ಮಡಿಕೇರಿ ಡಿ.30 NEWS DESK : ಇತ್ತೀಚಿನ ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ತಂಡಗಳಿಗೆ ಕೊಡಗಿನ ಕ್ರೀಡಾ ಪ್ರತಿಭೆಗಳು ಆಯ್ಕೆಯಾಗದೆ ಇರುವುದು ಕಂಡು ಬಂದಿದೆ. ಈ ಕುರಿತು ಸಾಮೂಹಿಕ ಚಿಂತನೆ ನಡೆಸಿ ಕ್ರೀಡಾಪಟುಗಳ ಬೆಳವಣಿಗೆಗೆ ಶಿಸ್ತುಬದ್ಧ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡವ ಕೌಟುಂಬಿಕ ಹಾಕಿ ಉತ್ಸವ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಹಾಕಿ ಕೊಡವ ಸಂಸ್ಕøತಿಯ ಒಂದು ಭಾಗವಾಗಿದೆ, ಕೊಡವರು ಸಣ್ಣ ಸಂಖ್ಯೆಯಲ್ಲಿದ್ದರೂ ದೊಡ್ಡ ಸಂಖ್ಯೆಯ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಿದ್ದಾರೆ. ಆದರೆ ಇಂದು ರಾಜ್ಯ ಮಟ್ಟದ ತಂಡಕ್ಕೂ ಕ್ರೀಡಾ ಪ್ರತಿಭೆಗಳು ಆಯ್ಕೆಯಾಗದೆ ಇರುವುದು ಕಂಡು ಬಂದಿದೆ ಎಂದು…
ಲೇಖಕ: admin
ಕಾರ್ಕಳ ಡಿ.30 NEWS DESK : ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮಥ್ರ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಹಾಗೂ ಕಾರ್ಕಳ ತಾಲೂಕಿಗೆ ಹೆಮ್ಮೆಯನ್ನು ತಂದಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮೇಲಿನ ಆಳವಾದ ಅಭಿಮಾನವನ್ನು ತಮ್ಮ ಭಾಷಣದಲ್ಲಿ ಸ್ಪಷ್ಟವಾಗಿ ಪ್ರತಿಬಿಂಬಿಸಿದ ಆದ್ಯ ಅವರು, ಸುಸ್ಪಷ್ಟ ಉಚ್ಚಾರಣೆ, ವಿಚಾರಬದ್ಧ ವಿಷಯ ಪ್ರಸ್ತುತಿ ಹಾಗೂ ಆತ್ಮವಿಶ್ವಾಸಪೂರ್ಣ ನಿರೂಪಣೆಯಿಂದ ಮೆಚ್ಚುಗೆಗೆ ಪಾತ್ರರಾದರು. ಸ್ಪರ್ಧೆಯ ವೇಳೆ ಆದ್ಯ ಅವರು ಸಮಕಾಲೀನ ವಿಚಾರಗಳನ್ನು ಕನ್ನಡದ ಸೊಗಸಿನ ಭಾಷೆಯೊಂದಿಗೆ ಜೋಡಿಸಿ ಮಂಡಿಸಿದ ರೀತಿಗೆ ಪ್ರೇಕ್ಷಕರಿಂದಲೂ ಪ್ರಶಂಸೆ ವ್ಯಕ್ತವಾಯಿತು. ವಿದ್ಯಾರ್ಥಿನಿಯ ಶ್ರಮ, ನಿರಂತರ…
ಮಡಿಕೇರಿ ಡಿ.30 NEWS DESK : ಹೊಸ ವರ್ಷಾಚರಣೆ ಹೆಸರಲ್ಲಿ ಕಾನೂನು ಉಲ್ಲಂಘನೆ, ಅಕ್ರಮ ಚಟುವಟಿಕೆ ಕಂಡು ಬಂದಲ್ಲಿ ಶಿಸ್ತು ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟ ಸಂದೇಶ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್.ಪಿ.ರಾಮರಾಜನ್ ಹೋಂ ಸ್ಟೇ, ರೆಸಾರ್ಟ್ಗಳಲ್ಲಿ ಸಂಭ್ರಮಾಚರಣೆ ಮಾಡಲು ಯಾವುದೇ ಅಡ್ಡಿ ಇಲ್ಲ. 10 ಗಂಟೆಯ ಬಳಿಕ ನಿಗಧಿತ ಮಿತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಧ್ವನಿವರ್ಧಕಗಳನ್ನು ಬಳಸಬೇಕು. ತೆರೆದ ಪ್ರದೇಶಗಳಲ್ಲಿ ಸಂಭ್ರಮಾಚರಣೆ ಮಾಡಲು ಅನುಮತಿ ಕಡ್ಡಾಯವಾಗಿರುತ್ತದೆ. ಹೋಂಸ್ಟೇಗಳಲ್ಲಿ ಮಾದಕ ವಸ್ತುಗಳ ಬಳಕೆ, ಸೇವನೆ ಕಂಡು ಬಂದಲ್ಲಿ ಅದರ ಮಾಲೀಕರ ಮೇಲೂ ಪ್ರಕರಣ ದಾಖಲಿಸಲಾಗುತ್ತದೆ. ಹೋಂಸ್ಟೇ ಕಟ್ಟಡವನ್ನು ಬಾಡಿಗೆ ನೀಡಲಾಗಿದೆ ಎಂಬ ನೆಪಗಳಿಗೆ ಅವಕಾಶ ಇಲ್ಲ. ಈ ಕುರಿತು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹೋಂಸ್ಟೇ ಮಾಲೀಕರು, ಹೋಂ ಸ್ಟೇ ನಡೆಸುವವರಿಗೂ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. :: ಪಾರ್ಟಿಗಳ ಮೇಲೆ ನಿಘಾ :: ಹೋಂ ಸ್ಟೇ,…
