ಸೋಮವಾರಪೇಟೆ, ನ.15 ಸೋಮವಾರಪೇಟೆಯ ಶ್ರೀ ಆಂಜನೇಯ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋವಿನ ಪೂಜೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್, ದೇವಾಲಯ ಜೀಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ಹಾಗೂ ಕಾರ್ಯದರ್ಶಿ ನಂದಕುಮಾರ್ ಸೇರಿದಂತೆ ಹಲವರು ಇದ್ದರು.
ಲೇಖಕ: admin
ಸೋಮವಾರಪೇಟೆ ನ.15 : ಸೋಮವಾರಪೇಟೆಯ ಬಸವೇಶ್ವರ ದೇವಾಲಯದಲ್ಲಿ ದೀಪಾವಳಿಯ ಪ್ರಯುಕ್ತ ಮಂಗಳವಾರ ಗೋಪೂಜೆ ಮಾಡಲಾಯಿತು. ವೀರಶೈವ ಸಮಾಜದ ಯಜಮಾನರಾದ ಬಿ.ಪಿ.ಶಿವಕುಮಾರ್, ಶೆಟ್ರು ಬಿ.ಆರ್.ಮೃತ್ಯುಂಜಯ, ಕಾರ್ಯದರ್ಶಿ ಸಿ.ಸಿ.ನಾಗರಾಜ್ ಇದ್ದರು.
ಸೋಮವಾರಪೇಟೆ ನ.15 : ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಗಾಯಗೊಂಡಿರುವ ಘಟನೆ ಮಡಿಕೇರಿ ರಾಜ್ಯ ಹೆದ್ದಾರಿ ನಗರೂರು ಜಂಕ್ಷನ್ ನಲ್ಲಿ ಬುಧವಾರ ಸಂಭವಿಸಿದೆ. ತಾಲ್ಲೂಕಿನ ಇನಕನಹಳ್ಳಿ ಗ್ರಾಮದ ವಿಜಯ್, ದ್ಯಾನ್, ಕಾರೇಕೊಪ್ಪ ಗ್ರಾಮದ ಭಾಸ್ಕರ್, ನಿದೀಶ್, ವಿನೋದ್ ಕುಮಾರ್ ಗಾಯಗೊಂಡಿದ್ದಾರೆ. ಭಾಸ್ಕರ್, ವಿಜಯ್ ಎಂಬವರ ತೊಡೆ ಭಾಗ ಮುರಿದಿದ್ದು, ತಲೆಗೆ ತೀವ್ರ ತರದ ಗಾಯವಾಗಿದೆ. ವಿನೋದ್ ಕುಮಾರ್ ತಲೆಭಾಗಕ್ಕೆ ತೀವ್ರತರದ ಗಾಯವಾಗಿದ್ದು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಮಡಿಕೇರಿ ಜಿಲ್ಲಾಸ್ಪತ್ರೆಗೆ ಕಳುಹಿಸಿಲಾಗಿದೆ. ಕಾರೇಕೊಪ್ಪದ ಮೂವರು ಬೈಕ್ ನಲ್ಲಿ ಸೋಮವಾರಪೇಟೆ ಕಡೆಗೆ ಬರುತ್ತಿದ್ದ ಸಂದರ್ಭ ಮಡಿಕೇರಿಗೆ ತೆರಳುತ್ತಿದ್ದ ವಿಜಯ್ ಅವರ ಬೈಕ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಠಾಣಾಧಿಕಾರಿ ರಾಮಚಂದ್ರನಾಯಕ್ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸೋಮವಾರಪೇಟೆ ನ.15 : ಕ್ರೀಡೆ ತವರೂರು ಕೊಡಗು ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಅವಕಾಶ ದೊರಕಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ ಆಶಿಸಿದರು. ತಾಲೂಕಿನ ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಈಚೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಪಾಲ್ಗೊಳ್ಳವುದು ಮುಖ್ಯ. ಕ್ರೀಡಾಪಟುಗಳು ಸಮಯ ಪರಿಪಾಲನೆ, ನಿರ್ದಿಷ್ಠ ಗುರಿ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ಕ್ರೀಡಾಪಟುಗಳಾಗಲು ಸಾಧ್ಯ ಎಂದರು. ವಿದ್ಯಾಸoಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಕರ್ನಲ್ ಬಿ.ಜಿ.ವಿ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದೇವಕ್ಕಿ, ಪದವಿಪೂರ್ವ ಕಾಲೇಜು ಉಪ ನಿರ್ದೆಶಕ ಪುಟ್ಟರಾಜು, ಆಡಳಿತ ಮಂಡಳಿ ಸದಸ್ಯರಾದ ಬೋಜಮ್ಮ, ನಾಣಿಯಪ್ಪ ಮತ್ತಿತರರು ಇದ್ದರು.
