ಮಡಿಕೇರಿ ನ.15 : ಕೊಡಗು ಜಿಲ್ಲೆ ಪ್ರವಾಸೋದ್ಯಮ ಇಲಾಖೆಯ ನೂತನ ಉಪ ನಿರ್ದೇಶಕರಾಗಿ ಅನಿತಾ ಭಾಸ್ಕರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕಚೇರಿ ದೂರವಾಣಿ ಸಂಖ್ಯೆ 08272-200519 ನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ನ.15 : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ನ.21ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಎಂದು ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಮೈತ್ರಿ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಕೆ.ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸಂಘದ ಗೌರವಾಧ್ಯಕ್ಷ ಎಂ.ಎ.ಅಪ್ಪಯ್ಯ, ವಿಶೇಷ ಆಹ್ವಾನಿತರಾಗಿ ಶೈಲಾ ಚಿಣ್ಣಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು. ಸಂಘದಲ್ಲಿ ಜಿಲ್ಲಾ ವ್ಯಾಪ್ತಿಯ 962 ಮಂದಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳು ಸದಸ್ಯತ್ವ ಪಡೆಯುವುದರ ಜೊತೆಗೆ ಸರ್ಕಾರದ ಆರೋಗ್ಯ ವಿಮೆ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. ::: ಪುರಸ್ಕಾರ-ಸನ್ಮಾನ ::: ವಾರ್ಷಿಕ ಮಹಾಸಭೆಯಲ್ಲಿ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಇಬ್ಬರು ಮಕ್ಕಳನ್ನು ಹಾಗೂ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅವರು ‘ಮಣವಟ್ಟೀರ ಪೊನ್ನಪ್ಪ’ ಅವರ ಸ್ಮರಣಾರ್ಥ ನೀಡಿರುವ…
ಮಡಿಕೇರಿ ನ.15 : ಎಸ್ವೈಎಸ್ ರಾಜ್ಯ ಸಮ್ಮೇಳನದ ಪ್ರಚಾರಾರ್ಥ ನ.17 ರಂದು ಸಿದ್ದಾಪುರದಲ್ಲಿ ‘ಕೊಡಗು ಜಿಲ್ಲಾ ಮಟ್ಟದ ಯುವ ಜನೋತ್ಸವ’ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾ ಮಾಧ್ಯಮ ವಕ್ತಾರ ಶಾಫಿ ಸಅದಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ವೈಎಸ್ ಸಂಘಟನೆಯು ಮೂವತ್ತರ ಸಂಭ್ರಮದಲ್ಲಿದ್ದು, ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಘೋಷಣೆಯೊಂದಿಗೆ ಜ.14 ರಂದು ಮಂಗಳೂರಿನಲ್ಲಿ ರಾಜ್ಯ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಾರ್ಥ ಪ್ರತೀ ಜಿಲ್ಲೆಯಲ್ಲೂ ಯುವ ಜನೋತ್ಸವ ನಡೆಯಲಿದ್ದು, ನ.17 ರಂದು ಸಂಜೆ 5 ಗಂಟೆಗೆ ಸಿದ್ದಾಪುರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ ಎಂದರು. ಯುವ ಜನೋತ್ಸವವನ್ನು ಎಸ್ವೈಎಸ್ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಸ್ವೈಎಸ್ ಜಿಲ್ಲಾಧ್ಯಕ್ಷ ಹಮೀದ್ ಮುಸ್ಲಿಯಾರ್ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಕೂರ್ಗ್ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದ್ ಶಿಹಾಬುದ್ದೀನ್ ಅಲ್ ಐದರೂಸಿ, ಎನ್ವೈಎಸ್ ರಾಜ್ಯ ನಾಯಕ ಸಯ್ಯಿದ್ ಇಲ್ಯಾಸ್ ಸಖಾಫಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವು ಧಾರ್ಮಿಕ…
