ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೌರವ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ, ಮರೆಯಲು ಅಸಾಧ್ಯವಾದಂತಹ ದಿವ್ಯ ಚೇತನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ನಾಡಿಗೆ ಮಾಡಿದ ಸೇವೆಯನ್ನು ಎಷ್ಟು ವರ್ಣಿಸಿದರೂ ಸಾಲದು. ಇಂದು ಶತಮಾನೋತ್ಸವ ಆಚರಿಸುತ್ತಿರುವ ಎಲ್ಲ ಸಂಘ-ಸಂಸ್ಥೆಗಳನ್ನು ಪ್ರಾರಂಭಿಸಿದ್ದು, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, “ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ” ಎಂದರು. ಅದಕ್ಕಾಗಿ 1923ರಲ್ಲಿ ಹೊಸ,…
ಲೇಖಕ: admin
ಮಡಿಕೇರಿ ಜೂ.4 NEWS DESK : ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೌತಿಕ ಸೌಲಭ್ಯಗಳು ಉತ್ತಮವಾಗಿದ್ದರು ಸಹ ದಾಖಲಾತಿ ಕುಂಠಿತಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಎಸ್.ಡಿ ಎಂ.ಸಿ ಅಧ್ಯಕ್ಷರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಪೋಷಕರುಗಳ ಸಭೆ ಕರೆದು ದಾಖಲಾತಿ ಹೆಚ್ಚಿಸುವುದರ ಬಗ್ಗೆ ಚರ್ಚಿಸಿದರು. ಶಾಲೆಯ ಸಭಾಂಗಣಕ್ಕೆ ಇಂಟರ್ ಲಾಕ್ ಅಳವಡಿಸಲು ಊರಿನ ದಾನಿಗಳ ಸಹಾಯವನ್ನು ಪಡೆದುಕೊಳ್ಳುವಂತೆಯು, ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವ ಜವಾಬ್ದಾರಿ ಊರಿನ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿ ಹೇಳಿದರು. ಪ್ರಭಾರ ಮುಖ್ಯಶಿಕ್ಷಕರಾದ .ಕೆ.ಎಂ.ಅಶ್ರಫ್, ಸಹಶಿಕ್ಷಕರುಗಳಾದ ಕೆ.ಆರ್.ದನಿತ, ಪಿ.ಎಲ್.ಗಾನವಿ ಹಾಜರಿದ್ದರು.
ಮಡಿಕೇರಿ ಜೂ.4 NEWS DESK : ವಿಶ್ವ ಪರಿಸರ ದಿನದ ಪ್ರಯುಕ್ತ ಬ್ರಹ್ಮಾಕುಮಾರೀಸ್ ಮಡಿಕೇರಿ ಶಾಖೆ ಸಭಾಂಗಣದಲ್ಲಿ ಜೂ.5 ರಂದು ಶ್ರೀ ಗಂಧದ ಸಸಿಗಳು ಹಾಗೂ ಮಾವಿನ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು. ಬೆಳಿಗ್ಗೆ 11 ಗಂಟೆಗೆ ಸಸಿಗಳನ್ನು ಪಡೆಯಬಹುದು, ಆಸಕ್ತರು ತಮ್ಮ ಹೆಸರು ವಿಳಾಸ ಹಾಗೂ ಮೊಬೈಲ್ ನಂಬರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿಗಾಗಿ 6 3 6 2 3 4 01 4 8 ಸಂಪರ್ಕಿಸಬಹುದಾಗಿದೆ ಎಂದು ಶಾಖೆಯ ಪ್ರಮುಖರು ತಿಳಿಸಿದರು.
ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿದ್ದು, ಮಡಿಕೇರಿ ನಗರಸಭೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮಳೆ ನೀರು ಸರಾಗವಾಗಿ ಹರಿಯಲು ಅನುಕೂಲವಾಗುವಂತೆ ರಾಜಕಾಲುವೆ ಮತ್ತು ಚರಂಡಿಗಳ ಶುಚಿತ್ವಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 10 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರಿಗೆ ಉತ್ತರ ನೀಡಿದ ಪೌರಾಯುಕ್ತ ಕೆ.ಆರ್.ರಮೇಶ್ ಅವರು ಎಲ್ಲಾ ವಾರ್ಡ್ಗಳಿಗೂ ಸಿಬ್ಬಂದಿಯನ್ನು ನೇಮಿಸಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದರು. ರಾಜ ಕಾಲುವೆ ಮತ್ತು ಚರಂಡಿ ಶುಚಿತ್ವಕ್ಕೆ 10 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿ ನಡೆಸಲಾಗುತ್ತಿದೆ. ಇಂದಿರಾನಗರ, ಮಂಗಳದೇವಿ ನಗರ, ಚಾಮುಂಡೇಶ್ವರಿ ನಗರ ಹಾಗೂ ಆಝಾದ್ ನಗರಗಳಲ್ಲಿ ಅಪಾಯಕಾರಿ ಪ್ರದೇಶಗಳಲ್ಲಿರುವ ಮನೆಗಳಿಗೆ ನೋಟಿಸ್ ನೀಡಲು ತಯಾರಿ ನಡೆಸಲಾಗಿದೆ. ಒಟ್ಟು 6 ಸಮುದಾಯ ಭವನಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ನಗರಸಭೆಯ…
ಸುಂಟಿಕೊಪ್ಪ NEWS DESK ಜೂ.4 : ಕಾಡಾನೆಯೊಂದು ಅಸ್ವಾಭಾವಿಕವಾಗಿ ಸಾವಿಗೀಡಾಗಿರುವ ಘಟನೆ ಸುಂಟಿಕೊಪ್ಪ ಸಮೀಪ 7ನೇ ಹೊಸಕೋಟೆಯಲ್ಲಿ ನಡೆದಿದೆ. ಸುಮಾರು 25 ವರ್ಷದ ಕಾಡಾನೆ ಬುಧವಾರ ರಾತ್ರಿ ಕೆಸರಿನಲ್ಲಿ ಸಿಲುಕಿ ಮೇಲೆ ಬಾರಲಾಗದೆ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಗುರುವಾರ ಈ ಘಟನೆ ಬೆಳಕಿಗೆ ಬಂದಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅರಣ್ಯ ಇಲಾಖೆಯ ವೈದ್ಯ ಡಾ.ಮುಜೀಬ್ ಅವರು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯ ಸಂಸ್ಕಾರ ಮಾಡಲಾಯಿತು. ಎಸಿಎಫ್ ನವೀನ್ಕುಮಾರ್, ಕುಶಾಲನಗರ ವಲಯ ಆರ್ಎಫ್ಓ ರಕ್ಷಿತ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದರು.
ಮಡಿಕೇರಿ NEWS DESK ಜೂ.4 : ಲೋಕಸೇವಾ ಆಯೋಗದ ಐಎಎಸ್ ಮತ್ತು ಐಪಿಎಸ್ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಅನುಕೂಲವಾಗುವಂತೆ ಬೆಂಗಳೂರಿನ ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿ ಮಧ್ಯಮ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 8ನೇ ಬ್ಯಾಚ್ ನ ಉಚಿತ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ.ಆರ್.