ಲೇಖಕ: admin

ಮಡಿಕೇರಿ ಡಿ.31 NEWS DESK : ನಗರದ ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಜ.8 ರಂದು ಮಡಿಕೇರಿಯಲ್ಲಿ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ದೈವಜ್ಞ ಬ್ರಾಹ್ಮಣ ಕಟ್ಟಡ ಸಮಿತಿ ಅಧ್ಯಕ್ಷ ಬಿ.ಹೆಚ್.ಉಲ್ಲಾಸ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಫಲಾನ್ಯಾನ, ಗುರುಗಣಪತಿ ಪೂಜೆ, ಸ್ವಸ್ತಿ ಪೂಣ್ಯಾವಾಚನ, ಸತ್ಯನಾರಾಯಣ ವೃತ ಕಥಾ ಪ್ರಾರಂಭ ನಡೆಯಲಿದೆ ಎಂದು ತಿಳಿಸಿದರು. ಮಧ್ಯಾಹ್ನ ಅನ್ನದಾನ ನಡೆಯಲಿದ್ದು, ಸಂಜೆ 4.30 ಗಂಟೆಗೆ ಶ್ರೀಗಳ ಪುರಪ್ರವೇಶವಾಗಲಿದೆ. ನಂತರ ಪೂರ್ಣ ಕುಂಭ ಮೆರವಣಿಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ನಡೆಯಲಿದೆ. ಬಳಿಕ ಸಮಾಜದ ವತಿಯಿಂದ ಶ್ರೀಗಳಿಗೆ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಲಿದೆ.…

Read More

ಬೆಂಗಳೂರು ಡಿ.31 NEWS DESK : 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ – ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.  ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.  ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರನ್ನು ಸಜ್ಜುಗೊಳಿಸಲಾಗುತ್ತಿದೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಪೊಲೀಸರು ನೀಡುವ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಿ, ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸಿ ಎಂದು ಎಂದು ತಿಳಿಸಿದರು.

Read More

ಮಡಿಕೇರಿ ಡಿ.31 NEWS DESK : ಕುಶಾಲನಗರದ ಹೋಟೆಲ್ ಉದ್ಯಮಿ ಅತಿಥಿ ಭಾಸ್ಕರ್ ಅವರು ಅನಾರೋಗ್ಯದಿಂದ ಇಂದು (ಡಿ.31) ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪಾರ್ಥಿವ ಶರೀರ ಮಧ್ಯಾಹ್ನ 3 ಗಂಟೆ ವೇಳೆಗೆ ಕುಶಾಲನಗರ ತಲುಪಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  ಮಡಿಕೇರಿಯಲ್ಲಿ ಹಲವು ವರ್ಷಗಳ ಕಾಲ ಅತಿಥಿ ಹೋಟೆಲ್ ನಡೆಸುತ್ತಿದ್ದ ಭಾಸ್ಕರ್ ಅವರು ನಂತರ ಕುಶಾಲನಗರದ ಪ್ರವೇಶದಲ್ಲಿ ಅತಿಥಿ ರೆಸ್ಟೋರೆಂಟ್ ಆರಂಭ ಮಾಡಿದ್ದರು. ಕ್ರಿಯಾಶೀಲ ಪ್ರವಾಸೋದ್ಯಮಿ ಆಗಿದ್ದ ಭಾಸ್ಕರ್ ಕೂರ್ಗ್ ಹೋಟೆಲ್ ರೆಸಾರ್ಟ್ ಅಸೋಸಿಯೇಷನ್ ನಲ್ಲಿ ಸಕ್ರಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಭಾಸ್ಕರ್ ನಿಧನಕ್ಕೆ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕಾರ್ಯಪ್ಪ, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Read More