ಮಡಿಕೇರಿ ನ.15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದಲ್ಲಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಬಿರ್ಸಾ ಮುಂಡಾ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ, ಇತರರು ಬಿರ್ಸಾ ಮುಂಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಬಿರ್ಸಾ ಮುಂಡ ಅವರು ಆದಿವಾಸಿ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಜಾರ್ಖಂಡ್ ರಾಜ್ಯದ ರಾಂಚಿ ಬಳಿ ಜನಿಸಿರುವ ಬಿರ್ಸಾ ಮುಂಡ ಅವರು ಆದಿವಾಸಿ ಜನಾಂಗ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಶ್ರಮಿಸಿದ್ದಾರೆ. ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ ಎಂದು ಹೇಳಿದರು. ಬ್ರಿಟಿಷ್ ಸರ್ಕಾರ ಜಾರ್ಖಂಡ್ ಆದಿವಾಸಿಗಳು ವಾಸಿಸುತ್ತಿದ್ದ ಕಾಡು ಮತ್ತು ಅವುಗಳಲ್ಲಿದ್ದ ಹಳ್ಳಿಗಳನ್ನೂ ರಕ್ಷಿತ ಅರಣ್ಯ ಪ್ರದೇಶಗಳೆಂದು ಘೋಷಿಸಿ, ಆ ಮೂಲಕ ಆದಿವಾಸಿಗಳ ಎಲ್ಲಾ ಹಕ್ಕುಗಳನ್ನೂ ಕಿತ್ತುಕೊಂಡಿತು.…
ಮಡಿಕೇರಿ ನ.15 : ಆರ್ಥಿಕ ಸಂಪತ್ತು ದ್ವಿಗುಣಗೊಳ್ಳುವುದರ ಮೂಲಕ ಭಾರತ ಏಷ್ಯಾ ಖಂಡದಲ್ಲಿಯೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ರೀತಿಯ ಆರ್ಥಿಕ ಪ್ರಗತಿಯಿಂದ ಸಹಕಾರಿ ಕ್ಷೇತ್ರದ ಸಬಲೀಕರಣ ಸಾಧ್ಯ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ಹೊದ್ದೂರು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನೂತನ ಗೋದಾಮು ಮತ್ತು ಸಭಾಂಗಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಹಲವಾರು ಉಪಯುಕ್ತ ಯೋಜನೆಗಳಿಂದ ರಾಜ್ಯದೆಲ್ಲೆಡೆ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಸೂಕ್ತ ಸೇವೆಯನ್ನು ಸಲ್ಲಿಸುತ್ತಿವೆ ಎಂದರು. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ವಿತರಿಸಲಾಗುತ್ತಿದೆ. ಕಟ್ಟಡ ನಿಮಾಣ, ಗೋದಾಮು, ಗೊಬ್ಬರಕ್ಕೆ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಆ ಮೂಲಕ ಕೃಷಿಕ ವರ್ಗದ ಅಭ್ಯುದಯಕ್ಕೆ ಸಹಕಾರಿಯಾಗಿದೆ. ಆರ್ಥಿಕ ತಜ್ಞರ ಅಭಿಪ್ರಾಯದಂತೆ ಭಾರತ ಆರ್ಥಿಕ ಬೆಳವಣಿಗೆಯಲ್ಲಿ 2028ಕ್ಕೆ ಏಷ್ಯಾ ಖಂಡದಲ್ಲಿಯೇ 3ನೇ ಸ್ಥಾನವನ್ನು ಪಡೆಯಲಿದೆ, ಈ ಹಂತದಲ್ಲಿ ಸಹಕಾರಿ ಕ್ಷೇತ್ರದಲ್ಲಿ…
ಕುಶಾಲನಗರ ನ.15 : ಕುಶಾಲನಗರದ ಶ್ರೀ ಕೋಣಮಾರಿಯಮ್ಮ ದೇವಾಲಯದ 21ನೇ ವರ್ಷದ ವಾರ್ಷಿಕ ಪೂಜೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ನ.14 ಮತ್ತು 15 ರಂದು ಎರಡು ದಿನಗಳ ಕಾಲ ನಡೆದ ಪೂಜೋತ್ಸವದ ಅಂಗವಾಗಿ ಕಾವೇರಿ ನದಿಯಿಂದ ಕಳಸದೊಂದಿಗೆ ದೇವಿ ವಿಗ್ರಹ ತಂದು ಪ್ರತಿಷ್ಠಾಪಿಸಿ, ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ ನೆರವೇರಿಸಲಾಯಿತು. ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪ್ರಧಾನ ಅರ್ಚಕ ಎಚ್.ಜೆ.ಲೋಕೇಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಮಾಜಿ ಶಾಸಕ ಅಪ್ಪಚ್ಚುರಂಜನ್ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳ ಬಗ್ಗೆ ದೇವತಾ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಸುರೇಶ್, ಮಾಜಿ ಅಧ್ಯಕ್ಷ ಜೈವರ್ಧನ್ ಮಾಹಿತಿ ನೀಡಿ, ಪ್ರತಿ ವರ್ಷದಂತೆ ಮಂಗಳವಾರ 5 ಸಾವಿರ ಮಂದಿ, ಬುಧವಾರ 10 ರಿಂದ 15 ಸಾವಿರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದರು. ನೆರೆದಿದ್ದ ಭಕ್ತರಿಗೆ ದೇವತಾ ಸೇವಾ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣಾ ಕಾರ್ಯ ನಡೆಯಿತು.…
