ಬೆಂಗಳೂರು ನ.19 : ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತೆ ದಿನ ಕಾರ್ಯಕ್ರಮದಲ್ಲಿ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.
ಲೇಖಕ: admin
ಮಡಿಕೇರಿ ನ.19 : ಪರಿಹಾರ ಸಹಾಯವಾಣಿಯಿಂದ ನಿಮಗೆ ವರ್ಗಾಯಿಸಲಾದ ದೂರುಗಳನ್ನು ಮತ್ತು ಬಾಕಿ ಉಳಿದ ದೂರುಗಳನ್ನು ನಿಮಗೆ ನೀಡಿದ ಅವಧಿಯಲ್ಲಿ ಬಗೆಹರಿಸಿ. ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಪಂಚಾಯತ್ ರಾಜ್ ಇಲಾಖೆ PDO, AE, JE ಗಳಿಗೆ ಸುತ್ತೋಲೆ ಹೊರಡಿಸಿದೆ.
ಮಡಿಕೇರಿ ನ.19 : ಮಾಜಿ ಪ್ರಧಾನಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಬದುಕು ದೇಶದ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದೆ ಎಂದು ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಇಂದಿರಾ ಗಾಂಧಿಯವರ 106 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಂದಿರಾ ಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಮೂಲಕ ಸಾರ್ವಜನಿಕ ಜೀವನ ಆರಂಭಿಸಿ ದೇಶದ ಪ್ರಧಾನಿಯಾಗಿ ಅಪ್ರತಿಮ ಸಾಧನೆ ಮಾಡಿ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದರು. ಇಂದಿರಾ ಗಾಂಧಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಕೊನೆಯ ಭಾಷಣದಲ್ಲಿ “ನನ್ನ ದೇಹದಲ್ಲಿರುವ ಕೊನೆಯ ರಕ್ತದ ಹನಿ ಕೂಡ ದೇಶಕ್ಕಾಗಿ ಮೀಸಲಾಗಿದೆ” ಎಂದು ನುಡಿದಿದ್ದರು. ಅದೇ…
ಮಡಿಕೇರಿ ನ.19 : ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಗೋಣಿಕೊಪ್ಪ ಮತ್ತು ವಿರಾಜಪೇಟೆ ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಕಂಡಂಗಾಲ ಗ್ರಾಮದ ನಿವಾಸಿ ವಿಜಯ್ ಭೀಮಯ್ಯ (39) ಎಂಬಾತನೆ ಆರೋಪಿಯಾಗಿದ್ದು, 1 ಕೆ.ಜಿ 606 ಗ್ರಾಂ ಹಸಿ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಪೊಲೀಸರು ದಾಳಿ ನಡೆಸಿದಾಗ ತೋಟದ ಮನೆಯ ಹಿಂಭಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಕಂಡು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್, ಗೋಣಿಕೊಪ್ಪ ವೃತ್ತದ ಸಿಪಿಐ ಗೋವಿಂದರಾಜು, ವಿರಾಜಪೇಟೆ ಗ್ರಾಮಾಂತರ ಠಾಣೆಯ ಪಿಎಸ್ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ದಕ್ಷತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಗಾಂಜಾ ಸೇರಿದಂತೆ ಮಾದಕ ವಸ್ತುಗಳು ಮಾರಾಟವಾಗುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ…
