ಮಡಿಕೇರಿ, ಡಿ.22: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ , ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ನಗರದ ಕೊಡಗು ವಿದ್ಯಾಲಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ 31ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. “ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ವಿವಿದ ಉಪ ವಿಷಯಗಳ ಕುರಿತು ವಿವಿಧ ಶಾಲೆಗಳಿಂದ ಆಗಮಿಸಿದ್ದ ಕಿರಿಯ ವಿಜ್ಞಾನಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ವತಃ ತಯಾರಿಸಿದ ವೈಜ್ಞಾನಿಕ ಯೋಜನಾ ಪ್ರಬಂಧಗಳನ್ನು ವಿಜ್ಞಾನಿಗಳ ಮಾದರಿಯಲ್ಲಿ ಮಂಡಿಸಿ ಗಮನ ಸೆಳೆದರು. ಸಮಾವೇಶದ ಕೇಂದ್ರ ವಿಷಯದಡಿ ” ನಿಮ್ಮ ಪರಿಸರ ವ್ಯವಸ್ಥೆಯನ್ನು ಅರಿಯಿರಿ, ಆರೋಗ್ಯ, ಪೋಷಣೆ ಮತ್ತು ಯೋಗಕ್ಷೇಮವನ್ನು ಬೆಳೆಸುವುದು, ಪರಿಸರ ವ್ಯವಸ್ಥೆ ಮತ್ತು ಆರೋಗ್ಯಕ್ಕಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ…
ಲೇಖಕ: admin
ಮೂರ್ನಾಡು ಡಿ.22 : ಶಿಕ್ಷಣ ಸಂಸ್ಥೆಗಳ ಮೂಲಕ ಮಾತ್ರ ದೇಶವು ಬದಲಾವಣೆ ಕಾಣಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು. ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ವೃತ್ತಿ ಇನ್ನು ಮುಂದಕ್ಕೆ ತುಂಬಾ ಗೌರವಯುತವಾದ ವೃತ್ತಿಯಾಗಿ ಮಾರ್ಪಾಡುಗೊಳ್ಳುತ್ತದೆ. ಶಿಕ್ಷಕರಿಗೆ ವಿಶೇಷವಾದ ಶಕ್ತಿಯಿದ್ದು ಆ ಮೂಲಕ ವಿದ್ಯಾರ್ಥಿಗಳಲ್ಲಿ ಉತ್ತಮ ಗುಣ, ಮೌಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಇದರಿಂದ ಮುಂದಕ್ಕೆ ಕ್ರಿಮಿನಲ್ಗಳನ್ನು ಹಿಡಿಯುವ ಕಾರ್ಯಗಳು ಪೊಲೀಸ್ ಇಲಾಖೆಗೆ ಇರುವುದಿಲ್ಲ. ವಿದ್ಯಾರ್ಥಿಗಳು ಸಕರಾತ್ಮಕ ವ್ಯಕ್ತಿತ್ವವುಳ್ಳ ಶಕ್ತಿಯನ್ನು ಹೊಂದಿದ್ದು, ಆ ಶಕ್ತಿಯ ಮುಖಾಂತರ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಬೇಕು. ಶಾಲೆಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಮಕ್ಕಳಲ್ಲಿರುವ ಹಲವು ವಿಧದ ಪ್ರತಿಭೆಗಳನ್ನು ಪ್ರಸ್ತುತ ಪಡಿಸುವ ವೇದಿಕೆಯಾಗಬೇಕು ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೌರೀರ ಜಗತ್ತಿಮ್ಮಯ್ಯ ಮಾತನಾಡಿ, ಈ ವಿದ್ಯಾಸಂಸ್ಥೆ ಉತ್ತಮ ಬೆಳವಣಿಗೆ ಕಂಡಿದೆ. ವಿದ್ಯಾಸಂಸ್ಥೆಗೆ ಪೋಷಕರ ಸಹಕಾರ ಅತ್ಯಗತ್ಯವಾಗಿದೆ.…
