ಲೇಖಕ: admin

ಮಡಿಕೇರಿ ಡಿ.22 : ನಗರಸಭೆಯ ಪೌರಾಯುಕ್ತರು ಸಮಾನ್ಯ ಸಭೆಯಲ್ಲಿ ಮರಣದಂಡನೆಯ ಮಾತನಾಡಿದ್ದು, ಇದು ಅತ್ಯಂತ ವಿಷಾದಕರ ಬೆಳವಣಿಗೆಯಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸದಸ್ಯರು ಹಾಗೂ ಅಧಿಕಾರಿಗಳು ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕೆ ಹೊರತು ಮಾನಸಿಕ ಒತ್ತಡ ನೀಡಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಅಭಿವೃದ್ಧಿಗೆ ಸದಸ್ಯರು ಹಾಗೂ ಅಧಿಕಾರಿಗಳು ಒಗ್ಗಟ್ಟಾಗಿ ಜೋಡೆತ್ತುಗಳಂತೆ ದುಡಿಯಬೇಕಾಗುತ್ತದೆ. ಆದರೆ ನಗರಸಭೆಯಲ್ಲಿ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದ್ದು, ಇದು ಸಾರ್ವಜನಿಕರ ಕೆಲಸ ಕಾರ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ನಗರಸಭೆಯ ಇತಿಹಾಸದಲ್ಲೇ ಈ ರೀತಿಯ ಅಸಹಾಯಕ ಆಡಳಿತವನ್ನು ಜನರು ನೋಡಿರಲಿಲ್ಲ. ಯಾವುದೇ ಪೌರಾಯುಕ್ತರು ಮರಣದಂಡನೆ ನೀಡಿ ಎಂದು ಹೇಳಿರಲಿಲ್ಲ. ಅಧಿಕಾರಿಯೊಬ್ಬರು ತುಂಬಿದ ಸಭೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದರೆ ಮಾನಸಿಕ ಒತ್ತಡದ ನಡುವೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವುದು ಸಾಬೀತಾಗಿದೆ. ಹಲವು ಅಧಿಕಾರಿಗಳು ಈಗಾಗಲೇ ವರ್ಗಾವಣೆ ಪಡೆದುಕೊಂಡು ತೆರಳಿದ್ದಾರೆ. ಉಳಿದ ಅಧಿಕಾರಿಗಳು ಕೂಡ ಇದೇ ದಾರಿ…

Read More

ಮಡಿಕೇರಿ ಡಿ.22 : ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಟ್ರಸ್ಟ್ ವತಿಯಿಂದ ಏ.19 ರಿಂದ 28 ರವರೆಗೆ ಮೂರ್ನಾಡಿನಲ್ಲಿ 20ನೇ ವರ್ಷದ ಮುಸ್ಲಿಂ ಕಪ್ ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಆದಂ ಕುಶಾಲನಗರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರ್ನಾಡು ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಜಮಾಅತ್‍ಗಳ 180 ತಂಡಗಳು ಭಾಗವಹಿಸುವ ನಿರೀಕ್ಷೆ ಇರುವುದಾಗಿ ತಿಳಿಸಿದರು. ಕ್ರಿಕೆಟ್ ಪಂದ್ಯಾವಳಿ ವಿಜೇತ ತಂಡಕ್ಕೆ 77,786 ರೂ. ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 37,786 ರೂ. ನಗದು ಮತ್ತು ಆಕರ್ಷಕ ಟ್ರೋಫಿ, ತೃತೀಯ 17,786 ರೂ. ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ 4ನೇ ಸ್ಥಾನ ಪಡೆಯುವ ತಂಡಕ್ಕೆ 7,786 ರೂ. ನಗದು ಬಹುಮಾನ ನೀಡಲಾಗುವುದು ಎಂದರು. ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತ್ತೂರು ಮಾತನಾಡಿ, ಸಮುದಾಯ ಬಾಂಧವರಿಗಾಗಿ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, 120…

