ವಿರಾಜಪೇಟೆ ನ.16 : ಪ್ರತಿಯೊಬ್ಬರಲ್ಲೂ ಹಲವು ಪ್ರತಿಭೆಗಳಿದ್ದು, ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯವಾಗಿದೆ ಎಂದು ಸೆಂಟ್ ಆನ್ಸ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಗಳಲ್ಲಿ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆಯನ್ನು ಗುರುತಿಸಲಾಗುತ್ತದೆ. ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕುವುದರಲ್ಲಿ ಪೋಷಕರು, ಶಿಕ್ಷಕರು ಮಹತ್ವವಾದ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸಬಹುದಾಗಿದೆ ಎಂದರು. ಕಳೆದ 20 ವರ್ಷಗಳಿಂದ ಸರಕಾರ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ.…
ಲೇಖಕ: admin
ಮಡಿಕೇರಿ ನ.16 : ಶ್ರೀ ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ನ.19 ರಂದು ದಕ್ಷಿಣ ಕೊಡಗಿನ ಮಾಯಮುಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ದ್ವಿತೀಯ ವರ್ಷದ ‘ಬೊಡಿ ನಮ್ಮೆ’ಯನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಸಣ್ಣುವಂಡ ರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ವಂಶಿ ಮಾರ್ಲ ಮತ್ತು ಜೆ.ಕೆ. ಟೈಯರ್ಸ್ ಪ್ರಾಯೋಜಕತ್ವದಲ್ಲಿ ನಡೆಯುವ ಬೊಡಿ ನಮ್ಮೆ ಇಲ್ಲವೆ ಬಂದೂಕಿನಿಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ 12 ಬೋರ್, .22 ಮತ್ತು ಏರ್ ಗನ್ ಸೇರಿದಂತೆ ಮೂರು ವಿಭಾಗಗಲ್ಲಿ ನಡೆಯಲಿದೆ. ಇದರಲ್ಲಿ ಇನ್ನೂರ ಐವತ್ತಕ್ಕೂ ಹೆಚ್ಚಿನ ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು. ಸ್ಪರ್ಧೆಯ .22 ವಿಭಾಗ 50 ಮೀಟರ್ ಅಂತರದ ಗುರಿಯನ್ನು ಮತ್ತು 12 ಬೋರ್ ವಿಭಾಗ 30 ಮೀಟರ್ ಅಂತರದ ಗುರಿಯನ್ನು ಹೊಂದಿದ್ದು, ಇವೆರಡು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳಾಗಿವೆ. ಏರ್ ಗನ್ ವಿಭಾಗ 15 ಮಿಟರ್ ಅಂತರದ…
ಪಾಟ್ನಾ ನ.16 : ಮಾಜಿ ಯೋಧರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಜನರ ಗುಂಪೊಂದು ಹಲ್ಲೆ ಮಾಡಿ ಕೊಂದು ಹಾಕಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಾಜಿ ಯೋಧರನ್ನು ಬಿಜೇಂದ್ರ ಸಿಂಗ್ (55) ಎಂದು ಗುರುತಿಸಲಾಗಿದ್ದು, ಮಿಥಿಲೇಶ್ ಕುಮಾರ್ (23) ಹಾಗೂ ಆದಿತ್ಯ ಕುಮಾರ್ (25) ಜನರ ಗುಂಪಿನಿಂದ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಮೂರನೇ ದಾಳಿಕೋರನನ್ನು ಅಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಚಿತ್ರದುರ್ಗ ನ.16 : ಲೈಂಗಿಕ ದೌರ್ಜನ್ಯದ ಆರೋಪದಡಿ ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದು, ಚಿತ್ರದುರ್ಗ ಜಿಲ್ಲೆ ಪ್ರವೇಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ ಎಂದು ತಿಳಿದು ಬಂದಿದೆ.
