ಲೇಖಕ: admin

ನಾಪೋಕ್ಲು ಡಿ.1 NEWS DESK : ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಬಳ್ಳಾರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಯುಕ್ತ ಆಶ್ರಯದಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಕೊಡಗಿನ ಮಹಿಳಾ ಕ್ರೀಡಾಪಟುಗಳು ಪಾಲ್ಗೊಂಡು ಅತ್ಯುತ್ತಮ ಸಾಧನೆಯೊಂದಿಗೆ ಬಹುತೇಕ ಪದಕಗಳನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಾಂಗಾಲ ಬಿಟ್ಟಂಗಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ ಭಾರತದ ಗುಂಡು ಎಸೆತದಲ್ಲಿ ಪ್ರಥಮ, ತಟ್ಟೆ ಎಸೆತದಲ್ಲಿ ಪ್ರಥಮ, ಜವಾಲಿನ್ ಎಸೆತದಲ್ಲಿ ಪ್ರಥಮ, ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು ಭಾರದ ಗುಂಡು ಎಸೆದ ಸ್ಪರ್ಧೆಯಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ.ಶೆಟ್ಟಿಗೇರಿ ಪೆಮ್ಮಂಡ ಸಬಿತ ಕುಶಾಲಪ್ಪ ಡಿಸ್ಕಸ್ ಥ್ರೊ ಸ್ಪರ್ಧೆಯಲ್ಲಿ ಪ್ರಥಮ, ಭಾರದ ಗುಂಡು…

Read More

ಮಡಿಕೇರಿ ಡಿ.1 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದಲ್ಲಿ ಕಳೆದ 19 ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸಿದ್ದೇನೆ. ಸದಸ್ಯ, ಖಜಾಂಚಿ ಮತ್ತು ಅಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕಳೆದ 7 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಸಂಘದ ಪದಾಧಿಕಾರಿಗಳ ಸಹಕಾರದಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ. ಪ್ರಸ್ತುತ ಅನಾರೋಗ್ಯದ ಕಾರಣ ಸಂಘದ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದ ಸಂಘದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಪದಾಧಿಕಾರಿಗಳು ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಲಿ ಎಂದು ಎಂ.ಡಿ.ನಾಣಯ್ಯ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಡಿ.1 NEWS DESK : ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲ್ಲೂಕಿನ ಮಾಡನ್ನೂರ್ ನಲ್ಲಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆ ದಶಮಾನೋತ್ಸವದ ಸಂಭ್ರಮದಲ್ಲಿದೆ. 10ನೇ ವಾರ್ಷಿಕೋತ್ಸವದ ಅಂಗವಾಗಿ ಡಿ.5, 6 ಮತ್ತು 7 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹುದವಿ ಬಿರುದು ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಶಿಕ್ಷಣ ಸಂಸ್ಥೆಯ ಸದಸ್ಯ ಸಿ.ಎಂ.ಹಮೀದ್ ಮೌಲಾವಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಮನ್ವಯ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನಮಾನ ಪಡೆದಿರುವ ಕೇರಳದ ಚಿಮ್ಮಾಡ್ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಸಹ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆ, 2015 ಆಗಸ್ಟ್ 19 ರಂದು ಪುತ್ತೂರು ತಾಲ್ಲೂಕಿನ ಮಾಡನ್ನೂರ್ ನಲ್ಲಿ ಆರಂಭಗೊಂಡಿತು. ಕೇವಲ ಹತ್ತು ವರ್ಷಗಳಲ್ಲಿ ಸಂಸ್ಥೆಯು ತನ್ನ ಗುರಿಯತ್ತ ಶ್ರದ್ಧೆಯಿಂದ ಹೆಜ್ಜೆಯಿಟ್ಟಿದ್ದು, ಪ್ರಸ್ತುತ 360ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಅರಬ್ಬಿ, ಇಂಗ್ಲೀಷ್, ಉರ್ದು, ಕನ್ನಡ, ಮಲಯಾಳಂ ಸೇರಿದಂತೆ ವಿವಿಧ ಅಂತರ ರಾಷ್ಟ್ರೀಯ ಭಾಷೆಗಳಲ್ಲಿ…

Read More

ಮಡಿಕೇರಿ ಡಿ.1 NEWS DESK : ಐಗೂರು ಗ್ರಾಮದ ದಿವಂಗತ ಸಿ.ಕುಂಞರಾಮನ್ ಅವರ ಪತ್ನಿ ಭಾರ್ಗವಿ (84) ಅವರು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಆಗಲಿದ್ದಾರೆ.

