತ್ತು ( 8-10)…
ಲೇಖಕ: admin
ಬೆಂಗಳೂರು ಜು.11 NEWS DESK : ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಗಾಯಕಿ, ಗಾನ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಶ್ರೀಮತಿ ಎಸ್. ಜಾನಕಿ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪರೂಪದ ಗಾನ ಕೋಗಿಲೆ. ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಕೇವಲ ಹಾಡುಗಾರಿಕೆಯಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳ ಧ್ವನಿ, ಮಕ್ಕಳ ಧ್ವನಿಯನ್ನು ಲೀಲಾಜಾಲವಾಗಿ ಅನುಕರಿಸುತ್ತಿದ್ದ ಅವರ ಕಂಠಸಿರಿ ಅದ್ಭುತವಾಗಿತ್ತು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ ಅನನ್ಯ ಹಾಗೂ ಎಂದಿಗೂ ಮರೆಯಲಾಗದ್ದು,” ಎಂದು ಸ್ಮರಿಸಿದ್ದಾರೆ. ಅವರ ನಿಧನದಿಂದ ಸಂಗೀತ ಲೋಕದ ಸುವರ್ಣ ಯುಗವೊಂದು ಅಂತ್ಯಗೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಹಾಗೂ ಅವರ ಕುಟುಂಬದವರು, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಆಯುಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಜು.11 NEWS DESK : ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಸ್ವಾಗತ ಸಮಾರಂಭ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಹಂಡಂಗಿ ನಾಗರಾಜ್, ವಿದ್ಯಾರ್ಥಿಗಳು ಇಷ್ಟಪಟ್ಟು ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನದಿಂದ ಓದಿದರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ವಿದ್ಯಾರ್ಥಿಗಳು ತಮ್ಮ ತಂದೆ ತಾಯಿ/ ಪೋಷಕರು ತಮಗಾಗಿ ಬಹಳಷ್ಟು ಶ್ರಮ ಪಡುತ್ತಿರುತ್ತಾರೆ ಅವರಿಗೆ ತಾವೇನಾದರೂ ಪ್ರತಿಫಲ ನೀಡುವುದಾದರೆ ಅದು ನಿಮ್ಮ ವ್ಯಕ್ತಿತ್ವ ಹಾಗೂ ನಿಮ್ಮ ಫಲಿತಾಂಶ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸ್ವಾಗತ ಕಾರ್ಯಕ್ರಮ ಕುರಿತು ಮಾತನಾಡಿದ ಹಿರಿಯ ಉಪನ್ಯಾಸಕರಾದ ಎಂ.ಟಿ.ರಮೇಶ್ , ಪ್ರಥಮ ಬಾರಿಗೆ ನಮ್ಮ ಕಾಲೇಜಿಗೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಗದರ್ಶನದಲ್ಲಿ ತಮ್ಮ ವ್ಯಾಸಂಗವನ್ನು ಮುಂದುವರಿಸಬೇಕು. ತಂದೆ ತಾಯಿ, ಪೋಷಕರು ತಮ್ಮನ್ನು ಕಷ್ಟಪಟ್ಟು ಕಾಲೇಜಿಗೆ ಕಳಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪೋಷಕರಿಗೆ ಗೌರವವನ್ನು ಕೊಡುವುದರ ಜತೆಗೆ…
ಮಡಿಕೇರಿ ಜು.11 NEWS DESK : 2027 ನೇ ಸಾಲಿನಲ್ಲಿ ನಡೆಯುವ ವಿಶ್ವವಿಖ್ಯಾತ ಅಜ್ಜಿಕುಟ್ಟಿರ ಕೊಡುವ ಹಾಕಿ ನಮ್ಮೆಯ ಆತಿಥ್ಯ ಹಕ್ಕು ಪತ್ರವನ್ನು ಕೊಡವ ಹಾಕಿ ಅಕಾಡಮಿ ವತಿಯಿಂದ ಅಜ್ಜಿಕುಟ್ಟಿರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಶ್ರೀ ಪಾಡಿ ಇಗ್ಗುತಪ್ಪ ಸನ್ನಿಧಿಯಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡಂಡ ಬೋಪಣ್ಣ ಅವರು ಅಜ್ಜಿಕುಟ್ಟಿರ ಹಾಕಿ ನಮ್ಮೆಯ ಅಧ್ಯಕ್ಷರಾದ ನರೇನ್ ಕಾರ್ಯಪ್ಪ ಹಾಗೂ ಶಾಸಕರು, ಗೌರವಾಧ್ಯಕ್ಷರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮತ್ತು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಸಕರ ಪತ್ನಿ ಕಾಂಚನ್ ಪೊನ್ನಣ್ಣ ಹಾಜರಿದ್ದರು.