ಮಡಿಕೇರಿ ನ.16 : ನಗರದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ವಿಜಯ ವಿನಾಯಕ ದೇವಾಲಯದ 25ನೇ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ನ.15 ರ ಸಂಜೆಯಿಂದಲೇ ದೇವಾಲಯದಲ್ಲಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಇಂದು ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು. 25ನೇ ಸಾರ್ಥಕತೆಯ ವಾರ್ಷಿಕೋತ್ಸವ ಪ್ರಯುಕ್ತ ದೇವರಿಗೆ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮುಖವಾಡವನ್ನು ಅರ್ಪಿಸಲಾಯಿತು. ನಗರದ ವಿವಿಧ ಬಡಾವಣೆಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಕಡಂಗ ನ.16 : ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಅಂಕಿತಾ ಮಂಡಲ್ ಚಿತ್ರಕಲಾ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯ ಚಿತ್ರಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಶುಭಹಾರೈಸಿದ್ದಾರೆ. ವರದಿ : ನೌಫಲ್
ಮಡಿಕೇರಿ ನ.16 : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ.ವಿಜಯೇಂದ್ರ ಅವರನ್ನು ಕೊಡಗು ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ಮಾಜಿ ವಿಧಾನಸಭಾ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಬಿಜೆಪಿ ಕಾರ್ಯಕರ್ತರು, ಬಿ.ವೈ.ವಿಜಯೇಂದ್ರ ಅವರನ್ನು ಸನ್ಮಾನಿಸಿ, ಅಭಿನಂದಿಸಿದರು. ಇದೇ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಶುಭ ಕೋರಿದರು. ಈ ಸಂದರ್ಭ ಕೊಡಗು ಬಿಜೆಪಿ ಮಾಜಿ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಮಡಿಕೇರಿ ಮಂಡಲ ಅಧ್ಯಕ್ಷ ಕಾಂಗಿರ ಸತೀಶ್, ಅಶ್ವಿನ್, ಪಕ್ಷದ ಮುಖಂಡರಾದ ಕಾಳನ ರವಿ, ಮಲ್ಲಂಡ ಮಧು ದೇವಯ್ಯ, ಕೀರ್ತನ್ ಕಡ್ಲೇರ, ವಿಷ್ಣು, ಸುವಿನ್ ಮಾಚಿಮಂಡ, ವಿರಾಜಪೇಟೆ ಮಂಡಲ ಸಾಮಾಜಿಕ ಜಾಲತಾಣ ಸಂಚಾಲಕ ಸಚಿನ್ ಪೆಮ್ಮಯ್ಯ ಚಿರಿಯಪಂಡ, ಜಿಲ್ಲಾ ಸಹ ಸಂಚಾಲಕ ಜೀತು ಪೂಜಾರಿ, ಪಟ್ರಪಂಡ ಸುಯೋಗ್ ಕಾರ್ಯಪ್ಪ, ಸಂಪತ್ ಚಂಗುಲಂಡ, ಪವಿ ಪೊನ್ನಪ್ಪ ತೀತಿಮಡ, ನಿತಿನ್ ದೆಯಂಡ, ಚಿರಿಯಪಂಡ ಸರ್ವಿನ್ ಹಾಜರಿದ್ದರು.
ಮಡಿಕೇರಿ ನ.16 : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ನಾಪೋಕ್ಲು ಗ್ರಾಮ ಪಂಚಾಯತಿಗೆ ಸೇರಿದ ಮಹಾತ್ಮ ಗಾಂಧಿ ಸಾರ್ವಜನಿಕ ಉದ್ಯಾನವನದಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ಉದ್ಯಾನವನದಲ್ಲಿ ಬೆಳೆದಿದ್ದ ಕಾಡುಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಶುಚಿಗೊಳಿಸಲಾಯಿತು. ಸ್ವಚ್ಛತಾ ಶ್ರಮದಾನದಲ್ಲಿ ಘಟಕದ ಪದಾಧಿಕಾರಿಗಳಾದ ಶಂಕರ್, ಮಾಯಿಲಪ್ಪ, ದಿಲೀಶ್, ಚೇತನ್, ಗೀತಾ, ಉಮಾಲಕ್ಷ್ಮಿ, ಚಂದ್ರಕಲಾ, ಸಂಯೋಜಕಿ ಬಾಳೆಯಡ ದಿವ್ಯ, ಗ್ರಾ.ಪಂ ಸದಸ್ಯರಾದ ಕುಲ್ಲೆಟಿರ ಅರುಣ್ ಬೇಬ, ಗುತ್ತಿಗೆದಾರ ವಿನಾಯಕ್ ಪಾಲ್ಗೊಂಡಿದ್ದರು.
