ಲೇಖಕ: admin

ವಿರಾಜಪೇಟೆ  ನ.20 :  ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅವರ ಸಾಮಾಜಿಕ ಬದ್ಧತೆ ಮೆಚ್ಚುವಂತಹದ್ದು ಎಂದು ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟರು. ಅಮ್ಮತ್ತಿ ಒಂಟಿಯಂಗಡಿಯ ಜಿ. ಎಂ. ಪಿ. ಶಾಲೆಯಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡಿದರು. ಲಿಟಲ್ ಸ್ಕಾಲರ್ಸ್ ಶಾಲಾ ವಿದ್ಯಾರ್ಥಿಗಳು ಈ ಶಾಲೆಗೆ ಆಗಮಿಸಿ ಕಾರ್ಯಕ್ರಮಗಳನ್ನು ನಡೆಸಿ ಇಲ್ಲಿನ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪರ್ಧೆಗಳನ್ನು ನಡೆಸಿರುತ್ತಾರೆ. ಎರಡು ಶಾಲೆಗಳು ಒಂದೆಡೆ ಸೇರಿ ಮಾಡುವ ಕಾರ್ಯಕ್ರಮ ಇದಾಗಿದ್ದು ಬೇರೆ ಶಾಲೆಗಳಿಗೆ ಲಿಟಲ್ ಸ್ಕಾಲರ್ಸ್ ಶಾಲೆ ಮಾದರಿಯಾಗಿದೆ. ಸಮಾಜ ಸೇವೆಯಲ್ಲಿ ತೊಡಗಿರುವುದು ಗಮನಾರ್ಹ ಎಂದರು. ಸಿಆರ್ ಪಿ ಸುಷ್ಮ  ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಓದಿನ ಜೊತೆಯಲ್ಲಿ ಇಂತಹ ಕಾರ್ಯಕ್ರಮಗಳು ಬೇಕು. ಮಕ್ಕಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು ಎಂದರು. ಜಿ. ಎಂ. ಪಿ ಶಾಲಾ ಮುಖ್ಯ…

Read More

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ. ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ. ( ಮುಖ್ಯಮಂತ್ರಿ Siddaramaiah )

Read More

ಬೆಂಗಳೂರು ನ.19 : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ತಾಯಿ ಹಾಗೂ 9 ತಿಂಗಳ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಮಹದೇವಪುರದ ಕಾಡುಗುಡಿ ಠಾಣೆ ವ್ಯಾಪ್ತಿಯ ವೈಟ್ ಫೀಲ್ಡ್ ನ ಹೋಪ್ ಫಾರಂ ಸಿಗ್ನಲ್ ಬಳಿ ನಡೆದಿದೆ. ಭಾನುವಾರ ಮುಂಜಾನೆ 6 ಗಂಟೆ ಸುಮಾರಿಗೆ ಪಾದಾಚಾರಿ ಮಾರ್ಗದಲ್ಲಿ ಮನೆಗೆ ತೆರಳುತ್ತಿದ್ದ ಸೌಂದರ್ಯ ಹಾಗೂ ಮಗಳು ಸುವಿಶಾಲಯ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ಸಾವನ್ನಪ್ಪಿದ್ದಾರೆ. ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಎಇ, ಎಇಇಯನ್ನು ಅಮಾನತುಗೊಳಿಸಿದ್ದೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿರುವ ಸಚಿವ ಕೆ.ಜೆ.ಜಾರ್ಜ್‌ ಅವರು, ಈ ದುರ್ಘಟನೆಯಲ್ಲಿ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಹೇಳಿದ್ದಾರೆ.

Read More

ಮಡಿಕೇರಿ ನ.19 : ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಡ್ಯ ತಾಲ್ಲೂಕಿನ ಲಾಳನಕೆರೆ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಸಾಕಮ್ಮ ಎಂದು ಗುರುತಿಸಲಾಗಿದೆ. ಕೃಷಿ ಕೆಲಸಕ್ಕೆ ಹೊಲಕ್ಕೆ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

