ಲೇಖಕ: admin

ಮೈಸೂರು ಡಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು. ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್  ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.22 :  ಕಕ್ಕಬೆ ಕ್ಲಸ್ಟರ್ ನ ಗಣಿತ ಪರೀಕ್ಷೆಯಲ್ಲಿ  ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕಕ್ಕಬೆ ಯ 4ನೇ  ತರಗತಿ ವಿದ್ಯಾರ್ಥಿ ಶರಣ್  ಮತ್ತು  6ನೇ ತರಗತಿ ವಿದ್ಯಾರ್ಥಿ  ಅಜಯ್ ಗಣಿತ ಪರೀಕ್ಷೆಯಲ್ಲಿ  ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ  ನಾಲಾಡಿ ಶಾಲೆ ಯ 5ನೇ ತರಗತಿ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡು ಕೊಂಡಿದ್ದಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಡಿ.22 : ಕೇಂದ್ರ ಸರ್ಕಾರ ಸಂಸತ್ತಿನ 142 ಸಂಸದರನ್ನು ಅಮಾನತುಗೊಳಿಸಿದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿದರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ  ಧರ್ಮಜ ಉತಪ್ಪ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಸಂಸತ್ತಿನ ಉಭಯ ಸದನದ 142 ಸಂಸದರನ್ನು ಅಸಾಂವಿಧಾನಿಕ ರೀತಿಯಲ್ಲಿ ಅಮಾನತು ಗೊಳಿಸಿ, ಪ್ರಜಾಪ್ರಭುತ್ವದ ಕಾಗೋಲೆ ಮಾಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಟಿ.ಪಿ.ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರ ಕಾಂಗ್ರೆಸ್ ಆಧ್ಯಕ್ಷ ರಾಜೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಾಯ್ಯ ಅಬ್ರಾರ್,  ಮುಖಂಡರಾದ ಕೊಲ್ಯದ ಗಿರೀಶ್, ಕಾನೆಹಿತ್ಲು…

Read More

ನಾಪೋಕ್ಲು ಡಿ.22 : ಕೊಳಕೇರಿಯಿಂದ ಕುಪ್ಪೋಟು ಸೇತುವೆಯ ಕಡೆ ತೆರಲುವ ರಸ್ತೆಯ ಪಕ್ಕದಲ್ಲಿರುವ ಒಣಗಿದ ಮರ ಅಪಾಯವನ್ನು ಆಹ್ವಾನಿಸುತ್ತಿದೆ. ರಸ್ತೆಯ ಸಮೀಪವಿರುವ ಅಂಗನವಾಡಿ ಪಕ್ಕ ಟಿ.ಎ.ಮಹಮ್ಮದ್ ಎಂಬವರ ಮನೆಯ ಮುಂಭಾಗದ ರಸ್ತೆ ಬದಿಯಲ್ಲಿ ಬಾರಿ ಗಾತ್ರದ ಒಣಗಿದ ಮರ ಒಂದು ಬೀಳುವ ಸ್ಥಿತಿ ಯಲ್ಲಿದೆ. ಮರ ಕೆಳಗೆ ವಿದ್ಯುತ್ ಲೈನ್ (ತಂತಿ )ಹಾದು ಹೋಗಿದ್ದು, ಮರ ಬಿದ್ದು ಅವಘಡ ಸಂಭವಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವೈದು ಎಂ.ಎ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಡಿ.22 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಾಪೋಕ್ಲು ಸಮೀಪದ ಬೋಳಿಬಾಣೆ ಎಂಬಲ್ಲಿ ನಡೆದಿದೆ. ಮೂರ್ನಾಡು ಕಡೆಯಿಂದ ನಾಪೋಕ್ಲು ಕಡೆಗೆ ಬರುತ್ತಿದ್ದ ಬಲ್ಲಮಾವಟ್ಟಿಯ ಪೇರೂರು ಗ್ರಾಮದ ಚಂಗೇಟಿರ ರವೀಂದ್ರ ಚಲಾಯಿಸುತ್ತಿದ್ದ ಮಾರುತಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ರವೀಂದ್ರ ಮತ್ತು ಅವರ ಮಗಳು ಕಾರಿನಲ್ಲಿದ್ದು, ನನ್ನ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ . ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಡಿ.22 : ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಿಸಲಾಯಿತು. ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ  ಶಾಸಕಿ  ಭಾಗಿರಥಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ದೇಶದಲ್ಲಿ 9 ಕೋಟಿಗಿಂತಲೂ ಅಧಿಕ ಮಹಿಳೆಯರಿಗೆ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಸಂಪರ್ಕವನ್ನು ನೀಡಿದ್ದಾರೆ.  ಅವರ ದೂರ ದೃಷ್ಟಿಯಿಂದ ಕೇಂದ್ರದಿಂದ ಬರುವ ಒಂದು ಪೈಸೆಯಾದರು ನೇರವಾಗಿ ಫಲಾನುಭವಿಗಳ ಖಾತೆಗೆ ಬೀಳುತ್ತದೆ ಎಂದರು. ಅರಂತೋಡು ಗ್ರಾ.ಪಂ  ಅಧ್ಯಕ್ಷ ಕೇಶವ ಅಡ್ತಲೆ ಮಾತನಾಡಿ, ಸರಕಾರದಿಂದ ಸಿಗುವ ಸವಲತ್ತನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮಾತನಾಡಿ, ಗ್ಯಾಸ್ ಸಂಪರ್ಕದಿಂದ ಉತ್ತಮ ಆರೋಗ್ಯ, ಪರಿಸರ ರಕ್ಷಣೆ ಮತ್ತು ಆರ್ಥಿಕವಾಗಿ ಲಾಭವಾಗುತ್ತದೆ. ಪ್ರಧಾನಮಂತ್ರಿಯವರ ವಿಕಸಿತ ಯೋಜನೆಯಡಿಯಲ್ಲಿ ಅನೇಕ ಕಾರ್ಯಕ್ರಮಗಳಿದ್ದು,…