Read More

ಸುಂಟಿಕೊಪ್ಪ ಡಿ.1 NEWS DESK : ಆಧುನೀಕರಣದ ಭರಾಟೆಯಲ್ಲಿ ಜಾನಪದ ಸಂಸ್ಕೃತಿ, ಹಳ್ಳಿ ಜೀವನ ನಶಿಸುತ್ತಿದೆ ಎಂದು ಸಾಹಿತಿ ಹೆಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ಘಟಕ ಸಂಯುಕ್ತಾಶ್ರಯದಲ್ಲಿ ನಡೆದ ಜಾನಪದ ಉತ್ಸವದಲ್ಲಿ ಮುಖ್ಯ ಭಾಷಣಕರರಾಗಿ ಆಗಮಿಸಿ ಅವರು ಮಾತನಾಡಿದರು. ನಾವು ಮತ್ತು ನಮ್ಮ ಹಿರಿಯರ ಬದುಕು, ಜನಪದ ಸಂಸ್ಕøತಿ, ಪದ್ಧತಿ, ಪರಂಪರೆಯಿಂದ ಕೂಡಿದ್ದು, ನಮ್ಮ ಮಕ್ಕಳ ಮತ್ತು ಮೊಮ್ಮಕ್ಕಳ ತಲೆಮಾರು ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿದೆ. ಆಳುವ ಮಕ್ಕಳನ್ನು ಜೋಗುಳ ಹಾಡಿ ಮಲಗಿಸುವ ಅಥವಾ ಪ್ರೀತಿಯ ಮಾತುಗಳಿಂದ ಒಲಿಸಿಕೊಳ್ಳುವ ಜಾಗದಲ್ಲಿ ಮೊಬೈಲ್ ರಿಲ್ಸ್ ಆಕ್ರಮಿಸಿಕೊಂಡಿದೆ ಎಂದು ವಿಷಾಧಿಸಿದರು. ಹಿಂದೆ ಕೂಡುಕುಟುಂಬ, ಅಜ್ಜ ಅಜ್ಜಿಯ ಪ್ರೀತಿ, ಕುಂಟಬಿಲ್ಲೆ, ಲಗೋರಿ, ಕಣ್ಣಾಮುಚ್ಚಾಲೆ ಆಟ, ಹಸಿರ ಪಕೃತಿಯ ನಡುವೆ ನಾವು ಬೆಳೆದ ದಿನಗಳು ಇಂದು ನಮ್ಮ ಮತ್ತು ಮೊಮ್ಮಕ್ಕಳಿಗೆ ಮರಿಚಿಕೆಯಾಗಿದೆ ಎಂದು ಹೇಳಿದರು. ವಿವಿಧ ಭಾಷೆ ಜನಾಂಗಗಳಿಗೆ ಸೇರಿದ ನಾವು ಕನ್ನಡವನ್ನು ಹೆಚ್ಚಾಗಿ…

