ಲೇಖಕ: admin

ಮಡಿಕೇರಿ ನ.23 : ಜಿಲ್ಲೆಯಲ್ಲಿ ಮಕ್ಕಳಲ್ಲಿನ ರಕ್ತಹೀನತೆ ತಡೆಯುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಲವು ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ `ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಅಭಿಯಾನ’ ಕಾರ್ಯಕ್ರಮಕ್ಕೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 10,359 ಪದವಿ ಪೂರ್ವ ಕಾಲೇಜಿನ ಮಕ್ಕಳನ್ನು ಪ್ರಥಮ ಹಂತದಲ್ಲಿ ಪರೀಕ್ಷಿಸಿ, ರಕ್ತಹೀನತೆ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಅಗತ್ಯ ಮಾತ್ರೆ ಹಾಗೂ ಔಷಧಿಯನ್ನು ನಿಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲೆಯಾದ್ಯಾಂತ ಮೊದಲ ಹಂತವಾಗಿ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಮಕ್ಕಳ ರಕ್ತಹೀನತೆ ತಪಾಸಣೆಯನ್ನು ನಡೆಸಿ ಪೂರಕ ಮತ್ತು ಚಿಕಿತ್ಸಾತ್ಮಕವಾಗಿ ಐಎಫ್‍ಎ-ಪಿಂಕ್ ಮತ್ತು ಬ್ಲೂ ಮಾತ್ರೆಗಳನ್ನು ನೀಡಿ ಎಲ್ಲಾ ಮಕ್ಕಳನ್ನು ಅನೀಮಿಯಾ ತಡೆಯುವ ಉದ್ದೇಶದಿಂದ ಆರೋಗ್ಯ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ವಿದ್ಯಾರ್ಥಿಗಳಲ್ಲಿ ಅನೀಮಿಯದಿಂದಾಗುವ ಸುಸ್ತು, ಬೆಳವಣಿಗೆಯಲ್ಲಿ…

Read More

ಮಡಿಕೇರಿ ನ.23 : ನಗರದ ಮೈಸೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ `ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನ’ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ವೀಕ್ಷಿಸಿದರು. ಈಗಾಗಲೇ ಕಾಮಗಾರಿ ತುಂಬಾ ವಿಳಂಬವಾಗಿದ್ದು, ಆದಷ್ಟು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಕಾಮಗಾರಿ ಪೂರ್ಣಗೊಂಡ ನಂತರ ಬಾಕಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ ಅವರು ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದ ತಳ ಮಹಡಿಯಲ್ಲಿ ಕೊಡವ ಮತ್ತು ಅರೆಭಾಷೆ ಅಕಾಡೆಮಿ ಕಚೇರಿಗಳು, ಗ್ರಂಥಾಲಯ, ವಾಹನ ನಿಲುಗಡೆ, ನೆಲಮಹಡಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಮತ್ತು ಗ್ರಂಥಾಲಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಮತ್ತು ರಿಜಿಸ್ಟ್ರಾರ್‍ಗಳ ಕಚೇರಿ, ಮೊದಲ ಮಹಡಿಯಲ್ಲಿ ವೇದಿಕೆ ಸಭಾಂಗಣ, ಎರಡನೇ ಮಹಡಿಯಲ್ಲಿ ಡಾರ್ಮೆಟ್ರರಿ ಒಳಗೊಂಡಿದೆ ಎಂದು ಮಾಹಿತಿ ನೀಡಿದರು. ಸಹಾಯಕ ಎಂಜಿನಿಯರ್ ಸತೀಶ್, ಕಾಮಗಾರಿ ಸಂಬಂಧಿಸಿದಂತೆ…

