ಲೇಖಕ: admin

ಮಡಿಕೇರಿ ನ.21 :  ಕಾರ್ಯಪ್ಪ ಕಾಲೇಜ್ ನಲ್ಲಿ ಪರೀಕ್ಷಾ ಪುಸ್ತಕಗಳ ಪ್ರದರ್ಶನ : ವಿದ್ಯಾರ್ಥಿಗಳು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು : ಮೇಜರ್ ಪ್ರೊ. ರಾಘವ ಕರೆ ಮಡಿಕೇರಿ ನ.21 : ವಿದ್ಯಾರ್ಥಿ ಜೀವನದಿಂದಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಗ್ರಂಥಾಲಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಕರೆ ನೀಡಿದ್ದಾರೆ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಪ್ಪ ಕಾಲೇಜ್ ನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು. ಓದುವ ಹವ್ಯಾಸ ಜ್ಞಾನವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲದೆ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪುಸ್ತಕಗಳನ್ನು ಓದಿ ಅಧ್ಯಯನ ಮಾಡಿದರೆ ಪದವಿ ಹಂತವನ್ನು ಮುಗಿಸಿದ ತಕ್ಷಣ ಸರಕಾರಿ ಉದ್ಯೋಗವನ್ನು ಪಡೆಯಲು ಅನುಕೂಲವಾಗುತ್ತದೆ. ಮಾಹಿತಿ…

Read More

ಮಡಿಕೇರಿ ನ.21 :  ಕೊಡಗು ಜಿ.ಪಂ., ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ಸ್ಕೌಟ್ಸ್, ಗೈಡ್ಸ್ ಸಂಸ್ಥೆ, ಲಯನ್ಸ್ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2023 ದ ಪೂರ್ವಭಾವಿ ಯಾಗಿ ನಡೆದ ಜಿಲ್ಲಾಮಟ್ಟದ ಮಾರ್ಗದರ್ಶಿ ಶಿಕ್ಷಕರ ಕಾರ್ಯಾಗಾರವನ್ನು ಜಿ.ಪಂ.ಸಿಇಓ ವರ್ಣಿತ್ ನೇಗಿ ಉದ್ಘಾಟಿಸಿದರು. ಡಿಡಿಪಿಐ ಎಂ.ಚಂದ್ರಕಾಂತ್, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಸ್ಕೌಟ್ಸ್, ಗೈಡ್ಸ್ ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ಸಂಘಟಕ  ಟಿ.ಜಿ.ಪ್ರೇಮಕುಮಾರ್, ಜಿ.ಶ್ರೀಹರ್ಷ, ಲಯನ್ಸ್ ಅಧ್ಯಕ್ಷ ಮಧುಕರ್ ಶೇಟ್ ಇದ್ದರು.   

Read More

ಮಡಿಕೇರಿ ನ.21 : ಮಡಿಕೇರಿಯ ಡಿಪಿ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಜಿಲ್ಲಾ ಮಟ್ಟದ ನಾಕೌಟ್ ಮಾದರಿಯ ಕಬಡ್ಡಿ ಚಾಂಪಿಯನ್ ಶಿಪ್ “ಮಿಸ್ಟಿ ಕಪ್-2023” ಪಂದ್ಯಾವಳಿ ಡಿ.3 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಪೋಸ್ಟರ್ ಬಿಡುಗಡೆ ಮಾಡಿ ಮಾಹಿತಿ ನೀಡಿದ ಕ್ಲಬ್ ನ ಸದಸ್ಯ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡಗಿನ ಕಬಡ್ಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ, ಬೆಳೆಸುವ ನಿಟ್ಟಿನಲ್ಲಿ ಪಂದ್ಯಾವಳಿಯನ್ನು ಆಯೋಜಿಸಿರುವುದಾಗಿ ತಿಳಿಸಿದರು. ಹರಿಯಾಣದಲ್ಲಿ ನಡೆದ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್‍ನಲ್ಲಿ ಆಡಿರುವ ಕಬಡ್ಡಿ ಕ್ರೀಡಾಪಟು ಹೊಟ್ಟೆಯಂಡ ಸಚಿನ್ ಪೂವಯ್ಯ ನೇತೃತ್ವದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಒಂದು ದಿನದ ರೋಚಕ ಪಂದ್ಯಾವಳಿ ನಡೆಯಲಿದೆ. ರಾಷ್ಟ್ರೀಯ ತರಬೇತುದಾರ ಮಂಜುನಾಥ್ ಹಾಗೂ ರಾಷ್ಟ್ರೀಯ ಕಬಡ್ಡಿ ಆಟಗಾರ ಶಶಿಧರ್ ಅವರುಗಳು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಡಿಪಿ ಸ್ಪೋಟ್ರ್ಸ್ ಕ್ಲಬ್‍ನ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಶಾಲಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಆಸ್ಟ್ರಾ ಕಾಫಿ…