ಮಡಿಕೇರಿ ಡಿ.30 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 15 ಗ್ರಾಮ ಪಂಚಾಯತ್ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್ ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ, ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ದೇವರಪುರ ಮತ್ತು ಟಿ.ಶೆಟ್ಟಿಗೇರಿ, ಮಡಿಕೇರಿ ತಾಲ್ಲೂಕಿನ ಮಕ್ಕಂದೂರು, ಕುಂದಚೇರಿ, ಹಾಕತ್ತೂರು ಮತ್ತು ಚೆಂಬು, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಚೆಂಬೆಬೆಳ್ಳೂರು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಜನವರಿ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ಡಿ.30 NEWS DESK : ರಾಷ್ಟ್ರದ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಕರೆ ನೀಡಿದ್ದಾರೆ. ಕೊಡಗು ಜಿಲ್ಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕøತವಾದ ಸೂಕ್ಷ್ಮ,, ಸಣ್ಣ ಮತ್ತು ಮಧ್ಯಮ ಉದ್ಯಮಗಳ(ಎಂಎಸ್ಎಂಇ) ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವ ಸಂಬಂಧ ಜಿಲ್ಲಾ ಕೈಗಾರಿಕಾ ಅಭಿವೃದ್ಧಿಗೆ ಪಾಲುದಾರರಾದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ-ಸಂಸ್ಥೆಗಳಿಗೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಯುರೋಪ್ನ ಹಲವು ದೇಶಗಳು, ಚೀನಾ ಮತ್ತು ಜಪಾನ್ ರಾಷ್ಟ್ರಗಳು ಕೃಷಿ ಜೊತೆಗೆ ಸಣ್ಣ ಮತ್ತು ಬೃಹತ್ ಕೈಗಾರಿಕಾ ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡಿವೆ ಎಂದರು. ‘ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿದಾಗ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ…
ಮೈಸೂರು, ಡಿ.30 NEWS DESK : ದೇಶದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಯದುವೀರ್, ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ವಿವರ ನೀಡಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಚಿಕ್ಕ ಹೊಸೂರು (ಕೊಪ್ಪ) ದಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣಕ್ಕೆ 65 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಅದಕ್ಕೆ ಪೂರಕವಾಗಿ ಸ್ಪಂದಿಸಿ ಈಗ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಅತಿ ಶೀಘ್ರದಲ್ಲೇ…