ನಾಪೋಕ್ಲು ಡಿ.31 NEWS DESK :  ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ಗೆಲುವು ಸಾಧಿಸುವುದರ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ.  ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಕೋಲಾರ ಜಿಲ್ಲಾ ಮಾಸ್ಟರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕೋಲಾರದಲ್ಲಿ ಜರುಗಿದ 44 ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ಗೆಲುವು ಸಾಧಿಸುವುದರ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಕೊಡಗಿನ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾದವರಲ್ಲಿ ನಾಂಗಾಲ, ಬಿಟ್ಟಂಗಾಲಾ, ಚೇಮಿರ ಸೀತಮ್ಮ, ಪ್ರೇಮ ತಟ್ಟೆ ಎಸೆತ ಪ್ರಥಮ, ಗುಂಡು ಎಸೆತ ಪ್ರಥಮ, ಜಾವೆಲಿನ್ ಎಸೆತ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ  ಮನು ಜಾವಲಿನ್ ಎಸೆತದಲ್ಲಿ ಪ್ರಥಮ, ಭಾರದ ಗುಂಡು ಎಸೆತದಲ್ಲಿ ಹಾಗೂ ಹ್ಯಾಮರ್ ಥ್ರೊ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಟಿ ಶೆಟ್ಟಿಗೇರಿಯ ಪೆಮಂಡ ಸಂಭೀತ ಕುಶಾಲಪ್ಪ ಜಾವಲಿನ್ ಮತ್ತು ಡಿಸ್ಕಸ್ ಥ್ರೋ ಎಸೆತದಲ್ಲಿ ತೃತೀಯ…

Read More

ನಾಪೋಕ್ಲು ಡಿ.31 NEWS DESK  : ಬೇತು ಗ್ರಾಮದ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು. ಸ್ಪರ್ಧೆಯಲ್ಲಿ 7ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧಿಸಿದ್ದು. ಒಟ್ಟು 29 ಗುಂಪುಗಳು ಭಾಗವಹಿಸಿದ್ದು, ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ನಾಲ್ಕು ಗುಂಪುಗಳನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು. ಸ್ಪರ್ಧೆಯಲ್ಲಿ ಐದು ಸುತ್ತುಗಳಿದ್ದು, ಶಮಂತ್ ಹಾಗೂ ಮೊಹಮ್ಮದ್ ಪ್ರಥಮ ಸ್ಥಾನ, ನಿಶಾಂತ್ ಹಾಗೂ ಅನಸ್ ದ್ವಿತೀಯ ಸ್ಥಾನ ಪಡೆದರು. ವಿಜೇತರಿಗೆ ಬಹುಮಾನಗಳನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ, ಸಂಸ್ಥೆಯ ಸಂಚಾಲಕಿ ವಿದ್ಯಾ ಸುರೇಶ್ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಹಾಜರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ದುಂದುಬಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಿಕ್ಷಕಿ ರಶ್ಮಿ ಬಿ.ಸಿ ಸ್ವಾಗತಿಸಿದರು. ರಸಪ್ರಶ್ನೆ ಆಯೋಜಕರಾಗಿ ಶಿಕ್ಷಕಕಿಯರಾದ ಸ್ಪೂರ್ತಿ, ಶಿಲ್ಪ ಕಾರ್ಯನಿರ್ವಹಿಸಿದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಡಿ.31 NEWS DESK : ಆಂಧ್ರಪ್ರದೇಶದ ಕಡತದಲ್ಲಿ ನಡೆದ ಮೂರನೆಯ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಗ್ರೀಷ್ಮ ಪೊನ್ನಪ್ಪ ಪಿ. ಹಾಗೂ ಚರಿಷ್ಮಾ ಕಾವೇರಮ್ಮ ಸಿ. ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪೈನಲ್ ನಲ್ಲಿ ಆಂಧ್ರಪ್ರದೇಶದ ವಿರುದ್ದ 2-0 ಗೋಲುಗಳಿಂದ ಜಯಭೇರಿ ಬಾರಿಸುವ ಮೂಲಕ ಕರ್ನಾಟಕಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