Read More

ಸೋಮವಾರಪೇಟೆ ನ.21 : ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ಬೆಟ್ಟದಳ್ಳಿ ಮಾನವತಾ ಯುವಕ ಸಂಘದ ಆಶ್ರಯದಲ್ಲಿ ಬೆಟ್ಟದಳ್ಳಿ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲಾ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಮಡಿಕೇರಿ ಶಾಸಕ ಡಾ.ಮಂತರ್‍ಗೌಡ, ಗ್ರಾಮೀಣಾಭಿವೃದ್ಧಿಯೊಂದಿಗೆ ದೇಶದ ಅಭಿವೃದ್ಧಿಯಾಗಬೇಕಿದೆ. ಯುವಸಬಲೀಕರಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಯುವಕ ಸಂಘಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮಾತನಾಡಿ, ಪೋಷಕರು ಮಕ್ಕಳ ಆಸಕ್ತಿಯನ್ನು ಗಮನಿಸಿ, ಅವರ ಅಭಿಲಾಷೆಗೆ ತಕ್ಕಂತೆ ಪ್ರೋತ್ಸಾಹ ನೀಡಬೇಕು. ಮಕ್ಕಳಿರುವಾಗಲೇ ಒಳ್ಳೆಯ ಹವ್ಯಾಸಗಳನ್ನು ಮೈಗೊಡಿಸಿಕೊಳ್ಳಲು ತಿಳಿಹೇಳಿದರೆ, ಮುಂದೆ ಉತ್ತಮ ವ್ಯಕ್ತಿಯಾಗಿ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬೆಟ್ಟದಳ್ಳಿ ಗ್ರಾ.ಪಂ ಅಧ್ಯಕ್ಷ ತಮ್ಮಯ್ಯ, ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್, ಮಾಜಿ ಅಧ್ಯಕ್ಷ ಎಂ.ಪಿ.ರವಿ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟದ…

Read More

ಮಡಿಕೇರಿ ನ.20 : ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ಕಾನೂರು ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಲ ಎಂದು ಗುರುತಿಸಲಾಗಿದೆ, ಆದರೆ ಇವರ ವಾರಸುದಾರರು ಯಾರೆಂದು ತಿಳಿಯದೇ ಇರುವುದರಿಂದ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ನ.19 ರಂದು ಬೆಳಗ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಕೆ.ಆರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಅವರು ಮೃತಪಟ್ಟಿದ್ದಾರೆ. ಬಾಲ ಅವರ ಸಂಬಂಧಿಕರು ಯಾರು ಹಾಗೂ ಊರು ಯಾವುದೆಂದು ತಿಳಿಯದ ಹಿನ್ನೆಲೆ ವಾರಸುದಾರರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊನ್ನಂಪೇಟೆ ಪೊಲೀಸರು ಮನವಿ ಮಾಡಿದ್ದಾರೆ. ಬೈಕ್ ಸವಾರ ಪರಾರಿಯಾಗಿದ್ದು, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್‌ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಗೋವಿಂದರಾಜು, ಪೊನ್ನಂಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ನವೀನ್.ಜಿ ಹಾಗೂ ಸಿಬ್ಬಂದಿಗಳು ಅಪಘಾತ ನಡೆದ ಸ್ಥಳಕ್ಕೆ…

