ಮಡಿಕೇರಿ, NEWS DESK ಸೆ. 02- ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಕೌಶಲ್ ಬೋಧ್ ಕಲಿಕೆಯ ಅಂಗವಾಗಿ ನಗರದ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೊಲಗದ್ದೆಯ ನಾಟಿ ಕಾರ್ಯದ ಅನುಭವವನ್ನು ಕಲ್ಪಿಸಿಕೊಡಲಾಯಿತು. ಕಗ್ಗೋಡ್ಲು ಗ್ರಾಮದ ನಿಯತಾ ದೇವಯ್ಯ ಸೋಮಣ್ಣ ಅವರ ಗದ್ದೆಯಲ್ಲಿ 7ನೇ ತರಗತಿಯ 70 ವಿದ್ಯಾರ್ಥಿಗಳು ,ಶಿಕ್ಷಕರ ತಂಡವು ಭಾಗವಹಿಸಿತ್ತು. ಮಕ್ಕಳು ರೈತರೊಂದಿಗೆ ಗದ್ದೆಗಿಳಿದು ಭತ್ತದ ಸಸಿಗಳನ್ನು ಅಗೆ ತೆಗೆದು ನಾಟಿ ಮಾಡುವುದರ ಮೂಲಕ ಕೃಷಿ ಚಟುವಟಿಕೆಯನ್ನು ಸ್ವಯಂ ಅನುಭವಿಸಿದರು. ಶಿಕ್ಷಕರು ಮಕ್ಕಳಿಗೆ ಭತ್ತದ ಬೆಳೆ, ನಾಟಿ ವಿಧಾನ, ಗದ್ದೆಯ ಮಹತ್ವ ಮತ್ತು ರೈತರ ಶ್ರಮದ ಬಗ್ಗೆ ಮಾಹಿತಿ ನೀಡಿದರು. ಕೆಸರುಮಯವಾದ ಗದ್ದೆಯಲ್ಲಿ ಮಕ್ಕಳು ಉತ್ಸಾಹದಿಂದ ನಾಟಿ ಮಾಡಿದರು. . ಪುಸ್ತಕದ ಕಲಿಕೆಯ ಜೊತೆಗೆ ಇಂತಹ ಕೌಶಲ್ಯಾಧಾರಿತ ಕಲಿಕೆಯು ಮಕ್ಕಳಲ್ಲಿ ಶ್ರಮದ ಮೌಲ್ಯ, ಆಹಾರದ ಮಹತ್ವ ಮತ್ತು ಕೃಷಿಯ ಬಗ್ಗೆ ಗೌರವ ಮೂಡಿಸುತ್ತದೆ. ಈ ಚಟುವಟಿಕೆಯು ಮಕ್ಕಳಿಗೆ ಅವಿಸ್ಮರಣೀಯ ಅನುಭವವನ್ನು ನೀಡಿತು
ಲೇಖಕ: admin
ಮಡಿಕೇರಿ, NEWS DESK ಸೆ.2: ಯುವ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲೆಯ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಉತ್ತೇಜಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದರು. ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ನಾಗರಿಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೋಂದಣಿಗೆ ಆಧಾರ್ ಕಡ್ಡಾಯವಾಗಿದ್ದು, 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸಂಘದ ಸದಸ್ಯತ್ವ ಪಡೆಯಲು ಅರ್ಹರಾಗಿದ್ದಾರೆ. ಒಂದು ಸಂಘದ ಘಟಕ ರಚನೆಗೆ ಕನಿಷ್ಠ 100ರಿಂದ 200 ಯುವಜನರು ಸದಸ್ಯರಾಗಿರಬೇಕು. ಪ್ರತಿ ಸದಸ್ಯರು ಗುರುತಿನ ಚೀಟಿಗಾಗಿ ರೂ.10 ನೋಂದಣಿ ಶುಲ್ಕ ಪಾವತಿಸಬೇಕು. ಅರ್ಜಿದಾರರು ಸಂಬಂಧಪಟ್ಟ ಗ್ರಾಮ ಪಂಚಾಯಿತಿ…
ಸುಂಟಿಕೊಪ್ಪ, NEWS DESK ಸೆ.2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜನತಾ ಕಾಲೋನಿ ನಿವಾಸಿ ಎಲ್.ಸಿ. ಅವರ ಕುಟುಂಬಕ್ಕೆ ನೆರವಿನ ಹಸ್ತ ನೀಡಲಾಯಿತು. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಎಲ್.ಸಿ. ಅವರ ಮನೆಯ ಗೋಡೆ ಕುಸಿತಗೊಂಡ ಹಿನ್ನೆಲೆಯಲ್ಲಿ, ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.10,000 ಸಹಾಯಧನ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಸುಂಟಿಕೊಪ್ಪ ವಲಯದ ಮೇಲ್ವಿಚಾರಕರಾದ ಸಂತೋಷ್ ನಾಯಕ್, ಒಕ್ಕೂಟದ ಅಧ್ಯಕ್ಷೆ ಆರ್. ಶುಭ ಹಾಗೂ ಸೇವಾ ಪ್ರತಿನಿಧಿ ಎಂ.ಸಿ. ನಂದಿನಿ ಅವರು ಎಲ್.ಸಿ. ಅವರ ಮನೆಗೆ ಭೇಟಿ ನೀಡಿ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.