Read More

ಸುಂಟಿಕೊಪ್ಪ ಡಿ.1 NEWS DESK : ಸರಕಾರ ಸೇವೆಯಲ್ಲಿ ವಯೋನಿವೃತ್ತಿ ಸಹಜ. ಆದರೆ ನಿಮ್ಮ ಶಿಕ್ಷಣ, ವೃತ್ತಿ ಜೀವನವನ್ನು ಕೊನೆಗೊಳಿಸದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕೆಂದು ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹೇಳೀದರು. ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ  ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿರುವ ಸಿ.ಎ.ಗೀತಾ ಪಾರ್ಥ,  ಅವರಿಗೆ ಬೋಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು. ಶಾಲೆಗೆ ಆಗಮಿಸುವ ಮಕ್ಕಳು ಹಾಗೂ ಪೋಷಕರೊಂದಿಗೆ ಸದಾಗೌರವ, ಹಸನ್ಮುಖಿಯಾಗಿರುವ ಗೀತಾ ಅವರು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪುಗೊಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಏರಿಕೆಗೊಳಿಸುವಲ್ಲಿಯೂ ಅವರ ಪರಿಶ್ರಮ ಅಪರಿಮಿತವಾಗಿದೆ. ಅಲ್ಲದೆ ಶಾಲೆಯ ಅಭಿವೃದ್ಧಿಗೆ ತನ್ನದೆಯಾದ ರೀತಿಯಲ್ಲಿ ಕೊಡುಗೆಯನ್ನು ನೀಡಿರುವುದು ಆಶಾದಾಯಕ ಎಂದರು.  ಸಹಶಿಕ್ಷಕರಿಗೆ ಪಠ್ಯದಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳಲು ಶಿಕ್ಷಕರಿಗೆ ಪ್ರೇರೆಪಿಸುವ ಮೂಲಕ ಪ್ರತಿಭೆಗಳನ್ನು ಅನಾವರಣಗೊಳಿಸುವಲ್ಲಿ ಮುಖ್ಯ ಶಿಕ್ಷಕಿ ಗೀತಾ ಅವರ ಪಾತ್ರ ಮಹತ್ವದಾಗಿದೆ ಎಂದು ಹೇಳಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಹಾಗೂ ಗ್ರಾ.ಪಂ.ಸದಸ್ಯ ರಫೀಕ್‍ಖಾನ್,…

Read More

ಸುಂಟಿಕೊಪ್ಪ ಡಿ.1 NEWS DESK : 7ನೇ ಹೋಸಕೋಟೆ ನಿವಾಸಿ, ನಿವೃತ್ತ ಯೋಧ ವಚನ್ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. 7ನೇ ಹೋಸಕೋಟೆ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, 17 ವರ್ಷಗಳ ದೇಶಕ್ಕೆ ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡು ಸ್ವ ಗ್ರಾಮಕ್ಕೆ ಆಗಮಿಸಿದ ಗ್ರಾಮದ ನಿವಾಸಿ ಕೊರಗಪ್ಪ ಹಾಗೂ ಗಿರಿಜ ದಂಪತಿಗಳ ಪುತ್ರ ವಚನ್ ಅವರನ್ನು 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಸೌಮ್ಯಶ್ರೀ, ಕೆ.ಎಂ.ಮುಸ್ತಾಫ, ಮಧುಸೂದನ್, ಸಿದ್ಧೀಕ್, ವೇದಾವತಿ, ಕಮಲ ಚಂದ್ರಾವತಿ, ಪಂಚಾಯಿತಿ ಕಾರ್ಯದರ್ಶಿ ಸ್ವಾಮಿ ನಾಯಕ್, ಸಿಬ್ಬಂದಿಗಳಾದ ಪೂರ್ಣಿಮ, ಬೀನಾ, ಸರಿತಾ, ಹೇಮಾವತಿ ಮತ್ತಿತರರು ಇದ್ದರು.

Read More

ಕುಶಾಲನಗರ ಡಿ.1 NEWS DESK :  ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನದ‌ ಕೌತುಕ  ವಿನೂತನ ಪ್ರಯೋಗಗಳ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು  ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿನ ರಾಷ್ಟ್ರೀಯ‌ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.  ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ  ಹೆಚ್ಚು ಆಸಕ್ತಿ ಹಾಗೂ ಕುತೂಹಲ ಹೊಂದಬೇಕು. ಇದರಿಂದ‌ ತಮ್ಮಲ್ಲಿರುವ ಸುಪ್ತ‌ ಪ್ರತಿಭೆಯನ್ನು ಹೊರಹಾಕಿ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಲು ಸಾಧ್ಯ ಎಂದರು. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡರೆ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬಹುದು ಎಂದರು.…