Read More

ನಾಪೋಕ್ಲು ಡಿ.31 NEWS DESK :  ಕೂರುಳಿ ಸುಭಾಷ್ ನಗರದ ನಾಗದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತ್ತು. ಉತ್ಸವದ ಅಂಗವಾಗಿ ನಾಗದೇವರಿಗೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ಬೆಳಿಗ್ಗೆ ಗಣಪತಿ ಹೋಮ, ನಾಗನಿಗೆ ಹೂವಿನಿಂದ ಅಲಂಕಾರ, ಪಂಚಾಮೃತ ಅಭಿಷೇಕ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳನ್ನು  ನೆರವೇರಿತು.  ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ಅನ್ನದಾನ ನಡೆಯಿತು. ಉತ್ಸವದಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ನೆರವೇರಿಸಿದರು. ಪೂಜಾ ವಿಧಿ ವಿಧಾನಗಳನ್ನು ಭಗವತಿ ದೇವಾಲಯದ ಅರ್ಚಕರಾದ ಹರೀಶ್ ಕೇಕುಣ್ಣಾಯ ಅವರ ಮುಂದಾಳತ್ವದಲ್ಲಿ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ  ಲೋಕೇಶ್ ಪದಾಧಿಕಾರಿಗಳು, ಸದಸ್ಯ, ಊರ ಮತ್ತು ಪರವೂರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ  ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ NEWS DESK ಡಿ.30 : ಯುನೈಟೆಡ್ ಪ್ಲಾಂಟೇಷನ್ ವರ್ಕ ರ‍್ಸ್ ಯೂನಿಯನ್ (ಎಐಟಿಯುಸಿ) ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಗುಣಶೇಖರ್ ಅವರ ಸ್ಮರಣಾರ್ಥ ಕಾರ್ಮಿಕ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಸಕಲೇಶಪುರದಲ್ಲಿ ನಡೆಯಿತು. ಪ್ರತಿಭಾ ಪುರಸ್ಕಾರ ಪಡೆದ ಬಿಳಿಗೇರಿ ಗ್ರಾಮದ ಪಿಯುಸಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳನ್ನು ಯುನೈಟೆಡ್ ಪ್ಲಾಂಟೇಷನ್ ವರ್ಕ ರ‍್ಸ್ ಯೂನಿಯನ್ ನ ಕೊಡಗು ಜಿಲ್ಲಾ ಘಟಕ ಸನ್ಮಾನಿಸಿ ಪ್ರೋತ್ಸಾಹಿಸಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಅವರು ಕಾರ್ಮಿಕರ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಮತ್ತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎನ್ನುವ ಕಾರಣಕ್ಕಾಗಿ ಪ್ರತಿವರ್ಷ ಗುಣಶೇಖರ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು. ಪ್ರಸ್ತುತ ವರ್ಷ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಪಿಯುಸಿ ಮತ್ತು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕ ಕುಟುಂಬದ ವಿದ್ಯಾರ್ಥಿಗಳನ್ನು ಸಕಲೇಶಪುರದಲ್ಲಿ ಪುರಸ್ಕರಿಸಲಾಗಿದೆ. ಬಿಳಿಗೇರಿ…

