ಮರಗೋಡು ಡಿ.24: ಮಕ್ಕಳಲ್ಲಿ ವ್ಯಾವಹಾರಿಕ ಜ್ಞಾನ ಉತ್ತೇಜಿಸಲು ಮರಗೋಡಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳಸಂತೆಯ£. ತಮ್ಮ ಮನೆ, ತೋಟ ಮತ್ತು ಗದ್ದೆಯಲ್ಲಿ ಸಾವಯವ ಗೊಬ್ಬರ ಬಳಸಿ ಬೆಳೆಸಿದ ವಿವಿಧ ಬಗೆಯ ಹಣ್ಣು ತರಕಾರಿಗಳನ್ನು ಮಕ್ಕಳು ಮಾರಾಟ ಮಾಡಿ ಸಂಭ್ರಮಿಸಿದರು. ಮರಗೋಡು ಗ್ರಾಮಸ್ಥರು ಸಂತೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ತಮ್ಮೂರಿನ ಮಕ್ಕಳು ಬೆಳೆದ ತರಕಾರಿ, ಹಣ್ಣು ಹಂಪಲುಗಳನ್ನು ಖರೀದಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು. ವಿಶೇಷವಾಗಿ ಔಷಧೀಯ ಗುಣಗಳಿರುವ ಗಣಿಕೆ ಸೊಪ್ಪು, ನುಗ್ಗೆ ಸೊಪ್ಪು, ಕೆಸ, ಬಸಳೆ, ಕಹಿಹುಳಿ, ವಿಶಿಷ್ಟ ಸ್ವಾದದ ಫ್ಯಾಶನ್ ಫ್ರೂಟ್ ನಂತಹ ಹಣ್ಣು, ತರಕಾರಿಗಳನ್ನು ಭರ್ಜರಿಯಾಗಿ ಮಾರಾಟ ಮಾಡಿದ ಮಕ್ಕಳು ಸಾಕಷ್ಟು ಹಣ ಸಂಪಾದಿಸಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಕೆದಂಬಾಡಿ ಚಂದ್ರಕಲಾ, ಮರಗೋಡು ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಮೌಳಿ, ಮರಗೋಡು ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕ ಉಮೇಶ್ ಹಾಗೂ ಶಾಲಾ ಸಿಬ್ಬಂದಿಗಳು ಮಕ್ಕಳ ಸಂತೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳ ವ್ಯಾವಹಾರಿಕ ಜ್ಞಾನದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಲೇಖಕ: admin
ಮೈಸೂರು ಡಿ.24 : ನಾನು ದೇಶದ್ರೋಹಿನಾ ಅಥವಾ ದೇಶಪ್ರೇಮಿನಾ ಎಂಬುವುದು ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿಗೆ ತಿಳಿದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಕೊಡಗಿನ ಜನ ನಾನು ಯಾರು ಎಂಬುವುದನ್ನು ತೀರ್ಮಾನ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸಂಸತ್ ನಲ್ಲಿ ನಡೆದ ಘಟನೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು. 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಹಾಗೂ ಕೊಡಗಿನ ಜನ ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುವುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ ಎಂದು ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು.
