ಲೇಖಕ: admin

ಮಡಿಕೇರಿ ನ.27 : ಸುವರ್ಣ ಕರ್ನಾಟಕ 50 ಪ್ರಯುಕ್ತ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ನೆಬ್ಬೂರು ಗೌಡ ಸಂಘ ಬಲಮುರಿ ಸಂಯುಕ್ತ ಆಶ್ರಯದಲ್ಲಿ ಜಾನಪದ ಸಿರಿ ಕಾರ್ಯಕ್ರಮವು ನ.28 ರಂದು ಬೆಳಗ್ಗೆ 10.30 ಗಂಟೆಗೆ ಬಲಮುರಿ ಕಟ್ರತನ ಮೊಟ್ಟೆಕೊಡಿ ಬಾಣೆಯಲ್ಲಿ ನಡೆಯಲಿದೆ. ಬಲಮುರಿ ಹಿರಿಯ ಕ್ರೀಡಾಪಟು ಪೊನ್ನಚನ ಕೆ.ಮಾದಪ್ಪ ಅವರು ಕ್ರೀಡಾ ಕೂಟ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಲಮುರಿ ನೆಬ್ಬೂರು ಗೌಡ ಸಂಘದ ಸಲಹಾ ಸಮಿತಿ ಸದಸ್ಯರಾದ ಕೊಟ್ಟಕೇರಿಯನ ಡಿ.ದಯಾನಂದ, ಬಲಮುರಿ ನೆಬ್ಬೂರು ಗೌಡ ಸಂಘದ ಅಧ್ಯಕ್ಷರಾದ ಕಟ್ರತನ ಬಿ.ಲೋಕನಾಥ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ…

Read More

ಮಡಿಕೇರಿ ನ.27 : ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯು(ಪಿಎಂಎಫ್‍ಎಂಇ) 2020-21 ರಿಂದ ಪ್ರಾರಂಭವಾಗಿರುತ್ತದೆ. ಈ ಯೋಜನೆಯಲ್ಲಿ ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ/ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಅವುಗಳ ಸರಪಳಿಕೊಂಡಿಯೊಂದಿಗೆ ಉತ್ತೇಜನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 18 ವರ್ಷ ಮೇಲ್ಪಟ್ಟ ಆಸಕ್ತ ಫಲಾನುಭವಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. ಹಾಗೂ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಮಿತಿ ಇರುವುದಿಲ್ಲ. ಅರ್ಹ ಯೋಜನಾ ವೆಚ್ಚದ ಶೇ.35 ರಷ್ಟು ಮೌಲ್ಯದ ಸಾಲ-ಸಂಪರ್ಕವಿರುವ ಸಹಾಯಧನ(ಕ್ರೆಡಿಟ್ ಬೇಸ್‍ಡ್ ಸಬ್ಸಿಡಿ) ಜೊತೆಗೆ ಹೆಚ್ಚುವರಿ ಶೇ.15 ರಷ್ಟು ರಾಜ್ಯ ಸರ್ಕಾರದಿಂದ ಸಹಾಯಧನ ಒದಗಿಸಲಾಗುವುದು(ಗರಿಷ್ಠ ಮಿತಿ 15 ಲಕ್ಷ), ಬ್ರಾಂಡಿಂಗ್…

Read More

ಮಡಿಕೇರಿ ನ.27 ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ‘ಗಿರಿಜನ ಉತ್ಸವ’ ಕಾರ್ಯಕ್ರಮವು ಡಿ. 1 ರಂದು ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ತಿತಿಮತಿ ಗ್ರಾ.ಪಂ. ಅಧ್ಯಕ್ಷರಾದ ಪಿ.ಎಸ್.ಪೊನ್ನು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಮೈಸೂರು ವಿಭಾಗದ ಕನ್ನಡ ಮತ್ತು…

