ಲೇಖಕ: admin

 ಮಡಿಕೇರಿ ನ.17 : ಪಾಲಿಬೆಟ್ಟ ಲಯನ್ಸ್ ಕ್ಲಬ್ ಹಾಗೂ ಮಡಿಕೇರಿಯ ” ಇಕ್ಷಾ” ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 18ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸೆ ನಡೆಯಲಿದೆ. ಶನಿವಾರ ಬೆಳಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಪಾಲಿಬೆಟ್ಟದ ಲಯನ್ಸ್ ಸೇವಾ ಭವನ “ಅನುಗ್ರಹ”ದಲ್ಲಿ ಶಿಬಿರ ನಡೆಯಲಿದ್ದು ಡಾ. ಎ.ಜಿ. ಚಿನ್ನಪ್ಪರವರು ಉಚಿತ ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8222224848 9480084740, 9448647453 ಸಂಪರ್ಕಿಸಬಹುದಾಗಿದೆ.     ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ಮತ್ತು ಕನ್ನಡಕವನ್ನು ನೀಡಲಾಗುವುದು.

Read More

ಸುಂಟಿಕೊಪ್ಪ ನ.16 : ಕಾಫಿ ಪುಡಿ ಅಂಗಡಿ ಮತ್ತು ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಚೋರರು ನುಗ್ಗಿ ನಗದು ಹಾಗೂ ಮೊಬೈಲ್ ಫೋನ್ ಕಳ್ಳತನ ಮಾಡಿರುವ ಪ್ರಕರಣ ಸುಂಟಿಕೊಪ್ಪದಲ್ಲಿ ನಡೆದಿದೆ. ಸುಂಟಿಕೊಪ್ಪ ಉಲುಗುಲಿ ರಸ್ತೆಯ ಶ್ರೀಚಾಮುಂಡೇಶ್ವರಿ ಕಾಫಿ ವರ್ಕ್ಸ್ ಗೆ ರಾತ್ರಿ ವೇಳೆ ಬೀಗ ಮುರಿದು ನುಗ್ಗಿದ ಕಳ್ಳರು 5 ಸಾವಿರ ರೂ. ನಗದು ಮತ್ತು ಬ್ಯಾಂಕ್ ಖಾತೆ ಪುಸ್ತಕಗಳನ್ನು ಕದ್ದೊಯ್ದಿದ್ದಾರೆ. ಅದೇ ರಸ್ತೆಯಲ್ಲಿದ್ದ ವೇದಾ ಮೋಟಾರ್ಸ್ ಡ್ರೈವಿಂಗ್ ಸ್ಕೂಲ್ ಗೆ ಲಗ್ಗೆ ಇಟ್ಟ ಚೋರರು ಮೊಬೈಲ್ ನ್ನು ಕೊಂಡೊಯ್ದಿದ್ದಾರೆ. ಬೆಳಗ್ಗೆ ಅಂಗಡಿ ಮಾಲೀಕರು ಬಂದು ನೋಡಿದಾಗ ಬೀಗ ಮುರಿದಿರುವುದು ಗೋಚರಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಪುತ್ತೂರು ನ.16 : ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ 52 ಸಾವಿರ ಕೋಟಿಗಳಷ್ಟು ಅನುದಾನವನ್ನು ನೀಡಿದೆ. ಜಿಲ್ಲೆಯ ಹಲವೆಡೆ ಕಾಮಗಾರಿಗಳು ಚುರುಕಿನಿಂದ ಸಾಗಿವೆ ಮತ್ತು ಕೆಲವೊಂದು ಕೆಲಸಗಳು ಸಂಪನ್ನಗೊಂಡಿವೆ ಎಂದು ಮಂಗಳೂರು ಕ್ಷೇತ್ರದ ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು. ಅವರು ಪುತ್ತೂರಿನ ನೆಹರುನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿಯ ಆರಂಭಕ್ಕೆ ಶಿಲಾನ್ಯಾಸ ಮಾಡಿ, ವಿವೇಕಾನಂದ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತಾಡಿದರು. ಇಂದು ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ಕ್ಷೇತ್ರಗಳಲ್ಲಿ ಮುಂದುವರಿದಿದ್ದು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ, ಹೀಗೆ ಭಾರತವನ್ನೂ ವಿಶ್ವವಂದ್ಯವನ್ನಾಗಿ ಮಾಡುವುದು ಪ್ರಧಾನಿ ಮೋದಿ ಸರ್ಕಾರದ ಗುರಿಯಾಗಿದೆ ಎಂದರು. ಇಂದು ಶಿಲಾನ್ಯಾಸಗೊಂಡ ರೈಲ್ವೇ ಮೇಲ್ಸೇತುವೆಯ ಸಂಪೂರ್ಣ ಖರ್ಚು ರೈಲ್ವೇ ಇಲಾಖೆಯೇ ಭರಿಸುತ್ತಿದ್ದು ಪ್ರಾಯಶಃ ಈ ರೀತಿಯ ಕಾಮಗಾರಿಯು ದೇಶದಲ್ಲಿಯೇ ಪ್ರಥಮ ಎಂದು ಹೇಳಿದರು. 6 ತಿಂಗಳ ಕಾಲಾವಕಾಶವಿದ್ದರೂ ಕೇವಲ 92 ದಿನದಲ್ಲಿ ಕೆಲಸವನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವುದಾಗಿ ರೈಲ್ವೇ ಅಧಿಕಾರಿಗಳು ಭರವಸೆಯನ್ನು ನೀಡಿದ್ದಾರೆ…