ಮೈಸೂರು ಡಿ 22: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿದರು. ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಡಿಕೇರಿ ಡಿ.22 : ಕಕ್ಕಬೆ ಕ್ಲಸ್ಟರ್ ನ ಗಣಿತ ಪರೀಕ್ಷೆಯಲ್ಲಿ ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕಕ್ಕಬೆ ಯ 4ನೇ ತರಗತಿ ವಿದ್ಯಾರ್ಥಿ ಶರಣ್ ಮತ್ತು 6ನೇ ತರಗತಿ ವಿದ್ಯಾರ್ಥಿ ಅಜಯ್ ಗಣಿತ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ನಾಲಾಡಿ ಶಾಲೆ ಯ 5ನೇ ತರಗತಿ ವಿದ್ಯಾರ್ಥಿ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡು ಕೊಂಡಿದ್ದಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಡಿ.22 : ಕೇಂದ್ರ ಸರ್ಕಾರ ಸಂಸತ್ತಿನ 142 ಸಂಸದರನ್ನು ಅಮಾನತುಗೊಳಿಸಿದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿದರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತಪ್ಪ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಸಂಸತ್ತಿನ ಉಭಯ ಸದನದ 142 ಸಂಸದರನ್ನು ಅಸಾಂವಿಧಾನಿಕ ರೀತಿಯಲ್ಲಿ ಅಮಾನತು ಗೊಳಿಸಿ, ಪ್ರಜಾಪ್ರಭುತ್ವದ ಕಾಗೋಲೆ ಮಾಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಟಿ.ಪಿ.ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ನಗರ ಕಾಂಗ್ರೆಸ್ ಆಧ್ಯಕ್ಷ ರಾಜೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣ ಅಧ್ಯಕ್ಷ ಸೂರಜ್ ಹೊಸೂರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಾಯ್ಯ ಅಬ್ರಾರ್, ಮುಖಂಡರಾದ ಕೊಲ್ಯದ ಗಿರೀಶ್, ಕಾನೆಹಿತ್ಲು…
ನಾಪೋಕ್ಲು ಡಿ.22 : ಕೊಳಕೇರಿಯಿಂದ ಕುಪ್ಪೋಟು ಸೇತುವೆಯ ಕಡೆ ತೆರಲುವ ರಸ್ತೆಯ ಪಕ್ಕದಲ್ಲಿರುವ ಒಣಗಿದ ಮರ ಅಪಾಯವನ್ನು ಆಹ್ವಾನಿಸುತ್ತಿದೆ. ರಸ್ತೆಯ ಸಮೀಪವಿರುವ ಅಂಗನವಾಡಿ ಪಕ್ಕ ಟಿ.ಎ.ಮಹಮ್ಮದ್ ಎಂಬವರ ಮನೆಯ ಮುಂಭಾಗದ ರಸ್ತೆ ಬದಿಯಲ್ಲಿ ಬಾರಿ ಗಾತ್ರದ ಒಣಗಿದ ಮರ ಒಂದು ಬೀಳುವ ಸ್ಥಿತಿ ಯಲ್ಲಿದೆ. ಮರ ಕೆಳಗೆ ವಿದ್ಯುತ್ ಲೈನ್ (ತಂತಿ )ಹಾದು ಹೋಗಿದ್ದು, ಮರ ಬಿದ್ದು ಅವಘಡ ಸಂಭವಿಸುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವೈದು ಎಂ.ಎ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಡಿ.22 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಾಪೋಕ್ಲು ಸಮೀಪದ ಬೋಳಿಬಾಣೆ ಎಂಬಲ್ಲಿ ನಡೆದಿದೆ. ಮೂರ್ನಾಡು ಕಡೆಯಿಂದ ನಾಪೋಕ್ಲು ಕಡೆಗೆ ಬರುತ್ತಿದ್ದ ಬಲ್ಲಮಾವಟ್ಟಿಯ ಪೇರೂರು ಗ್ರಾಮದ ಚಂಗೇಟಿರ ರವೀಂದ್ರ ಚಲಾಯಿಸುತ್ತಿದ್ದ ಮಾರುತಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ರವೀಂದ್ರ ಮತ್ತು ಅವರ ಮಗಳು ಕಾರಿನಲ್ಲಿದ್ದು, ನನ್ನ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ . ವರದಿ : ದುಗ್ಗಳ ಸದಾನಂದ