Read More

ಮಡಿಕೇರಿ ನ.23 : ಬರ ಪರಿಹಾರವಾಗಿ ಕೊಡಗು ಜಿಲ್ಲೆಗೆ ರಾಜ್ಯ ಸರ್ಕಾರ 200 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಮಳೆಯ ಕೊರತೆಯಿಂದ ರಾಜ್ಯವ್ಯಾಪಿ ಬರದ ಛಾಯೆ ಮೂಡಿದೆ. ಕೊಡಗು ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರಪೀಡಿತವೆಂದು ಘೋಷಣೆಯಾಗಿದೆ. ಆದರೆ ಸರ್ಕಾರ ಬರ ಪರಿಹಾರ ನೀಡುವ ಕಾಳಜಿಯನ್ನು ತೋರುತ್ತಿಲ್ಲವೆಂದು ಟೀಕಿಸಿದ್ದಾರೆ. ಸಕಾಲದಲ್ಲಿ ಮಳೆ ಬಾರದೆ ಭತ್ತದ ಕೃಷಿಗೆ ಹಿನ್ನಡೆಯಾಗಿದೆ, ಸೆಪ್ಟಂಬರ್ ತಿಂಗಳಿನಲ್ಲಿ ಸುರಿದ ಮಳೆಯಿಂದ ಕೃಷಿ ಫಸಲು ಮತ್ತು ಕಾಫಿ ನಷ್ಟವಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದ್ದು, ಕೃಷಿಕ ವರ್ಗ ಆತಂಕಕ್ಕೆ ಒಳಗಾಗಿದೆ. ರೈತರ ಒತ್ತಾಯದ ಹಿನ್ನೆಲೆ ರಾಜ್ಯ ಸರ್ಕಾರ ಕೊಡಗು ಜಿಲ್ಲೆಗೆ ಕೇವಲ 7.5ಕೋಟಿ ರೂ. ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿರುವ 2 ಲಕ್ಷಕ್ಕೂ ಅಧಿಕ ಕೃಷಿಕರಿಗೆ ಈ ಹಣವನ್ನು ಹಂಚಿಕೆ ಮಾಡಿದರೆ ತಲಾ 300 ರೂ. ಮಾತ್ರ…

Read More

ಮಡಿಕೇರಿ ನ.23 : ಸಂಘಟಿತರಾಗುವುದರಿಂದ ಅಗತ್ಯ ಸೌಲಭ್ಯಗಳನ್ನು ಸಹಕಾರಿಯಾಗುವುದಲ್ಲದೇ, ಬಹುಕಾಲದ ಬೇಡಿಕೆಗಳ ಈಡೇರಿಕೆ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅಭಿಮತ ವ್ಯಕ್ತಪಡಿಸಿದರು. ನಗರದ ಮೈತ್ರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗಿನಿಂದ ಹೆಚ್ಚಿನ ಪೊಲೀಸ್ ಅಧಿಕಾರಿಗಳು ಸೇವೆ ಸಲ್ಲಿಸಿದ್ದಾರೆ. ನಿವೃತ್ತಿಯ ಬಳಿಕ ಪೊಲೀಸರು ಸುಗಮ ಜೀವನ ನಡೆಸವಂತಾಗಬೇಕು. ಸರಕಾರದ ಸೌಲಭ್ಯಸುಲಭವಾಗಿ ದೊರೆಯಬೇಕಾದರೆ ಸಂಘಟನಾತ್ಮಕ ಚಟುವಟಿಕೆ ಮುಖ್ಯವಾಗಿತ್ತದೆ. ಸಂಘ ಉತ್ತಮವಾಗಿ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಸಂಘದ ಚಟುವಟಿಕೆಗೆ ಪೂರಕ ಸಹಕಾರ ನೀಡುತ್ತೇನೆ. ಮೈತ್ರಿ ಭವನ ದುರಸ್ತಿ ಕಾರ್ಯಕ್ಕೆ ಶೀಘ್ರದಲ್ಲಿ ಮುಂದಾಗಲಾಗುವುದು. ಇದರಿಂದ ಆರ್ಥಿಕ ಕ್ರೋಡಿಕರಣಕ್ಕೆ ಸಹಕಾರಿಯಾಗಲಿದೆ ಎಂದರು. ಧ್ವಜ ದಿನಾಚರಣೆಯಡಿ ಸಂಗ್ರಹಿಸಿದ ಶುಲ್ಕ ಕಳೆದ ಬಾರಿಗಿಂತ ಶೇ.50ರಷ್ಟು ಹೆಚ್ಚಿದೆ. ಜಿಲ್ಲಾ ಪೊಲೀಸ್ ಇಲಾಖೆಗೂ ನಿವೃತ್ತ ಪೊಲೀಸರ ಮಾರ್ಗದರ್ಶನವಿದೆ. ಕಾಲಕಾಲಕ್ಕೆ ಸರಿಯಾದ ಸಲಹೆ ನೀಡುತ್ತ ವೃತ್ತಿಯಲ್ಲಿರುವ ಪೊಲೀಸರನ್ನು ಜಾಗೃತಗೊಳಿಸುತ್ತಿದ್ದಾರೆ. ನಿವೃತ್ತ ಪೊಲೀಸರಿಗೆ ವಿಮೆ ಯೋಜನೆ ಜಾರಿ ಸಂಬಂಧ ಸರಕಾರದ…