Read More

ಕುಶಾಲನಗರ ಡಿ.22 :  ಕುಶಾಲನಗರ ಸಮೀಪ ಚಿಕ್ಕ ಅಳುವಾರದಲ್ಲಿರುವ ಕೊಡಗು ವಿವಿ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ಸೇವೆಯನ್ನು ಮುಂದುವರೆಸಲು ಒತ್ತಾಯಿಸಿ ಕಳೆದ 11 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತೊರೆನೂರು ಗ್ರಾಪಂ ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ‌ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮಂಗಳೂರು ವಿವಿ ಅಧೀನದಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭವಾದಾಗಿನಿಂದಲೂ ಸೇವೆಯಲ್ಲಿದ್ದ 24 ಮಂದಿ ಸಿಬ್ಬಂದಿಗಳನ್ನು ಸೇವೆಯಿಂದ ಕೈಬಿಡಲಾಗಿದೆ. ಇದರಿಂದಾಗಿ ನಮ್ಮ ಜೀವನ ಅತಂತ್ರವಾಗಿದೆ ಎಂದು ಸಿಬ್ಬಂದಿಗಳು ಕೇಂದ್ರದ ಹೊರ ಆವರಣದಲ್ಲಿ ಪ್ರತಿಭಟಿಸುತ್ತಿದ್ದು ಇವರ ಹೋರಾಟದಲ್ಲಿ ಕರ್ನಾಟಕ ಕಾವಲುಪಡೆ, ದಲಿತ ಹಿತರಕ್ಷಣಾ ಒಕ್ಕೂಟ, ಕರ್ನಾಟಕ ರಾಜ್ಯ ರೈತ ಸಂಘ‌ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. 44 ಮಂದಿ ಬೋಧಕೇತರ ಸಿಬ್ಬಂದಿಗಳ ಪೈಕಿ 18 ಮಂದಿಯನ್ನು ‌ಮಾತ್ರ ಸೇವೆಯಲ್ಲಿ ಮುಂದುವರೆಸಿದ್ದು ಕಳೆದ 8-10 ವರ್ಷಗಳಿಂದ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ, ಎಲ್ಲಾ ಅರ್ಹತೆ ಹೊಂದಿರುವ ಇತರೆ ಸಿಬ್ಬಂದಿಗಳನ್ನು ಕೈಬಿಡಲಾಗಿದೆ. ಮುಂದಿನ ದಿನಗಳಲ್ಲಿ…

Read More

ಮಡಿಕೇರಿ ಡಿ.22 : ಜಿಲ್ಲೆಯ ನೆರೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಗಡಿ ಭಾಗದಲ್ಲಿಯೂ ಸಹ ಅಗತ್ಯ ಮುನ್ನೆಚ್ಚರ ವಹಿಸುವುದು, ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಸಲಹೆ ಮಾಡಿದ್ದಾರೆ. ವಿವಿಧ ಇಲಾಖೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಂದರ್ಭದಲ್ಲಿ ಅವರು ಮಾತನಾಡಿದರು. ನೆರೆಯ ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದರಿಂದ ಜಿಲ್ಲೆಯಲ್ಲಿಯೂ ಸಹ ಅಗತ್ಯ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರಸಾದ್ ಹೇಳಿದರು. ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆ ಗ್ರಾಮದ ಗಡಿ ಪ್ರದೇಶದಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವುದರ ಜೊತೆಗೆ ಅಗತ್ಯ ತಪಾಸಣೆ ಕೈಗೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು. ‘ನೆರೆಯ ರಾಜ್ಯ ಮಾತ್ರವಲ್ಲದೆ ವಿವಿಧ ಕಡೆಗಳಲ್ಲಿ ಜೆಎನ್.1 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರ…

Read More

ಮಡಿಕೇರಿ ಡಿ.22 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ ಕ್ರೀಡಾ ವಸತಿ ನಿಲಯಗಳಿಗೆ 2024-25ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಡಿ.27 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ, ಡಿ.28 ರಂದು ಮಡಿಕೇರಿ ತಾಲ್ಲೂಕಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಹಾಗೂ ಡಿ.29 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9902911353 ಮತ್ತು 9480032712 ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.22 : ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಭಾಗಮಂಡಲ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಡಿ.ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನಾಚರಣೆ ನಡೆಯಲಿದೆ. ಈ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದು ಕೊರತೆಗಳನ್ನು ನೊಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕೋರಿದ್ದಾರೆ.

