ಮಡಿಕೇರಿ ನ.28 : ಧಾನ್ಯಲಕ್ಷ್ಮಿಯನ್ನು ಮನೆ ತುಂಬುವ ಕೊಡಗಿನ ವಿಶೇಷ ಹಬ್ಬವಾದ ಪುತ್ತರಿ ಹಬ್ಬವನ್ನು ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಸಾಂಪ್ರದಾಯಿಕ ವಿಧಿ ವಿಧಾನಗಳೊಂದಿಗೆ ಗದ್ದೆಯಿಂದ ತಂದ ಕದಿರಿಗೆ ಹಾಗೂದೇವರಿಗೆ ಪೂಜೆ ಸಲ್ಲಿಸಿ, ನೆರದಿದ್ದವರಿಗೆ ಪ್ರಸಾದ ವಿತರಿಸಲಾಯಿತು. ನಂತರ ಸ್ಥಳೀಯರು ಸುತ್ತಮುತ್ತಲಿನ ಗ್ರಾಮಸ್ಥರು ಶ್ರೀ ಗೌರಿಶಂಕರ ಸನ್ನಿಧಿಯಲ್ಲಿ ನಡೆದ ಪುತ್ತರಿ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಹಬ್ಬದ ಆಚರಣೆಯ ನಂತರ ದೇವಾಲಯದ ಆವರಣದ ಸ್ವಚ್ಛತಾ ಕಾರ್ಯ ನಡೆಯಿತು.
ಲೇಖಕ: admin
ಮಡಿಕೇರಿ ನ.27 : ದಕ್ಷಿಣ ಕೊಡಗಿನ ಹಳ್ಳಿಗಟ್ಟು ಶ್ರೀಭದ್ರಕಾಳಿ ದೇವಾಲಯದಲ್ಲಿ ಪುತ್ತರಿ ಹಬ್ಬವನ್ನು ಶ್ರದ್ಧಾಭಕ್ತಿ, ಸಂಭ್ರಮದಿಂದ ಆಚರಿಸಲಾಯಿತು. ಗದ್ದೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕದಿರನ್ನು ದೇವಾಲಯಕ್ಕೆ ತರಲಾಯಿತು. ಪೂಜೆಯ ನಂತರ ಭಕ್ತರಿಗೆ ವಿತರಿಸಲಾಯಿತು. ದೇವಾಲಯದಲ್ಲಿ ಪೂಜೆಯಾದ ನಂತರ ಗ್ರಾಮದ ವಿವಿಧ ಭಾಗದಲ್ಲಿ ಕದಿರು ಕೊಯ್ದು ಪುತ್ತರಿ ಆಚರಿಸಲಾಯಿತು.
ಮಡಿಕೇರಿ ನ.27 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಕಿರುಗೂರು ಮತ್ತೂರು ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಆತಂಕ ಮನೆ ಮಾಡಿದೆ. ಮೇಯಲು ಬಿಟ್ಟಿದ್ದ ಕೊಳ್ಳಿಮಾಡ ಕುಟ್ಟಪ್ಪ ಅವರ ಹಸುವನ್ನು ಹುಲಿ ಕೊಂದು ಹಾಕಿದೆ. ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದು, ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. ರೈತ ಸಂಘದ ಕೊಡಗು ಜಿಲ್ಲಾ ಘಟಕ ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರು ನ.27 : ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3812 ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಜನಸ್ಪಂದನ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆಯಾಯಿತು. ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್ಎಸ್ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ…
ಮಡಿಕೇರಿ ನ.27 : ದೇಶಕ್ಕಾಗಿ ಹುತಾತ್ಮರಾಗಿ ತ್ರಿವರ್ಣ ಧ್ವಜವನ್ನು ಹೊದ್ದು ಬಂದ ಕ್ಯಾಪ್ಟನ್ ಪ್ರಾಂಜಲ್ ಅವರಂತಹ ಸಾವಿರಾರು ವೀರರ ಬಲಿದಾನದಿಂದಾಗಿ ಭಾರತೀಯರಾದ ನಾವು ಇಂದು ಭಯವಿಲ್ಲದೆ ಬದುಕುತ್ತಿದ್ದೇವೆ, ಭಯವಿಲ್ಲದೆ ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದೇವೆ ಎಂದು ಸುವರ್ಣ ನ್ಯೂಸ್ ಚಾನಲ್ ನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ಹಿಂದು ಪರಿಷದ್ ವತಿಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಕೊಡಗು ವೀರರ ನೆಲ, ಇಲ್ಲಿ ಪಾದಸ್ಪರ್ಷ ಮಾಡಿದಾಕ್ಷಣ ಮೈ ರೋಮಾಂಚನವಾಗುತ್ತದೆ. ದೇವಟ್ ಪರಂಬುವಿನಲ್ಲಿ ಆಕ್ರಂದನ ಕೇಳಿದಂತ್ತಾಗುತ್ತದೆ ಎಂದರು. ಅಂದಿನಿಂದ ಇಂದಿನವರೆಗೆ ಕೊಡಗಿನಲ್ಲೂ ಬಲಿದಾನಗಳಾಗಿವೆ, ಈ ಬಲಿದಾನದ ಮಹತ್ವವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಅಂದು ನಡೆದ ಬಲಿದಾನದಿಂದಾಗಿಯೇ ಇಂದು ಭಾಗಮಂಡಲದಲ್ಲಿ ಧೈರ್ಯವಾಗಿ ಕಾವೇರಿ ಆರತಿ ಮಾಡಲು ನಮ್ಮಿಂದ ಸಾಧ್ಯವಾಗಿದೆ. ಭಾರತೀಯ ಸಂಸ್ಕೃತಿಯ ಆಚರಣೆಯನ್ನು ನಾವು ಭಯವಿಲ್ಲದೆ ಮಾಡುತ್ತಿದ್ದೇವೆ. ಇತರ ದೇಶಗಳಲ್ಲಿ ನಮ್ಮ ಸಂಸ್ಕೃತಿಯನ್ನು ಭಯದಿಂದ ಕದ್ದುಮುಚ್ಚಿ ಆಚರಿಸಬೇಕಾಗಿದೆ. ಕಾಶ್ಮೀರದ ಶ್ರೀನಗರದ ಲಾಲ್…
ಸೋಮವಾರಪೇಟೆ ನ.27 : ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಚಿಂತನೆ, ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಹೇಳಿದರು. ಶ್ರೀ ನಾರಾಯಣ ಗುರು ಸೇವಾ ಸಮಿತಿ, ತುಳುನಾಡು ಬಿಲ್ಲವ ಮಹಿಳಾ ಸಂಘ ವತಿಯಿಂದ ಪಟ್ಟಣದ ಶಂಕಪ್ಪ ಹಾಲ್ ಸಭಾಂಗಣದಲ್ಲಿ ನಡೆದ ಶ್ರೀ ನಾರಾಯಣ ಗುರುಗಳ ಸ್ಮರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ಎಲ್ಲವನ್ನು ಪಡೆದುಕೊಳ್ಳಲು ಸಾಧ್ಯ. ಉನ್ನತ ಶಿಕ್ಷಣವೆಂಬ ಸಂಪತ್ತನ್ನು ಮಕ್ಕಳಿಗೆ ಕಲ್ಪಿಸುವ ಮೂಲಕ ಗುರುಗಳ ಚಿಂತನೆಯನ್ನು ಮುಂದಿನ ಪಿಳಿಗೆಗೂ ತಲುಪಿಸುವ ಕಾರ್ಯವಾಗಬೇಕು ಎಂದರು. ಸೋಮವಾರಪೇಟೆಯಲ್ಲಿ ಶ್ರೀನಾರಾಯಣ ಗುರುಗಳ ಭವನ ನಿರ್ಮಿಸಲು ಹಿಂದಿನ ನಮ್ಮ ಬಿಜೆಪಿ ಸರ್ಕಾರ 25 ಲಕ್ಷ ರೂ.ಗಳ ಅನುದಾನ ಕಲ್ಪಿಸಲಾಗಿತ್ತು. ಆದರೆ ಇಂದಿನ ಸರ್ಕಾರ ಬಿಡುಗಡೆಗೊಳಿಸಿಲ್ಲ. ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡುತ್ತಿಲ್ಲ. ಕೂಡಲೆ ಹಣ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಎನ್ಐಇ ಸಹಾಯಕ ಪ್ರಾಧ್ಯಾಪಕ ಡಾ.ಸಂಜಿತ್ ಎಸ್. ಅಂಜನ್…
ಮಡಿಕೇರಿ ನ.27 : ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ “ಮಲೆನಾಡ ಮಹಿಳೆಯರ ಮಹಾ ಸಂಗಮ 2023 ” ಕ್ರೀಡಾಕೂಟವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
ಮಡಿಕೇರಿ ನ.27 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೋಮವಾರಪೇಟೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ತಮ್ಮ ಅಹವಾಲುಗಳನ್ನು ಶಾಸಕರಿಗೆ ನೇರವಾಗಿ ಸಲ್ಲಿಸಿದರು. ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಶಾಸಕರು, ಸರಕಾರೀ ಮಟ್ಟದ ಮನವಿಗಳನ್ನು ಬಗೆಹರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ನ.27 : ವಿಶಿಷ್ಟ ಸಂಸ್ಕೃತಿಯ ಕೊಡವ ಜನಾಂಗದ ಪ್ರಧಾನ ಹಬ್ಬಗಳಲ್ಲಿ ಒಂದಾದ ಪುತ್ತರಿಯನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದಕ್ಷಿಣ ಕೊಡಗಿನ ಬಾಳೆಲೆ ಬಳಿಯ ಆರ್ಕೇರಿನಾಡಿನ ಬಿಳೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಿತು. ಹುಣ್ಣಿಮೆಯ ದಿನವಾದ ಇಂದು ಬೆಳಗ್ಗೆ ಬಿಳೂರು ಗ್ರಾಮದ ಕಾಂಡೇರ ಸುರೇಶ್ ಅವರ ಭತ್ತದ ಗದ್ದೆಯಲ್ಲಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಾಂಪ್ರದಾಯಿಕವಾಗಿ ನವ ಧಾನ್ಯ ಭತ್ತದ ಕದಿರು ಕೊಯ್ಯುವ ಮೂಲಕ ಹಬ್ಬವನ್ನು ಅರ್ಥಪೂರ್ಣಗೊಳಿಸಿದರು. ತೆನೆ ತುಂಬಿದ ಕದಿರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಕೃತಿ ದೇವಿಗೆ ನಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಪುತ್ತರಿಯ ಆಚಾರ, ವಿಚಾರಗಳನ್ನು ಆರಂಭಿಸಿದರು. ಕೊಯ್ದ ಕದಿರನ್ನು “ಪೊಲಿಯೇ ಬಾ, ಪೊಲಿ ಪೊಲಿಯೇ ಬಾ” ಎಂದು ಧಾನ್ಯಲಕ್ಷ್ಮಿಯನ್ನು ಘೋಷವಾಕ್ಯದ ಮೂಲಕ ಆಹ್ವಾನಿಸುತ್ತಾ ಮನೆ ತುಂಬಿಕೊಂಡರು. ನಂತರ ನವ ಧಾನ್ಯವನ್ನು ಪೂಜ್ಯಸ್ಥಾನದಲ್ಲಿಟ್ಟು ವಿಶೇಷ ಪೂಜೆ ಸಲ್ಲಿಸಿ ಕೊಡವ ಜನಾಂಗ ಹಾಗೂ ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಸಿಎನ್ಸಿ ಸಂಘಟನೆ ಆಚರಿಸಿದ 30ನೇ ವರ್ಷದ ಸಾರ್ವತ್ರಿಕ ಪುತ್ತರಿ ಹಬ್ಬಕ್ಕೆ…
ಮಡಿಕೇರಿ ನ.27 : ವಾಣಿಜ್ಯ ಚಟುವಟಿಕೆ/ಉದ್ದಿಮೆಗಳನ್ನು ಪ್ರಾರಂಭಿಸಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕೌಶಲ್ಯಾಭಿವೃದ್ಧಿ ಇಲಾಖಾ ಮೂಲಕ ಉದ್ಯಮಶೀಲತಾ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. www.scsptsp.karnataka.gov.in/BMS/CDOC/EDPRegistrationForm.aspx ರಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-225531 ನ್ನು ಸಂಪರ್ಕಿಸಬಹುದು. ಅರ್ಜಿದಾರರಿಗೆ ನಿಗದಿಪಡಿಸಿರುವ ವಯೋಮಿತಿ 21 ರಿಂದ 50 ವರ್ಷ. ಪಿಯುಸಿ ಮತ್ತು ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಉದ್ದಿಮೆ ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ನೀಡುತ್ತಿರುವ ತರಬೇತಿಯಾಗಿದ್ದು, ಯಾವುದೇ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಿರುವುದಿಲ್ಲ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ 10 ದಿನಗಳಿಗೆ ರೂ.1 ಸಾವಿರಗಳನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ಉಪಹಾರ ಮತ್ತು ಮಧ್ಯಾಹ್ನದ ಉಚಿತ ಊಟದ ವ್ಯವಸ್ಥೆ ಇರುತ್ತದೆ. ಅಗತ್ಯವಿರುವ ದಾಖಲಾತಿಗಳು-ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂಕಪಟ್ಟಿ, ಅಭ್ಯರ್ಥಿಯ ಭಾವಚಿತ್ರ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.