Read More

ಮಡಿಕೇರಿ ನ.23 : ಒಂದು ಗ್ರಾಮದಲ್ಲಿ ಒಂದು ಸಹಕಾರ ಸಂಘ ಸ್ಥಾಪನೆಯಾಗಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಆ ಮೂಲಕ ಸ್ಥಳೀಯ ರೈತರಿಗೆ ಗೊಬ್ಬರ, ಉತ್ಪನ್ನಗಳಿಗೆ ಗೋದಾಮು, ಶಿಕ್ಷಣ ನೀಡುವಂತಹ ಕಾರ್ಯಗಳನ್ನು ಕೈಗೊಂಡು ರೈತರ ಆರ್ಥಿಕತೆಯನ್ನು ವೃದ್ಧಿಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಕರಿಕೆ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತಾಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಸಹಕಾರ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೆ ಕೊಡಗು ಜಿಲ್ಲೆಯ ಕರಿಕೆ ಭಾಗದಲ್ಲಿ ಅಪ್ಪಿಕೊ ಚಳುವಳಿಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕರಿಕೆ ಪ್ಯಾಕ್ಸ್‍ನ ಸಣ್ಣ ಕೊಠಡಿಯಲ್ಲಿ ಉಳಿದುಕೊಂಡು…

Read More

ಮಡಿಕೇರಿ ನ.23 : ಕನಕದಾಸರ ಜಯಂತಿಯನ್ನು ನ.30 ರಂದು ಜಿಲ್ಲಾಡಳಿತ ವತಿಯಿಂದ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯ ಗಾಂಧಿ ಭವನದಲ್ಲಿ ಕನಕದಾಸರ ಜಯಂತಿಯನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಉಪನ್ಯಾಸಕರ ಹೆಸರನ್ನು ತಿಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಕನಕ ಗುರುಪೀಠ ಮತ್ತು ಧರ್ಮದರ್ಶಿ ಎಂ.ನಂಜುಂಡಸ್ವಾಮಿ, ಕೊಡಗು ಜಿಲ್ಲಾ ಕೇಂದ್ರದಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸುವಂತಾಗಬೇಕು ಎಂದು ಮನವಿ ಮಾಡಿದರು. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 25 ಸೆಂಟು ಜಾಗ ಗುರುತಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಅವರು ಜನವರಿ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ…

Read More

ಮಡಿಕೇರಿ ನ.23 : ವಿರಾಜಪೇಟೆ ರೋಟರಿ ಸಂಸ್ಥೆಯ ವತಿಯಿಂದ ನಡೆದ ವಿಜ್ಞಾನ ಮಾದರಿ ತಯಾರಿಕ ಸ್ಪರ್ಧೆಯಲ್ಲಿ ರೋಟರಿ ಪ್ರಾಥಮಿಕ ಶಾಲೆ ವಿರಾಜಪೇಟೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ಏಳನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯಸ್, ಲಿಖಿತ, ಎಬಿನ್, ಶ್ರೇಷ್ಠ, ತನ್ ಜಿಮ್ ಭೂಕಂಪದ ಎಚ್ಚರಿಕಾ ಯಂತ್ರವನ್ನು ಸಿದ್ದಪಡಿಸಿ ಪ್ರಥಮ ಬಹುಮಾನ ಪಡೆದುಕೊಂಡರು. ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯರಾದ ವಿಶಾಲಾಕ್ಷಿ, ಶಿಕ್ಷಕರು ಹಾಗೂ ಪೋಷಕರು ಹಾರೈಸಿದ್ದಾರೆ.