ಮಡಿಕೇರಿ ನ.15 :NEWS DESK ಬಣ್ಣ, ಪರಿಮಳ ಮತ್ತು ರುಚಿಗೆ ಮಾರು ಹೋಗುತ್ತಿರುವ ಗ್ರಾಹಕರು ಹಾಗೂ ಪ್ರವಾಸಿಗರಿಗೆ ಊಟ, ಉಪಹಾರ, ಬಿರಿಯಾನಿಯ ಹಿಂದಿನ ಅಸಲಿಯತ್ತನ್ನು ಮಡಿಕೇರಿ ನಗರಸಭೆ ಇಂದು ಬಿಚ್ಚಿಟ್ಟಿದೆ. ಅಶುಚಿತ್ವದ ವಾತಾವರಣ ಕಂಡು ಬೆಚ್ಚಿ ಬಿದ್ದಿದೆ. ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷ ಎಸ್.ಸಿ.ಸತೀಶ್ ಅವರ ನೇತೃತ್ವದಲ್ಲಿ ಸದಸ್ಯರ ತಂಡ ವಿವಿಧ ಹೋಟೇಲ್, ಬೇಕರಿ, ಬಿರಿಯಾನಿ ಸೆಂಟರ್ ಗಳಿಗೆ ದಾಳಿ ಮಾಡಿತು. ಅಶುಚಿತ್ವ ಕಂಡು ಅಸಮಾಧಾನ ವ್ಯಕ್ತಪಡಿಸಿದ ಸಮಿತಿ ಹಲವರಿಗೆ ದಂಡ ವಿಧಿಸಿತು.NEWS DESK ಸರ್ಕಾರಿ ಬಸ್ ನಿಲ್ದಾಣ, ಚೌಕಿ (ಇಂದಿರಾಗಾಂಧಿ ವೃತ್ತ) ಮತ್ತು ಹಳೆಯ ಖಾಸಗಿ ಬಸ್ ನಿಲ್ದಾಣ ವ್ಯಾಪ್ತಿಯ ಹೋಟೇಲ್, ಬೇಕರಿ, ಬಿರಿಯಾನಿ ಸೆಂಟರ್ ಗಳಿಗೆ ದಾಳಿ ಮಾಡಿದ ಸದಸ್ಯರು ಶುಚಿತ್ವ ಕಾಪಾಡದಿದ್ದರೆ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆ ನೀಡಿದರು. ಕೆಲವು ವ್ಯಾಪಾರಿಗಳು ಶುಚಿತ್ವಕ್ಕೆ ಆದ್ಯತೆ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸದಸ್ಯರುಗಳಾದ ಶ್ವೇತ ಪ್ರಶಾಂತ್, ಚಂದ್ರಶೇಖರ್, ನಗರಸಭೆಯ ಆರೋಗ್ಯ ಅಧಿಕಾರಿ ಸುರೇಶ್, ಇಂಜಿನಿಯರ್ ಸೌಮ್ಯ ಮತ್ತಿತರರು ದಾಳಿ ನಡೆಸಿದರು.NEWS…
ಸುಂಟಿಕೊಪ್ಪ ನ.15 : ಬ್ಯಾಂಕಾಕ್ ನಲ್ಲಿ ನಡೆದ ಅಂತರ್ ರಾಷ್ಟ್ರೀಯ ಸೆಸ್ಟೋ ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಪಿಯನ್ಸ್ ತಂಡವಾಗಿ ಹೊರಹೊಮ್ಮುವ ಮೂಲಕ ಕೊಡಗಿಗೆ ಕೀರ್ತಿ ತಂದಿದ್ದಾರೆ. ಶ್ರೀಲಂಕಾದ ರತ್ನಪುರದಲ್ಲಿ ನ. 9ರಿಂದ13ರವರೆಗೆ ನಡೆದ ಅಂತರಾಷ್ಟ್ರೀಯ ಸೆಸ್ಟೋ ಬಾಲ್ ಚಾಂಪಿಯನ್ ಶಿಪ್ನ ಭಾರತ ಪುರುಷರ ತಂಡದ ಥೈಲ್ಯಾಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ದ ಸೆಸ್ಟೋ ಬಾಲ್ ನಲ್ಲಿನ ತಮ್ಮ ಚಾಕಾಚಕ್ಯತೆಯನ್ನು ಪ್ರದರ್ಶಿಸಿ ದೇಶಕ್ಕೆ ಚಿನ್ನದ ಪದಕ ತಂದುಕೊಡುವಲ್ಲಿ ಯಶಸ್ವಿಯಾಗಿ ಕ್ರೀಡಾ ಜಿಲ್ಲೆ ಎನಿಸಿರುವ ಕೊಡಗಿಗೆ ಕೀರ್ತಿ ತಂದಿದ್ದಾರೆ. ಈ ಪಂದ್ಯಾವಳಿಯಲ್ಲಿ ಶಾಹಿಲ್ ಉಸ್ಮಾನ್ ಅವರು ಭಾರತ ತಂಡದ ಕ್ಯಾಪ್ಟನ್ ಆಗಿಯೂ ಕೂಡ ಕಾರ್ಯ ನಿರ್ವಹಿಸಿದ್ದು, ಸುಂಟಿಕೊಪ್ಪ ಗ್ರಾಮ ಪಂಚಾಯತಿಯ ಮಾಜಿ ಸದಸ್ಯರಾದ ಕೆ.ಎ. ಉಸ್ಮಾನ್ ರವರ ಪುತ್ರನಾಗಿದ್ದಾರೆ. ಇರ್ಷಾದ್ ಮುಸ್ತಾಫ ಅವರು ಅಂತರ್ ರಾಷ್ಟ್ರೀಯ ಚಾಂಪಿಯನ್ ಶಿಪ್ನಲ್ಲಿ ಬೆಸ್ಟ್ ಪ್ಲೇಯರ್ ಆಫ್ ದಿ ಟೂರ್ನಮೆಂಟ್ಗೆ ಪಾತ್ರರಾಗಿದ್ದು ಇವರು ಸುಂಟಿಕೊಪ್ಪದ ದಿವಂಗತ…