Read More

ಮಡಿಕೇರಿ ನ.16 : ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಮಾದಾಪುರ ಮತ್ತು ಕೆದಕಲ್ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ನ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗರಗಂದೂರು, ಮಾದಾಪುರ, ಕಾಂಡನಕೊಲ್ಲಿ, ಹಟ್ಟಿಹೊಳೆ. ಕುಂಬೂರು, ಬಿಳಿಗೇರಿ, ಸೂರ್ಲಬಿ, ಹಾಲೇರಿ, ಕೆದಕಲ್, ಹೊರೂರು, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.

Read More

ಮಡಿಕೇರಿ ನ.16 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಗರದ ರೆಡ್‍ಕ್ರಾಸ್ ಭವನದಲ್ಲಿ ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನಾಚರಣೆ ನಡೆಯಿತು. ರೋಟರಿ ಮಡಿಕೇರಿ ವುಡ್ಸ್ ಪ್ರಾಯೋಜಕತ್ವ” ನೀಡುವುದರೊಂದಿಗೆ ಸಕ್ರಿಯವಾಗಿ ಭಾಗವಹಿಸಿದ್ದು, ಸುಮಾರು 180 ಪುಟಾಣಿ ಮಕ್ಕಳಿಗೆ ಆಟಿಕೆಗಳು, ಸರ್ಟಿಫಿಕೇಟ್‍ಗಳು, ಡ್ರಾಯಿಂಗ್ ಪುಸ್ತಕಗಳು ಮತ್ತು ಬಹುಮಾನ ವಿತರಿಸಲಾಯಿತು. ಪುಟಾಣಿ ಮಕ್ಕಳಿಗೆ ಹಾಡು, ನೃತ್ಯ, ಸಣ್ಣ ಕತೆಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್, ಮಕ್ಕಳ ದಿನಾಚರಣೆ ಮತ್ತು ಅಂಗನವಾಡಿ ದಿನವನ್ನು ಆಚರಣೆ ಮಾಡುವುದರ ಮೂಲಕ ಮಕ್ಕಳಿಗೆ ಖುಷಿಯ ವಾತಾವರಣವನ್ನು ಕಲ್ಪಿಸಿಕೊಡುವುದು ನಮ್ಮ ಜವಾಬ್ದಾರಿಯೂ ಆಗಿದೆ. ಪುಟಾಣಿ ಮಕ್ಕಳಲ್ಲಿ ಸದಭಿರುಚಿಯ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸಿ, ಸಮಾಜಕ್ಕೆ, ದೇಶಕ್ಕೆ ಒಳ್ಳೆಯ ಪ್ರಜೆಯನ್ನು ಕೊಡುವಲ್ಲಿ ಅಂಗನವಾಡಿಯೂ ಕೂಡ ಮಹತ್ತರ ಪಾತ್ರವಹಿಸಿದೆ ಎಂದರು. ರೋಟರಿ ಸಂಸ್ಥೆಯು ಹಲವಾರು ವರ್ಷಗಳಿಂದ ಅಂಗನವಾಡಿ ಜೊತೆ ಗುರುತಿಸಿಕೊಂಡು ಇಂತಹ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ವಿಶೇಷವಾಗಿ ಈ ಸಾಲಿನಲ್ಲಿ ತನ್ನ ವಾರ್ಷಿಕ ಚಟುವಟಿಕೆಯಲ್ಲಿ…