ಮಡಿಕೇರಿ ನ.15 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ನಿ. ಇವರ ಸಂಯುಕ್ತ ಆಶ್ರಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ‘ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ’ ದಿನಾಚರಣೆಯು ನ.16 ರಂದು ಬೆಳಗ್ಗೆ 11 ಗಂಟೆಗೆ ಕೊಹಿನೂರು ರಸ್ತೆಯ ಬಾಲಭವನ (ಚೇತನ ಚಿಲುಮೆ) ದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕರಾದ ಎ.ಕೆ.ಮನುಮುತ್ತಪ್ಪ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ನ ಅಧ್ಯಕ್ಷರಾದ ಸಿ.ಕೆ.ಬಾಲಕೃಷ್ಣ, ವಿಧಾನಸಭೆಯ ಮಾಜಿ ಸಭಾಪತಿ ಕೆ.ಜಿ.ಬೋಪಯ್ಯ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಅಧ್ಯಕ್ಷರಾದ ಕೊಡಂದೇರ ಪಿ.ಬಾಂಡ್ ಗಣಪತಿ, ಕರ್ನಾಟಕ ರಾಜ್ಯ ಸಹಕಾರ ಹಾಪ್ಕಾಮ್ಸ್ ಹಾಗೂ ಕೊಡಗು ಜಿಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಬಿ.ಎ.ರಮೇಶ್ ಚಂಗಪ್ಪ, ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ…
ಮಡಿಕೇರಿ ನ.15 : ಪ್ರಸಕ್ತ(2023-24) ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಹಾಗೂ ಗುಂಪು ಉದ್ಯಮಶೀಲತೆ ಮತ್ತು ಎಸ್ಎಚ್ಜಿ ಗುಂಪು ರಚನೆಗೆ ಮಡಿಕೇರಿ ನಗರಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಉದ್ದೇಶಿಸಿರುವ ಚಟುವಟಿಕೆಯ ಬಗ್ಗೆ ಅನುಭವ ಹೊಂದಿದ್ದರೆ/ತರಬೇತಿ ಪಡೆದಿದ್ದರೆ ಪ್ರಮಾಣ ಪತ್ರ, ಯೋಜನಾ ವರದಿ, ಬಿಪಿಎಲ್ ರೇಷನ್ ಕಾರ್ಡ್, ವಿದ್ಯಾರ್ಹತೆ ಪ್ರಮಾಣ ಪತ್ರ, ವೈಯಕ್ತಿಕ ಉಳಿತಾಯ ಖಾತೆಯ ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಇತ್ತೀಚಿನ ಭಾವಚಿತ್ರ, ಅಂಗವಿಕಲರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್, ರೂ.20 ಛಾಪಾ ಕಾಗದದ ಮೇಲೆ ನಲ್ಮ್ ಯೋಜನೆಯ ಪೋಷಣ ಪ್ರಮಾಣ ಪತ್ರ, ನೋಟರಿಯಿಂದ ದೃಢೀಕರಿಸಿದ ಪ್ರತಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನ.27 ಕೊನೆ ದಿನವಾಗಿದೆ. ನಂತರ ಬಂದಂತಹ ಅರ್ಜಿಯನ್ನು ಪರಿಗಣಿಸುವುದಿಲ್ಲ. ಮುಂದೆ ಹಾಜರು ಪಡಿಸಬಹುದಾದಂತಹ ಅಗತ್ಯ ದಾಖಲಾತಿಗಳನ್ನು ಒದಗಿಸುವ ಷರತ್ತಿಗೆ ಕಡ್ಡಾಯವಾಗಿ ಒಳಪಡಿಸಿದೆ ಎಂದು ನಗರಸಭೆ…