ಮಡಿಕೇರಿ ನ.15 : ಮದೆ ಗ್ರಾ.ಪಂ ವ್ಯಾಪ್ತಿಯ ಕಾಟಕೇರಿ-ಅವಂದೂರು ರಸ್ತೆ ಕಾಮಗಾರಿ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ನ.15 : ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ಮತ್ತಷ್ಟು ಹತ್ತಿರವಾಗಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ. ಭಾಗಮಂಡಲದಲ್ಲಿ ಹೋಬಳಿ ಮಟ್ಟದ ಕಾಂಗ್ರೆಸ್ ಸೇವಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಸೇವಾ ಕೇಂದ್ರಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದರು. ಜನಸೇವೆಗಾಗಿಯೇ ಕಚೇರಿಯನ್ನು ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು. ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವುದರಲ್ಲಿ ಸೇವಾ ಕಚೇರಿ ಪ್ರಮುಖ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭ ಕೋಳಿಬೈಲು ಸಿ.ವೆಂಕಟೇಶ್ ಅವರನ್ನು ನಾಪೋಕ್ಲು ಬ್ಲಾಕ್ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪತ್ರ ನೀಡಿದ ಶಾಸಕರು, ಪಕ್ಷ ಸಂಘಟನೆಗೆ ಕಾರ್ಯಕರ್ತರು ಮುಂದಾಗಬೇಕು ಎಂದರು. ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಡಿಸಿಸಿ ಸದಸ್ಯ ಸುನಿಲ್ ಪತ್ರವೊ, ಚೆಟ್ಟಿಮಾನಿ ಗ್ರಾ.ಪಂ ಸದಸ್ಯ ಹ್ಯಾರಿಸ್, ಕರಿಕೆ…
ನಾಪೋಕ್ಲು ನ.15 : ಗ್ರಾಮಭಿವೃದ್ಧಿ ಯೋಜನೆಯ ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀಡಿದ ಅನುದಾನದಲ್ಲಿ ಚೆರಿಯ ಪರಂಬು ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಚೆರಿಯಪರಂಬು – ಕಲ್ಲುಮೊಟ್ಟೆ ಸಂಪರ್ಕ ರಸ್ತೆ ಗೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಕಾಮಗಾರಿಗೆ ಚೆರಿಯ ಪರಂಬುವಿನಲ್ಲಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿ ಮಾತನಾಡಿದರು. ಸ್ಥಳೀಯ ನಾಯಕರು ಚೆರಿಯಪರಂಬು ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಕೊಟ್ಟಿದ್ದಾರೆ. ಒಂದು ವಾರದಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಆಗಲಿದೆ ಎಂದರು . ಮಳೆಗಾಲದಲ್ಲಿ ಚೆರಿಯ ಪರಂಬು ಜಲಾವೃತವಾಗುವುದನ್ನು ತಡೆಗಟ್ಟಲು ಸೂಕ್ತ ಕಾಮಗಾರಿ ಕೈಗೊಳ್ಳಲಾಗುವುದು. ಸಣ್ಣ ನೀರಾವರಿ ಇಲಾಖೆ ಸಚಿವರು ಹಾಗೂ ಉಸ್ತುವಾರಿ ಸಚಿವರು ಈ ಮೊದಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾಮ ಗಾರಿಗಳನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದರು. ಈ ಸಂದರ್ಭ ಪಂಚಾಯಿತಿ…
ಮಡಿಕೇರಿ ನ.15 : ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷಕೂಟ ಸಂಭ್ರಮದಿಂದ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಅಶೋಕ್ ಸಂಗಪ್ಪ ಅಲೂರ್, ಹಳೆ ವಿದ್ಯಾರ್ಥಿ ಸಂಘ ಕ್ರಿಯಾಶೀಲವಾಗಿದ್ದು, ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸದ ವಿಚಾರ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೊಡಗು ವಿಶ್ವವಿದ್ಯಾನಿಲಯದ ನಡುವೆ ಸಿಕ್ಕಿ ಸಂಕಷ್ಟದಲ್ಲಿರುವುದು ಎಲ್ಲರಿಗೂ ಅರಿವಿದೆ. ಈ ಸಮಸ್ಯೆ ಸರ್ಕಾರದ ಮಟ್ಟದಲ್ಲಿ ಪರಿಹಾರವಾಗಬೇಕಿದ್ದು, ಜನಪ್ರತಿನಿಧಿಗಳು ಈ ವಿಚಾರವಾಗಿ ಸಹಕರಿಸಬೇಕೆಂದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಡಕಾಗದಂತೆ ಪೂರ್ಣ ಪ್ರಯತ್ನ ಕೈಗೊಳ್ಳಲಾಗುವುದೆಂದೆಂದು ತಿಳಿಸಿದರು. ಸಂಘದ ಅಧ್ಯಕ್ಷರಾದ ಡಾ.ಪಾರ್ವತಿ ಅಪ್ಪಯ್ಯ ಮಾತನಾಡಿ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು 75 ವರ್ಷಗಳನ್ನು ಪೂರೈಸಿದೆ. ಇತ್ತೀಚೆಗೆ ಕಾಲೇಜಿನಲ್ಲಿ ಬಹಳಷ್ಟು ಸಮಸ್ಯೆಗಳು ಉದ್ಭವಿಸಿದ್ದು, ಸರ್ಕಾರದ ಮಟ್ಟದಲ್ಲಿ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಯುತ್ತಿದೆ, ಕಾಲೇಜಿನ…