Read More

ಸಿದ್ದಾಪುರ ಡಿ.22 :   3 ವೀಲರ್ಸ್ ಕ್ರಿಕೆಟರ್ಸ್ ಅಮ್ಮತ್ತಿ ಆಟೋ ಚಾಲಕರ ಸಂಘದ ವತಿಯಿಂದ ಆಟೋ ಚಾಲಕರಿಗಾಗಿ ಅಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಮಾತನಾಡಿ, ಹಲವು ಸಂಕಷ್ಟಗಳ ನಡುವೆ ಬದುಕು ಸಾಗಿಸುತ್ತಿರುವ ಆಟೋ ಚಾಲಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕೂಡಲೇ ನೀಡಬೇಕು. ಶಿಕ್ಷಣ ಕಲಿತರು ನಿರುದ್ಯೋಗ ಸಮಸ್ಯೆಯಿಂದ ಸಾಲ ಮಾಡಿ ಆಟೋ ಚಾಲನೆ ಮಾಡಿ ತಮ್ಮ ಕುಟುಂಬ ಜೀವನ ನಡೆಸುತ್ತಿದ್ದಾರೆ. ಸರ್ಕಾರದ ಉಚಿತ ಯೋಜನೆಯಿಂದ ಮತ್ತೆ ಆಟೋ ಚಾಲಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಆಟೋ ಚಾಲಕರ ಕುಟುಂಬಗಳು ನಿವೇಶನ ಸೂರು ಇಲ್ಲದೆ ಸಂಕಷ್ಟದಲ್ಲಿದ್ದಾರೆ ಎಂದರು. ಸರ್ಕಾರ ಆಟೋ ಚಾಲಕರಿಗೆ ಎಲ್ಲಾ ಸೌಲಭ್ಯಗಳನ್ನು ನೀಡುವುದರ ಮೂಲಕ ಚಾಲಕರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು. ಆಟೋ ಚಾಲಕರು ಸಂಕಷ್ಟದ ಜೀವನದೊಂದಿಗೆ…

Read More

ಮಡಿಕೇರಿ ಡಿ.22 : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಘಟಕದ ಆಪ್ತ ಸಮಾಲೋಚಕ ಚಿಟ್ಟಿಯಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಏಡ್ಸ್ ಅರಿವು ಮೂಡಿಸಿ ಮಾತನಾಡಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿ ಹೊಂದಿರಬೇಕು. ಏಡ್ಸ್ ಹರಡದಂತೆ ಪ್ರತಿಯೊಬ್ಬರು ಮುನ್ನೆಚ್ಚರಿಕೆಯನ್ನು ವಹಿಸಬೇಕು. ಸಮಾಜದಲ್ಲಿ ಅರಿವನ್ನು ಮೂಡಿಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು. ಮತ್ತು ಎಚ್.ಐ.ವಿ. ಹರಡುವ ಬಗ್ಗೆ ಮತ್ತು ನಿಯಂತ್ರಣ ಕ್ರಮದ ವಿವರಿಸಿದರು.ಪದವಿ ಕಾಲೇಜು ಪ್ರಾಂಶುಪಾಲರಾದ ಡಾ. ಆನಂದ್ ಕಾರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಪ್ರತಿಯೊಬ್ಬರು ಸಂಸ್ಕೃತಿಯನ್ನು ಗೌರವಿಸಬೇಕು. ಸಂಸ್ಕೃತಿಯನ್ನು ಪಾಲಿಸುದರಿಂದ ಕಾಯಿಲೆಗಳು ಹರಡುವುದು ನಿಲ್ಲುತ್ತದೆ. ರಕ್ತದಾನವನ್ನು ಮಾಡುವುದರಿಂದ ಒಂದು ಜೀವವನ್ನು ಉಳಿಸಿದ ಸೌಭಾಗ್ಯ ನಮ್ಮದಾಗುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಸುನಿಲ್ ಕುಮಾರ್ ಬಿ.ಬಿ., ವಿದ್ಯಾರ್ಥಿ ಕ್ಷೇಮಪಾಲನ ಸಂಘದ ಸಂಚಾಲಕಿ ಅಂಬಿಕಾ ಉಪಸ್ಥಿತರಿದ್ದರು. ಈ…