ಸುಂಟಿಕೊಪ್ಪ, NEWS DESK ಸೆ.2: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ ವತಿಯಿಂದ ಇತ್ತೀಚೆಗೆ ವನಮಹೋತ್ಸವ ಹಾಗೂ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಯಿತು. ಗುಡ್ಡೆಹೊಸೂರಿನ ಖಾಸಗಿ ರೇಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಯನ್ಸ್ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ಅವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನ ರೈತರಿಗೆ 200ಕ್ಕೂ ಮಿಕ್ಕಿ ಗಿಡಗಳನ್ನು ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ 60 ವರ್ಷ ಪೂರೈಸಿದ ಎಲ್ಲಾ ಸದಸ್ಯರನ್ನು ಸನ್ಮಾನಿಸಿ, ಅವರ ಸಾಧನೆಯನ್ನು ಪ್ರಸ್ತುತಪಡಿಸಲಾಯಿತು. ಸದಸ್ಯರಿಗೆ ವಿವಿಧ ರೀತಿಯ ಆಟೋಟಗಳನ್ನು ಸಹ ಏರ್ಪಡಿಸಲಾಗಿತ್ತು. ಹಿರಿಯ ಸದಸ್ಯರಾದ ಕೋಟೇರ ಶಂಭುಚಂಗಪ್ಪ ಹಾಗೂ ರಮ್ಯ ಅವರ ಸೇವೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಲಯನ್ಸ್ ಅಧ್ಯಕ್ಷ ಎಸ್.ಜಿ. ಶ್ರೀನಿವಾಸ್ ವಹಿಸಿ, 50ನೇ ವರ್ಷದಲ್ಲಿರುವ ಸಂಸ್ಥೆಯ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರಿಸಿದರು. ವೇದಿಕೆಯಲ್ಲಿ ಲಯನ್ಸ್ ಕಾರ್ಯದರ್ಶಿ ಗ್ಲೇನ್ ಮೇನೇಜೆಸ್, ಹಿರಿಯ ಸದಸ್ಯರಾದ ಡಾ. ಯಶೋಧರ ಪೂಜಾರಿ, ಕೆ.ಡಿ. ರಾಮಯ್ಯ,…
ಮಡಿಕೇರಿ, NEWS DESK ಸೆ.2 – ಮದೆನಾಡಿನ ಯುವ ಯೋಗಸಾಧಕಿ ಸಿಂಚನಾಳಿಗೆ ಯೋಗ ಕ್ಷೇತ್ರದಲ್ಲಿ ಲಭಿಸಿರುವ ಏಷ್ಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ನ ದಾಖಲೆಯನ್ನು ನಗರದ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಹಸ್ತಾಂತರಿಸಲಾಯಿತು ನಗರದ ರೋಟರಿ ಸ ಆಯೋಜಿತ ಕಾಯ೯ಕ್ರಮದಲ್ಲಿ ಮದೆನಾಡಿನ ಬಿಜಿಎಸ್ ಶಾಲೆಯ 7 ನೇ ತರಗತಿ ವಿದ್ಯಾಥಿ೯ನಿ ಸಿಂಚನಾಳಿಗೆ ದೊರೆತ ಪ್ರತಿಷ್ಟಿತ ಪ್ರಶಸ್ತಿಗಳನ್ನು ಗಣ್ಯರು ಹಸ್ತಾಂತರಿಸಿದರು. ಕಳೆದ 3 ತಿಂಗಳಿನಲ್ಲಿ ತನ್ನ ಯೋಗಾಸನಕ್ಕಾಗಿ ಮದೆನಾಡಿನ ವಿದ್ಯಾಥಿ೯ನಿ ಸಿಂಚನಾಳಿಗೆ ಏಷ್ಯಾ ಬುಕ್ ಆಫ್ ರೆಕಾಡ್ಸ್ ಮತ್ತು ಇಂಡಿಯಾ ಬುಕ್ ಆಫ್ ರೆಕಾಡ್ಸ್೯ ಪ್ರಶಸ್ತಿಗಳು ಲಭಿಸಿದ್ದವು. ಈ ಪ್ರಶಸ್ತಿಗಳನ್ನ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ಸಿಂಚನಾಳಿಗೆ ಪ್ರದಾನ ಮಾಡಲಾಯಿತು. ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಯೋಗಭ್ಯಾಸಿ , ವಕೀಲ ಜಿ.ಆರ್.ರವಿಶಂಕರ್, ಯೋಗ ಎಂದರೆ ಕೇವಲ ದೇಹವನ್ನು ಬಗ್ಗಿಸುವುದ ಅಥವಾ ಕಷ್ಟಕರವಾದ ಆಸನಗಳನ್ನು ಮಾಡುವುದೋ ಅಲ್ಲ, ಯೋಗ ಎಂದರೆ ಒಗ್ಗೂಡುವಿಕೆಯಾಗಿದೆ. ನಮ್ಮ ಶರೀರ, ಮನಸ್ಸು ಮತ್ತು ಆತ್ಮವನ್ನು ಒಂದೇ…
