*ಪುತ್ತರಿ ಹಬ್ಬ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ* (ಕುಕ್ಕೇರ ಜಯ ಚಿಣ್ಣಪ್ಪ, ಮಾಲೀಕರು, ವೃಂದಾವನ್ ಕೂರ್ಗ್)
ಲೇಖಕ: admin
*ನಾಡಿನ ಜನತೆಗೆ ಪುತ್ತರಿ ಹಬ್ಬದ ಶುಭಾಶಯಗಳು* (ನೆರವಂಡ ಅನಿತಾ ಪೂವಯ್ಯ, ಅಧ್ಯಕ್ಷರು, ಮಡಿಕೇರಿ ನಗರಸಭೆ)
*ಪುತ್ತರಿ ಹಬ್ಬ ಸಮೃದ್ಧಿಯನ್ನು ತರಲಿ* (ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ಕರ್ನಾಟಕ ಸರ್ಕಾರ, ಶಾಸಕರು, ವಿರಾಜಪೇಟೆ ಕ್ಷೇತ್ರ)
*ಪುತ್ತರಿ ಹಬ್ಬ ಸಮೃದ್ಧಿಯನ್ನು ತರಲಿ* (ಡಾ.ಮಂತರ್ ಗೌಡ, ಶಾಸಕರು, ಮಡಿಕೇರಿ ಕ್ಷೇತ್ರ)
*ಪುತ್ತರಿ ಹಬ್ಬ ಸರ್ವರಿಗೂ ಶುಭ ತರಲಿ* (ತೇಲಪಂಡ ಶಿವಕುಮಾರ್ ನಾಣಯ್ಯ, ಕಾರ್ಯಕಾರಿ ಸಮಿತಿ ಸದಸ್ಯರು, ಕೊಡಗು ಜಿಲ್ಲಾ ಬಿಜೆಪಿ)
ಮಡಿಕೇರಿ ನ.26 : ಭಾರತೀಯ ಸಂವಿಧಾನ ದೇಶದ ಜನರ ಆಶೋತ್ತರಗಳಿಗೆ ಪೂರಕವಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಜಿ.ಉಮಾ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನ ಸದಾ ನಮ್ಮೊಂದಿಗೆ ಇರುವ ಜೀವಂತಿಕೆಯಾಗಿದೆ. ಭಾರತದ ಪ್ರತಿಯೋರ್ವ ನಾಗರೀಕನ ಆಶೋತ್ತರಗಳಿಗೂ ಸ್ಪಂದಿಸುವ ಶಕ್ತಿ ಸಂವಿಧಾನಕ್ಕೆ ಇದೆ ಎಂದು ಹೇಳಿದರು. ಕೊಡಗಿನ ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಧನೆಯ ಮೂಲಕ ಖ್ಯಾತಿ ಪಡೆದು ಜಿಲ್ಲೆಯ ಕ್ರೀಡಾಹಿರಿಮೆಯನ್ನು ಹೆಚ್ಚಿಸಿದ್ದಾರೆ. ಇದೀಗ ವಕೀಲರು ಕೂಡ ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಕ್ರೀಡಾಪ್ರತಿಭೆಯನ್ನು ಬೆಳಕಿಗೆ ತರುತ್ತಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಉಮಾ ಹೇಳಿದರು. ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಮಾತನಾಡಿ, 1949 ರ ನವಂಬರ್ 26 ರಂದು ಅಂಗೀಕರಿಸಲ್ಪಟ್ಟು, 1950 ನೇ…
ಮಡಿಕೇರಿ ನ.26 : ಭಾರತೀಯ ಸಂವಿಧಾನ ದೇಶದ ಜನರ ಆಶೋತ್ತರಗಳಿಗೆ ಪೂರಕವಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕೊಡಗು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಂ.ಜಿ.