ಮಡಿಕೇರಿ ಡಿ.24 : ಕೊಡಗಿನ ಬೆಕ್ಕೆಸೊಡ್ಲೂರು ಶ್ರೀ ಶಾರದಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಸವರಾಜು(55) ಅವರು ನಿಧನರಾಗಿದ್ದಾರೆ. ಹೆಗ್ಗಡೆ ದೇವನಕೋಟೆಯಲ್ಲಿರುವ ತಮ್ಮ ಹೊಲದಲ್ಲಿ ಕೃಷಿ ಕಾರ್ಯ ನಿರತರಾಗಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಬಸವರಾಜು ಅವರು ಮೂಲತಃ ಹೆಚ್.ಡಿ ಕೋಟೆಯವರಾಗಿದ್ದು, ಬೆಕ್ಕೆಸೊಡ್ಲೂರು ಶಾರದಾ ಪ್ರೌಢ ಶಾಲೆಯಲ್ಲಿ ಕಳೆದ 26 ವರ್ಷಗಳಿಂದ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2011ರಿಂದ ಇದೇ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉತ್ತಮ ಶಿಕ್ಷಕ ಎಂದು ಹೆಸರು ಗಳಿಸಿದ್ದ ಬಸವರಾಜು ಅವರ ನಿಧನಕ್ಕೆ ಕೊಡಗು ಜಿಲ್ಲಾ ಖಾಸಗಿ ಅನುದಾನಿತ ಶಾಲಾ, ಕಾಲೇಜು ನೌಕರರ ಸಂಘದ ಅಧ್ಯಕ್ಷ ಪಡಿಞರಂಡ ಪ್ರಭು ಕುಮಾರ್, ಕಾರ್ಯದರ್ಶಿ ವೆಂಕಟೇಶ್ ಪೂಜಾರ್, ವಿರಾಜಪೇಟೆ ಶೈಕ್ಷಣಿಕ ತಾಲ್ಲೂಕು ಘಟಕದ ಅಧ್ಯಕ್ಷ ಗಿಡ್ಡಯ್ಯ ಹಾಗೂ ಕಾರ್ಯದರ್ಶಿ ತಮ್ಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಮೈಸೂರು ಡಿ.23 : ವಿಜಯನಗರ 2ನೇ ಹಂತದಲ್ಲಿರುವ ಕೊಡಗು ಗೌಡ ಸಮಾಜದ ಕಟ್ಟಡದ ನೂತನ ಸಭಾಂಗಣ ಇಂದು ಉದ್ಘಾಟನೆಗೊಂಡಿತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯವನ್ನು ವಹಿಸಿದ್ದರು. ಆದಿಚುಂಚನಗಿರಿ ಮಠದ ಮೈಸೂರು ಶಾಖೆಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶಾಸಕ ಕೆ.ಹರೀಶ್ಗೌಡ, ಮಾಜಿ ಶಾಸಕರಾದ ಎಲ್.ನಾಗೇಂದ್ರ, ವಾಸು, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಕೆ.ವಿ.ಶ್ರೀಧರ್ , ಕೊಡಗು ಗೌಡ ಸಮಾಜದ ಅಧ್ಯಕ್ಷ ತೋಂಟಬೈಲು ಈ.ಮನೋಹರ್, ಪದಾಧಿಕಾರಿಗಳಾದ ಕುಂಟಿಕಾನ ಎಸ್.ಗಣಪತಿ, ಕಾಳೇರಮ್ಮನ ಎಂ.ನಾಣಯ್ಯ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಮೈಸೂರು, ಡಿ.23 : ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಮೈಸೂರಿನ ಅಭಿವೃದ್ಧಿ, ಪ್ರವಾಸೋದ್ಯಮ, ಸಾಂಸ್ಕೃತಿಕ ನಗರವಾಗಿ ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಪ್ರಾರಂಭವಾದಾಗ ಉದ್ಘಾಟಿಸಿ, ಇಂದು ರಜತ ಮಹೋತ್ಸವವನ್ನು ನಾನೇ ಉದ್ಘಾಟಿಸಿರುವುದು ಸಂತೋಷ ತಂದಿದೆ. ಈ ಸಂಘ ಶತಮಾನೋತ್ಸವವನ್ನೂ ಆಚರಿಸಲಿ ಎಂದು ಶುಭ ಹಾರೈಸಿದ ಮುಖ್ಯಮಂತ್ರಿಗಳು ಹೋಟೆಲ್ ನವರಿಗೂ ನನಗೂ ಅವಿನಾಭಾವ ಸಂಬಂಧವಿದೆ. ನಾನು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಊಟಕ್ಕಾಗಿ ಹೋಟೆಲ್ ನ್ನೇ ನೆಚ್ಚಿಕೊಂಡಿದ್ದೆ. ನಾನ್ ವೆಜ್ ಊಟ ಹೆಚ್ಚು ಪ್ರಿಯವಾಗಿದ್ದು, ಅಂತಹ ಹೋಟೆಲ್ ಗಳಿಗೆ ಹೆಚ್ಚು ಭೇಟಿ ನೀಡುತ್ತಿದ್ದುದ್ದನ್ನು ಸ್ಮರಿಸಿಕೊಂಡರು. *ಅತಿಥಿ ದೇವೋ ಭವ * ಮೈಸೂರು ಪ್ರವಾಸೋದ್ಯಮದ ಕೇಂದ್ರ. ಅತಿಥಿ ದೇವೋ ಭವ ಎಂಬ ಭಾರತೀಯ ಸಂಸ್ಕೃತಿಯಂತೆ ಅತಿಥಿಗಳನ್ನು ದೇವರಂತೆ ಕಂಡು ಆತಿಥ್ಯ ನೀಡಬೇಕು. ತಲೆಮಾರುಗಳಿಂದ …