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ನಗರದ ವಿಜಯನಗರ ಬಡಾವಣೆಯ ಚಂದ್ರಾ ಲೇಔಟ್ ನಲ್ಲಿರುವ ವಾಸವಿ ಅಕಾಡೆಮಿ ಈಗಾಗಲೇ ಹಲವು ತಂಡಗಳಿಗೆ ಉತ್ತಮ ಶಿಕ್ಷಣ ನೀಡಿದೆ. ಇದೀಗ 2027ರಲ್ಲಿ ನಡೆಯುವ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಯಾವುದೇ ಪದವೀಧರರು ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶವಿದೆ. 2027ರಲ್ಲಿ ಪರೀಕ್ಷೆ ಬರೆಯುವ ಆಸಕ್ತ ವಿದ್ಯಾರ್ಥಿಗಳಿಗೆ ಮಾತ್ರ ತರಬೇತಿ ನೀಡಲಾಗುತ್ತಿದ್ದು, ಎಲ್ಲಾ ತರಗತಿಗಳು ಸಂಪೂರ್ಣ ಉಚಿತವಾಗಿರುತ್ತದೆ. ಯಾವುದೇ ಸಮುದಾಯದ…
ಮಡಿಕೇರಿ NEWS DESK ಜೂ.4 : ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸ್ಥಳೀಯ ಆದಿಮಸಂಜಾತ ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ ಮಾಡಬೇಕು, 2027ರ ಜನಗಣತಿ ಹಾಗೂ ರಾಷ್ಟ್ರೀಯ ಜಾತಿ ಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಯಲ್ಲಿ ಸಂಶಯಾಸ್ಪದ ಪೌರತ್ವ ಹೊಂದಿರುವವರನ್ನು ಸೇರ್ಪಡೆಗೊಳಿಸುತ್ತಿರುವುದರಿಂದ ಕೊಡವ ಭೂಮಿಯು ದೊಡ್ಡ ಪ್ರಮಾಣದ ಜನಸಂಖ್ಯಾ ಬದಲಾವಣೆಯನ್ನು ಎದುರಿಸುತ್ತಿದೆ. ಈ ಅಕ್ರಮ ಮತದಾರರ ಗುರುತಿನ ಚೀಟಿಗಳೇ ಕೊಡವರ ರಾಜಕೀಯ ಅಸ್ತಿತ್ವದ ವಿರೂಪಕ್ಕೆ ಮೂಲ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಭಾರತದ ಇತರ ರಾಜ್ಯಗಳ ಜನರು ತಮ್ಮ ತವರು ಜಿಲ್ಲೆಯಲ್ಲಿ ಮಾತ್ರವಲ್ಲದೆ ಕೊಡಗು ಜಿಲ್ಲೆಯಲ್ಲಿ ಕೂಡ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಹೊಂದಿದ್ದಾರೆ. ಚುನಾವಣೆಯ…
ಕುಶಾಲನಗರ ಜೂ.3 NEWS DESK : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆ ನಗರ ಕಾಂಗ್ರೆಸ್ ವತಿಯಿಂದ ಕುಶಾಲನಗರದ ಕಾರ್ಯಪ್ಪ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಅವರ ನೇತೃತ್ವದಲ್ಲಿ ಕುಶಾಲನಗರ ನಗರ ಕಾಂಗ್ರೆಸ್ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಪರವಾಗಿ ಘೋಷಣೆಗಳನ್ನು ಕೂಗಿ, ಸಿಹಿ ವಿತರಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಲಿದೆ ಎಂದರು. ಕೂಡಾ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ ಮಾತನಾಡಿ, ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು. ಹಾಗೆಯೇ ಡಾ.ಮಂತರ್ ಗೌಡರವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು. ಮಾಜಿ ಕೂಡಾ ಅಧ್ಯಕ್ಷರಾದ ಮಂಜುನಾಥ್ ಗುಂಡೂರಾವ್ ಮಾತನಾಡಿ, ಜೆಲ್ಲೆಯ ಎರಡೂ ಶಾಸಕರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ನೂತನ ಮುಖ್ಯಮಂತ್ರಿಗಳು ನಾಂದಿಯಾಡಬೇಕು…