ಕುಶಾಲನಗರ ಡಿ.30 NEWS DESK : ಮೈಸೂರು ಶರಣು ವಿಶ್ವ ವಚನ ಫೌಂಡೇಶನ್ ವತಿಯಿಂದ ನೀಡಲ್ಪಡುವ ರಾಜ್ಯಮಟ್ಟದ ಚಿನ್ಮಯಿ ಜ್ಞಾನಿ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಕುಶಾಲನಗರ ಪಟ್ಟಣದ ನಾಲ್ಕು ಮಂದಿ ಶಿಕ್ಷಕರಾದ ಎಸ್.ಎಸ್.ವಿರೂಪಾಕ್ಷ ಮತ್ತು ಬಿ.ಬಿ.ಹೇಮಲತಾ ಹಾಗೂ ಕೆ.ಜಿ.ರೇಣುಕಸ್ವಾಮಿ ಮತ್ತು ಕಲಾವತಿ ಭಾಜನರಾಗಿದ್ದಾರೆ. ಫೌಂಡೇಶನ್ ವತಿಯಿಂದ ಮೈಸೂರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 11 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಬಸವ ಸಮಿತಿಯ ಅಧ್ಯಕ್ಷ ಅರವಿಂದ ಜತ್ತಿ ಈ ಶಿಕ್ಷಕರಿಗೆ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಿದರು. : ಚಿನ್ಮಯಿ ಶಿಕ್ಷಕ ಪ್ರಶಸ್ತಿ ಪಡೆದವರ ವಿವರ : ಪ್ರೌಢಶಾಲಾ ಶಿಕ್ಷಕರ ವಿಭಾಗದಲ್ಲಿ ಶಿಕ್ಷಕ ದಂಪತಿಯಾದ ಕುಶಾಲನಗರದ ನಿವಾಸಿಯಾಗಿದ್ದು, ಹೊಳಲ್ಕೆರೆಯ ಎಸ್.ಜೆ.ಎಂ.ವಿದ್ಯಾಸಂಸ್ಥೆಯ ವೃತ್ತಿ ಶಿಕ್ಷಕ ಎಸ್.ಎಸ್.ವಿರೂಪಾಕ್ಷ ಮತ್ತು ಇವರ ಪತ್ನಿಯಾದ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿಯ ಸದಸ್ಯರೂ ಕುಶಾಲನಗರ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಶಿಕ್ಷಕಿ ಬಿ.ಬಿ.ಹೇಮಲತಾ ಶಿಕ್ಷಕ ಪ್ರಶಸ್ತಿ ಪಡೆದರು.…
ಮಡಿಕೇರಿ ಡಿ.30 NEWS DESK : ನಾಪೋಕ್ಲು-ಭಾಗಮಂಡಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮುಂದಿನ 10 ದಿನಗಳೊಳಗೆ ದುರಸ್ತಿ ಕಾರ್ಯ ಆರಂಭಿಸದಿದ್ದಲ್ಲಿ ಗ್ರಾಮಸ್ಥರನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಎಚ್ಚರಿಕೆ ನೀಡಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಎಸ್ಡಿಪಿಐ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಎಂ.ಎ.ಮುನೀರ್ ಅವರು ನಾಪೋಕ್ಲು- ಭಾಗಮಂಡಲ ರಸ್ತೆಯನ್ನು ಆಡಳಿತ ವ್ಯವಸ್ಥೆ ನಿರ್ಲಕ್ಷಿಸಿದೆ, ಮಳೆಗಾಲ ಕಳೆದು ಬಿಸಿಲಿನ ವಾತಾವರಣವಿದ್ದರೂ ರಸ್ತೆಯ ಅಭಿವೃದ್ಧಿಗೆ ಮೀನಾ ಮೇಷ ಎಣಿಸಲಾಗುತ್ತಿದೆ. ಸಾರ್ವಜನಿಕ ಹಿತಾಸಕ್ತಿ ಎನ್ನುವುದು ಕೇವಲ ಭಾಷಣಕ್ಕೆ ಸೀಮಿತವಾಗಿದೆ. ಗ್ರಾಮದ ಮುಖ್ಯ ರಸ್ತೆಯನ್ನು ದುರಸ್ತಿ ಪಡಿಸಲು ಮನಸ್ಸು ಇಲ್ಲದ ಅಧಿಕಾರಿಗಳು, ಪ್ರಭಾವಿಗಳ ಮನೆ ಬಾಗಿಲಿಗೆ ರಸ್ತೆ ನಿರ್ಮಿಸಿಕೊಡುತ್ತಿದ್ದಾರೆ. ಗ್ರಾಮಸ್ಥರ ಹಿತ ಕಾಯುವ ಆಸಕ್ತಿಯನ್ನು ಅಧಿಕಾರಿಗಳು ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ. ತೀರಾ ಹದಗೆಟ್ಟಿರುವ ರಸ್ತೆಯಲ್ಲಿ ವಾಹನಗಳ ಸಂಚಾರ ಅಸಾಧ್ಯವಾಗಿದೆ, ಪಾದಾಚಾರಿಗಳು ನಡೆದಾಡಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾಪೋಕ್ಲು- ಭಾಗಮಂಡಲ ರಸ್ತೆ ಅವ್ಯವಸ್ಥೆ ಕುರಿತು ಅನೇಕ ಬಾರಿ ಆಡಳಿತ ವ್ಯವಸ್ಥೆಯ…