ಮಡಿಕೇರಿ ಜು.11 NEWS DESK : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿರುವ ಹಂತದಲ್ಲೆ ರಾಜ್ಯ ಕಾಂಗ್ರೆಸ್ ಸರಕಾರ “ಶಾಶ್ವತ ವಾಸ ದೃಢೀಕರಣ ಪತ್ರ”(ಪಿಆರ್ಸಿ) ಆದೇಶ ಹೊರಡಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು, ಈ ಕುರಿತು ಬಿಜೆಪಿ ಪಕ್ಷ ಜಿಲ್ಲೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ. ಎಸ್ಐಆರ್ಗೆ ಪೂರಕ ದಾಖಲೆಯಾಗಿ ಶಾಶ್ವತ ವಾಸ ದೃಢೀಕರಣ ಪತ್ರವನ್ನು ತಹಸೀಲ್ದಾರರ ಮೂಲಕ ನೀಡಲು ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಮತ್ತು ರಾಜ್ಯ ಸರಕಾರ ಈ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು. ಸರಕಾರ ಪಿಆರ್ಸಿ ಮೂಲಕ ಅಸ್ಸಾಮಿಗರ ಹೆಸರಿನಲ್ಲಿ ನೆಲೆಸಿ ನಕಲಿ ಆಧಾರ್ ಕಾರ್ಡ್ಗಳನ್ನು ಹೊಂದಿಕೊಂಡಿರುವ ಬಾಂಗ್ಲಾ ದೇಶಿಗರು ಸೇರಿದಂತೆ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನವನ್ನು…
ಮಡಿಕೇರಿ ಜು.11 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಮಡಿಕೇರಿಯ ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ರೇನ್ ಕೋಟ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಆಡಳಿತ ಮಂಡಳಿ ಪದಗ್ರಹಣ ಕಾಯ೯ಕ್ರಮದಲ್ಲಿ ಬೆಂಗಳೂರಿನ 3191 ರೋಟರಿ ಜಿಲ್ಲೆಯ ಸಹಾಯಕ ಗವನ೯ರ್ ಪ್ರಕಾಶ್ ಬೆಳವಡಿ ಮಿಸ್ಟಿ ಹಿಲ್ಸ್ ವತಿಯಿಂದ ನೀಡಲಾದ 10 ರೇನ್ ಕೋಟ್ ಗಳನ್ನು ಸಂಚಾರಿ ಪೊಲೀಸರಿಗೆ ವಿತರಿಸಿದರು. ಮಳೆಯಲ್ಲಿ ರೇನ್ ಕೋಟ್ ಗಳ ಭದ್ರತೆ ಪೊಲೀಸರಿಗೆ ನೆರವಾಗಲಿದ್ದು, ಸದಾ ಮಳೆ, ಗಾಳಿ, ಛಳಿಯಲ್ಲಿ ಕತ೯ವ್ಯ ನಿವ೯ಹಿಸುತ್ತಿರುವ ಸಂಚಾರಿ ಪೊಲೀಸರಿಗೆ ರೋಟರಿ ಜಿಲ್ಲೆ 3181 ನ ಪ್ರಮುಖ ಯೋಜನೆಯಾಗಿ ರೇನ್ ಕೋಟ್ ಗಳನ್ನು ವಿತರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಂಚಾರಿ ಜಾಗ್ರತಿ ಕಾಯ೯ಕ್ರಮಗಳನ್ನು ವಿವಿಧೆಡೆ ಆಯೋಜಿಸಲಾಗುತ್ತದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್ ಮಾಹಿತಿ ನೀಡಿದರು. ರೋಟರಿ ಸಹಾಯಕ ಗವನ೯ರ್ ಹೆಚ್.ಎಸ್. ವಸಂತ್ ಕುಮಾರ್, ವಲಯ ಸೇನಾನಿ ಪೊನ್ನಚ್ಚನ ಮಧುಸೂದನ್ , ಕಾಯ೯ದಶಿ೯ ಡಾ.ಜಿ.ಡಿ.ಚೇತನ್…