Read More

ಮಡಿಕೇರಿ ಡಿ.22 : ಕೊಡಗು ಗೌಡ ಯುವ ವೇದಿಕೆ ವತಿಯಿಂದ 2ನೇ ಅವಧಿಯ ಗೌಡ ಕ್ರಿಕೆಟ್ ಟಿ-10 ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು 2024ರ ಏಪ್ರಿಲ್‍ನಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಸಹ ಕಾರ್ಯದರ್ಶಿ ಕಾಂಚನ ಗೌಡ ಕೆದಂಬಾಡಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಪಂದ್ಯಾವಳಿಯಲ್ಲಿ 8 ಫ್ರಾಂಚೈಸಿ ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 12 ಫ್ರಾಂಚೈಸಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಫ್ರ್ರಾಂಚೈಸಿ ಖರೀದಿಲು ಇಚ್ಛಿಸುವವರು ಡಿ.28ರ ಸಂಜೆ 6 ಗಂಟೆಯ ಒಳಗೆ ವೇದಿಕೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಆಟಗಾರರ ಹರಾಜಿನಲ್ಲಿ ಪಾಲ್ಗೊಳ್ಳುವ ಇಚ್ಛಿಸುವ ಕ್ರಿಕೆಟ್ ಪಟುಗಳಿಗೆ ಸಂಬಂಧ ಪಟ್ಟ ಅರ್ಜಿಗಳು ಇಂದಿನಿಂದಲೆ ಲಭ್ಯವಾಗಲಿದೆ. ಅರ್ಜಿಗಳನ್ನು ಆನ್ ಲೈನ್ ಮತ್ತು ಆಫ್ ಲೈನ್‍ನಲ್ಲಿ ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಅರ್ಜಿಗಳನ್ನು ಜ.18ರ ಸಂಜೆ 6 ಗಂಟೆಯ ಒಳಗೆ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿದರು. ಪಂದ್ಯಾವಳಿ ವಿಜೇತ ತಂಡಕ್ಕೆ ಈ ಬಾರಿ ಮೊದಲ ಬಹುಮಾನವಾಗಿ 1,11,111 ರೂ.…

Read More

ಮಡಿಕೇರಿ ಡಿ.22 : ಸಂಸತ್ ನಲ್ಲಿ ನಡೆದ ಆತಂಕದ ಘಟನೆಯ ಕುರಿತು ಚರ್ಚೆಯಲ್ಲಿ ತೊಡಗಿದ್ದ 142 ಸಂಸದರನ್ನು ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತಪ್ಪ ಮಾತನಾಡಿ, ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೆಲ್ಲ ಭದ್ರತಾ ಲೋಪವಾಗಿದೆ. 22 ವರ್ಷಗಳ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸಂಸತ್ ಮೇಲೆ ದಾಳಿಯಾಗಿದೆ. ಇಂದು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದ ವ್ಯಕ್ತಿಗಳು ಸಂಸತ್ ನಲ್ಲಿ ಆತಂಕ ಸೃಷ್ಟಿಸಿದ್ದು, ಈ ಘಟನೆ ದೇಶದ ಗೌರವಕ್ಕೆ ದಕ್ಕೆ ತಂದಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದರು. ಸಂಸದರನ್ನು ಅಮಾನತು ಮಾಡಿರುವುದು ಖಂಡನೀಯವೆಂದ ಧರ್ಮಜ…

Read More