ಮಡಿಕೇರಿ ಡಿ.30 NEWS DESK : ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕುವೆಂಪು ಅವರ ಜನ್ಮಸ್ಥಳ ಶಿವಮೊಗ್ಗದ ಕುಪ್ಪಳ್ಳಿಯ ಕವಿಮನೆ ಕವಿಶೈಲದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರ ನೇತೃತ್ವದಲ್ಲಿ ಕಸಾಪದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾಹಿತ್ಯಾಭಿಮಾನಿಗಳು ಕವಿಶೈಲದಲ್ಲಿ ಕವಿ ಕುವೆಂಪು ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಕುವೆಂಪು ಅವರನ್ನು ಸ್ಮರಿಸುತ್ತಾ ಮಾತನಾಡಿದ ಈರಮಂಡ ಹರಿಣಿ ವಿಜಯ್ ಅವರು ವಿಶ್ವಮಾನವ ಸಂದೇಶವನ್ನು ಜಗತ್ತಿಗೆ ಸಾರಿ ಮೊದಲ ಬಾರಿಗೆ ಕರುನಾಡಿಗೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಶ್ರೇಷ್ಠ ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯದಿಂದ ಕನ್ನಡಿಗರ ಮನಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಜಾತಿಗೆ ನಿಲುಕದ ನಕ್ಷತ್ರ ವಿಶ್ವಮಾನವ ಕುವೆಂಪು ಎಂದು ವರ್ಣಿಸಿದರು. ದೇಶ, ಭಾಷೆ, ಮತ, ಜಾತಿ, ಜನಾಂಗ ವರ್ಣ ಇತ್ಯಾದಿ ಉಪಾಧಿಗಳಿಂದ ಪಾರಾಗಿ ವಿಶ್ವ ಮಾನವನನ್ನಾಗಿ ಪರಿವರ್ತಿಸುವ ಶಕ್ತಿ ವಿದ್ಯೆ, ಸಂಸ್ಕೃತಿ ಮತ್ತು ನಾಗರಿಕತೆಗಿದೆ. ವಿಶ್ವ…
ಮಡಿಕೇರಿ ಡಿ.30 NEWS DESK : ಕೊಡವ ಹಾಕಿ ಅಕಾಡೆಮಿ ವತಿಯಿಂದ ಮೂರ್ನಾಡಿನ ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿರುವ ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಫೈನಲ್ ಪಂದ್ಯಕ್ಕೆ ಶುಭ ಕೋರುತ್ತಾ ಮಾತನಾಡಿದ ಶಾಸಕರು, ಕೊಡಗಿನ ಅದರಲ್ಲೂ ವಿಶೇಷವಾಗಿ ಕೊಡವ ಜನರ ಉಸಿರಾಗಿರುವ ಹಾಕಿ ಪಂದ್ಯಾವಳಿ ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ಖ್ಯಾತಿ ಪಡೆಯುತ್ತಿದ್ದು, ಇಂತಹ ಪಂದ್ಯಾವಳಿಗಳು ಯುವ ಪ್ರತಿಭೆಯನ್ನು ಲೋಕಕ್ಕೆ ಪರಿಚಯಿಸಲು ತುಂಬಾ ಸಹಕಾರಿಯಾಗುತ್ತದೆ. ಕೊಡವ ಹಾಕಿ ಅಕಾಡೆಮಿಯ ಈ ಪ್ರಯತ್ನವು ಅತ್ಯಂತ ಮಹತ್ವದ್ದಾಗಿದ್ದು, ನಾಡಿನ ಯುವ ಪ್ರತಿಭೆಯನ್ನು ಲೋಕಕ್ಕೆ ಪರಿಚಯಿಸುತ್ತಿರುವುದು ಹೆಮ್ಮೆ ಅನಿಸುತ್ತಿದೆ. ಪಂದ್ಯಾಟದಲ್ಲಿ ಭಾಗವಹಿಸಿದ ಎಲ್ಲಾ ತಂಡದವರಿಗೂ ಹಾಗೂ ತಮ್ಮ ವಿಶೇಷ ಪ್ರತಿಭೆಯನ್ನು ಪ್ರದರ್ಶಿಸಿದ ಎಲ್ಲಾ ಆಟಗಾರರಿಗೂ ಶುಭ ಕೋರುತ್ತಾ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಒಲಂಪಿಯನ್ ಚೆಪ್ಪುಡೀರ ಕಾರ್ಯಪ್ಪ ಅವರನ್ನು ಶಾಸಕರು ಸನ್ಮಾನಿಸಿದರು.…