ಕುಶಾಲನಗರ/ ಕೂಡಿಗೆ ನ.19 : ಕೊಡಗು ಜಿಲ್ಲಾ ಪಂಚಾಯ್ತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸ್ವಚ್ಛ್ ಭಾರತ್ ಮಿಷನ್ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ  ಹಾಗೂ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ  (ಎನ್.ಎಸ್.ಎಸ್.) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ,  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ  ಆಶ್ರಯದಲ್ಲಿ ಪ್ರೌಢಶಾಲೆಯಲ್ಲಿ  ಸ್ವಚ್ಛ ಭಾರತ್ ಅಭಿಯಾನ ಹಾಗೂ  ‘ ಗೋ ಗ್ರೀನ್ ಅಭಿಯಾನ’ದಡಿ  “ಬದಲಾವಣೆಯನ್ನು ವೇಗಗೊಳಿಸುವುದು’ ಎಂಬ ಧ್ಯೇಯದೊಂದಿಗೆ  ” ವಿಶ್ವ ಶೌಚಾಲಯ ದಿನ”-2023 ದ ಜನಜಾಗೃತಿ ನಡೆಸಲಾಯಿತು. “ವಿಶ್ವ ಶೌಚಾಲಯ ದಿನ*ದ ಮಹತ್ವ ಹಾಗೂ ಶೌಚಾಲಯ ಸ್ವಚ್ಛತೆ ಕುರಿತು ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯೋಪಾಧ್ಯಾಯರೂ ಆದ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಜಿಲ್ಲಾ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ , ಶೌಚಾಲಯಗಳು…

Read More

ಸುಂಟಿಕೊಪ್ಪ ನ.19 : ಗೆಲುವಿನ ರುವಾರಿ ಸೆಸ್ಟೋ ಬಾಲ್ ತಂಡದ ನಾಯಕ ಶಾಹಿಲ್ ಉಸ್ಮಾನ್ ಮತ್ತು ಆಟಗಾರ ಇರ್ಷಾದ್ ಮುಸ್ತಫಾ ಅವರುಗಳನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ, ವಿವಿಧ ಸಂಘ ಸಂಸ್ಥೆ ಹಾಗೂ ಸಾರ್ವಜನಿಕರು ಸನ್ಮಾನಿಸಿ ಗೌರವಿಸಿದರು. ಇತ್ತೀಚೆಗೆ ಅಂತರಾಷ್ಟ್ರೀಯ ಸೆಸ್ಟೋ ಬಾಲ್ ಚಾಂಪಿಯನ್ ಶಿಪ್‌ನ ಭಾರತ ಪುರುಷರ ತಂಡದ ಥೈಲ್ಯಾಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧ ಜಯಗಳಿಸಿ  ಆಗಮಿಸಿದ ಭಾರತೀಯ ಪುರುಷರ ಸೆಸ್ಟೋ ಬಾಲ್ ತಂಡದ ನಾಯಕ ಶಾಹಿಲ್ ಉಸ್ಮಾನ್ ಹಾಗೂ ಅತ್ಯುತ್ತಮ ಆಟಗಾರ ಇರ್ಷಾದ್ ಮುಸ್ತಫಾ ಅವರನ್ನು ಸುಂಟಿಕೊಪ್ಪ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯಿಂದ ತೆರೆದ ಜೀಪ್ ನಲ್ಲಿ ಮೆರವಣಿಗೆಯ ಮೂಲಕ ಕರೆತಂದು ಕನ್ನಡ ವೃತ್ತದ ಬಳಿ ಆತ್ಮೀಯ ಸ್ಚಾಗತ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಮಹೇಶ್ ಮಾಲಾರ್ಪಣೆ ಮಾಡುವ ಮೂಲಕ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಬೀರ್, ಆಲಿಕುಟ್ಟಿ, ವಾಹನ ಚಾಲಕರ ಸಂಘದ ಅಧ್ಯಕ್ಚ ಸುರೇಶ್, ಮಾಜಿ ಅಧ್ಯಕ್ಷರುಗಳಾದ ಅಚ್ಚುಪ, ಬಿ.ಎಂ.ಪೂವಪ್ಪ, ಬಿಲ್ಲವ…

Read More

ಕುಶಾಲನಗರ ನ.19 : ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ  ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಆಶ್ರಯದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹಾಗೂ ಗ್ರೋ ಗ್ರೀನ್ ಅಭಿಯಾನದಡಿ ಪ್ರತಿ ವರ್ಷ ನವೆಂಬರ್ 19 ರಂದು ಆಚರಿಸುವ  ವಿಶ್ವ ಶೌಚಾಲಯ ದಿನ: 2023 ರ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಚತಾ ಜನಜಾಗೃತಿ ಆಂದೋಲನಕ್ಕೂ ಮುನ್ನ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಸ್ವತಃ ಶಾಲಾ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಮಕ್ಕಳಿಗೆ ಶೌಚಾಲಯವನ್ನು ಸ್ವಚ್ಚಗೊಳಿಸುವ ಕುರಿತು ಅರಿವು  ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಟಿ.ಜಿ.ಪ್ರೇಮಕುಮಾರ್ ಅವರು ಶಾಲಾ ಶೌಚಾಲಯ ಸ್ವಚ್ಚಗೊಳಿಸಿದ ಕುರಿತು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಡಿ. ಭಾಸ್ಕರ್ ನಾಯಕ್ ಶ್ಲಾಘಿಸಿದರು. ಇದೊಂದು ಶಾಲಾ ಮುಖ್ಯಸ್ಥರು ಸ್ವತಃ ಶೌಚಾಲಯ ತೊಳೆಯುವ ಮೂಲಕ ಮಕ್ಕಳಿಗೆ ಹಾಗೂ ಸಮುದಾಯಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರಶಂಸಿದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಅವರು ಶಾಲಾ…

Read More

ಮಡಿಕೇರಿ ನ.19 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯತಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದೊಂದಿಗೆ ಕೂಡಿಗೆಯ ಸರ್ಕಾರಿ ಕ್ರೀಡಾ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಜನವರಿ 3 ರಿಂದ ನಡೆಯಲಿರುವ 17 ವರ್ಷದೊಳಗಿನ ಬಾಲಕಿಯರ ರಾಷ್ಟ್ರೀಯ ಹಾಕಿ ಟೂರ್ನಿಯನ್ನು ಯಶಸ್ವಿಯಾಗಿ ಸಂಘಟಿಸಲು ನಿರ್ಧರಿಸಲಾಗಿದೆ. ಹಾಕಿ ಟೂರ್ನಿಯ ರೂಪುರೇಷೆ, ಸಂಘಟನೆ, ಸಮಿತಿ ರಚನೆಗೆ ಸಂಬಂಧಿಸಿದಂತೆ ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಟೂರ್ನಿಯನ್ನು ಜನರ ಸಹಭಾಗಿತ್ವದಲ್ಲಿ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಸಂಘಟಿಸುವ ಕುರಿತು ಚರ್ಚಿಸಲಾಯಿತು. ರಾಷ್ಟ್ರೀಯ ಹಾಕಿ ಟೂರ್ನಿ ಸಂಘಟನೆ ಹಾಗೂ ರೂಪುರೇಷೆ ಕುರಿತು ಮಾಹಿತಿ ನೀಡಿದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯೂ ಆದ ಟೂರ್ನಿಯ ಸಂಚಾಲಕ ಡಾ. ಸದಾಶಿವಯ್ಯ ಎಸ್.ಪಲ್ಲೇದ್, ಟೂರ್ನಿಯನ್ನು ಕೂಡಿಗೆಯ ಸರ್ಕಾರಿ ಕ್ರೀಡಾ ಶಾಲೆಯ ಟರ್ಫ್ ಮೈದಾನ ಸೇರಿದಂತೆ…

Read More

ಮಡಿಕೇರಿ ನ.19 : ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ-ಕರ್ನಾಟಕ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿರುವ 72 ಗಂಟೆಗಳ ಮಹಾಧರಣಿಯ ಪ್ರಚಾರ ಆಂದೋಲನಕ್ಕೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾ ಸಮಿತಿ ಸಿದ್ದಾಪುರದಲ್ಲಿ ಚಾಲನೆ ನೀಡಿತು. ಮೂರು ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಪ್ರಚಾರ ಆಂದೋಲನ ನಡೆಯಲಿದ್ದು, ಅದರ ಭಾಗವಾಗಿ ಸಿದ್ದಾಪುರದಲ್ಲಿ ಪ್ರಚಾರ ಜಾಥಾ ನಡೆಸಲಾಯಿತು. ಬೆಲೆ ಏರಿಕೆ ನಿಯಂತ್ರಿಸಬೇಕು, ಅಗತ್ಯ ವಸ್ತುಗಳು, ಆಹಾರ, ಔಷಧಿ, ನೇಕಾರಿಕೆ, ಕೃಷಿ ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ ರದ್ದುಪಡಿಸಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು ಎಂದು ಪ್ರಮುಖರು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ದುಡಿಯುವ ಜನರ ಪ್ರಮುಖ 24 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ 72 ಗಂಟೆಗಳ ಮಹಾಧರಣಿ ನಡೆಯಲಿದ್ದು, ಅದರ ಪ್ರಚಾರ…