Read More

ಮಡಿಕೇರಿ ನ.20 : ಮಡಿಕೇರಿ ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಎಂಡಿಎಂಎ ಯನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಕುಂಜಿಲ ಗ್ರಾಮದ ನಿವಾಸಿ ನೌಫಲ್ (25) ಹಾಗೂ ಎಮ್ಮೆಮಾಡು ಪೈಸಾರಿ ನಿವಾಸಿ ಸಾದಿಕ್ (32) ಎಂಬುವವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ನ.20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 9-12 ಹಾಗೂ 13-16 ವರ್ಷದ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳನ್ನು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ, ಡಿಡಿಪಿಐ ಕಚೇರಿಯ ಕೃಷ್ಣಪ್ಪ ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸದಾಶಿವ…

Read More

ಮಡಿಕೇರಿ ನ.20 : ಕ್ರೀಡಾ ಪಟುಗಳು ಕ್ರೀಡಾಸ್ಫೂರ್ತಿಯ ಮೌಲ್ಯಗಳನ್ನು ಅಳವಡಿಸಿಕೊಂಡು, ಗೆಲುವು ಸಂಪಾದಿಸಬೇಕು ಹಾಗೂ ಸೋಲುಗಳಿಂದ ತಮ್ಮ ತಪ್ಪುಗಳನ್ನು ಅರಿಯಬೇಕು ಎಂದು ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಯ ಡೆಪ್ಯೂಟಿ ಕಮಾಂಡೆಂಟ್ ಏರ್ ಕಮೋಡೋರ್ ನರೇಶ್ ಕುಮಾರ್ ಸೈಧಾ ಹೇಳಿದ್ದಾರೆ. ಕೂಡಿಗೆ ಸೈನಿಕ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಿಷ್ಣುತಾ ಮನೋಭಾವದೊಂದಿಗೆ ಸಕ್ರಿಯವಾಗಿ ಕ್ರೀಡಾಕೂಟದಲ್ಲಿ ತೊಡಗಿಸಿಕೊಳ್ಳಬೇಕು. ವಿಜೇತ ತಂಡವಾಗಿ ಹೊರಹೊಮ್ಮಲು ಸಾಂಘಿಕ ಹೋರಾಟ ಮಾಡಬೇಕು. ವಿದ್ಯಾರ್ಥಿಗಳು ಸ್ಪರ್ಧೆಯ ಎಲ್ಲೆಗಳನ್ನು ಮೀರಿದ ಪರಸ್ಪರ ಸ್ನೇಹತ್ವದ ಮನೋಭಾವನೆಯನ್ನು ಹೊಂದಬೇಕೆಂದು ಕರೆ ನೀಡಿದರು. ಕೆಡೆಟ್ ದರ್ಶನ್, ಕೆಡೆಟ್ ಧ್ರುವ ಹಾಗೂ ಕೆಡೆಟ್ ಮಾನಸ್ ಕುಮಾರ್ ಈ ಕ್ರೀಡಾ ಜ್ಯೋತಿಯನ್ನು ತಂದರು. ಶಾಲೆಯ ಕ್ರೀಡಾ ನಾಯಕ ಕೆಡೆಟ್ ದರ್ಶನ್ ಪಡ್ನಾಡ್ ನೇತೃತ್ವದಲ್ಲಿ ಎಲ್ಲಾ ಸ್ಪರ್ಧಾಳುಗಳು ಪಥಸಂಚಲನ ನಡೆಸಿದರು. ವಿದ್ಯಾರ್ಥಿ ಓಂಕಾರ ಪಾಣಿ ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಕಮೋಡೋರ್ ಎಂ.ಟಿ.ರಮೇಶ್ ಮುಖ್ಯ ಅತಿಥಿಗಳಾಗಿ…

