ಮಡಿಕೇರಿ ಡಿ.22 : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಕಾಲೇಜಿನಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ಘಟಕದ ಆಪ್ತ ಸಮಾಲೋಚಕ ಚಿಟ್ಟಿಯಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಏಡ್ಸ್ ಅರಿವು ಮೂಡಿಸಿ ಮಾತನಾಡಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿ ಹೊಂದಿರಬೇಕು. ಏಡ್ಸ್ ಹರಡದಂತೆ ಪ್ರತಿಯೊಬ್ಬರು ಮುನ್ನೆಚ್ಚರಿಕೆಯನ್ನು ವಹಿಸಬೇಕು. ಸಮಾಜದಲ್ಲಿ ಅರಿವನ್ನು ಮೂಡಿಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು. ಮತ್ತು ಎಚ್.ಐ.ವಿ. ಹರಡುವ ಬಗ್ಗೆ ಮತ್ತು ನಿಯಂತ್ರಣ ಕ್ರಮದ ವಿವರಿಸಿದರು.ಪದವಿ ಕಾಲೇಜು ಪ್ರಾಂಶುಪಾಲರಾದ ಡಾ. ಆನಂದ್ ಕಾರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಪ್ರತಿಯೊಬ್ಬರು ಸಂಸ್ಕೃತಿಯನ್ನು ಗೌರವಿಸಬೇಕು. ಸಂಸ್ಕೃತಿಯನ್ನು ಪಾಲಿಸುದರಿಂದ ಕಾಯಿಲೆಗಳು ಹರಡುವುದು ನಿಲ್ಲುತ್ತದೆ. ರಕ್ತದಾನವನ್ನು ಮಾಡುವುದರಿಂದ ಒಂದು ಜೀವವನ್ನು ಉಳಿಸಿದ ಸೌಭಾಗ್ಯ ನಮ್ಮದಾಗುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಸುನಿಲ್ ಕುಮಾರ್ ಬಿ.ಬಿ., ವಿದ್ಯಾರ್ಥಿ ಕ್ಷೇಮಪಾಲನ ಸಂಘದ ಸಂಚಾಲಕಿ ಅಂಬಿಕಾ ಉಪಸ್ಥಿತರಿದ್ದರು. ಈ…
ಲೇಖಕ: admin
ಮಡಿಕೇರಿ ಡಿ.22 : ಕೊಡಗು ಗೌಡ ಯುವ ವೇದಿಕೆ ವತಿಯಿಂದ 2ನೇ ಅವಧಿಯ ಗೌಡ ಕ್ರಿಕೆಟ್ ಟಿ-10 ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು 2024ರ ಏಪ್ರಿಲ್ನಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಸಹ ಕಾರ್ಯದರ್ಶಿ ಕಾಂಚನ ಗೌಡ ಕೆದಂಬಾಡಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಪಂದ್ಯಾವಳಿಯಲ್ಲಿ 8 ಫ್ರಾಂಚೈಸಿ ತಂಡಗಳು ಪಾಲ್ಗೊಂಡಿದ್ದು, ಈ ಬಾರಿ 12 ಫ್ರಾಂಚೈಸಿಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಫ್ರ್ರಾಂಚೈಸಿ ಖರೀದಿಲು ಇಚ್ಛಿಸುವವರು ಡಿ.28ರ ಸಂಜೆ 6 ಗಂಟೆಯ ಒಳಗೆ ವೇದಿಕೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಆಟಗಾರರ ಹರಾಜಿನಲ್ಲಿ ಪಾಲ್ಗೊಳ್ಳುವ ಇಚ್ಛಿಸುವ ಕ್ರಿಕೆಟ್ ಪಟುಗಳಿಗೆ ಸಂಬಂಧ ಪಟ್ಟ ಅರ್ಜಿಗಳು ಇಂದಿನಿಂದಲೆ ಲಭ್ಯವಾಗಲಿದೆ. ಅರ್ಜಿಗಳನ್ನು ಆನ್ ಲೈನ್ ಮತ್ತು ಆಫ್ ಲೈನ್ನಲ್ಲಿ ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಅರ್ಜಿಗಳನ್ನು ಜ.18ರ ಸಂಜೆ 6 ಗಂಟೆಯ ಒಳಗೆ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿದರು. ಪಂದ್ಯಾವಳಿ ವಿಜೇತ ತಂಡಕ್ಕೆ ಈ ಬಾರಿ ಮೊದಲ ಬಹುಮಾನವಾಗಿ 1,11,111 ರೂ.…