Read More

ಮಡಿಕೇರಿ ನ.23 : ಮಾಯಮುಡಿ ಗ್ರಾಮ ಪಂಚಾಯತ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮುದಾಯ ಹಾಗೂ ಅಕ್ಷರ ಪೌಂಡೇಶನ್ ವತಿಯಿಂದ ಗ್ರಾ.ಪಂ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ ನಡೆಯಿತು. ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಾವು ಸ್ಪರ್ಧಾತ್ಮಕ ಯುಗದಲ್ಲಿದ್ದು, ಮಕ್ಕಳು ಕಲಿಕಾ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಕಷ್ಟಪಟ್ಟು ಓದುವುದರಿಂದ ಯಾವುದೇ ಪ್ರಯೋಜನವಿಲ್ಲ, ಇಷ್ಟಪಟ್ಟು ಓದಿ ಗುರಿಯನ್ನು ತಲುಪಬೇಕು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲಕೋಡ್ ಶಾಲಾ ಮುಖ್ಯೋಪಾದ್ಯಾಯರಾದ ಸೋಪಿಯಾ, ಪರೀಕ್ಷಾ ಮಾರ್ಗದರ್ಶಕರಾದ ಅದೇಂಗಡ ಶೋಭಾ, ಶಿಕ್ಷಕರಾದ ಡಿ.ಯು.ರಾಗಿಣಿ, ಸುಮಿತ ರವಿ, ನಳಿನಿ, ಎಂ.ಟಿ.ಸತ್ಯ, ಪಿ.ವಿ.ಲಾಯ್ದ, ಎಂ.ಕೆ.ಲೀಲ ಉಪಸ್ಥಿತರಿದ್ದರು. ಗಣಿತ ಸ್ಪರ್ಧೆಯಲ್ಲಿ ರುದ್ರಬೀಡು ಹಿರಿಯ ಪ್ರಾಥಮಿಕ ಶಾಲೆ, ಚನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. :::…

Read More

ಮಡಿಕೇರಿ ನ.23 : ಮಾಯಮುಡಿ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಳ್ಳಲಿರುವ 5.20ಲಕ್ಷ ರೂ. ವೆಚ್ಚದ ಶೌಚಾಲಯ ಕಾಮಗಾರಿಗೆ ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಚಾಲನೆ ನೀಡಿದರು. ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಗೊಳ್ಳುತ್ತಿದ್ದು, ಟಾಟು ಮೊಣ್ಣಪ್ಪ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶುಚಿತ್ವಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲಕೋಡ್, ನರೇಗ ಅಭಿಯಂತರ ಗಣೇಶ್, ಗ್ರಾ.ಪಂ ಉಪಾಧ್ಯಕ್ಷೆ ಪಿ.ಎಸ್.ಶಾಂತ, ಸದಸ್ಯರುಗಳಾದ ಹೆಚ್.ಆರ್.ಸುಶೀಲ, ಜೆ.ಸುಮಿತ್ರ ಬಸವಣ್ಣ, ಸಿ.ಕೆ.ಪೂವಯ್ಯ, ಪಿ.ಮುತ್ತಮ್ಮ, ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ನಾಚಪ್ಪ, ಗುತ್ತಿಗೆದಾರರಾದ ಕಾಚುಮ ಖದೀಜ ಮತ್ತಿತರರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.22 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 2009 ರಿಂದ ಇಲ್ಲಿಯವರೆಗೆ 2563 ಹೆಚ್‍ಐವಿ ಸೋಂಕಿತರನ್ನು ಗುರುತಿಸಲಾಗಿದೆ. ಸೋಂಕನ್ನು 2025ರ ಒಳಗಾಗಿ ಶೂನ್ಯಕ್ಕೆ ಇಳಿಸುವ ನಿಟ್ಟಿನ ಗುರಿ ಸರ್ಕಾರದ್ದಾಗಿದೆ. ಈ ಬಾರಿ ಡಿ.1 ರಂದು ‘ಸಮುದಾಯಗಳು ಮುನ್ನಡೆಸಲಿ’ ಎನ್ನುವ ಘೋಷ ವಾಕ್ಯದೊಂದಿಗೆ ‘ವಿಶ್ವ ಏಡ್ಸ್ ದಿನ-2023’ನ್ನು ಆಚರಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.1 ಎಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಜಾಥ, ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು. ::: 657 ಸಾವು ::: ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಡಾ.ಆನಂದ್ ಮಾತನಾಡಿ, ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದಲ್ಲಿ ಕೊಡಗಿನಲ್ಲಿ ಹೆಚ್‍ಐವಿ ಸೋಂಕು ಮತ್ತು ಏಡ್ಸ್ ನಿಯಂತ್ರಣದಲ್ಲಿದ್ದು, ಸೋಂಕಿತರಿಗೆ ಅಗತ್ಯ ಚಿಕಿತ್ಸೆಗಳನ್ನು ಒದಗಿಸಲಾಗುತ್ತಿದೆ ಎಂದು…

Read More