ಮಡಿಕೇರಿ ನ.27 : ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ನ.28 ರಿಂದ 30ರ ವರೆಗೆ ನಡೆಯಲಿದೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ವೆಂಕಟ್ರಾಜಾ ಉದ್ಘಾಟಿಸಲಿದ್ದಾರೆ. ನ.30 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮೈಸೂರು, ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಬೋರಲಿಂಗಯ್ಯ ಪಾಲ್ಗೊಳ್ಳಲಿದ್ದಾರೆ.
ಲೇಖಕ: admin
*ಪುತ್ತರಿ ನಮ್ಮೆರ ನಲ್ಲಾಮೆ* (ಹಂಚೆಟ್ಟಿರ ಮನು ಮುದ್ದಪ್ಪ, ಅಧ್ಯಕ್ಷರು, ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್)
*ತಾಯಿ ಕಾವೇರಿ ನಾಡಿಗೆ ಒಳಿತು ಮಾಡಲಿ : ಪುತ್ತರಿ ಹಬ್ಬದ ಶುಭಾಶಯಗಳು* (ಆಪಟ್ಟೀರ ಟಾಟು ಮೊಣ್ಣಪ್ಪ, ಆಧ್ಯಕ್ಷರು, ಮಾಯಮುಡಿ ಗ್ರಾಮ ಪಂಚಾಯತ್)
*ಕೊಡಗಿನ ಸಮಸ್ತ ಜನತೆಗೆ ಹುತ್ತರಿ ಹಬ್ಬದ ಶುಭಾಶಯಗಳು* (ಸೂದನ ಎಸ್.ಈರಪ್ಪ, ಅಧ್ಯಕ್ಷರು, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ)
ಮಡಿಕೇರಿ ನ.27 : ಮೈಸೂರಿನಲ್ಲಿ ನಡೆದ ಸೆಂಟ್ ಫಿಲೋಮಿನಾ(ಸ್ವಾಯತ್ತ)ಕಾಲೇಜಿನ 9ನೇ ಘಟಿಕೋತ್ಸವದಲ್ಲಿ ಕಂಡಂಗಾಲ ಗ್ರಾಮದ ಮುಲ್ಲೇಂಗಡ ಸಿಂಚನ ದೇಚಮ್ಮ ನಾಲ್ಕು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಸ್ಸಿ. ಪದವಿಯನ್ನು ಪಡೆದಿರುವ ಇವರು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತದಲ್ಲಿ ಅತಿ ಹೆಚ್ಚು ಅಂಕ ಗಳಿಸುವುದರೊಂದಿಗೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ನ್ಯಾಯಮೂರ್ತಿ ತಂಭುಚೆಟ್ಟಿ ಬಹುಮಾನವನ್ನೂ ಪಡೆದುಕೊಂಡಿದ್ದಾರೆ. ಇವರು ಮುಲ್ಲೇಂಗಡ ಸುರೇಶ್ ಭೀಮಯ್ಯ ಮತ್ತು ಕನಿಕೆ ದಂಪತಿಗಳ ಪುತ್ರಿ.
ನಾಪೋಕ್ಲು ನ.27 : ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಪುತ್ತರಿ ಮುನ್ನಾ ದಿನವಾದ ಭಾನುವಾರ ವಾರ್ಷಿಕ ಕುಂಬ್ಯಾರ್ ಕಲಾಡ್ಚ ಹಬ್ಬವನ್ನು ಊರಿನ ಪರವೂರಿನ ಭಕ್ತರು ಸೇರಿ ಸಾಂಪ್ರದಾಯಿಕವಾಗಿ ಶ್ರದ್ದಾಭಕ್ತಿಯಿಂದ ಜರುಗಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತುಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹಾಲು ಬಲಿವಾಡು ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದರು. ಮಹಾಪೂಜೆ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನೆರವೇರಿತು. ದೇವರ ಪ್ರಾರ್ಥನೆಯ ಬಳಿಕ ದೇವರ ನೃತ್ಯಬಲಿ ಜರುಗಿ ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಶ್ರದ್ದಾಭಕ್ತಿಯಿಂದ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ದಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊ0ಡು…