Read More

ಮಡಿಕೇರಿ NEWS DESK ಡಿ.30 : ದೇಶದ ವಿವಿಧ ಭಾಗಗಳಲ್ಲಿ ಕ್ರಿಶ್ಚಿಯನ್ ಸಮುದಾಯಗಳು, ಕ್ರಿಸ್ಮಸ್ ಆಚರಣೆಗಳು ಮತ್ತು ಕೆರೋಲ್ ಗುಂಪುಗಳ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸುವುದಾಗಿ ದಕ್ಷಿಣ ಕೊಡಗು ಕ್ರಿಶ್ಚಿಯನ್ ಸಂಘದ ಅಧ್ಯಕ್ಷ ಎ.ಜೆ.ಬಾಬು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶಾಂತಿಯುತವಾಗಿ ನಮ್ಮ ನಂಬಿಕೆಯನ್ನು ಸ್ವೀಕರಿಸುವ, ಆಚರಿಸುವ ಮತ್ತು ಪ್ರಸಾರ ಮಾಡುವ ಹಕ್ಕು ಸಂವಿಧಾನದಲ್ಲಿ ನಿಗಧಿ ಪಡಿಸಲಾದ ಮೂಲಭೂತ ಸ್ವಾತಂತ್ರ್ಯವಾಗಿದೆ. ಆದರೆ ಇತ್ತೀಚೆಗೆ ಕ್ರಿಶ್ಚಿಯನ್ ಸಮುದಾಯಗಳ ಮೇಲೆ ನಡೆದಿರುವ ದಾಳಿ ಕಳವಳಕಾರಿ ಬೆಳವಣಿಗೆ ಮತ್ತು ಕಾನೂನು ವಿರೋಧಿ ಕೃತ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಯ ವಾತಾವರಣದ ನಡುವೆ ಒಂದು ಸಮುದಾಯವನ್ನು ಗುರಿಯಾಗಿಸುವ ಈ ರೀತಿಯ ಘಟನೆಗಳು ಭಾರತದ ಪ್ರೀತಿಪಾತ್ರ ಬಹುಸಂಸ್ಕೃತಿಯ ಸಾಮಾಜಿಕ ಸಾಮರಸ್ಯಕ್ಕೆ ದಕ್ಕೆಯನ್ನುಂಟು ಮಾಡುತ್ತದೆ. ಆದ್ದರಿಂದ ಸಂಬಂಧಿಸಿದ ರಾಜ್ಯಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ನಾಗರಿಕ ಭಯವಿಲ್ಲದೆ ದೇಶದ ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬೇಕು ಎಂದು…

Read More

ಮಡಿಕೇರಿ NEWS DESK ಡಿ.30 : ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ನಡೆದ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಅಂತಿಮ ಪಂದ್ಯದಲ್ಲಿ ಚೆಪ್ಪುಡಿರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಟ್ರೋಫಿಯನ್ನು ಗೆದ್ದು ಬೀಗಿದೆ, ಕುಲ್ಲೇಟಿರ ತಂಡ ಸೋಲೊಪ್ಪಿಕೊಂಡಿದೆ. ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಚೆಪ್ಪುಡಿರ ಮತ್ತು ಕುಲ್ಲೇಟಿರ ನಡುವೆ ನಡೆದ ಅಂತಿಮ ಪಂದ್ಯದಲ್ಲಿ 1-0 ಗೋಲಿನ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ಸಾಧಿಸಿತು. ಚೆಪ್ಪುಡಿರ ಸೋಮಣ್ಣ ಒಂದು ಗೋಲು ದಾಖಲಿಸಿದರು. ವಿಜೇತ ಚೆಪ್ಪುಡಿರ ತಂಡಕ್ಕೆ 2 ಲಕ್ಷ ರೂ., ದ್ವಿತೀಯ ಸ್ಥಾನ ಪಡೆದ ಕುಲ್ಲೇಟಿರ ತಂಡಕ್ಕೆ 1 ಲಕ್ಷ ರೂ., ಸೆಮಿಫೈನಲ್‌ಗೆ ಅರ್ಹತೆ ಪಡೆದ ಮಂಡೇಪಂಡ ಮತ್ತು ಕುಪ್ಪಂಡ ತಂಡಕ್ಕೆ ತಲಾ 50 ಸಾವಿರ ರೂ. ಹಾಗೂ ಉಳಿದ 8 ತಂಡಗಳಿಗೆ ತಲಾ 25 ಸಾವಿರ ರೂ. ಬಹುಮಾನ ಮತ್ತು ಸ್ಮರಣಿಕೆಯನ್ನು ನೀಡಲಾಯಿತು. ಬೆಸ್ಟ್…

Read More