Read More

ಬೆಂಗಳೂರು ಡಿ.21 : ಕೊಡಗಿನ ಪ್ರಖ್ಯಾತ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬ ಕುಂಡ್ಯೊಳಂಡ ಕಪ್ ಹಾಕಿ-2024 ರ  ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಬೋಪಣ್ಣ ಮತ್ತು ಕುಂಡ್ಯೊಳಂಡ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಮಡಿಕೇರಿ ಡಿ.21 : ಸುಮಾರು 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ. ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾದಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ. ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿದೆ. ಲಿಯೋ ಕೊಡಗು ಪೊಲೀಸ್…

Read More

ಮಡಿಕೇರಿ ಡಿ.21 : ಸುಮಾರು 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ. ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾದಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ. ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿದೆ. ಲಿಯೋ ಕೊಡಗು ಪೊಲೀಸ್…

Read More

ವಿರಾಜಪೇಟೆ  ಡಿ.21 :  ಜಗತ್ತಿಗೆ ಶಾಂತಿಯ ಸಂದೇಶ ಸಾರುವ ಹಬ್ಬವೇ ಕ್ರಿಸ್ಮಸ್ ಹಬ್ಬವಾಗಿದೆ ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ಐಸಾಕ್ ರತ್ನಾಕರ್  ಅಭಿಪ್ರಾಯಪಟ್ಟರು.  ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿನಲ್ಲಿ ನಡೆದ ಕ್ರಿಸ್ ಮಸ್ ಆಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ  ಮಾತನಾಡಿದ ಅವರು,  ಶಾಂತಿ, ಪ್ರೀತಿ, ಬ್ರಾತೃತ್ವ ಕ್ರಿಸ್ ಮಸ್ ನ ಹಬ್ಬದ ಸಂದೇಶಗಳಾಗಿವೆ. ಯೇಸು ಕ್ರಿಸ್ತರು ಜನಿಸಿದ ಪುಣ್ಯ ಕ್ಷಣ ಇದಾಗಿದೆ. ವಿಶ್ವದಾದ್ಯಂತ ಆಚರಿಸಲ್ಪಡುವ ಈ ಹಬ್ಬವು ಇಡೀ ವಿಶ್ವದಲ್ಲಿ ಸುಖ ಶಾಂತಿಯನ್ನು ಮೂಡಿಸಲಿ. ಪರಸ್ಪರ ಅನ್ಯೋನ್ಯತೆ ನೆಲೆಸಲಿ ಎಂದರು. ಸಂತ ಅನ್ನಮ್ಮ ಪಿ.ಯು.ಕಾಲೇಜು ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು  ಮಾತನಾಡಿ,  ಕ್ರಿಸ್ಮಸ್ ದೇವರ ಹಬ್ಬವಾಗಿದ್ದು, ಯೇಸು ಕ್ರಿಸ್ತರ ಜನನದ ಸಂಕೇತವನ್ನು ತೋರಿಸುತ್ತದೆ. ಲೋಕಕಲ್ಯಾಣಕಾಗಿ ಯೇಸು ಕ್ರಿಸ್ತರ ಜನನವಾಯಿತು. ಈ ಕ್ರಿಸ್ಮಸ್ ಹಬ್ಬವು ಎಲ್ಲರಲ್ಲಿ ಶಾಂತಿ ನೆಮ್ಮದಿಯನ್ನು ಹೊತ್ತು ತರಲಿ ಎಂದು ಶುಭ ಹಾರೈಸಿದರು. ಸೆಂಟ್ ಆನ್ಸ್ ಪದವಿ ಕಾಲೇಜು ಪ್ರಾಂಶುಪಾಲೆ…

Read More