ಲೇಖಕ: admin

ನಾಪೋಕ್ಲು ಡಿ.30 NEWS DESK : ವಾಹನಗಳ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಆಟೋ, ಬೈಕ್ ಜಖಂಗೊಂಡ ಘಟನೆ ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ನಡೆದಿದೆ. ಕಾಡಾನೆಗಳ ಹಿಂಡು ರಸ್ತೆಯಲ್ಲಿ ನಿಲ್ಲಿಸಿದ್ದ ಕೀಯಲ್ ಕೇರಿ ನಿವಾಸಿ ಕೆ.ಕೆ.ಅರ್ಜುನ ಹಾಗೂ ಕೆ.ಪಿ.ಪೂವಯ್ಯ ಅವರ ಆಟೋ, ಪಿ.ಎಂ. ಪೂಣಚ್ಚ ಅವರ ಬೈಕ್ ಅನ್ನು ಬಿಳಿಸಿ ಹಾನಿಗೊಳಿಸಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ನಿರ್ಮಾಣವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಭತ್ತದ ಗದ್ದೆ ಹಾಗೂ ತೋಟಗಳಿಗೆ ನಿರಂತರ ದಾಳಿ ಮಾಡಿ ಫಸಲು ನಾಶ ಪಡಿಸುತ್ತಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಇದೀಗ ಕಾಫಿ ಕೊಯ್ಲಿನ ಸಮಯವಾಗಿರುವುದರಿಂದಾಗಿ ಕೂಲಿ ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮಾತ್ರವಲ್ಲದೆ ಶಾಲಾ ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೀವ್ರ ಸಮಸ್ಯೆ ಉಂಟಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ…

Read More

ವಿರಾಜಪೇಟೆ ಡಿ.30 NEWS DESK : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಿರಾಜಪೇಟೆ ತಾಲ್ಲೂಕು ಶಾಖೆಯ ವತಿಯಿಂದ ವಿರಾಜಪೇಟೆ ತಾಲೂಕು ಮಟ್ಟದ ಮಹಾಸಭೆಯನ್ನು ಜ.4 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಕೆ.ಎಂ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಕೆ.ಎಂ. ತಿಮ್ಮಯ್ಯ ಹೇಳಿದರು. ವಿರಾಜಪೇಟೆ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಪೂರ್ವಹ್ನ 10 ಗಂಟೆಗೆ ನಡೆಯಲಿರುವ ಮಹಾಸಭೆಯಲ್ಲಿ ನೌಕರರ ಹಿತರಕ್ಷಣೆ ಮತ್ತು ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲಾಗುವುದು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ನೌಕರರನ್ನು ಮತ್ತು ಶಿಕ್ಷಣ ಸೇವೆ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನೌಕರರ ಮಕ್ಕಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಾಗು ತಾಲ್ಲೂಕು…

Read More

ವಿರಾಜಪೇಟೆ ಡಿ.30 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು, ಸ್ವಸಹಾಯ ಸಂಘಗಳ ಒಕ್ಕೂಟಗಳ ಆಶ್ರಯದಲ್ಲಿ ಕೃಷಿ ಕಾರ್ಯಕ್ರಮದಡಿಯಲ್ಲಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ ಅಮ್ಮತ್ತಿ ವಲಯದ ಹಾಲುಗುಂದ ಕಾರ್ಯಕ್ಷೇತ್ರದ ಬೈರಂಬಾಡ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸ್ಟಉದ್ಯೋಗದಲ್ಲಿ ತನ್ನನ್ನು ತೊಡಗಿಸಿಕೊಂಡ ಸುಧಾ ಅವರು ಮಾತನಾಡಿ, ತಾನು ಮನೆಯಲ್ಲಿ ತಯಾರಿಸಿದ ಮಸಾಲೆ ಪದಾರ್ಥಗಳು ಪ್ರಾರಂಭದಲ್ಲಿ ತಿಂಗಳಿಗೆ ಮೂರು ಸಾವಿರ ಆದಾಯ ಬರುತ್ತಿದ್ದು, ಈಗ ತಿಂಗಳಿಗೆ ಐವತ್ತು ಸಾವಿರದವರೆಗೆ ಆದಾಯ ಬರುತ್ತದೆ. ಇದರಿಂದ ನನ್ನ ಜೀವನಮಟ್ಟ ಸುಧಾರಣೆಯಾಗಿದೆ. ಯಾವ ರೀತಿಯಲ್ಲಿ ಮಸಾಲ ಪದಾರ್ಥಗಳನ್ನು ಮಾಡುವ ಬಗ್ಗೆ ಮತ್ತು ಅಣಬೆ ಕೃಷಿ ಮಾಡುವ ಬಗ್ಗೆ, ಅಣಬೆ ಕೃಷಿ ಮಾಡುವುದು ತುಂಬಾ ಲಾಭದಾಯಕ, ಕಡಿಮೆ ವೆಚ್ಚ ಹೆಚ್ಚು ಲಾಭಗಳಿಸಬಹುದು. ಮನೆಯಲ್ಲಿ ಅಣಬೆ ಕೃಷಿ ಮಾಡುವ ಎಂದು ಮಾಹಿತಿ ನೀಡಿದರು. ವಲಯದ ಮೇಲ್ವಿಚಾರಕರಾದ ಧನೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ಮೇಲ್ವಿಚಾರಕರಾದ ವಸಂತ್, ಹಾಲುಗುಂದ ಸೇವಾ ಪ್ರತಿನಿಧಿ…