ಉಮಾ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಕೀಲರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಭೋದಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನ ಸದಾ ನಮ್ಮೊಂದಿಗೆ ಇರುವ ಜೀವಂತಿಕೆಯಾಗಿದೆ. ಭಾರತದ ಪ್ರತಿಯೋರ್ವ ನಾಗರೀಕನ ಆಶೋತ್ತರಗಳಿಗೂ ಸ್ಪಂದಿಸುವ ಶಕ್ತಿ ಸಂವಿಧಾನಕ್ಕೆ ಇದೆ ಎಂದು ಹೇಳಿದರು. ಕೊಡಗಿನ ಕ್ರೀಡಾಪಟುಗಳು ತಮ್ಮ ಕ್ರೀಡಾ ಸಾಧನೆಯ ಮೂಲಕ ಖ್ಯಾತಿ ಪಡೆದು ಜಿಲ್ಲೆಯ ಕ್ರೀಡಾಹಿರಿಮೆಯನ್ನು ಹೆಚ್ಚಿಸಿದ್ದಾರೆ. ಇದೀಗ ವಕೀಲರು ಕೂಡ ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಕ್ರೀಡಾಪ್ರತಿಭೆಯನ್ನು ಬೆಳಕಿಗೆ ತರುತ್ತಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದು ಉಮಾ ಹೇಳಿದರು. ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಮಾತನಾಡಿ, 1949 ರ ನವಂಬರ್ 26 ರಂದು ಅಂಗೀಕರಿಸಲ್ಪಟ್ಟು, 1950 ನೇ…
ಮಡಿಕೇರಿ ನ.26 : ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮಿತಿ ಮೀರಿದೆ. ಕಾಡಾನೆಗಳ ಹಿಂಡು ಕಾಡಿನಿಂದ ತೋಟ, ಇದೀಗ ತೋಟದಿಂದ ಮನೆಯಂಗಳಕ್ಕೆ ಬಂದು ಉಪಟಳ ನೀಡಲು ಆರಂಭಿಸಿದೆ ವಿರಾಜಪೇಟೆ ತಾಲ್ಲೂಕಿನ ಬೇಟೋಳ್ಳಿ ಗ್ರಾಮದಲ್ಲಿ ಸುಮಾರು ನಾಲ್ಕು ಕಾಡಾನೆಗಳು ಕಾಣಿಸಿಕೊಂಡಿವೆ. ಕಳೆದ ಮೂರು ದಿನಗಳಿಂದ ಮುಖ್ಯ ರಸ್ತೆ ಸಂಚರಿಸುತ್ತಿರುವ ಕಾಡಾನೆಗಳು ಸ್ಥಳೀಯ ಡಿ.ಎಚ್.ಎಸ್ ಮಿಲ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ನಿಲ್ಲಿಸಿದ್ದ ಕಾರುಗಳ ಪಕ್ಕದಲ್ಲೇ ಸ್ವಲ್ಪ ಹೊತ್ತು ಅಡ್ಡಾಡಿದ ಎರಡು ಕಾಡಾನೆಗಳು ಯಾವುದೇ ಹಾನಿ ಮಾಡದೆ ಮರಳಿದೆ. ಆನೆಗಳ ಹಿಂಡು ಇಲ್ಲಿನ ಶ್ರೀಭದ್ರಕಾಳಿ ದೇವಸ್ಥಾನದ ಸಮೀಪದಲ್ಲೇ ಇದೆ ಎಂದು ಗ್ರಾಮಸ್ಥರು ಭಯ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನ ಮಾಡಿದರು. ಸಾರ್ವಜನಿಕರು ಸಂಚರಿಸುವಾಗ ಎಚ್ಚರದಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾಡಾನೆ ಹಾವಳಿ ತಡೆಗೆ ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ನ.26 : ಅಯೋಧ್ಯೆ ನಗರಿಯ ಭವ್ಯ ಶ್ರೀರಾಮ ಮಂದಿರದಲ್ಲಿ ಮುಂದಿನ ವರ್ಷ ಜನವರಿ 22 ರಂದು ಶ್ರೀರಾಮನ ಪ್ರತಿಷ್ಠಾಪನೆಯಾಗಲಿದೆ. ಈ ಹಿನ್ನೆಲೆ ಪ್ರತಿ ಮನೆಗಳಿಗೆ ತಲುಪಿಸಲು ಅಯೋಧ್ಯೆಯಿಂದ ಕರ್ನಾಟಕಕ್ಕೆ ಮಂತ್ರಾಕ್ಷತೆಯನ್ನು ತರಲಾಗಿದೆ. ಇದೀಗ ಮಂತ್ರಾಕ್ಷತೆ ಕೊಡಗನ್ನು ಕೂಡ ತಲುಪಿದ್ದು, ಮಡಿಕೇರಿ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಇರಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಉಪಾಧ್ಯಕ್ಷ ಕೂತಿ ಪರಮೇಶ್ ಹಾಗೂ ಸಹ ಕಾರ್ಯದರ್ಶಿ ಸಂತೋಷ್ ಅವರುಗಳು ಬೆಂಗಳೂರಿನ ವಿಹೆಚ್ಪಿ ಕಚೇರಿಯಿಂದ ಮಂತ್ರಾಕ್ಷತೆ ತುಂಬಿದ ಬಿಂದಿಗೆಗಳನ್ನು ಪಡೆದು ಮಡಿಕೇರಿಗೆ ತಂದರು. ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ರಾಜೇಶನಾಥ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಮಂತ್ರಾಕ್ಷತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾಲಯದಲ್ಲಿಡಲಾಗಿರುವ ಮಂತ್ರಾಕ್ಷತೆಯನ್ನು ನ.29 ರಂದು ಓಂಕಾರ ಸದನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಘ ಪರಿವಾರದ ಪ್ರಮುಖರಿಗೆ ಹಾಗೂ ಕಾರ್ಯಕರ್ತರಿಗೆ ನೀಡಲಾಗುವುದು. ಇವರು ಕೊಡಗು ಜಿಲ್ಲೆಯ ಪ್ರತಿ ಮನೆಮನೆಗಳಿಗೆ ರಾಮನ ಭಾವಚಿತ್ರ ಮತ್ತು ಮಂತ್ರಾಕ್ಷತೆಯನ್ನು ಹಂಚಲಿದ್ದಾರೆ ಎಂದು ಸುರೇಶ್ ಮುತ್ತಪ್ಪ ತಿಳಿಸಿದರು. ಶ್ರೀರಾಮನ…
ಮಡಿಕೇರಿ ನ.26 : ಕೊಡವ ನ್ಯಾಷನಲ್ ಕೌನ್ಸಿಲ್ ನ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದ್ದು, ಖ್ಯಾತ ಅರ್ಥ ಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಪ್ರಯತ್ನದ ಫಲವಾಗಿ ಶೀಘ್ರ ಕೊಡವ ಲ್ಯಾಂಡ್ ಪರ ತೀರ್ಪು ಹೊರ ಬೀಳಲಿದೆ ಎಂದು ವಿರಾಟ್ ಹಿಂದೂಸ್ಥಾನ್ ಸಂಘಂನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ಹೊರ ವಲಯದ ಕ್ಯಾಪಿಟಲ್ ವಿಲೇಜ್ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನಡೆದ 33ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನದ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಈಗಾಗಲೇ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ಲ್ಯಾಂಡ್ ಸ್ವಾಯತ್ತತೆ ಕುರಿತು ವಿಜಯೋತ್ಸವ ಆಚರಿಸಲು ಕೊಡಗಿಗೆ ಬರುವುದಾಗಿ ಹೇಳಿದ್ದಾರೆ. ಕೆಲವೇ ದಿನಗಳಲ್ಲ್ಲಿ ಈ ಕುರಿತು ಅಂತಿಮ ತೀರ್ಪು ಬರಲಿದ್ದು, ಸಂವಿಧಾನ ಬದ್ಧವಾಗಿಯೇ ಕೊಡವ ಲ್ಯಾಂಡ್ ಬೇಡಿಕೆ ಈಡೇರಲಿದೆ ಎಂದರು. ಹೈಕೋರ್ಟ್ ನಲ್ಲಿ…






