ಮಡಿಕೇರಿ NEWS DESK ಆ.9 : ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಮಡಿಕೇರಿ ನಗರದಲ್ಲಿರುವ ರಾಜರ ಗದ್ದುಗೆ ಹಾಗೂ ಕೋಟೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಸ್ವಾಮೀಜಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಲವಾರು ಸ್ಮಾರಕಗಳನ್ನು ಸಂರಕ್ಷಿಸುತ್ತಾ ಬಂದಿದೆ. ರಾಜರ ಗದ್ದುಗೆಯಲ್ಲಿ ಒತ್ತುವರಿ ಸೇರಿದಂತೆ ಕೆಲವೊಂದು ಸಮಸ್ಯೆಗಳಿದ್ದು, ನ್ಯಾಯಾಲಯದಲ್ಲೂ ಪ್ರಕರಣ ನಡೆಯುತ್ತಿದೆ. ಆದ್ದರಿಂದ ನ್ಯಾಯಾಲಯದ ಆದೇಶ ಬರುವವರೆಗೂ ಗದ್ದುಗೆಗಳನ್ನು ಸಂರಕ್ಷಿಸುವ ಕಾರ್ಯಗಳನ್ನು ಕೈಗೊಳ್ಳುವಂತಾಗಬೇಕು. ಗದ್ದುಗೆ ಜೀರ್ಣೊದ್ಧಾರ ಸಂಬಂಧ ಶಾಸಕ ಮಂತರ್ ಗೌಡ ಅವರು ಜವಾಬ್ದಾರಿ ತೆಗೆದುಕೊಳ್ಳುವ ಭರವಸೆ ನೀಡಿದ್ದು ಆದಷ್ಟು ಶೀಘ್ರವಾಗಿ ಗದ್ದುಗೆ ಜೀರ್ಣೋದ್ಧಾರ ಕಾರ್ಯ ನಡೆಯುವಂತಾಗಲಿ ಎಂದು ಸುತ್ತೂರು ಶ್ರೀಗಳು ಹೇಳಿದರು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಕೋಟೆ ಹಾಗೂ ಗದ್ದುಗೆಯ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಬೇಕಿದೆ. ಕೋಟೆಗೆ ಅಗತ್ಯ ಸೌಲಭ್ಯ ಒದಗಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸ್ಮಾರಕ ಜಾಗ ಒತ್ತುವರಿ ತೆರವು ಸಂಬಂಧ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲಾಗುವುದು ಎಂದು…
ಲೇಖಕ: admin
ಮಡಿಕೇರಿ NEWS DESK ಆ 9 : ಭಾರತದ ಮೇರು ಕಲಾವಿದೆಯಾಗಿದ್ದ ಎಸ್. ಜಾನಕಿಯವರು ಕೆಲವೇ ವಷ೯ಗಳಿಗೆ ಸಂದ ಗಾಯಕಿಯಾಗಿರದೇ ಮನಸೆಳೆಯುವ ಹಾಡುಗಳ ಮೂಲಕ ಸಾವ೯ಕಾಲಿಕವಾಗಿ ಸಲ್ಲುವ ನಾಡಿನ ಹೆಮ್ಮೆಯ ಗಾಯಕಿಯಾಗಿದ್ದರು. ಎಸ್. ಜಾನಕಿ ದೈಹಿಕವಾಗಿ ಕಣ್ಮರೆಯಾಗಿದ್ದರೂ ಕಲಾವಿದರ ಹಾಡುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಹೇಳಿದ್ದಾರೆ. ನಗರದ ಲಯನ್ಸ್ ಸಬಾಂಗಣದಲ್ಲಿ ಸಮಥ೯ ಕನ್ನಡಿಗರು ಸಂಸ್ಥೆಯ ವತಿಯಿಂದ ಮಡಿಕೇರಿ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿತ ಎಸ್ ಜಾನಕಿ ಗಾನ ನಮನ ಹಾಗೂ ಹಿಮವನ ಪ್ರತಿಭಾ ಸಂಗಮ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಅನಿಲ್, 