Read More

ಮಡಿಕೇರಿ ಡಿ.30 NEWS DESK :  ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ವತಿಯಿಂದ ವಾಷಿ೯ಕವಾಗಿ ನೀಡಲಾಗುವ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿನ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿಯನ್ನು ಮಡಿಕೇರಿಯ ಪತ್ರಕತ೯ ಅನಿಲ್ ಹೆಚ್.ಟಿ. ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪತ್ರಿಕೋದ್ಯಮ, ಕೖಷಿ, ಸಾಹಿತ್ಯ, ಸಂಗೀತ, ವೈದ್ಯಕೀಯ, ಸಮಾಜಸೇವೆ, ಉದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. ಕೊಡಗು ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಅನಿಲ್ ಹೆಚ್.ಟಿ ಅವರಿಗೆ ಗಾಂಧಿ ಪ್ರಿಯ ಹೆಸರಿನ ವಾಷಿ೯ಕ ಪ್ರಶಸ್ತಿ ನೀಡಲಾಯಿತು. ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ವಿಜಯ್ ಸಮಥ೯ ಮಾತನಾಡಿ, ದೇಶದ ಮಹಾತ್ಮನ ಹೆಸರಿನಲ್ಲಿ ಸಾಮಾಜಿಕ ಸೇವಾ ಸಂಘಟನೆಗಳು ಮೀಸಲಾಗಿಟ್ಟಿರುವ ಪ್ರಶಸ್ತಿಗಳೇ ಕಡಮೆಯಾಗಿದೆ. ಗಾಂಧೀಜಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದಷ್ಟೇ ಅಲ್ಲ ಪತ್ರಿಕೋದ್ಯಮ, ಸಮಾಜಸೇವೆ ಸೇರಿದಂತೆ ಅನೇಕ…

Read More

ಬೆಂಗಳೂರು ಡಿ.30 NEWS DESK : ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ನಗರದ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಭಕ್ತರ ಸಾಗರ ಹರಿದು ಬರುತ್ತಿದೆ.

Read More

ವಿರಾಜಪೇಟೆ ಡಿ.30 NEWS DESK : ಪೆರಾಜೆ ಗ್ರಾಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಸರಕಾರ ವತಿಯಿಂದ ಈಗಾಗಲೇ ತಮ್ಮ ಅವಧಿಯಲ್ಲಿ ಪೆರಾಜೆ ಗ್ರಾಮಕ್ಕೆ ಸುಮಾರು 19 ಕೋಟಿಗೂ ಅಧಿಕ ಅನುದಾನ ಅಭಿವೃದ್ಧಿ ಕಾಮಗಾರಿಗಾಗಿ ನೀಡಲಾಗಿದೆ ಎಂದು ಹೇಳಿದರು.