Read More

ಮಡಿಕೇರಿ ನ.27 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲಾ ಕುರುಬ ಸಮಾಜ ಇವರ ಸಹಕಾರದಲ್ಲಿ ಕನಕದಾಸರ ಜಯಂತಿ ಆಚರಣೆಯು ನ,30 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ.ಗಂಗಾಧರ, ಹುಣಸೂರು ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಆರ್.ರಾಶಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ನ.27 : ಮಂಗಳೂರಿನ ಕುದ್ರೋಳಿಯ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಕೊಡಗಿನ ಟ್ರೆಡಿಷನಲ್ ಶೊಟೊಕಾನ್ ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಮತ್ತು ಕಂಚು ಗೆದ್ದುಕೊಂಡಿದ್ದಾರೆ. ಐಗೂರಿನ ಸಿಂಚನ ಪ್ರಭಾಕರ್ ಹಾಗೂ ಕೆ.ಆರ್.ಅನರ್ಘ್ಯ ಪೂವಯ್ಯ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಕೆ.ಆರ್.ಆರಾಧ್ಯ ಪೂವಯ್ಯ ಹಾಗೂ ಹರ್ಷಲ್ ಬೆಳ್ಳಿ ಪದಕ, ನಂಗಾರು ನಿರುಷ್, ಚಿರಾಗ್, ಯಶ್ವಂತ್ ಪೂಜಾರಿ, ಬಿಂದು ಬೆಳ್ಯಪ್ಪ, ವಿವಾನ್ ಗೌಡ ಹಾಗೂ ಮನ್ವಿತ್ ಮೋಹನ್ ಕಂಚಿನ ಪದಕ ಗೆದ್ದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ.

Read More

ಮಡಿಕೇರಿ ನ.27 : ಕೊಡ್ಲಿಪೇಟೆ ಸಮೀಪದ ನೀರಗುಂದ ಗ್ರಾಮದಲ್ಲಿ ಶ್ರೀ ವೀರಭದ್ರ ಸ್ವಾಮಿ ದೇವಾಲಯ, ಶ್ರೀ ಮಲ್ಲೇಶ್ವರ ಸ್ವಾಮಿ ಹಾಗೂ ಶ್ರೀ ಕನ್ನಂಬಾಡಿ ಅಮ್ಮನವರ ದೇವಾಲಯದಲ್ಲಿ ಕಾರ್ತಿಕ ಮಾಸದ ಪೂಜೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ವೀರಭದ್ರ ಸ್ವಾಮಿಗೆ ಶತ ರುದ್ರಾಭಿಷೇಕ, ವಿಷೇಶವಾಗಿ ತರಕಾರಿಯಿಂದ ದೇವರ ವಿಗ್ರಹಕ್ಕೆ ಅಲಂಕಾರ, ದೇವಾಲಯಗಳಿಗೆ ಹೂವಿನ ಗುಚ್ಚಗಳಿಂದ ಅಲಂಕಾರ ಮಾಡಲಾಗಿತ್ತು. ನಂತರ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ರಾತ್ರಿ ದೀಪಾಲಂಕಾರ, ಕಾರ್ತೀಕ ಪೂಜೆ, ಆಕಾಶದಲ್ಲಿ ವರ್ಣರಂಜಿತ ಪಟಾಕಿ ಸಿಡಿಸುವ ಕಾರ್ಯಕ್ರಮವು ಜರುಗಿತು. ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗವಾಯಿತು. ಪೂಜಾಕೈಂಕರ್ಯಗಳನ್ನು ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀ ಶ್ರೀ ಸದಾಶಿವ ಸ್ವಾಮೀಜಿ, ಅರ್ಚಕ ಮಣಿಕಂಠ ಹಾಗೂ ಚಂದ್ರಯ್ಯ ನೆರವೇರಿಸಿದರು. ಹೊರ ಜಿಲ್ಲೆಗಳಲ್ಲಿ, ರಾಜ್ಯಗಳಲ್ಲಿ ವೃತ್ತಿ ಜೀವನ ನಡೆಸುತ್ತಿರುವ ಎಲ್ಲರೂ ಒಟ್ಟಾಗಿ ಸೇರಿಕೊಂಡು ತಮ್ಮ ಕುಟುಂಬದ ಸದಸ್ಯರೊಂದಿಗೆ ಕೂಡಿ ಈ ಪೂಜಾಕೈಂಕರ್ಯಗಳನ್ನು ಪ್ರತೀ ವರ್ಷದಂತೆ ನಡೆಸಿಕೊಂಡು ಬರುತ್ತಿರುವುದು ವಿಷೇಶವಾಗಿದೆ. ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ಎನ್.ಎ.ಅಶ್ವಥ್ ಕುಮಾರ್…