66 ವಷ೯ಗಳ ಸುಧೀಘ೯ ಕಾಲ ತನ್ನ ಹಾಡುಗಳ ಮಾಧುಯ೯ದ ಮೂಲಕ ಕಲಾಸೇವೆಯಲ್ಲಿ ತೊಡಗಿದ್ದು ಸಾಮಾನ್ಯ ಸಾಧನೆಯಲ್ಲ. ಸಂಗೀತ ಎಂಬುದು ಎಸ್. ಜಾನಕಿಯವರೆಗೆ ದೇವರು ಕೊಟ್ಟ ವರವಾಗಿತ್ತು ಎಂದರು. ಹಾಡುಗಾರರಿಗೆ ಸಕಾ೯ರ ತಾರತಮ್ಯ ಧೋರಣೆ ಮಾಡಿದ್ದನ್ನು ವಿರೋಧಿಸಿದ್ದ ಜಾನಕಿ 3 ವಷ೯ ಕನ್ನಡದಲ್ಲಿ ಹಾಡಲೇ ಇಲ್ಲ. ಇವರ ಮೌನ ಪ್ರತಿಭಟನೆಗೆ…
ಮಡಿಕೇರಿ NEWS DESK ಆ.9 : ವಿಶ್ವ ಆದಿಮಸಂಜಾತರ ಹಕ್ಕುಗಳ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವ ಮಣ್ಣಿನ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ (ಅನಿಮಿಸ್ಟಿಕ್) ಜನಾಂಗ ಕೊಡವರ ಪರವಾದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಭಾರತ ಸರಕಾರ, ಕರ್ನಾಟಕ ಸರಕಾರ ಮತ್ತು ವಿಶ್ವಸಂಸ್ಥೆಗೆ ಸಲ್ಲಿಸಿದರು. “ಕೊಡವರ ಭೂ-ರಾಜಕೀಯ ಸ್ವಾಯತ್ತತೆಯ ಶೋಧ,” ಆದಿಮಸಂಜಾತ ಕೊಡವರಿಗೆ ಸ್ವಯಂ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವಯಂ-ನಿರ್ಣಯದ ಹಕ್ಕುಗಳು, ಆದಿಮಸಂಜಾತ ಮಾನ್ಯತೆಯೊಂದಿಗೆ ವಿಶಿಷ್ಟ ಜನಾಂಗೀಯ ಸಮುದಾಯವಾಗಿ ಕೊಡವರಿಗೆ ಸಾಂವಿಧಾನಿಕ ವಿಶೇಷ ಖಾತರಿ ನೀಡಬೇಕು ಎಂದು ಒತ್ತಾಯಿಸಿದರು. ಈ ಜೀವಮಂಡಲ ಸೃಷ್ಟಿಯ ಕಾಲದಿಂದಲೂ ಕೊಡವ ಮಾತೃಭೂಮಿ ‘ಕೊಡವಲ್ಯಾಂಡ್’ ಅಸ್ತಿತ್ವದಲ್ಲಿದೆ. ಮಾನವ ಜನಾಂಗದ ಮೂಲದಿಂದಲೂ ಕೊಡವ ಜನಾಂಗದ ವಂಶಾವಳಿಯು ಏಕ-ಜನಾಂಗೀಯ ಪ್ರಕೃತಿ ಆರಾಧನೆಯ ನಂಬಿಕೆಯಾಗಿ ವಿಕಸನಗೊಂಡಿದೆ. ನಮ್ಮ ವಂಶಾವಳಿಯು ಜಂಟಿಯಾಗಿ ಮನೆತನಗಳಾಗಿ (ಕ್ಲಾನ್ಗಳು) ವಿಂಗಡಿಸಲ್ಪಟ್ಟಿದೆ. ಪ್ರತಿಯೊಂದು ಮನೆತನವೂ ಪೂರ್ವಜರನ್ನು ಕುಲದೇವರೆಂದು ಪೂಜಿಸುತ್ತದೆ.…
ಮಡಿಕೇರಿ NEWS DESK ಆ.9 : ವಕೀಲರು ಹಾಗೂ ನೋಟರಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ಅವರ ನೂತನ ಕಚೇರಿಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ನಾಪೋಕ್ಲುವಿನಲ್ಲಿ ಇಂದು ಉದ್ಘಾಟಿಸಿ ಶುಭ ಕೋರಿದರು. ಪವನ್ ಪೆಮ್ಮಯ್ಯ ಅವರು ತಮ್ಮ ಕಚೇರಿಯನ್ನು ಇತ್ತೀಚೆಗೆ ಮಡಿಕೇರಿಯಿಂದ ನಾಪೋಕ್ಲುವಿಗೆ ಸ್ಥಳಾಂತರಿಸಿದ್ದರು.