ಮಡಿಕೇರಿ ನ.19 : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಸ್ ಗಳ ಕೊರತೆಯಿಂದ ಕೊಡಗು ಜಿಲ್ಲೆಯಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿದೆ. ಯೋಜನೆಯ ಲಾಭ ಎಲ್ಲಾ ಮಹಿಳೆಯರಿಗೆ ದೊರೆಯುತ್ತಿಲ್ಲವೆಂದು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಐದು ತಿಂಗಳಿನಿಂದ ಶಕ್ತಿ ಯೋಜನೆ ಜಾರಿಯಲ್ಲಿದ್ದರೂ ಬಸ್ ಗಳ ಕೊರತೆ ಮತ್ತು ಗ್ರಾಮೀಣ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಗಳ ಸೇವೆ ಇಲ್ಲದೆ ಇರುವುದರಿಂದ ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯ ಶೇ.70 ರಷ್ಟು ಮಹಿಳೆಯರಿಗೆ ಇದರ ಪ್ರಯೋಜನ ದೊರೆಯುತ್ತಿಲ್ಲವೆಂದು ಗಮನ ಸೆಳೆದಿದ್ದಾರೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳೇ ಹೆಚ್ಚು ಇದ್ದರೂ ಕೆಎಸ್ಆರ್ಟಿಸಿ ಬಸ್ ಗಳ ಸೇವೆ ಗ್ರಾಮಗಳಿಗೆ ಲಭ್ಯವಿಲ್ಲ. ಗ್ರಾಮಸ್ಥರು ಮುಖ್ಯ ರಸ್ತೆಗೆ ಬರಬೇಕೆಂದರೆ 10-12 ಕಿ.ಮೀ ದೂರ ನಡೆಯಲೇಬೇಕಾಗಿದೆ. ಕೆಎಸ್ಆರ್ಟಿಸಿ ಸೇವೆಯ ನ್ಯೂನತೆ ಮತ್ತು ಬಸ್ ಗಳ ಕೊರತೆಯಿಂದ ಶಕ್ತಿ ಯೋಜನೆ ಕೊಡಗು ಜಿಲ್ಲೆಗೆ ನಿಷ್ಪ್ರಯೋಜಕವಾಗಿದೆ. ಮಡಿಕೇರಿ, ಕುಶಾಲನಗರ, ಸೋಮವಾರಪೇಟೆ,…
ನಾಪೋಕ್ಲು ನ.19 : ಮರಂದೊಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಯಿತು. ಕಾರ್ಯಕ್ರಮವನ್ನು ಕಕ್ಕಬೆ ಗ್ರಾ.ಪಂ ಸದಸ್ಯ ಚೋಯಮಾಡoಡ ಹರಿ ಮೊಣ್ಣಪ್ಪ ಉದ್ಘಾಟಿಸಿದರು. ನಾಪೋಕ್ಲು ಪಶು ವೈಧ್ಯಾಧಿಕಾರಿ ಡಾ.ಶಿಲ್ಪಾ ಶ್ರೀ ಮಾರ್ಗದರ್ಶನದಲ್ಲಿ ಹಿರಿಯ ಪಶು ವೈಧ್ಯಕೀಯ ಪರೀಕ್ಷಕ ಸುನಿಲ್ ಮತ್ತು ಕಕ್ಕಬೆ ಪಶು ಸಖಿ ಸುಧಾ 60 ಸಾಕು ನಾಯಿಗಳಿಗೆ ರೇಬಿಸ್ ಮುಂಜಾಗ್ರತ ಲಸಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಾರ್ಚಂಡ ವಿಜಯ್ ಸೇರಿದಂತೆ ಹಲವು ಗ್ರಾಮಸ್ಥರು ತಮ್ಮ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸಿದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ನ.19 : ಮನೆಯ ಸಮೀಪವೇ ಲಾರಿ ಡಿಕ್ಕಿಯಾಗಿ ಅಮ್ಮತ್ತಿ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮೂಕೊಂಡ ಬೋಸ್ ದೇವಯ್ಯ ಅವರು ನಿಧನ ಹೊಂದಿದ್ದಾರೆ. ಮನೆಗೆ ಇಟ್ಟಿಗೆ ತಂದಿದ್ದ ಲಾರಿ ಹಿಂಬದಿಗೆ ಬರುತ್ತಿದ್ದಾಗ ಅಲ್ಲೇ ನಿಂತಿದ್ದ ಬೋಸ್ ದೇವಯ್ಯ ಅವರಿಗೆ ಡಿಕ್ಕಿಯಾಗಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ಬಿಜೆಪಿಯ ಹಿರಿಯ ಮುಖಂಡರೂ ಆಗಿದ್ದ ಬೋಸ್ ದೇವಯ್ಯ ಅವರು, ಗೋಣಿಕೊಪ್ಪಲು ಎಪಿಎಂಸಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ::: ಸಂತಾಪ ::: ಬೋಸ್ ದೇವಯ್ಯ ಅವರ ನಿಧನಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಸರಳ ಸಜ್ಜನಿಕೆಯ ಸ್ನೇಹಜೀವಿ ಬೋಸ್ ದೇವಯ್ಯ ಅವರ ಅಗಲಿಕೆ ಅತೀವ ದು:ಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿರಾಜಪೇಟೆ ನ.19 : ಆರ್ಜಿ ಗ್ರಾಮದ ಕಲ್ಲುಬಾಣೆಯ ಕಲ್ಲುಬಾಯ್ಸ್ ತಂಡದ ವತಿಯಿಂದ ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕಲ್ಲುಬಾಯ್ಸ್ ನೈಸ್-ಹೈಟೆಕ್ ಕಪ್ 5 ಪ್ಲಡ್ ಲೈಟ್ ಫುಟ್ಬಾಲ್ ಪಂದ್ಯಾವಳಿಯ ಜೆರ್ಸಿ ಯನ್ನು ಭಾರತ ಫುಟ್ಬಾಲ್ ತಂಡದ ಮಾಜಿ ಆಟಗಾರ ಮಹಮ್ಮದ್ ರಾಫಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಮಹಮ್ಮದ್ ರಾಫಿ, ಇತ್ತಿಚೆಗೆ ಫುಟ್ಬಾಲ್ ಆಟದತ್ತ ಯುವಕರು ಆಸಕ್ತಿ ತೋರಿಸುತ್ತಿದ್ದಾರೆ. ದೈಹಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಉಳಿಸುವ ಕ್ರೀಡಾಕೂಟಗಳು ನಡೆಯಬೇಕು. ಕ್ರೀಡಾ ಮನೋಭಾವನೆಯಿಂದಾಗಿ ಸಾಮಾಜಿಕ ಸಾಮರಸ್ಯ ವೃದ್ಧಿಸಿಕೊಂಡು ಸಮಾಜದ ಆರೋಗ್ಯ ಕಾಪಾಡಬೇಕು ಎಂದರು. ಕೊಡಗಿನಲ್ಲಿ ಫುಟ್ಬಾಲ್ ಅಕಾಡೆಮಿ ಸ್ಥಾಪನೆಯಾಗಬೇಕು, ಇದು ಕ್ರೀಡಾಸಕ್ತರಿಗೆ ಅನುಕೂಲವಾಗಲಿದೆ. ಇದಕ್ಕೆ ಬೇಕಾದ ಸಲಹೆ ಸಹಕಾರವನ್ನು ನೀಡಲು ನಾನು ತಯಾರಿದ್ದೇನೆ. ಕೊಡಗಿನ ಅತಿಥ್ಯಕ್ಕೆ ಮನಸೋತಿದ್ದೇನೆ. ಬಹಳಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಆದರೆ ಈ ಕಾರ್ಯಕ್ರಮದ ಉದ್ಘಾಟನೆ ವಿಭಿನ್ನವಾಗಿದ್ದು, ಮನಸ್ಸಿಗೆ ಸಂತೋಷ ತಂದಿದೆ ಎಂದು ಅಭಿಮಾನ ವ್ಯಕ್ತಪಡಿಸಿದರು. ಇದೀಗ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಆಯೋಜಿಸಿರುವುದು ಮಹತ್ವದ್ದಾಗಿದೆ. ಕ್ರೀಡೆಗಳು ಆತ್ಮಸ್ಥೈರ್ಯ…