ಬೆಂಗಳೂರು, NEWS DESK ಸೆ.02: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಂಡಿರುವ ರಸ್ತೆ ಹಾಗೂ ಸೇತುವೆ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಮತ್ತು ಕೆಲವು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಶಾಸಕ ಪೊನ್ನಣ್ಣ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡು, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಂಡಿರುವ ಕಾವೇರಿ ನದಿ ಸ್ವಚ್ಛತೆ ಹಾಗೂ ಪುನರ್ವಸತಿ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಯಿತು. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಶೀಘ್ರವಾಗಿ…
ಮಡಿಕೇರಿ NEWS DESK ಸೆ.2: ಕೊಡವ ಪ್ರಾಂತ್ಯದಾದ್ಯಂತ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ವತಿಯಿಂದ ಹಮ್ಮಿಕೊಂಡಿರುವ ಶಾಂತಿಯುತ ಮಾನವ ಸರಪಳಿ ಹಾಗೂ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30ಕ್ಕೆ ಸೂರ್ಲಬ್ಬಿನಾಡ್ ಹಾಗೂ ಗಡಿನಾಡಿನ ಮಾದಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಕೊಡವ ತಿಳಿಸಿದ್ದಾರೆ. ಕೊಡವಲ್ಯಾಂಡ್ಗೆ ಭೂ-ರಾಜಕೀಯ ಸ್ವಾಯತ್ತತೆ, ಸಂವಿಧಾನದ ವಿಧಿ 371ರ ಅಡಿಯಲ್ಲಿ ಸ್ವಯಂ ಆಡಳಿತ, ವಿಶ್ವಸಂಸ್ಥೆಯ ಸನ್ನದು ಹಾಗೂ ಭಾರತೀಯ ಸಂವಿಧಾನದ ಅಡಿಯಲ್ಲಿ ಕೊಡವರನ್ನು ಆದಿಮಸಂಜಾತ ಸಮುದಾಯವಾಗಿ ಗುರುತಿಸಿ ಸಾಂವಿಧಾನಿಕ ರಕ್ಷಣೆ ಮತ್ತು ವಿಶೇಷ ಮಾನ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಜನಸಂಪರ್ಕ ಅಭಿಯಾನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೊಡವರ ಧಾರ್ಮಿಕ ಸಂಸ್ಕಾರವಾದ ‘ಕೋವಿ-ತೋಕ್’ (ಬಂದೂಕು) ಸಂಪ್ರದಾಯವನ್ನು ಸಂವಿಧಾನದ ವಿಧಿ 25, 26 ಮತ್ತು 28ರ ಅಡಿಯಲ್ಲಿ ಮುಂದುವರಿಸಲು ಅವಕಾಶ ನೀಡಬೇಕು. ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯಕ್ಕೆ ನೀಡಲಾಗಿರುವ ‘ಸಂಘ’ ಕ್ಷೇತ್ರದ ಮಾದರಿಯಲ್ಲಿ, ಆದಿಮಸಂಜಾತ ಅನಿಮಿಸ್ಟಿಕ್ (ಪ್ರಕೃತಿ ಆರಾಧಕ) ಕೊಡವ ಸಮುದಾಯಕ್ಕೆ ಸಂಸತ್ತು ಮತ್ತು…
ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಾವಳಿ), 2000 ನಿಯಮಗಳನ್ನು ಸಾರ್ವಜನಿಕರು ಹಾಗೂ ಕಾರ್ಯಕ್ರಮಗಳ ಆಯೋಜಕರು ಕಡ್ಡಾಯವಾಗಿ ಪಾಲಿಸುವಂತೆ ಕೊಡಗು ಜಿಲ್ಲಾ ಪೊಲೀಸರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಡಿಜೆ ಅಥವಾ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ವಿವಿಧ ಪ್ರದೇಶಗಳಿಗೆ ನಿಗದಿಪಡಿಸಿರುವ ಡೆಸಿಬಲ್ ಮಿತಿಯನ್ನು ಮೀರಿಯೂ ಧ್ವನಿ ಹೊರಸೂಸಬಾರದು ಎಂದು ಸೂಚಿಸಲಾಗಿದೆ. ವಸತಿ ಪ್ರದೇಶಗಳಲ್ಲಿ ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್; ವಾಣಿಜ್ಯ ಪ್ರದೇಶಗಳಲ್ಲಿ ಹಗಲು 65, ರಾತ್ರಿ 55 ಡೆಸಿಬಲ್; ಕೈಗಾರಿಕಾ ಪ್ರದೇಶಗಳಲ್ಲಿ ಹಗಲು 75, ರಾತ್ರಿ 70 ಡೆಸಿಬಲ್ ಹಾಗೂ ಶಾಂತ ಪ್ರದೇಶಗಳಾದ ಆಸ್ಪತ್ರೆ, ಶಾಲೆ ಮತ್ತಿತರ ಸ್ಥಳಗಳ ಸುತ್ತಮುತ್ತ ಹಗಲು 50, ರಾತ್ರಿ 40 ಡೆಸಿಬಲ್ ಮಿತಿ ನಿಗದಿಪಡಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಆಯೋಜಕರು ಹಾಗೂ ಮಾಲೀಕರ ವಿರುದ್ಧ ಪರಿಸರ ಸಂರಕ್ಷಣಾ…
ಮೂರ್ನಾಡು ಸೆ.1 NEWS DESK : ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 102ನೇ ವಾರ್ಷಿಕ ಕೈಲ್ ಪೊಳ್ದ್ ಹಬ್ಬದ ಅಂಗವಾಗಿ ಆಟೋಟಗಳ ಕಾರ್ಯಕ್ರಮವು ಸೆ.3ರಂದು ನಡೆಯಲಿದೆ. ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಆಟೋಟಗಳ ಕಾರ್ಯಕ್ರಮವನ್ನು ಅಪರಾಹ್ನ 1.30 ಗಂಟೆಗೆ ಕೊಡಂಬೂರು ಕಾಫಿ ಬೆಳೆಗಾರ ಬಡುವಂಡ ಬಿ. ಮುತ್ತಪ್ಪ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಾಗಿ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಮಹನೀಯರು, ಮಹಿಳೆಯರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಓಟದ ಸ್ಪರ್ಧೆಗಳು ನಡೆಯಲಿವೆ. ಅಲ್ಲದೆ, ಬಾಂಬ್ ಇನ್ ದಿ ಸಿಟಿ, ಭಾರದ ಕಲ್ಲು ಎಸೆತ, ನಿಂಬೆಹಣ್ಣು-ಚಮಚ ಓಟ, ವಾದ್ಯದ ಕುಣಿತ ಹಾಗೂ ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಪರಾಹ್ನ 5.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ. ಕೆಂಬಡತಂಡ ಗೌರವ್ ಅಯ್ಯಪ್ಪ ಹಾಗೂ ಮಡಿಕೇರಿ ವೈದ್ಯಕೀಯ ವಿದ್ಯಾಲಯದ ಖ್ಯಾತ ಅರಿವಳಿಕೆ ತಜ್ಞ ಡಾ. ದಂಬೆಕೋಡಿ ಎಸ್. ಅಯ್ಯಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಹಕಾರ…
ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ“ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್, ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಕಲಾವತಿ ಪಿ, ಗ್ಯಾರಂಟಿ ಯೋಜನೆಗಳ…