Read More

ಸೋಮವಾರಪೇಟೆ NEWS DESK ಡಿ.30 : ಸೋಮವಾರಪೇಟೆಯ ಶ್ರೀ ಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶೃದ್ಧಾಭಕ್ತಿಯಿಂದ ಅಯ್ಯಪ್ಪ ವೃತಾಧಾರಿಗಳು ಹಾಗೂ ಭಕ್ತರ  ಸಮ್ಮುಖದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು. ಅರ್ಚಕ ಜಗದೀಶ ಉಡುಪ ಅವರ ಪೌರೋಹಿತ್ಯದಲ್ಲಿ ಗಣಪತಿಹೋಮದೊಂದಿಗೆ ಪೂಜೆಗಳು ಆರಂಭಗೊಂಡಿತು. ನಂತರ ದೇವಾಲಯ ಸಮಿತಿ ಹಾಗೂ ಕ್ಷೇತ್ರದ ಭಕ್ತರು ಕಳೆದ ಐದು ದಿನಗಳಿಂದ ವೃತ ಮಾಡಿ ತಂದಿದ್ದ ಪವಿತ್ರ ತುಪ್ಪವನ್ನು ಅಯ್ಯಪ್ಪಸ್ವಾಮಿಯ ಮೂರ್ತಿಗೆ ವೆಂಕಟೇಶ್‌ ಅಯ್ಯರ್‌ ಅಭಿಷೇಕವನ್ನು ನೆರವೇರಿಸಿದರು. ಅದಕ್ಕೂ ಮುನ್ನ ಅಯ್ಯಪ್ಪಸ್ವಾಮಿಯ ಆಭರಣಗಳಿಗೆ ಪೂಜೆ ಸಲ್ಲಿಸಿ ದೇವಾಲಯದ ಆವರಣದಲ್ಲಿ ಮೂರು ಸುತ್ತು ಪ್ರದಕ್ಷಿಣೆಯನ್ನು ದೇವಾಲಯ ಸಮಿತಿಯವರು ಶ್ರೀಮುತ್ತಪ್ಪಸ್ವಾಮಿ ಹಾಗೂ ಶ್ರೀಭುವನೇಶ್ವರಿ ದೇವಿಯವರ ಸನ್ನಿಧಿಯಲ್ಲಿ ಇರಿಸಿದ್ದ ಪವಿತ್ರ ತುಪ್ಪ ಹಾಗೂ ದೇವಾಲಯ ಸಮಿತಿಯ ಪದಾಧಿಕಾರಿಗಳು ಕಳೆದ ಐದು ದಿನಗಳಿಂದ ವೃತ ಮಾಡಿ ಶ್ರೀಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಇರಿಸಿದ್ದ ತುಪ್ಪದೊಂದಿಗೆ ಪ್ರದಕ್ಷಿಣೆ ನಡೆಸಿ ಮೊದಲಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಭಕ್ತರು ತಂದಿದ್ದ ತುಪ್ಪವನ್ನು ಅಭಿಷೇಕ ಮಾಡುವ ಮೂಲಕ ಪೂಜೆ ಸಲ್ಲಿಸಲಾಯಿತು. ನಂತರ  ಉಚ್ಛ ಪೂಜೆಯಲ್ಲಿ…

Read More

ಚೆಟ್ಟಳ್ಳಿ ಡಿ.29 NEWS DESK : ಚೆಟ್ಟಳ್ಳಿ ಕೊಡವ ಸಮಾಜದ ವತಿಯಿಂದ ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಸಂಭ್ರಮದ ಪುತ್ತರಿ ನಮ್ಮೆರ ಊರೊರ್ಮೆ ಕೂಟ ನಡೆಯಿತು. ಕೊಡವ ಸಂಪ್ರದಾಯದ ದುಡಿಕೊಟ್ಟ್ ನೊಂದಿಗೆ ಸಭಾಂಗಣಕ್ಕೆ ತೆರಳಲಾಯಿತು.  ಪುರುಷ, ಮಹಿಳೆಯರಿಗೆ ಹಾಗೂ ದಂಪತಿಗಳಿಗೆ ವಿವಿಧ ಮನೋರಂಜನಾ ಕ್ರೀಡೆಯನ್ನು ಆಯೋಜಿಸಲಾಗಿತ್ತು. ಮಹಿಳೆಯರ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಮುಳ್ಳಂಡ ರತ್ತುಚಂಗಪ್ಪ ಮಾತನಾಡಿ, ಕೊಡವ ಜನಾಂಗ ಉಳಿವು ಐನ್ ಮನೆಯಿಂದಲೇ ಪ್ರಾರಂಭಗೊಳ್ಳಬೇಕು. ಒಡಹುಟ್ಟಿದ ಸಹೋದರು, ಕುಟುಂಬದವರು ಒಗ್ಗಟ್ಟಾಗಿದ್ದಾಗ ಮಾತ್ರ‌ವೇ ಕೊಡವರ ಉಳಿವು ಸಾಧ್ಯವೆಂದರು. ಎಲ್ಲರು ಒಗ್ಗಟ್ಡಿನಿಂದ ಸಮಾಜದ ಅಭಿವೃದ್ಧಿಗೆ ಸಹಕರಿಸ ಬೇಕೆಂದರು. ನಿರ್ದೇಶಕರಾದ ಬಟ್ಟೀರ ರಕ್ಷುಕಾಳಪ್ಪ ಪುತ್ತರಿ ಹಬ್ಬದ ವಿಶೇಷತೆಯ ಬಗ್ಗೆ ವಿವರಿಸಿದರು‌. ನಂತರ ಕ್ರೀಡಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.  ಸಮಾಜದ ಉಪಾಧ್ಯಕ್ಷ ಬಿದ್ದಂಡ ಮಾದಯ್ಯ, ಕಾರ್ಯದರ್ಶಿ ಪುತ್ತರಿರ ಕಾಳಯ್ಯ, ಜಂಟಿಕಾರ್ಯದರ್ಶಿ ಮುಳ್ಳಂಡ ಶೋಭಾಚಂಗಪ್ಪ, ಖಜಾಂಚಿ ಕೆಚ್ಚೆಟ್ಟೀರ ರತಿ ಕಾರ್ಯಪ್ಪ, ಜಂಟಿ ಕಾರ್ಯದರ್ಶಿ ಐಚೆಟ್ಟೀರ ಮಾಚಯ್ಯ, ಕಾನೂನು ಸಲಹೆಗಾರರಾದ ಕಡೇಮಡ…