ಮಡಿಕೇರಿ ಆ.8 NEWS DESK : ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆದು, ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ತಮಿಳು ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ಸಿ. ದಿನೇಶ್, ಎನ್ಎಸ್ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್.ವನಿತ್ ಕುಮಾರ್ ಹಾಗೂ ಬುದ್ಧ ನಾಡಭೂಣ ಪ್ರಶಸ್ತಿಗೆ ಭಾಜನರಾದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾಧಕರ ಸನ್ಮಾನವನ್ನು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ., ಸಂಘದ ಸಲಹೆಗಾರರಾದ ಟಿ.ಪಿ.ರಮೇಶ್, ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿಗಳಾದ ಎಂ.ಪಿ.ಕೇಶವ ಕಾಮತ್, ಸಂಘದ ಸ್ಥಾಪಕಾಧ್ಯಕ್ಷ ಎಸ್.ಎ. ಮುರಳೀಧರ್ ಸೇರಿದಂತೆ ಸಂಘದ…
ಸಿದ್ದಾಪುರ ಆ.8 NEWS DESK : ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ವ್ಯಾಪ್ತಿಯಲ್ಲಿ ಮಹಿಳೆ ಮೇಲೆ ದಾಳಿ ನಡೆಸಿದ್ದ ಸುಮಾರು 8 ವರ್ಷ ವಯಸ್ಸಿನ ಚಿರತೆಯನ್ನು ಶುಕ್ರವಾರ ಸಂಜೆ ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ. ಮೂಡಗದ್ದೆ ನಿವಾಸಿ ಗಣೇಶ್ ಅವರ ತೋಟದಲ್ಲಿ ಚಿರತೆ ಪತ್ತೆಯಾಗಿದ್ದು, ಮೂಡಗದ್ದೆ ರಾಮಕೃಷ್ಣ (ಜಯ ) ತೋಟದಲ್ಲಿ ಕೆಲಸಗಾರರನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಇವರ ಪತ್ನಿ ಲೀಲಾವತಿ (59) ಅವರ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಘಟನೆ ಬಳಿಕ ಸ್ಥಳದಲ್ಲಿ ಬೋನು ಇರಿಸಿ, ಕ್ಯಾಮೆರಾ ಟ್ರ್ಯಾಪ್ ಅಳವಡಿಸಿ ಚಿರತೆಯ ಚಲನವಲನದ ಮೇಲೆ ಅರಣ್ಯ ಇಲಾಖೆ ನಿಗಾ ವಹಿಸಿತ್ತು. ಚಿರತೆ ಗಾಯಗೊಂಡಿರುವ ಶಂಕೆ ಹಿನ್ನೆಲೆಯಲ್ಲಿ ಸಾಕಾನೆ ಅಭಿಮನ್ಯು ನೇತೃತ್ವದಲ್ಲಿ ವಿಶೇಷ ಶೋಧ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಚಿರತೆ ಪತ್ತೆಯಾದ ಬಳಿಕ ವೈದ್ಯಾಧಿಕಾರಿ ಡಾ. ರಮೇಶ್ ಅವರು ಡಾರ್ಟ್ ಮೂಲಕ ಅರವಳಿಕೆ ನೀಡಿ, ಅರಣ್ಯ ಸಿಬ್ಬಂದಿ ಸುರಕ್ಷಿತವಾಗಿ ಸೆರೆಹಿಡಿದರು. ಸೆರೆಸಿಕ್ಕ ಚಿರತೆಯನ್ನು ಆರೋಗ್ಯ ತಪಾಸಣೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ…
ಮಡಿಕೇರಿ ಆ.8 NEWS DESK : ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದಲ್ಲಿ ನಡೆದಿದೆ. ನಾಣಚ್ಚಿ ಹಾಡಿಯ ಮಾರಕ್ಕ(51) ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆ. ಅಯ್ಯಪ್ಪ ದೇವರಕಾಡು ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಕಾಡಾನೆ ದಾಳಿ ಮಾಡಿದ್ದು, ಮಾರಕ್ಕ ಅವರಿಗೆ ಕುಟ್ಟ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಡಿ ಭಾಗದ ಕೇರಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಆ.7 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿ.ಕೆ. ಜಗದೀಶ್ ಅವರು ಅಧ್ಯಕ್ಷರಾಗಿ ಹಾಗೂ ರೋಷನ್ ಅನ್ವೇಕರ್ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಡಿಕೇರಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಬಿ.ಕೆ. ಜಗದೀಶ್ ಅವರು ಎರಡನೇ ಬಾರಿಗೆ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಬ್ಯಾಂಕ್ನ ನಿರ್ದೇಶಕರು, ಸದಸ್ಯರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಅಭಿನಂದನೆ ಸಲ್ಲಿಸಿ, ಬ್ಯಾಂಕ್ನ ಮತ್ತಷ್ಟು ಅಭಿವೃದ್ಧಿಗೆ ಶುಭ ಹಾರೈಸಿದ್ದಾರೆ.
ಮಡಿಕೇರಿ ಆ.7 NEWS DESK : ಬಿಡದಿ ಟೌನ್ ಶಿಪ್ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ತೆರಳುತ್ತಿದ್ದ ಕೊಡಗಿನ ರೈತರನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಮತ್ತು ಪೊಲೀಸರ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ರೈತ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ರೈತ ಸಂಘದ ಪ್ರಮುಖರು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರು ಮಾತನಾಡಿ ಕೊಡಗಿನಲ್ಲಿ ಮಾತ್ರ ರೈತರನ್ನು ಬಂಧಿಸಲಾಗಿದೆ, ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು. ಶಾಂತಿಯುತ ಹೋರಾಟಕ್ಕೆ ಹೊರಟಿದ್ದ ರೈತರನ್ನು ಬಂಧಿಸುವ ಮೂಲಕ ಪೊಲೀಸರು ಕೃಷಿಕ ವರ್ಗಕ್ಕೆ ಅವಮಾನ ಮಾಡಿದ್ದಾರೆ. ಕೊಡಗಿನ ಗಡಿಯಲ್ಲಿ ಬಂಧಿಸಿದ ರೈತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಬೇಕಿತ್ತು. ಆದರೆ ಸಂಜೆವರೆಗೆ ಮದುವೆ ಮಂಟಪ, ಪೊಲೀಸ್…
ಮಡಿಕೇರಿ, ಆ.7 NEWS DESK : ಸುತ್ತೂರು ಜಗದ್ಗುರುಗಳು ಆ.8 ರಂದು ಮಡಿಕೇರಿಯ ರಾಜರ ಗದ್ದುಗೆ ಹಾಗೂ ಅರಮನೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಶ್ರೀಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲು ಅಗತ್ಯ ಪೂರ್ವಸಿದ್ಧತೆಗಳ ಕುರಿತು ಸಭೆ ನಡೆಸಿ ಸಿದ್ಧತೆಗಳನ್ನು ಪರಿಶೀಲಿಸಿದರು. ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಯಿತು. ಶ್ರೀಗಳ ಆಗಮನದ ವೇಳೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಕೊಡಗು ವೀರಶೈವ ಮಹಾಸಭಾದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಉಪಾಧ್ಯಕ್ಷ ಹೆಚ್.ಪಿ. ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಹಾಗೂ ಮಡಿಕೇರಿ ವೀರಶೈವ ಸಮಾಜದ ಯುವ ಘಟಕದ ಅಧ್ಯಕ್ಷ ಎಂ. ಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.