Read More

ಮಡಿಕೇರಿ ನ.27 : ತನಲ್ ಸ್ವಯಂ ಸೇವಕ ಸಂಘ ಕಣ್ಣೂರಿನ ತನಲ್ ಬೆಟಾಲಿಯನ್ ವತಿಯಿಂದ ನಗರದ ತನಲ್ ನೆರಳಿನ ಮನೆಯಲ್ಲಿ ಸಂಭ್ರಮದಿಂದ ಪುತ್ತರಿ ಹಬ್ಬವನ್ನು ಆಚರಿಸಲಾಯಿತು. ತನಲ್ ಆಶ್ರಮ ವಾಸಿಗಳಿಗೆ ಪುತ್ತರಿ ಹಬ್ಬದ ಪ್ರಯುಕ್ತ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಬಿರಿಯಾನಿ ತಯಾರಿಸಿ ಬಡಿಸುವುದರೊಂದಿಗೆ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಿ ರಸದೌತಣ ನೀಡಿದರು. ಮಡಿಕೇರಿಯ ಫೈವ್ ಸ್ಟಾರ್ ಸಿಂಗರ್ ತಂಡದ ಸದಸ್ಯರು ಕನ್ನಡ ಹಾಡುಗಳನ್ನು ಹಾಡಿ ರಂಜಿಸಿದರು.  ಆಶ್ರಮ ವಾಸಿಗಳು, ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳಿಗೆ ಶಾಲು ಹೊದಿಸಿ ಗೌರವಿಸಲಾಯಿತು. ತನಲ್ ವ್ಯವಸ್ಥಾಪಕ ಮೊಹಮ್ಮದ್ ಮುಸ್ತಫ, ಪತ್ರಕರ್ತ ಎಂ.ಅಬ್ದುಲ್ಲ, ಶುಕೂರ್, ಸಾಮಾಜಿಕ ಕಾರ್ಯಕರ್ತ ಬಸಾಮ ಸೇರಿದಂತೆ ಗೆಳೆಯರ ಬಳಗ ಹಾಜರಿದ್ದರು.

Read More

ಮಡಿಕೇರಿ ನ.27 : ದುಬೈನ ಯುಎಇ ಕೊಡವ ಕಮಿಟಿ ವತಿಯಿಂದ ಪುತ್ತರಿ-2023 ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಪ್ರಜಾಪ್ರಭುತ್ವದಲ್ಲಿ ಸಮುದಾಯದ ಪ್ರಾತಿನಿಧ್ಯದ ಮಹತ್ವವನ್ನು ವಿವರಿಸಿದರು.ಕೊಡಗು ಜಿಲ್ಲೆಯ ವಿಶೇಷ ಆಚರಣೆಗಳು ವಿಶ್ವದಾದ್ಯಂತ ಪಸರಿಸಿದೆ. ಸಮುದಾಯಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅರಿತುಕೊಳ್ಳಬೇಕು ಮತ್ತು ನಮ್ಮ ಇರುವಿಕೆಯನ್ನು ಸಂವಿಧಾನ ಬದ್ಧವಾಗಿ ಗುರುತಿಸಿಕೊಳ್ಳುವಂತಾಗಬೇಕು ಎಂದರು. ನಾವು ಏನೇ ಮಾಡಿದರೂ ಮತ್ತು ಎಲ್ಲೇ ಇದ್ದರೂ, ನಮ್ಮ ಚಿಂತನೆಯ ಪ್ರಕ್ರಿಯೆಯು ನಮ್ಮ ಕೊಡವ ಸಮುದಾಯವನ್ನು ಉಳಿಸಿಕೊಳ್ಳುವತ್ತ ಇರಬೇಕು. ನಾವೆಲ್ಲರೂ ಒಗ್ಗೂಡಿ ನಮ್ಮ ಸಮುದಾಯದ ಉಳಿವಿನ ಬಗ್ಗೆ ಯೋಚಿಸಬೇಕು. ಕೊಡವ ಸಮುದಾಯದ ಎಲ್ಲಾ ಕಾರ್ಯಕ್ರಮ ಹಾಗೂ ಆಚರಣೆಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ತಿಳಿಸಿ, ಜಾಗತಿಕ ಮಟ್ಟದಲ್ಲಿ ಕೊಡವರನ್ನು ಒಗ್ಗೂಡಿಸಲು ಪ್ರಯತ್ನಿಸಿದ ಪಳೆಂಗಂಡ ಅಮಿತ್ ಅವರ ಶ್ರಮವನ್ನು ಪೊನ್ನಣ್ಣ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಕೊಡಗಿಗೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ ನಡೆಯಿತು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಯುಎಇ ಕೊಡವ ಕಮಿಟಿ…