ಸುಂಟಿಕೊಪ್ಪ ಡಿ.23 : ಪ್ರೌಢ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಮಹತ್ತರ ದಿಕ್ಸೂಚಿಯಾಗಿದ್ದು, ಪರಿಶ್ರಮಪಟ್ಟರೆ ಶೈಕ್ಷಣಿಕ ಗುರಿ ಸಾಧಿಸಬಹುದು ಎಂದು ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್ಕುಮಾರ್ ಕಿವಿಮಾತು ಹೇಳಿದರು. ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 59ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ, ಅಲ್ಲದೆ ಉನ್ನತ ಸ್ಥಾನಮಾನಗಳಿಗೆ ಹೋಗಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವೆಂದರು. ವಿದ್ಯಾರ್ಥಿಗಳ ಉಜ್ವಲ ಬಾಳನ್ನು ಬೆಳಗಿದ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ. ಶಿಕ್ಷಣ ಇಲ್ಲದೆ ಬದಕಲು ಸಾಧ್ಯವಿಲ್ಲ, ಸಮಾಜದಲ್ಲಿ ಗೌರವದ ಸ್ಥಾನಮಾನ ಸಿಗಬೇಕಾದರೆ ಶಿಕ್ಷಣ ಮುಖ್ಯ. ವಿದ್ಯಾರ್ಥಿಗಳು ಪ್ರೌಢ, ಪದವಿ ಪೂರ್ವ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪ್ಪಳ್ಳಿ ರವೀಂದ್ರ ವಿದ್ಯಾರ್ಥಿಗಳು ಶೈಕ್ಷಣಿಕ ಹಾದಿಯಲ್ಲಿ ಹೆಚ್ಚಿನ ಪರಿಶ್ರಮ ಪಟ್ಟರೆ ಮಾತ್ರ ಮುಂದಿನ ಜೀವನ ಸುಖಕರವಾಗಿರಲಿದೆ. ಉತ್ತಮ ಗುಣ ನಡತೆಯನ್ನು ಮೈಗೂಡಿಸಿಕೊಂಡರೆ ಮಾತ್ರ…
ಸುಂಟಿಕೊಪ್ಪ ಡಿ.23 : ಮಾದಾಪುರ ರಸ್ತೆಯ ಬ್ಯಾಂಕ್ ಆಫ್ ಬರೋಡದ ವತಿಯಿಂದ “ನಮ್ಮ ಸಂಕಲ್ಪ ವಿಕಸಿತ ಭಾರತ” ಕೇಂದ್ರ ಸರಕಾರದ ಯೋಜನೆಗಳ ಸಂಕಲ್ಪ ಯಾತ್ರೆಯ ಮಹತ್ವದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಜಿ.ಎಂ.ಪಿ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದರೆ ಫಲಾನುಭವಿಗಳು ಬ್ಯಾಂಕ್ ಖಾತೆಗಳನ್ನು ಹೊಂದಿರಬೇಕೆಂದು ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕ ದೀಪ್ತಿ ಸಿ.ಗಂಗಾಧರ್ ಹೇಳಿದರು. ಅಂಚೆ ಇಲಾಖೆ ಅಧಿಕಾರಿ ಅಮಿತಾ, ಇಂಡಿಯನ್ ಗ್ಯಾಸ್ ವಿತರಕ ರಾಕೇಶ್, ನಬಾರ್ಡ್ ಜಿಲ್ಲಾ ಮೇಲ್ವಿಚಾರಕ ರಮೇಶ್, ಗ್ರಾಮ ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ಲೋಕೇಶ್, ಕೇಂದ್ರ ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಲ್ಲಿಸಬೇಕಾದ ಅರ್ಜಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಸಂಕಲ್ಪಯಾತ್ರೆಯ ಅಯೋಜಕರು ಸ್ವಸ್ತಿಕ್ ಡ್ರೋನ್ ಮೂಲಕ ರೈತರು ತಮ್ಮ ಬೆಳೆಗಳಿಗೆ ಕ್ರಿಮಿ ನಾಶಕ ಔಷಧಿ ಸಿಂಪಡಿಸುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ರೈತರು ಡ್ರೋನ್ ಖರೀದಿಸುವುದಾದರೆ ಕೇಂದ್ರ ಸರಕಾರದಿಂದ ಇರುವ ರಿಯಾಯಿತಿ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ…