Read More

ಮಡಿಕೇರಿ ನ.16 : ಕರ್ನಾಟಕ ಸಂಭ್ರಮ 50 ರ ಸಂಭ್ರಮದಲ್ಲಿ ಕನ್ನಡ ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಹೇಳಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮವು ಕೊಡಗು ಗೌಡ ಸಮಾಜದಲ್ಲಿ ನಡೆಯಿತು. ಗಡಿಯಲ್ಲಿ ಕನ್ನಡ ನುಡಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದಲ್ಲಿ ಮಹಿಳೆಯರ ಪಾತ್ರ ಮುಖ್ಯವಾದುದು. ಕೊಡಗು ಗೌಡ ಮಹಿಳಾ ಒಕ್ಕೂಟ ಈ ಒಂದು ಕಾರ್ಯವನ್ನು ಯಶಸ್ವಿಯಾಗಿ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಸಾಹಿತಿ ಬಾರಿಯಂಡ ಜೋಯಪ್ಪ ಅವರು ಮಾತನಾಡಿ ಭಾರತ ಅಮೃತೋತ್ಸವದೊಂದಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯಲ್ಲಿ ನಾವಿದ್ದೇವೆ. ಇಂತಹ ಸಂದರ್ಭಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸುವ ಕಾರ್ಯವಾಗುತ್ತಿದೆ. ಕನ್ನಡಿಗರಾದ ನಾವುಗಳು ಸೂಕ್ಷ್ಮ ಮನಸ್ಸಿನವರಾಗಿದ್ದು, ಶಾಂತಿಯೊಂದಿಗೆ ಎಲ್ಲರಲ್ಲೂ ಸಮಾನತೆಯನ್ನು ಕಾಣುವವರು. ಸಾಮನ್ಯವಾಗಿ ಗಡಿಪ್ರದೇಶವನ್ನು ನಾವುಗಳು ಶ್ರೀಮಂತ ಪ್ರದೇಶವೆಂದು…

Read More

ಮಡಿಕೇರಿ ನ.16 : ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲೆಮಾಡು ಕಾನ್ಸಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭರವಸೆ ನೀಡಿದರು. ಮಡಿಕೇರಿ ತಾಲ್ಲೂಕು ಹೊದ್ದೂರು ಬಳಿಯ ಪಾಲೆಮಾಡು ಗ್ರಾಮದ ಕಾನ್ಸಿರಾಮ್ ನಗರ ನಿವಾಸಿಗಳ ಕುಂದುಕೊರತೆ ಸಭೆ ನಡೆಸಿ ಶಾಸಕರು ಮಾತನಾಡಿದರು. ಹೊದ್ದೂರು ಗ್ರಾ.ಪಂ.ವ್ಯಾಪ್ತಿಯ ಪಾಲೆಮಾಡು ಬಳಿಯಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ. ಇದರಿಂದ ಸುತ್ತಮುತ್ತಲ ಪ್ರದೇಶಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಪಾಲೆಮಾಡು ಕಾನ್ಸಿರಾಮ್ ನಗರದಲ್ಲಿ ವಾಸಿಸುತ್ತಿರುವ ಎಲ್ಲಾ ಅರ್ಹ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಹೇಳಿದರು. ಇಲ್ಲಿನ ರಸ್ತೆ ಅಗಲೀಕರಣ, ರಸ್ತೆ ಸರಿಪಡಿಸುವುದು, ಕುಡಿಯುವ ನೀರು ಸಂಪರ್ಕ ಕಲ್ಪಿಸುವುದು, ಬಸ್ ಸೌಕರ್ಯ ಜೊತೆಗೆ ನ್ಯಾಯ ಬೆಲೆ ಅಂಗಡಿ ಕಲ್ಪಿಸುವುದು ಹೀಗೆ ಹಲವು ಮೂಲಭೂತ ಸೌಕರ್ಯವನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಸರ್ಕಾರ ಬಡ ಜನರ…