Read More

ಮಡಿಕೇರಿ ನ.27 : ಜನಾಂಗಗಳ ನಡುವಿನ ಸಂಸ್ಕೃತಿ, ಆಚಾರ-ವಿಚಾರದಲ್ಲಿ, ಬದಲಾವಣೆಗಳಿರಬಹುದು. ಆದರೆ, ದೇಶದ ರಕ್ಷಣೆ ವಿಚಾರ ಎಂದು ಬಂದರೆ ‘ನಾವೆಲ್ಲ ಒಂದು, ನಾವೆಲ್ಲ ಬಂಧು’ ಎಂಬ ಮನಸ್ಥಿತಿ ಹೊಂದಬೇಕು ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದರು. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಂ ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ಓಣಾಘೋಷಂ-ಓಣಂ ಸದ್ಯ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿದೆ. ಸಂವಿಧಾನ ಮೂಲಕ ಆಡಳಿತ ವ್ಯವಸ್ಥೆ ಕೆಲಸ ಮಾಡುತ್ತಿದೆ. ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು. ದೇಶದ ಏಕತೆ, ಅಖಂಡತೆ, ಸಮಗ್ರತೆ ಕಾಪಾಡುವುದು ನಮ್ಮ ಆದ್ಯತೆಯಾಗಬೇಕು. ದೇಶದ ರಕ್ಷಣೆಗೆ ಪಣ ತೊಡಬೇಕು ಎಂದು ಕರೆ ನೀಡಿದರು. ಸಂಘಟನಾತ್ಮಕವಾಗಿದ್ದರೆ ಮಾತ್ರ ನಮ್ಮ ಬೇಡಿಕೆಗಳು ಈಡೇರಿಕೆ ಸಾಧ್ಯ ಎಂದ ಅವರು, ಆಚಾರ-ವಿಚಾರ ಉಳಿಸಿ, ಬೆಳೆಸಬೇಕು. ಮತಾಂತರ ಆಮಿಷಗಳಿಗೆ ಬಲಿಯಾಗಬಾರದು ಎಂದು ಹೇಳಿದರು. ‘ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ನಮ್ಮ ಸಂಸ್ಕೃತಿಯನ್ನು ಮೊದಲು…

Read More

ಮಡಿಕೇರಿ ನ.27 : ಕ್ರೀಡೆಯಲ್ಲಿ ಛಲ, ಪರಿಶ್ರಮದೊಂದಿಗೆ ಗುರಿ ಇದ್ದಾಗ ಖಂಡಿತಾ ಗೆಲವು ಸುಲಭ ಸಾಧ್ಯ ಎಂದು ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ರಂಗಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡಗು ವಿದ್ಯಾಲಯದ ಸಹಯೋಗದಲ್ಲಿ ಆಯೋಜಿತ ಡಾ.ಅಖಿಲ್ ಕುಟ್ಟಪ್ಪ ಮತ್ತು ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಅಂತರ ಪ್ರೌಢಶಾಲಾ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ  ಮಾತನಾಡಿದರು. ವಿದ್ಯೆಯೊಂದಿದೆ ಕ್ರೀಡೆ ಕೂಡ ಜೀವನದ ಭಾಗವಾಗಬೇಕು. ಕ್ರಿಕೆಟ್ ಸೇರಿದಂತೆ ಕ್ರೀಡೆಯಲ್ಲಿ ಛಲದ ಜತೆ ನಿದಿ೯ಷ್ಟ ಗೆಲುವಿನತ್ತ ಗುರಿ ಇದ್ದರೆ ವಿಜಯ ಸುಲಭವಾಗುತ್ತದೆ. ಯಾವುದೇ ಸಾಧನೆಯನ್ನು ಉಚಿತವಾಗಿ ಸಾಧಿಸಲಾಗದು. ಅಂತೆಯೇ ಕ್ರೀಡೆಯಲ್ಲಿ ಕಠಿಣ ಪರಿಶ್ರಮವೂ ಸಾಧನೆಗೆ ಅತೀ ಮುಖ್ಯವಾಗುತ್ತದೆ ಎಂದು ಶಾಂತ ರಂಗಸ್ವಾಮಿ ಕಿವಿಮಾತು ಹೇಳಿದರು. ಅಥ್ಲೆಟಿಕ್ಸ್ ಗೆ ಅತೀ ಹೆಚ್ಚಿನ ಸಾಧಕ ಕ್ರೀಡಾಪಟುಗಳನ್ನು ನೀಡಿರುವ ಕೊಡಗು ಜಿಲ್ಲೆಯಲ್ಲಿ ಇದೀಗ ಬಾಲಕಿಯರ ಕ್ರಿಕೆಟ್ ತಂಡವನ್ನು ರೂಪಿಸಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಶಾಂತಾ ರಂಗಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಡಗು ಜಾನಪದ…

Read More