ಸೋಮವಾರಪೇಟೆ ಡಿ.23 : ಸಂಸತ್ ಭವನ ಆವರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದರು ಉಪರಾಷ್ಟ್ರಪತಿ ಜಗದೀಪ್ ಧನಕರ್, ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ಮಾತನಾಡಿ, ಸಂಸತ್ ಭವನ ಎಂಬುದು ಪ್ರಜಾದೇಗುಲವಾಗಿದ್ದು, ರಾಷ್ಟ್ರದ ಎರಡನೇ ಪ್ರಜೆಯನ್ನು ಅಣುಕ ಮಾಡಿರುವುದು ಖಂಡನೀಯವಾಗಿದೆ. ವಿರೋಧ ಪಕ್ಷಗಳು ನಡೆಸುತ್ತಿರುವ ಕುಚೇಷ್ಟೆಗಾಗಿ ಅನೇಕ ಸಂಸದರು ಸಸ್ಪೆಂಡ್ ಆಗಿದ್ದಾರೆ. ದ್ವೇಷಕ್ಕಾಗಿ ಮಾಡಿದ ಇಂತಹ ಕೃತ್ಯವನ್ನು ದೇಶದ ಪ್ರಜೆಗಳು ಕ್ಷಮಿಸುವುದಿಲ್ಲ. ಈ ಕೃತ್ಯ ಎಸಗಿದ ಹಾಗು ಕುಮ್ಮಕ್ಕು ನೀಡಿದವರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಹೇಳಿದರು. ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರಾದ ಎಸ್.ಆರ್.ಸೋಮೇಶ್, ಮಹೇಶ್ ತಿಮ್ಮಯ್ಯ, ಎಚ್.ಕೆ.ಮಾದಪ್ಪ, ತಾಕೇರಿ ಪೊನ್ನಪ್ಪ, ಮೋಹನ್ದಾಸ್, ಶಿವಪ್ಪ, ಮೃತ್ಯುಂಜಯ, ಬಿ.ಆರ್,ಮಹೇಶ್, ಪ್ರಶಾಂತ್ ಮತ್ತಿತರರು ಇದ್ದರು.
ಸೋಮವಾರಪೇಟೆ ಡಿ.23 : ಧರ್ಮಸ್ಥಳ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಪಟ್ಟಣದ ವರ್ತಕರೋರ್ವರು ಮೃತಪಟ್ಟಿದ್ದು, ಉಳಿದ ಎಂಟು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಆಲೇಕಟ್ಟೆ ರಸ್ತೆಯ ನಿವಾಸಿ ಕೆಂಚುಮನೆ ರವಿ(53) ಮೃತ ದುರ್ದೈವಿ. ರಾಜು ಹಾಗೂ ಕುಟುಂಬ ಧರ್ಮಸ್ಥಳದಲ್ಲಿ ಪೂಜೆ ಮುಗಿಸಿಕೊಂಡು ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಸಂದರ್ಭ ಮರ್ಧಾಳ ಸಮೀಪ ಅಳೇರಿ ತಿರುವಿನಲ್ಲಿ ಎದುರಿನಿಂದ ಬಂದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಓಮಿನಿ ಚಲಾಯಿಸುತ್ತಿದ್ದ ರವಿ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ, ಪತ್ನಿ ವಾಣಿ, ಪುತ್ರಿ ರಿಷಾ, ಪುತ್ರ ಶರಣ್, ಸಹೋದರ ಯೋಗೇಶ್, ಅವರ ಪತ್ನಿ ನೀತು, ಪುತ್ರಿ ನೇಹಾ, ಪುತ್ರ ಅಂಜನ್ ಗಾಯಗೊಂಡಿದ್ದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಕಡಬ ಪೋಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿಸಿಕೊಂಡಿದ್ದಾರೆ. ತಿರುವಿನಲ್ಲಿ ರಸ್ತೆ ಕಿರಿದಾಗಿದ್ದು, ರಸ್ತೆಗೆ ತಾಗಿದಂತೆ ಇರುವ ವಿದ್ಯುತ್ ಕಂಬದಿಂದಾಗಿ…
ಸೋಮವಾರಪೇಟೆ ಡಿ.23 : ಇನ್ನರ್ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರಪೇಟೆ ಜೆಎಂಎಫ್ ನ್ಯಾಯಾಲಯಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಕ್ಲಬ್ನ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ, ಸೋಮವಾರಪೇಟೆ ಅಧ್ಯಕ್ಷೆ ಸಂಧ್ಯಾರಾಣಿ, ಕಾರ್ಯದರ್ಶಿ ತನ್ಮಯಿ ಪ್ರವೀಣ್ ಇದ್ದರು.