Read More

ವಿರಾಜಪೇಟೆ ನ.16 : ಕೊಡಗು ರಮ್ಯ ಪರಿಸರದ, ಪ್ರಕೃತಿ ಸೊಬಗಿನ ನಾಡು, ಇದು ಕಲಾವಿದರಿಗೆ ಸ್ಫೂರ್ತಿ ನೀಡುತ್ತದೆ. ಇದನ್ನೆ ಕುಂಚದಲ್ಲಿ ಅರಳಿಸಿದರೆ ಉತ್ತಮ ಕಲಾ ಚಿತ್ರ ಮೂಡಿ ಬರುತ್ತದೆ. ಆದರಿಂದ ಕಲಾವಿದರಿಗೆ ಒತ್ತಾಸೆ ನೀಡುವಂತಹ ತಾಣಗಳನ್ನು ಆರಿಸಿ ಚಿತ್ರ ಕಲಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಕೊಡಗು ಜಾನಪದ ಪರಿಷತ್ತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಮೊಗರಗಲ್ಲಿಯಲ್ಲಿ ಸಾಧಿಕ್ ಅರ್ಟ್ ಗ್ಯಾಲರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕಲಾ ಉತ್ಸವ 2023 ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅನಂತಶಯನ ಅವರು ಕಲೆ, ಸಾಹಿತ್ಯಕ್ಕೆ ಕೊಡಗು ಮರುಭೂಮಿಯಂತೆ ಎನ್ನುತ್ತಾರೆ, ವಿದ್ಯಾವಂತರಿದ್ದರು ಕಲೆ, ಸಾಹಿತ್ಯ ಕಾರ್ಯಕ್ರಮಗಳಿಗೆ ಬರುವುದಿಲ್ಲ ಹಾಗೂ ಪ್ರೋತ್ಸಾಹ ನೀಡುವುದಿಲ್ಲ. ಆದರಿಂದ ಆರ್ಥಿಕ ಮತ್ತು ಪ್ರೋತ್ಸಾಹ ನೀಡಿ ಕಲಾವಿದರಿಗೆ ವೇದಿಕೆ ಒದಗಿಸಬೇಕು. ನಮ್ಮಲ್ಲಿ ಹೆಸರಾಂತ ಕಲಾವಿದರು ಅನೇಕರಿದ್ದಾರೆ. ಅವರಿಗೆ ನಾವು ಸದಾ ಜೊತೆಯಾಗಿ ನಿಂತು ಸಹಕಾರ ನೀಡಬೇಕು. ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು ಜೊತೆಗೆ ಪ್ರತಿಯೊಂದು…