Read More

ಮಡಿಕೇರಿ ನ.20 : ಪೌರಾಣಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ಸಮೀಪದ ಬಿಳಿಗೇರಿ ಗ್ರಾಮದ ಶ್ರೀ ಪರದೇವರ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ನ.23 ಮತ್ತು 24 ರಂದು ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಸದಸ್ಯರಾದ ಮಂಞಿರ ಕೆ. ಉಮೇಶ್ ಅಪ್ಪಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ಪುರಾತನವಾದ ಶ್ರೀ ಪರದೇವರ ದೇವಾಲಯವನ್ನು ಗ್ರಾಮಸ್ಥರ ಮತ್ತು ದಾನಿಗಳ ಸಹಕಾರದಿಂದ 20 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆಯೆಂದು ತಿಳಿಸಿದರು. ಶ್ರೀ ಪರದೇವರ ದೇವಸ್ಥಾನದ ಪುನರ್ ಪ್ರತಿಷ್ಠಾ ಕಾರ್ಯಗಳು ಕ್ಷೇತ್ರದ ತಂತ್ರಿಗಳಾದ ಉದಯ ಕುಮಾರ್ ಹುಲಿತಾಳ ಅವರ ನೇತೃತ್ವದಲ್ಲಿ ನಡೆಯಲಿದೆ. ನ.23 ರಂದು ಸಂಜೆ 6 ಗಂಟೆಗೆ ಸ್ಥಳ ಶುದ್ಧಿ, ಪಂಚಗವ್ಯ ಪುಣ್ಯಾಹಃ, ದೇವತಾ ಪ್ರಾರ್ಥನೆ, ವಾಸ್ತು ಪೂಜೆ, ವಾಸ್ತು ಬಲಿ, ವಾಸ್ತು ಹೋಮ, ರಾಕ್ಷೋಘ್ನ, ಸುದರ್ಶನ ಹೋಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆಯೆಂದು ಮಾಹಿತಿ ನೀಡಿದರು. ನ.24 ರಂದು ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ, ಸಪ್ತಶತಿ ಪಾರಾಯಣ,…

Read More

ಮಡಿಕೇರಿ ನ.20 : ಜಿಲ್ಲೆಯ ಅಭಿವೃದ್ಧಿಗಾಗಿ ಚಿಂತನೆ ನಡೆಸದ ಸ್ಥಳೀಯ ಕಾಂಗ್ರೆಸ್ ಶಾಸಕರು, ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಒಪ್ಪ್ಪಿಗೆ ಪಡೆದು ಟೆಂಡರ್ ಆದ ಕಾಮಗಾರಿಗಳನ್ನು ಬದಲಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ‘ನಯಾ ಪೈಸೆ’ಯ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈ ಹಿಂದಿನ ಸಕಾರದ ಅವಧಿಯಲ್ಲಿ ಆರಂಭಿಸಿದ ಹಲವು ಕಾಮಗಾರಿಗಳಿಗೆ ಪ್ರಸ್ತುತ ಕನಿಷ್ಟ ಹಣ ಬಿಡುಗಡೆಯನ್ನು ಮಾಡಿಲ್ಲವೆಂದು ಟೀಕಿಸಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿ-ಪ್ರಾಕೃತಿಕ ವಿಕೋಪ ನಿಧಿಯಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಿಗೆ ತಲಾ 7 ಕೋಟಿ ಅನುದಾನವನ್ನು ಒದಗಿಸಲಾಗಿತ್ತು. ಮಡಿಕೇರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ 69 ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯೂ ದೊರಕಿತ್ತು. ಪ್ರಸ್ತುತ ಈ ಎಲ್ಲಾ ಕಾಮಗಾರಿಗಳನ್ನು ಬದಲಿಸಲು ಮಡಿಕೇರಿ ಕ್ಷೇತ್ರದ ಶಾಸಕರು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್…

Read More