ಮಡಿಕೇರಿ ಡಿ.22 : ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಿಸಲಾಯಿತು. ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈಗಾಗಲೇ ದೇಶದಲ್ಲಿ 9 ಕೋಟಿಗಿಂತಲೂ ಅಧಿಕ ಮಹಿಳೆಯರಿಗೆ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಸಂಪರ್ಕವನ್ನು ನೀಡಿದ್ದಾರೆ. ಅವರ ದೂರ ದೃಷ್ಟಿಯಿಂದ ಕೇಂದ್ರದಿಂದ ಬರುವ ಒಂದು ಪೈಸೆಯಾದರು ನೇರವಾಗಿ ಫಲಾನುಭವಿಗಳ ಖಾತೆಗೆ ಬೀಳುತ್ತದೆ ಎಂದರು. ಅರಂತೋಡು ಗ್ರಾ.ಪಂ ಅಧ್ಯಕ್ಷ ಕೇಶವ ಅಡ್ತಲೆ ಮಾತನಾಡಿ, ಸರಕಾರದಿಂದ ಸಿಗುವ ಸವಲತ್ತನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮಾತನಾಡಿ, ಗ್ಯಾಸ್ ಸಂಪರ್ಕದಿಂದ ಉತ್ತಮ ಆರೋಗ್ಯ, ಪರಿಸರ ರಕ್ಷಣೆ ಮತ್ತು ಆರ್ಥಿಕವಾಗಿ ಲಾಭವಾಗುತ್ತದೆ. ಪ್ರಧಾನಮಂತ್ರಿಯವರ ವಿಕಸಿತ ಯೋಜನೆಯಡಿಯಲ್ಲಿ ಅನೇಕ ಕಾರ್ಯಕ್ರಮಗಳಿದ್ದು,…
ಬೆಂಗಳೂರು ಡಿ.21 : ಕೊಡಗಿನ ಪ್ರಖ್ಯಾತ ಕೊಡವ ಕುಟುಂಬಗಳ ನಡುವಿನ ಹಾಕಿ ಹಬ್ಬ ಕುಂಡ್ಯೊಳಂಡ ಕಪ್ ಹಾಕಿ-2024 ರ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತ ನಿವಾಸ ಕೃಷ್ಣಾದಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಬೋಪಣ್ಣ ಮತ್ತು ಕುಂಡ್ಯೊಳಂಡ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಡಿಕೇರಿ ಡಿ.21 : ಸುಮಾರು 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳ ವಿಭಾಗದ ಲಿಯೋ ಅನಾರೋಗ್ಯದಿಂದ ಮೃತಪಟ್ಟಿದೆ. ಲಿಯೋ 2013 ನೇ ಫೆ.26 ರಿಂದ 10 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿದೆ. ತನ್ನ ಸೇವಾ ಅವಧಿಯಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ವರದಿಯಾದ ಕ್ಲಿಷ್ಟಕರ ಪ್ರಕರಣಗಳ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. 382 ಅಪರಾಧ ಪ್ರಕರಣ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಲಿಯೋ 46 ಅಪರಾದಿಗಳನ್ನು ಪತ್ತೆ ಮಾಡಿದೆ. 22 ಪ್ರಕರಣಗಳಲ್ಲಿ ಅಪರಾಧಿಗಳ ಸುಳಿವು ನೀಡಿದೆ. 2018 ನೇ ಸಾಲಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಭೂಕಸಿತದಿಂದ ನಾಪತ್ತೆಯಾದ ನಾಲ್ವರ ಮೃತ ದೇಹಗಳನ್ನು ಪತ್ತೆ ಮಾಡಿದೆ. ಚೆಕ್ ಪೋಸ್ಟ್ಗಳಲ್ಲಿ ನಿಷೇಧಿತ ಮಾದಕ ವಸ್ತುಗಳ ಸಾಗಾಟ ಪ್ರಕರಣವನ್ನು ಬಯಲಿಗೆಳೆದಿದೆ. ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 4 ಬಹುಮಾನವನ್ನು ಗೆದ್ದಿದೆ. ಲಿಯೋ ಕೊಡಗು ಪೊಲೀಸ್…