ನಾಪೋಕ್ಲು ನ.27 : ಮಡಿಕೇರಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಮತ್ತು ಪರಿವರ್ತನಾ ಸಂಘ ಮೂರ್ನಾಡು ಶಾಖೆಯ ಪದಾಧಿಕಾರಿಗಳ ಚುನಾವಣೆಯು ಸಂಘದ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಪೆಬ್ಬಾಟಂಡ ಎ.ಪೆಮ್ಮಯ್ಯ, ಉಪಾಧ್ಯಕ್ಷರಾಗಿ ಮುಂಡಂಡ ಕೆ.ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರಾಗಿ ಪುದಿಯೋಕ್ಕಡ ಬೆಲ್ಲು ಸೋಮಯ್ಯ, ಕೆ.ಸುಭಾಷ್ ವಾಂಚಿರ, ಬಡುವಂಡ ಬೆಲ್ಲು ಚಿಣ್ಣಪ್ಪ, ಮೂಡೇರ ಅಶೋಕ ಅಯ್ಯಪ್ಪ, ಕೈಪೆಟ್ಟಿರ ಹರೀಶ್ ಅಯ್ಯಪ್ಪ, ಅವರೆಮಾದಂಡ ಸುಗುಣ ಸುಬ್ಬಯ್ಯ, ನೆರವಂಡ ಅನುಪ್ ಮುತ್ತಯ್ಯ, ನಾಯಕಂಡ ದೀಪು ಚಂಗಪ್ಪ, ಆಂಗೀರ ಸಂತೋಷ್ ಮಾದಪ್ಪ , ತೆಕ್ಕಡೆ ಶೋಭಾ ಮೋಹನ್, ಚಂಗಂಡ ಕನ್ನಿಕಾ ಸೂರಜ್ , ಎಂ.ಟಿ.ದೇವಪ್ಪ, ಹೆಚ್.ಎಸ್.ಗೋಪಾಲ್ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಪಟ್ಟಡ ಮೋಹನ್, ಸಿಬ್ಬಂದಿಯವರು ಭಾಗವಹಿಸಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ನ.27 : ಎನ್ಸಿಸಿ ದಿನಾರಣೆಯ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್ಸಿಸಿಯ ವಿದ್ಯಾರ್ಥಿ ಕೆಡೆಟ್ಗಳು ಮಡಿಕೇರಿಯ ಐತಿಹಾಸಿಕ ಸ್ಮಾರಕ ತಾಣವಾದ ರಾಜರ ಗದ್ದುಗೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. 100ಕ್ಕೂ ಅಧಿಕ ವಿದ್ಯಾರ್ಥಿ ಕೆಡಟ್ಗಳು ಶುಚಿತ್ವ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಕೆಡೆಟ್ಗಳು ಗದ್ದುಗೆಯ ಆಸುಪಾಸಿನಲ್ಲಿದ್ದ ಪ್ಲಾಸ್ಟಿಕ್ ಮತ್ತು ತ್ಯಾಜ್ಯವನ್ನು ಸಂಗ್ರಹಿಸಿದರು. ಗದ್ದುಗೆಯ ಗೋಡೆಗಳನ್ನು ಸ್ವಚ್ಛಗೊಳಿಸಿದರು. ಈ ಚಟುವಟಿಕೆಯಲ್ಲಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ಹಾಗೂ ಎನ್ ಸಿ ಸಿ ಅಧಿಕಾರಿಗಳಾದ ಮೇಜರ್ ಪ್ರೊ. ರಾಘವ ಬಿ ಮತ್ತು ಹವಾಲ್ದಾರ್ ಮೇಜರ್ ರಾಮ್ ಬಹದ್ದೂರ್ ಥಾಪಾ ಮತ್ತು ಉಪನ್ಯಾಸಕಾದ ಪವನ್ ಕುಮಾರ್ ಮಾರ್ಗದರ್ಶನದಲ್ಲಿ ನಡೆಯಿತು. ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಮಾತನಾಡಿ ರಾಜರ ಗದ್ದುಗೆಯ ವಿವರ, ವಾಸ್ತುಶಿಲ್ಪ ಮತ್ತು ಸೌಂದರ್ಯ ಮೀಮಾಂಸೆಯ ಕುರಿತು, ಸಮಾಜ ಸೇವೆಯಲ್ಲಿ ಎನ್ ಸಿ ಸಿ ಕೆಡೆಟ್ ಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
*ಪುತ್ತರಿ ಹಬ್ಬದ ಶುಭಾಶಯಗಳು : ನಾಡು ಸಮೃದ್ಧಿಯಾಗಲಿ* (ಬಲ್ಲಾರಂಡ ಮಣಿ ಉತ್ತಪ್ಪ, ಅಧ್ಯಕ್ಷರು, ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ)
*ಕೊಡಗಿನ ಮಹಾ ಜನತೆಗೆ ಪುತ್ತರಿ ಹಬ್ಬದ ಶುಭಾಶಯಗಳು* (ಕುಲ್ಲೇಟಿರ ಅಜಿತ್ ನಾಣಯ್ಯ, ಬೆಳೆಗಾರರು, ನಾಪೋಕ್ಲು)