ಮಡಿಕೇರಿ ಡಿ.22 : ಸಂಸತ್ ನಲ್ಲಿ ನಡೆದ ಆತಂಕದ ಘಟನೆಯ ಕುರಿತು ಚರ್ಚೆಯಲ್ಲಿ ತೊಡಗಿದ್ದ 142 ಸಂಸದರನ್ನು ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತಪ್ಪ ಮಾತನಾಡಿ, ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೆಲ್ಲ ಭದ್ರತಾ ಲೋಪವಾಗಿದೆ. 22 ವರ್ಷಗಳ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಸಂಸತ್ ಮೇಲೆ ದಾಳಿಯಾಗಿದೆ. ಇಂದು ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದ ವ್ಯಕ್ತಿಗಳು ಸಂಸತ್ ನಲ್ಲಿ ಆತಂಕ ಸೃಷ್ಟಿಸಿದ್ದು, ಈ ಘಟನೆ ದೇಶದ ಗೌರವಕ್ಕೆ ದಕ್ಕೆ ತಂದಿದೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದರು. ಸಂಸದರನ್ನು ಅಮಾನತು ಮಾಡಿರುವುದು ಖಂಡನೀಯವೆಂದ ಧರ್ಮಜ…
ಮಡಿಕೇರಿ ಡಿ.22 : ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರ ಸಂದಶ೯ನಕ್ಕೆ ಮುಕ್ತವಾಗಿದ್ದು, ಸುರಕ್ಷಿತವಾಗಿದೆ. ಕೋವಿಡ್ ಕುರಿತು ಯಾವುದೇ ಆತಂಕ ಬೇಡ ಎಂದು ಕೊಡಗು ಜಿಲ್ಲಾ ಹೊಟೇಲ್, ರೆಸಾಟ್೯, ರೆಸ್ಟೋರೆಂಟ್ ಅಸೋಸಿಯೇಷನ್ ಹೇಳಿಕೆ ನೀಡಿದೆ.ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಮಾಗ೯ಸೂಚಿಯನ್ವಯ ಎಲ್ಲಾ ಹೋಟೇಲ್, ರೆಸಾಟ್೯, ರೆಸ್ಟೋರೆಂಟ್ ಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೊಡಗು ಜಿಲ್ಲೆಗೆ ಪ್ರವಾಸಿಗರು ಭೇಟಿ ನೀಡಲು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕೊಡಗಿನ ಎಲ್ಲಾ ಪ್ರವಾಸಿತಾಣಗಳು ಪ್ರವಾಸಿಗರ ಭೇಟಿಗೆ ಮುಕ್ತವಾಗಿದ್ದು ಸುರಕ್ಷಿತವಾಗಿದೆ. ಕ್ರಿಸ್ ಮಸ್ ಮತ್ತು ಹೊಸ ವಷಾ೯ಚರಣೆಗೆ ಕೊಡಗು ಸಿದ್ದವಾಗಿದೆ ಎಂದು ಕೊಡಗು ಜಿಲ್ಲಾ ಹೋಟೇಲ್, ರೆಸಾಟ್೯, ರೆಸ್ಟೋರೆಂಟ್ ಅಸೋಸಿಯೇಷನ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ, ಡಿ.22: ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಕರೆ ನೀಡಿದರು. ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ಮಡಿಕೇರಿ ನಗರದ ಕೊಡಗು ವಿದ್ಯಾಲಯ, ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆ- ಸ್ಟೆಪ್ಸ್ ), ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ನಗರದ ಕೊಡಗು ವಿದ್ಯಾಲಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ 31ನೇ ರಾಷ್ಟ್ರೀಯ…
ಮಡಿಕೇರಿ ಡಿ.22 – ವಿವಿಧ ಸೇವಾ ಯೋಜನೆಗಳಿಗಾಗಿ ರಾಜ್ಯದಲ್ಲಿಯೇ ಅತ್ಯುತ್ತಮ ಕಾಯ೯ನಿವ೯ಹಣೆಗಾಗಿ ರಾಜ್ಯಪಾಲರಿಂದ ಪ್ರಶಸ್ತಿಗೆ ಪಾತ್ರವಾದ ಕೊಡಗು ಜಿಲ್ಲಾ ರೆಡ್ ಕ್ರಾಸ್ ಘಟಕಕ್ಕೆ ಜಿಲ್ಲಾಧಿಕಾರಿ ವೆಂಕಟ ರಾಜಾ ಅಭಿನಂದನೆ ಸಲ್ಲಿಸಿದ್ದಾರೆ. ಭಾರತೀಯ ರೆಡ್ ಕ್ರಾಸ್ ನ ಕೊಡಗು ಜಿಲ್ಲಾ ಘಟಕವು ಕಳೆದ 1 ವಷ೯ದಲ್ಲಿ ಕೈಗೊಂಡ ರಕ್ತನಿಧಿ ಶಿಬಿರ, ಆರೋಗ್ಯ ತಪಾಸಣೆ ಶಿಬಿರ, ಮಳೆ ಹಾನಿ ಸಂತ್ರಸ್ಥರಿಗೆ ನೆರವು, ಅತ್ಯಧಿಕ ಸಂಖ್ಯೆಯಲ್ಲಿ ಅಜೀವ ಸದಸ್ಯರ ನೋಂದಣಿ, ವಿದ್ಯಾಥಿ೯ ಘಟಕಗಳ ಸಕ್ರಿಯ ಕಾಯ೯ಚಟುವಟಿಕೆ, ಸ್ವಂತ ಕಟ್ಟಡ ನಿಮಾ೯ಣ ಸೇರಿದಂತೆ ವಿವಿಧ ಕಾಯ೯ಯೋಜನೆಗಳನ್ನು ಪರಿಗಣಿಸಿ ರಾಜ್ಯದಲ್ಲಿಯೇ ಅತ್ಯುತ್ತಮ ಘಟಕ ಎಂದು ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಇತ್ತೀಚಿಗೆ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ವಾಷಿ೯ಕ ಮಹಾಸಭೆಯಲ್ಲಿ ಕೊಡಗು ರೆಡ್ ಕ್ರಾಸ್ ಸಭಾಪತಿ ಬಿ.ಕೆ.ರವೀಂದ್ರ ರೈ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದರು.ಈ ಹಿನ್ನಲೆಯಲ್ಲಿ ಕೊಡಗು ರೆಡ್ ಕ್ರಾಸ್ ವತಿಯಿಂದ ಕಾಯ೯ಯೋಜನೆಗಳಿಗೆ ಸೂಕ್ತ ಮಾಗ೯ದಶ೯ನ ನೀಡುತ್ತಿರುವ ರೆಡ್ ಕ್ರಾಸ್ ಜಿಲ್ಲಾ ಸಭಾಧ್ಯಕ್ಷರಾದ ಜಿಲಾಧಿಕಾರಿ ವೆಂಕಟ ರಾಜ ಅವರಿಗೆ ಧನ್ಯವಾದ…