Read More

ವಿರಾಜಪೇಟೆ ಡಿ.29 NEWS DESK : ವಿರಾಜಪೇಟೆ ತಾಲ್ಲೂಕಿನ ಅರೇಮೇರಿ ಎಸ್‍ಎಂಎಸ್ ವಿದ್ಯಾಪೀಠ ಶಾಲೆಯಲ್ಲಿ ವಸುದೈವ ಕುಟುಂಬಕಂ ಎಂಬ ದ್ಯೇಯ ವಾಕ್ಯದಡಿ ಶಾಲಾ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶಾಲಾ ಮೈದಾನದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಗಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು, ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ವಾರ್ಷಿಕೋತ್ಸವವು, ಸಂಸ್ಥೆಯ ವಿಶಾಲ ಮನೋಭಾವ ಹಾಗೂ ಧ್ಯೇಯವನ್ನು ಸಾರುತ್ತದೆ ಹಾಗೂ ಪ್ರಪಂಚವೇ ಒಂದು ಕುಟುಂಬ ಎಂದು ಸಾರುವ ಈ ಧ್ಯೇಯ ವಾಕ್ಯವು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದಶಕಗಳಿಂದ ಅರಮೇರಿ ವಿದ್ಯಾಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುತ್ತ ವಿದ್ಯಾರ್ಜನೆ ಮಾಡುತ್ತಾ ಬಂದಿದೆ. ಇಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಈಗಾಗಲೇ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹೆಸರನ್ನು ಪಡೆದು, ನಾಡಿನ ಒಳಿತಿಗಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ…

Read More

ಮಡಿಕೇರಿ ಡಿ.29 NEWS DESK :  ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ ಮತ್ತು ನಿರಂತರ ಕಲಿಕಾ ಕಾರ್ಯಕ್ರಮ ಅಂಬೇಕಲ್ ಜೀವನ್ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಕೂಟುಹೊಳೆಯಲ್ಲಿರುವ ಆಹನ್ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸದಸ್ಯರು ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿರಂತರ ಕಲಿಕಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ ಮಾತನಾಡಿ , ಔಷಧ ನಿಯಂತ್ರಣ ಇಲಾಖೆ ಸಾರ್ವಜನಿಕ ಹಿತದೃಷ್ಟಿಯಿಂದ ಹೊರ ತರುತ್ತಿರುವ ಹೊಸ ಕಾನೂನುಗಳ ಬಗ್ಗೆ ಸೂಕ್ತರೀತಿಯಲ್ಲಿ ಅರಿತುಕೊಳ್ಳುವುದರ ಮೂಲಕ ಕಾನೂನು ಪಾಲನೆ ಅತ್ಯಗತ್ಯ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ರೋಗ ನಿರೋಧಕ (Antibiotics) ಔಷಧಗಳು ದುರ್ಭಳಕೆಯಾಗುತ್ತಿರುವ ಬಗ್ಗೆ ಅಲ್ಲಲ್ಲಿ ವರದಿಗಳು ಬರುತ್ತಿದ್ದು ಆ ಬಗ್ಗೆ ಜನಜಾಗೃತಿ ಮತ್ತು ನಾರ್ಕೋಟಿಕ್ ( ಅಮಲು ಭರಿಸುವ ಔಷಧಗಳು) ಔಷಧಗಳ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಔಷಧಿ ವ್ಯಾಪಾರಸ್ಥರು ಮುಂದಾಗಬೇಕು,  ಸಾರ್ವಜನಿಕರಿಗೆ ಮತ್ತು ರೋಗಿಗಳಿಗೆ…

Read More