ಸುಂಟಿಕೊಪ್ಪ ಜೂ.3 NEWS DESK : ಸುಂಟಿಕೊಪ್ಪ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನಲೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರುಗಳಿಗೆ ಘೋಷಣೆಗಳನ್ನು ಕೂಗುತ್ತ ಪಟಾಕಿ ಸಿಡಿಸಿ, ಸಿಹಿಹಂಚಿ ಸಂಭ್ರಮಾಚರಣೆಯನ್ನು ನಡೆಸಿದರು. ಕಾಂಗ್ರೆಸ್ ಸುಂಟಿಕೊಪ್ಪ ನಗರಾಧ್ಯಕ್ಷ ರಫೀಕ್ಖಾನ್ ಸೇರಿದಂತೆ ಕಾರ್ಯಕರ್ತರಗಳು ಕನ್ನಡವೃತ್ತದಲ್ಲಿ ಜಮಾವಣೆಗೊಂಡ ಪಕ್ಷದ ಶಲ್ಯವನ್ನು ಧರಿಸಿ ದೇಶದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲಿಕಾರ್ಜಖರ್ಗೆ, ರಾಹುಲ್ಗಾಂಧಿ ರಾಜ್ಯದ ನಾಯಕರುಗಳಾದ ಸಿದ್ಧರಾಮಯ್ಯ ಹಾಗೂ ಶಾಸಕರುಗಳಾದ ಡಾ.ಮಂತರ್ ಗೌಡ , ಎ.ಎಸ್.ಪೊನ್ನಣ್ಣ ಅವರುಗಳಿಗೆ ಜಯಘೋಷಗಳನ್ನು ಕೂಗಿದರಲ್ಲದೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್, ಗ್ರಾ.ಪಂ.ಮಾಜಿ ಸದಸ್ಯ ಕೆ.ಎಂ.ಆಲಿಕುಟ್ಟಿ,ಹೋಬಳಿ ಅಧ್ಯಕ್ಷ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಯಂಕನ. ಶ್ರೀರಾಮ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಯಂಕನ ಕೌಶಿಕ್,ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಜೀಜ್,ಕಾನ್ಬೈಲ್ ವಿಭಾಗದ ಅಧ್ಯಕ್ಷ ಆದಂ, ಮಹಿಳಾ ಘಟಕದ ಅಧ್ಯಕ್ಷೆ ರಮಣಿ,…
ವಿರಾಜಪೇಟೆ ಜೂ.3 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ, ಜನಪರ ನಾಯಕ, ಪಕ್ಷಬೇದ ಮರೆತು ಕಾರ್ಯನಿರ್ವಹಿಸುತ್ತಿರುವ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರಕಲೆಂದು ಕೆದಮುಳ್ಳೂರು ವಲಯ ಕಾಂಗ್ರೆಸ್ ವತಿಯಿಂದ ಕೆದಮೂಳ್ಳೂರು ಶ್ರಿ ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭ ಕೆದಮುಳ್ಳೂರು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಡಿಕೇರಿಯಂಡ ಮಹೇಶ್. ಕೆಡಿಪಿ ಸದಸ್ಯರಾದ ಮಾಳೆಟಿರ ಪ್ರಶಾಂತ್ ಉತ್ತಪ್ಪ. ನಿಕಟಪೂರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಳೆಟಿರ ಜಫ್ರಿ ಉತ್ತಪ್ಪ. ನಿಕಟಪೂರ್ವ ಗ್ರಾಮ ಪಂಚಾಯತ್ ಸದಸ್ಯರಾದ ಮೀತಲ್ತಂಡ ಇಸ್ಮಾಯಿಲ್. ಬೂತ್ ಸಮಿತಿ ಅಧ್ಯಕ್ಷ ಮಾಳೆಟಿರ ಶುಭ ಸುಬ್ಬಯ್ಯ, ಕರಿನೆರವಂಡ ಜಾಲು ಚಂಗಪ್ಪ, ಪಕ್ಷದ ಮುಖಂಡರುಗಳಾದ ಕರಿನೆರವಂಡ ಮಿಟ್ಟು ಅಯ್ಯಪ್ಪ, ಮಾಳೆಟಿರ ಗಣೇಶ್, ಕರಿನೆರವಂಡ ಜಿತನ್, ದೀಪಕ್, ಮಾಳೆಟಿರ ವಿಜಯ್ ಮಂದಣ್ಣ, ಮಾಳೆಟಿರ…