ಮಡಿಕೇರಿ, ಡಿ.22: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ , ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ನಗರದ ಕೊಡಗು ವಿದ್ಯಾಲಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿ ಗಮನ ಸೆಳೆದರು. ಸಮಾವೇಶದ ಕೇಂದ್ರ ವಿಷಯದಡಿ ” ನಿಮ್ಮ ಪರಿಸರ ವ್ಯವಸ್ಥೆಯನ್ನು ಅರಿಯಿರಿ, ಆರೋಗ್ಯ, ಪೋಷಣೆ ಮತ್ತು ಯೋಗಕ್ಷೇಮವನ್ನು ಬೆಳೆಸುವುದು, ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ…
ಮೂರ್ನಾಡು ಡಿ.22 : ಶಿಕ್ಷಣ ಸಂಸ್ಥೆಗಳ ಮೂಲಕ ಮಾತ್ರ ದೇಶವು ಬದಲಾವಣೆ ಕಾಣಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು. ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ವೃತ್ತಿ ಇನ್ನು ಮುಂದಕ್ಕೆ ತುಂಬಾ ಗೌರವಯುತವಾದ ವೃತ್ತಿಯಾಗಿ ಮಾರ್ಪಾಡುಗೊಳ್ಳುತ್ತದೆ. ಶಿಕ್ಷಕರಿಗೆ ವಿಶೇಷವಾದ ಶಕ್ತಿಯಿದ್ದು ಆ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಗುಣ, ಮೌಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಇದರಿಂದ ಮುಂದಕ್ಕೆ ಕ್ರಿಮಿನಲ್ಗಳನ್ನು ಹಿಡಿಯುವ ಕಾರ್ಯಗಳು ಪೊಲೀಸ್ ಇಲಾಖೆಗೆ ಇರುವುದಿಲ್ಲ. ವಿದ್ಯಾರ್ಥಿಗಳು ಸಕರಾತ್ಮಕ ವ್ಯಕ್ತಿತ್ವವುಳ್ಳ ಶಕ್ತಿಯನ್ನು ಹೊಂದಿದ್ದು, ಆ ಶಕ್ತಿಯ ಮುಖಾಂತರ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು. ಶಾಲೆಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಮಕ್ಕಳಲ್ಲಿರುವ ಹಲವು ವಿಧದ ಪ್ರತಿಭೆಗಳನ್ನು ಪ್ರಸ್ತುತ ಪಡಿಸುವ ವೇದಿಕೆಯಾಗಬೇಕು ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೌರೀರ ಜಗತ್ತಿಮ್ಮಯ್ಯ ಮಾತನಾಡಿ, ಈ ವಿದ್ಯಾಸಂಸ್ಥೆ ಉತ್ತಮ ಬೆಳವಣಿಗೆ ಕಂಡಿದೆ. ವಿದ್ಯಾಸಂಸ್ಥೆಗೆ ಪೋಷಕರ ಸಹಕಾರ ಅತ್ಯಗತ್ಯವಾಗಿದೆ.…
ಮೈಸೂರು ಡಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು. ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಡಿ.22 : ಕಕ್ಕಬೆ ಕ್ಲಸ್ಟರ್ ನ ಗಣಿತ ಪರೀಕ್ಷೆಯಲ್ಲಿ ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕಕ್ಕಬೆ ಯ 4ನೇ ತರಗತಿ ವಿದ್ಯಾರ್ಥಿ ಶರಣ್ ಮತ್ತು 6ನೇ ತರಗತಿ ವಿದ್ಯಾರ್ಥಿ ಅಜಯ್ ಗಣಿತ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ನಾಲಾಡಿ ಶಾಲೆ ಯ 5ನೇ ತರಗತಿ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡು ಕೊಂಡಿದ್ದಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.