ಮಡಿಕೇರಿ ನ.15 : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಸಾಂಸ್ಕೃತಿಕ ವಾತಾವರಣ ಉಂಟುಮಾಡುವಲ್ಲಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳನ್ನು ಪ್ರೋತ್ಸಾಹಿಸಲು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು sevasindhu.karnataka.gov.in ಮುಖಾಂತರ ಡಿ.13 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 080-22279954/ 9986837037/ 8792662814/ 8792662816/ 08022213530 ಹಾಗೂ ಆಯಾಯ ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಯನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುರುವುದಿಲ್ಲ) ಎಂದು ಕನ್ನಡ ಮತ್ತು…
ಮಡಿಕೇರಿ ನ.15 : ಐದು ವರ್ಷದೊಳಗಿನ ಮಕ್ಕಳಿಗೆ ಬರುವ ನ್ಯೂಮೊನಿಯ ಹಾಗೂ ಡೈರಿಯಾ ಕಾಯಿಲೆಯನ್ನು ತಡೆಗಟ್ಟಲು ಜಿಂಕ್ ಹಾಗೂ ಒಆರ್ಎಸ್ ಮಾತ್ರೆಗಳನ್ನು ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಹೇಳಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತಿಸಾರ ಭೇದಿಯಿಂದ ಆಗುವ ಮಕ್ಕಳ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮ ಏರ್ಪಡಿಸಿದ್ದು, ಅದರಲ್ಲಿ ಅತಿಸಾರ ಭೇದಿ ನಿಯಂತ್ರಣವು ಒಂದಾಗಿದೆ. 15 ದಿನಗಳ ಮಟ್ಟಿಗೆ ಕಾರ್ಯಕ್ರಮ ನಡೆಯಲಿದೆ ಎಂದರು. ಮಕ್ಕಳ ತಜ್ಞರಾದ ಡಾ.ಕುಶ್ವಂತ್ ಕೋಳಿಬೈಲು ಮಾತನಾಡಿ, ವಾಂತಿ ಮತ್ತು ಭೇದಿಯಿಂದ ಮಕ್ಕಳ ಸಾವು ದೇಶದಲ್ಲಿ ಹೆಚ್ಚಾಗಿದ್ದು, , ಅದನ್ನು ತಡೆಯಬೇಕಾದರೆ ಔಷಧಿಗಳ ಬಗ್ಗೆ ಮಾಹಿತಿ ಮುಖ್ಯವಾಗಿದೆ. ಹಳ್ಳಿಯ ಭಾಗದಲ್ಲಿ ಔಷಧಿ ಅರಿವು ಇರುವುದಿಲ್ಲ. ಆದ್ದರಿಂದ ಔಷಧಿಗಳ ಕುರಿತು ಮಾಹಿತಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು. ಹಿಂದಿನ ದಿನಗಳಲ್ಲಿ…
ಮಡಿಕೇರಿ ನ.15 : ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನ.16 ರಂದು “ಕಿರು ಸಂಕ್ರಮಣ” (ವೃಶ್ಚಿಕ ಸಂಕ್ರಮಣ) ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ನ.15 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್4 ಸಿದ್ದಲಿಂಗಪುರ ಫೀಢರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ನ.16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಿದ್ದಲಿಂಗಪುರ, ಬಸಿರುಗುಪ್ಪೆ, ದೊಡ್ಡಳುವಾರ, ಅರಶಿಣಗುಪ್ಪೆ, ಬೈರಪ್ಪನಗುಡಿ, ಅಳುವಾರ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.