Read More

ಸಿದ್ದಾಪುರ  ನ.19 :  ಸಮಸ್ತ ಎಂಬ ಆಧ್ಯಾತ್ಮಿಕ ಉಲಮಾ ಸಂಘಟನೆಯ ನಿರ್ದೇಶನದ ಮೇರೆಗೆ ಕೊಡಗು ಜಿಲ್ಲಾ ಜಂಇಯ್ಯತುಲ್ ಉಲಮಾದ ನೇತೃತ್ವದಲ್ಲಿ  ನ.21 ರಂದು ಸುಂಟಿಕೊಪ್ಪದಲ್ಲಿ ಉಲಮಾ ಸಮ್ಮೇಳನ ನಡೆಯಲಿದೆ. ಸುಂಟಿಕೊಪ್ಪ ಜಾಮಿಅ ಜೂನಿಯರ್ ಶರಿಯತ್ ಅರೇಬಿಕ್ ಕಾಲೇಜಿನಲ್ಲಿ ಬೆಳಿಗ್ಗೆ 8.30 ಕ್ಕೆ ಕಂಬಿಬಾಣೆಯಲ್ಲಿ ಅಂತ್ಯ ವಿಶ್ರಾಂತಿ ಗೊಳ್ಳುತ್ತಿರುವ ಕಾಕು ಉಪ್ಪಾಪ (ನ, ಮ ) ರವರ ದರ್ಗಾ ಝಿಯಾರತ್ ಮೂಲಕ ಆರಂಭಗೊಳ್ಳುವ ಕಾರ್ಯಕ್ರಮವನ್ನು ಸಮಸ್ತ ಕೇಂದ್ರ ಮುಶಾವರ ಸದಸ್ಯ  ಶೈಖುನಾ ಮೂಸಕ್ಕೋಯ ಉಸ್ತಾದ್ ಉದ್ಘಾಟಿಸಲಿದ್ದು,  ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಉಪ ಖಾಝಿ ಎಂ.ಎಂ.ಅಬ್ದುಲ್ಲಾ ಫೈಝಿ ವಹಿಸಲಿದ್ದಾರೆ.   ಕೊಡಗು ಜಿಲ್ಲೆಯ ಸರ್ವ ಉಲಮಾಗಳು ಸಮ್ಮೇಳನದಲ್ಲಿ ಭಾಗವಹಿಲಿದ್ದಾರೆ ಪವಿತ್ರ ಇಸ್ಲಾಂ ಧರ್ಮದ ನೈಜವಾದ ಆಶಯ, ಆದರ್ಶ, ಆಚಾರ ವಿಚಾರಗಳನ್ನು ಮುಸ್ಲಿಂ ಸಮಾಜದ ಜನಸಾಮಾನ್ಯರಿಗೆ ತಲುಪಿಸಿ ಕೊಡುವ ಅತಿ ದೊಡ್ಡ ಜವಾಬ್ದಾರಿಯು ಉಲಮಾಗಳಿಗಿದ್ದು ಪ್ರಸ್ತುತ ಜವಾಬ್ದಾರಿಯನ್ನು ಅತ್ಯಂತ ಜಾಗರೂಕತೆಯಿಂದ ನಿಭಾಯಿಸುವ ಸಾಮರ್ಥ್ಯವು ಪ್ರತಿಯೊಬ್ಬ ಧಾರ್ಮಿಕ ನೇತಾರನಲ್ಲಿ ಇರಬೇಕಿದೆ. ಇಸ್ಲಾಂ ಧರ್ಮದ ನೈಜ ಮುಖವಾದ ಪವಿತ್ರ ಅಹ್ಲು…

Read More