Read More

ಮಡಿಕೇರಿ ನ.16 : ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ನ.19 ರವರೆಗೆ ವಿರಾಜಪೇಟೆಯ ಬಾಳುಗೋಡುವಿನಲ್ಲಿ ನಡೆಯುವ “ಕೊಡವ ನಮ್ಮೆ” ಗೆ ಚಾಲನೆ ದೊರೆತ್ತಿದೆ. ಒಟ್ಟು 12 ಕೊಡವ ಸಮಾಜಗಳ ಹಾಕಿ ತಂಡಗಳ ನಡುವೆ ಪ್ರಶಸ್ತಿಗಾಗಿ ಹಣಾಹಣಿ ನಡೆಯಲಿದೆ. ಕೊಡವ ಸಮಾಜಗಳ ನಡುವಿನ “ಹಾಕಿ ನಮ್ಮೆ” ಯನ್ನು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಉದ್ಘಾಟಿಸಿದರು. ಅಮ್ಮತ್ತಿ ಮತ್ತು ಶ್ರೀಮಂಗಲ ಕೊಡವ ಸಮಾಜಗಳ ನಡುವೆ ಪ್ರಥಮ ಪಂದ್ಯ ನಡೆಯಿತು. ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರ ಹಾಗೂ ಜನರಲ್ ತಿಮ್ಮಯ್ಯ ಕ್ರೀಡಾ ಕೇಂದ್ರದಲ್ಲಿ ಭಾನುವಾರದವರೆಗೆ “ಕೊಡವ ನಮ್ಮೆ” ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಕೊಡವ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ ಪೊನ್ನಪ್ಪ, ಊಟೋಪಚಾರ ಸಮಿತಿ ಅಧ್ಯಕ್ಷ ಕುಂಬೇರ ಮನುಕುಮಾರ್, ಆಟೋಟ ಸಮಿತಿ ಅಧ್ಯಕ್ಷ ತಂಬುಕುತ್ತಿರ ಮಧು ಮಂದಣ್ಣ, ಸಂಚಾಲಕ ಕಂಬೀರಂಡ ಕಿಟ್ಟು ಕಾಳಪ್ಪ, ಪಂದ್ಯಾಟದ ತಾಂತ್ರಿಕ ಸಮಿತಿ ನಿರ್ದೇಶಕ ಅಚ್ಚಕಾಳಿರ ಪಳಂಗಪ್ಪ, ಸದಸ್ಯ ಪಟ್ಟಡ ಮನು ರಾಮಚಂದ್ರ,…

Read More

ಮಡಿಕೇರಿ ನ.16 : ಕನ್ನಡ ಚಲನಚಿತ್ರರಂಗದಲ್ಲಿ ಗುರುತಿಸಿಕೊಂಡ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಶಸ್ತಿ ವಿಜೇತ ನಿರ್ದೇಶಕಿ ಹಾಗೂ ನಿಮಾರ್ಪಕರಾದ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಈ ಬಾರಿಯ ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಿಂಚಲಿದ್ದಾರೆ. FIAPF ಮಾನ್ಯತೆ ಪಡೆದಿರುವ ವಿಶ್ವದ 16 ಚಲನ ಚಿತ್ರೋತ್ಸವದಲ್ಲಿ ಕೊಲ್ಕತ್ತಾ ಚಲನಚಿತ್ರೋತ್ಸವವು ಒಂದಾಗಿದೆ. ಡಿ.5 ರಿಂದ 12ರ ವರೆಗೆ ನಡೆಯಲಿರುವ 2023ನೇ ಸಾಲಿನ 29ನೇ ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ದೇಶಿಸಿರುವ 2ನೇ ಕನ್ನಡ ಚಲನಚಿತ್ರ “ಕಂದೀಲು” ನ್ಯಾಷನಲ್ ಕಾಂಪಿಟೀಷನ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಯಶೋಧ ಪ್ರಕಾಶ್ ಕೊಡವ ಭಾಷೆಯಲ್ಲೂ ಚಲನಚಿತ್ರ ನಿರ್ಮಾಣ ಮಾಡಿದ್ದು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. “ಕಂದೀಲು” ಚಿತ್ರದ ಬಾಲನಟಿಯಾಗಿ ಕೊಡಗಿನ ಈರಮಂಡ ಖುಷಿ ಕಾವೇರಮ್ಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಕಾಂತಾರಾ ಖ್ಯಾತಿಯ ಪ್ರಭಾಕರ ಬ.ಕುಂದರ, ವಿನೂತ್ ರಾಜೇಶ್, ವೆಂಕಟೇಶ್ ಪ್ರಸಾದ್, ಚಂದ್ರಕಾಂತ್ ಕೊಟ್ಟುಪಾಡಿ, ಈರಮಂಡ ಹರಿಣಿ ವಿಜಯ್ ನಟಿಸಿದ್ದಾರೆ. ಛಾಯಾಗ್ರಾಹಕರಾಗಿ ಸ್ವಾಮಿ ಗೂಗರ ದೊಡ್ಡಿ ಕಾರ್ಯನಿರ್ವಹಿಸಿದ್ದು, ಚಿತ್ರಕಥೆ-ಸಂಕಲನ…

Read More