ಮಡಿಕೇರಿ NEWS DESK ಜು.11 : ಗ್ರಾಮೀಣ ಭಾಗದ ಬಡವರು, ಕಾರ್ಮಿಕ ವರ್ಗ ಹಾಗೂ ದುರ್ಬಲ ವರ್ಗದ ಮಂದಿ ಮತದಾರರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಹೋಬಳಿ ಮಟ್ಟದಲ್ಲೆ “ಮತದಾರರ ಅಧಿಕೃತ” ದಾಖಲೆ ಒದಗಿಸಲು ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆಯಡಿ ಭಾರತದ ಯಾವೊಬ್ಬ ಪ್ರಜೆಯೂ ಮತದಾನದಿಂದ ವಂಚಿತರಾಗಬಾರದು. ಪ್ರಸ್ತುತ ಎಸ್ಐಆರ್ಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಮನೆ ಮನೆಗೆಗಳಿಗೆ ತಲುಪಿಸಲಾಗಿದ್ದರು, ಅದನ್ನು ಸಮರ್ಪಕವಾಗಿ ತುಂಬುವ ಬಗ್ಗೆ ಸ್ಪಷ್ಟ ಮಾಹಿತಿಗಳು ಇಲ್ಲದೆ ಗೊಂದಲ ಸೃಷ್ಟಿಯಾಗಿದೆ. ಎಸ್ಐಆರ್ ಹಿನ್ನೆಲೆಯಲ್ಲಿ ಅರ್ಜಿಗಳನ್ನು ವ್ಯವಸ್ಥಿತವಾಗಿ ಮತ್ತು ಕ್ರಮಬದ್ಧವಾಗಿ ತುಂಬುವ ಸಲುವಾಗಿ ಮತದಾರರು, ಈ ಬಗ್ಗೆ ಮಾಹಿತಿ ತಿಳಿದವರ ಬಳಿಗೆ ತೆರಳಿ ಅರ್ಜಿ ಭರ್ತಿ ಮಾಡಿಸಿಕೊಳ್ಳುತ್ತಾರೆ. ಇದನ್ನೆ ಪ್ರಮುಖವಾಗಿರಿಸಿಕೊಂಡು ವಿಪಕ್ಷಗಳು ಗೊಂದಲ ಸೃಷ್ಟಿಸಿರುವುದಾಗಿ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ ಟಿ.ಪಿ.ರಮೇಶ್ ಅವರು ಮಾತನಾಡಿ,…
ಮಡಿಕೇರಿ NEWS DESK ಜು.11 : ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಂದ್ರಶೇಖರ್ ಹಾಗೂ ಜಾಜಿ ದಂಪತಿ ಪುತ್ರ ಕವನ್(24) ಮೃತ ಯುವಕ. ಶನಿವಾರ ಬೆಳಗ್ಗೆ ಕವನ್ ಮನೆಯಲ್ಲಿದ್ದ ಬಂದೂಕಿನಿAದ ಗುಂಡು ಹಾರಿಸಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುಂಟಿಕೊಪ್ಪ ಜು.11 NEWS DESK : ಮಳೆಗೆ ಹಾನಿಯಾದ ಮನೆಯ ಸಂತ್ರಸ್ತರನ್ನು ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ಸುಂಟಿಕೊಪ್ಪದ ಜನತಾ ಕಾಲೋನಿಯ ಎಲಿಜಬೆತ್ ಎಂಬವರ ಮನೆಯು ಗಾಳಿ ಮಳೆಗೆ ಹಾನಿಗೊಂಡಿದ್ದು, ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ಗೌಡ ಭೇಟಿ ನೀಡಿ ಸಾಂತ್ವನ ಹೇಳಿ ಸರಕಾರ ಹಾಗೂ ವೈಯಕ್ತಿಕ ಸಹಾಯಹಸ್ತ ನೀಡುವ ಭರವಸೆಯನ್ನು ವ್ಯಕ್ತಪಡಿಸಿದರು. ಅಧಿಕಾರಿಗಳಿಗೆ ಸರಕಾರದಿಂದ ದೊರೆಯುವ ಸಲವತ್ತುಗಳನ್ನು ಅದಷ್ಟು ಬೇಗನೆ ಒದಗಿಸಿಕೊಡಬೇಕು ಅಲ್ಲದೆ ನನ್ನ ವೈಯಕ್ತಿಕ ಸಹಾಯಹಸ್ತವನ್ನು ನೀಡುವ ಮೂಲಕ ಪುನರ್ ಮನೆ ನಿರ್ಮಾಣಕ್ಕೆ ಮುಂದಾಗುವುದಾಗಿ ಅವರು ಹೇಳಿದರು. ಕುಟುಂಬವು ತುಂಬಾ ಅಪಾಯದಲ್ಲಿರುವ ಮನೆಯಲ್ಲಿಯೇ ವಾಸಿಸುತ್ತಿರುವುದನ್ನು ಮನಗಂಡ ಶಾಸಕರು ಮನೆಯನ್ನು ತೆರವುಗೊಳಿಸಿ ಬಾಡಿಗೆ ಮನೆಯಲ್ಲಿ ನೆಲೆಸುವಂತೆ ಸೂಚಿಸಿದರಲ್ಲದೆ. ಅವರಿಗೆ ಬೇಕಾದ ಅಗತ್ಯ ನೇರವನ್ನು ಒದಗಿಸುವುದಾಗಿ ಭರವಸೆಯನ್ನು ನೀಡಿದರು. ಕಂದಾಯ ಇಲಾಖೆಯ ಕಂದಾಯ ಪರೀವಿಕ್ಷಕರಾದ ಪ್ರಶಾಂತ್ ಅವರಿಗೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲಿಸಿ ಕ್ರಮಕ್ಕೆ ಮುಂದಾಗಬೇಕೆಂದು ಅವರು ಸೂಚಿಸಿದರು. ಪಂಚಾಯಿತಿ ವತಿಯಿಂದ ಸಂತ್ರಸ್ತರಿಗೆ ಬೇಕಾದ ಸೂಕ್ತ ಸೌಲಭ್ಯವನ್ನು ಒದಗಿಸುವಂತೆ…
ಮಡಿಕೇರಿ NEWS DESK ಜು.11 : ಹೇಮಾವತಿ ನದಿಯ ಹಿನ್ನೀರಿನಲ್ಲಿ ಗುರುವಾರ ರಾತ್ರಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದ ಕೊಡ್ಲಿಪೇಟೆ ಸಮೀಪದ ಜನಾರ್ಧನ ಹಳ್ಳಿಯ ನೀರುಗುಂದ ಗ್ರಾಮದ ನಿವಾಸಿಗಳಾದ ನಾಗರಾಜ್(45) ಮತ್ತು ಶಿವರಾಜ್(50) ಅವರ ಪತ್ತೆ ಕಾರ್ಯ ಚುರುಕುಗೊಂಡಿದೆ. ಶುಕ್ರವಾರ ಸಂಜೆಯವರೆಗೆ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರಿಗೆ ಯಾವುದೇ ಕುರುಹುಗಳು ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ಗ್ರಾಮಸ್ಥರು ತೆಪ್ಪದ ಸಹಾಯದಿಂದ ಹಿನ್ನೀರಿನ 30 ಎಕರೆ ಪ್ರದೇಶದಲ್ಲಿ ಶೋಧ ನಡೆಸಿದರೂ ಪ್ರಯೋಜನವಾಗಿಲ್ಲ. ಶನಿವಾರವೂ ಶನಿವಾರಸಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮ್ಮ ಗ್ರಾಮದ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿರುವ ಕಾರಣ ಗ್ರಾಮಸ್ಥರು ಕೂಡ ನದಿ ದಡದಲ್ಲಿ ಕಾದು ಕುಳಿತ್ತಿದ್ದ ದೃಶ್ಯಗಳು ಕಂಡು ಬಂತು. ಈ ಕುರಿತು ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯರಾಜ್, ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿರುವ ಇಬ್ಬರು ವ್ಯಕ್ತಿಗಳ ಕುಟುಂಬಗಳು ತೀರಾ ಬಡತನದಲ್ಲಿದ್ದು, ಅವರಿಗೆ ದಿಕ್ಕೇ ತೋಚದಂತಾಗಿದೆ. ಜಿಲ್ಲಾಡಳಿತ ನುರಿತ ಈಜುಗಾರರು…