ಮಡಿಕೇರಿ ನ.19 : ಯಾವುದೇ ವ್ಯಕ್ತಿ ಪೋಷಕರನ್ನು ಕಳೆದುಕೊಂಡ, ತಿರಸ್ಕರಿಸಲ್ಪಟ್ಟ, ತ್ಯಜಿಸಲ್ಪಟ್ಟ ಮಗುವನ್ನು ಅನಧಿಕೃತವಾಗಿ ದತ್ತು ನೀಡುವುದು ಅಥವಾ ದತ್ತು ಪಡೆಯುವುದು ಮಾಡಿದಲ್ಲಿ ಅಂತಹ ವ್ಯಕ್ತಿಗೆ ಐದು ವರ್ಷಗಳ ಅವಧಿಯವರೆಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದು. ಒಂದು ವೇಳೆ ಇಂತಹ ಅಪರಾಧಗಳಲ್ಲಿ ಯಾವುದೇ ಆಸ್ಪತ್ರೆ, ನರ್ಸಿಂಗ್ ಹೋಮಿನ ಅಥವಾ ಹೆರಿಗೆ ಕೇಂದ್ರದ ಸಿಬ್ಬಂದಿಗಳು ಶಾಮೀಲಾಗಿದ್ದರೆ ಶಿಕ್ಷೆಯ ಅವಧಿ ಮೂರು ವರ್ಷಗಳಿಗೆ ಕಡಿಮೆ ಇಲ್ಲದಂತೆ ಏಳು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾಗಿದೆ. ಅನಾಥ, ಪರಿತ್ಯಕ್ತ ಮಕ್ಕಳು ಕಂಡು ಬಂದಲ್ಲಿ ಹಾಗೂ ಮಗುವನ್ನು ದತ್ತು ಪಡೆಯಲು ಇಚ್ಚಿಸುವ ಪೋಷಕರು ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ ಹಾಗೂ ದತ್ತು ಮಾರ್ಗದರ್ಶನ ಕೇಂದ್ರ, ಸರ್ಕಾರಿ ಬಾಲಕಿಯರ ಬಾಲಮಂದಿರದ ಆವರಣ, ಮುಳಿಯ ಲೇಔಟ್, ಎಫ್ಎಂಕೆಎಂಸಿ. ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ.08272-200450 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ನ.19 : ಕೊಡಗು ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ” ಕಾರ್ಯಕ್ರಮವು ನವೆಂಬರ್, 20 ರಂದು ಬೆಳಗ್ಗೆ 11 ಗಂಟೆಗೆ “ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ” ಯಲ್ಲಿ ಸ್ಪರ್ಧೆ ನಡೆಯಲಿದೆ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ 2 ವಿಭಾಗಗಳಾಗಿ ವಿಂಗಡಿಸಿ ಯಾವುದಾದರು ಒಂದು ಚಟುವಟಿಕೆಯಲ್ಲಿ ಭಾಗವಹಿಸುವುದು. 9-12, 13-16 ವರ್ಷದ ಮಕ್ಕಳಿಗೆ ಶಾಸ್ತ್ರೀಯ ನೃತ್ಯ/ ಜಾನಪದ ನೃತ್ಯ/ ಕರ್ನಾಟಕ ಶಾಸ್ತ್ರೀಯ ಸಂಗೀತ/ಹಿಂದೂಸ್ತಾನಿ ಸಂಗೀತ/ ಸುಗಮ ಸಂಗೀತ, ವಾದ್ಯ ಸಂಗೀತ/ತಬಲ/ಮೃದಂಗ/ ಕೀಬೋರ್ಡ್ /ಕೊಳಲು/ಡೊಳ್ಳು ಮತ್ತು ನಗಾರಿ, ವಿಜ್ಞಾನ ಸೃಜನಾತ್ಮಕ ಆವಿಷ್ಕಾರ ಹಾಗೂ ಚಿತ್ರ ಕಲೆ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜೇತ ಮಕ್ಕಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಹಾಗೆಯೇ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳನ್ನು ನವೆಂಬರ್, 21 ರಂದು ರಾಜ್ಯ…