Read More

ನಾಪೋಕ್ಲು ಡಿ.1 NEWS DESK : ಹದಗೆಟ್ಟ ರಸ್ತೆಯ ಗುಂಡಿಗಳನ್ನು ಮುಚ್ಚುವ ಮೂಲಕ ಕೊಟ್ಟಮುಡಿಯ ಜೀನತ್ ಯುವಕ ಸಂಘದ ಪದಾಧಿಕಾರಿಗಳು, ಸದಸ್ಯರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೊಟ್ಟಮುಡಿ ಇಂದ ಕಾವೇರಿ ನದಿ ಸೇತುವೆಯವರೆಗೆ ಹದಗೆಟ್ಟ ರಸ್ತೆಯಲ್ಲಿ ಶ್ರಮದಾನ ನಡೆಸಿ, ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಮಡಿಕೇರಿ – ನಾಪೋಕ್ಲು ಮುಖ್ಯ ರಸ್ತೆಯಲ್ಲಿ ಕೊಟ್ಟಮುಡಿ ಇಂದ ಕಾವೇರಿ ನದಿ ಸೇತುವೆಯವರೆಗೆ ರಸ್ತೆಗಳು ಗುಂಡಿ ಬಿದ್ದು ಸಂಚಾರಕ್ಕೆ ತೊಡಕು ಉಂಟಾಗಿತ್ತು. ಅಪಘಾತಗಳು ಹೆಚ್ಚಾಗುತ್ತಿತ್ತು. ಈ ನಿಟ್ಟಿನಲ್ಲಿ ರಸ್ತೆ ದುರಸ್ತಿಗೆ ಒತ್ತಾಯಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ. ರಸ್ತೆ ದುರಸ್ತಿಗೆ ಅಧಿಕಾರಿಗಳ ಸ್ಪಂದನೆ ಸಿಗದಿದ್ದರಿಂದ ಕೊಟ್ಟ ಮುಡಿಯ ಜೀನತ್ ಯುವಕ ಸಂಘದ ಪದಾಧಿಕಾರಿಗಳು ತಮ್ಮ ವಾಹನದಲ್ಲೇ ಮಣ್ಣು ತಂದು ರಸ್ತೆ ಹುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾದರು. ಗುಂಡಿಗಳಿಗೆ ಮಣ್ಣು ಕಲ್ಲು ತುಂಬಿ ದುರಸ್ತಿ ಕಾರ್ಯ ನಡೆಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಶ್ರಮದಾನದಲ್ಲಿ…

Read More

ಮಡಿಕೇರಿ ಡಿ.1 NEWS DESK : ಬೆಂಗಳೂರಿನಲ್ಲಿ ಬೆಂಗ್ ನಾಡ್ ಕೊಡವ ಒತ್ತೋರ್ಮೆ ಕೂಟ ಆಯೋಜಿಸಿದ ಇಂಟರ್ ನಾಡು ಹಾಕಿ ಪಂದ್ಯಾವಳಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.  ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಕಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯಾಟದ ವೀಕ್ಷಣೆಯನ್ನು ನೆರವೇರಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದ ಶಾಸಕರು, ಕೊಡಗಿನ ಜನತೆಯ ಉಸಿರಿನಲ್ಲಿ ಹಾಕಿ ಪಂದ್ಯಾವಳಿ ಹಾಸುಹೊಕ್ಕಿದೆ. ಪ್ರತಿಷ್ಠಿತವಾದ ಈ ಪಂದ್ಯಾವಳಿಯ ವೀಕ್ಷಣೆಯನ್ನು ಮಾಡಿ ಈ ಪಂದ್ಯಾಟದ ರೋಚಕತೆಯನ್ನು ಆಸ್ವಾದಿಸುವ ಸೌಭಾಗ್ಯ ಒದಗಿದ್ದು, ತನಗೆ ಸಂತೋಷ ತಂದಿದೆ. ಯುವ ಪ್ರತಿಭೆಗಳನ್ನು ಲೋಕಕ್ಕೆ ಪರಿಚಯಿಸುವಂತಹ ಇಂಥ ಕ್ರೀಡಾಕೂಟಗಳು ಮತ್ತಷ್ಟು ನಡೆಯಲಿ ಎಂದು ಹಾರೈಸುತ್ತಾ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಬೆಂಗ್ ನಾಡ್ ಕೊಡವ ಒತ್ತೋರ್ಮೆ ಕೂಟ್ಟದ ಅಧ್ಯಕ್ಷರಾದ ಕೇಕಡ ಎ ದೇವಯ್ಯ, ಭಾರತಿಯ ಹಾಕಿ ತಂಡದ ಮಾಜಿ ನಾಯಕ ಮೋಳೆರ ಪಿ…

Read More