ಲೇಖಕ: admin

ಸುಂಟಿಕೊಪ್ಪ ಡಿ.12 : ಬಾಲ ಪ್ರತಿಭೆ ಶ್ರೀಶಾ ಮತ್ತು ಅವರ ಪೋಷಕರು ಯೋಧರನ್ನು ಸ್ಮರಿಸುವುದರೊಂದಿಗೆ ಮತ್ತೆ ‘ಹುಟ್ಟಿ ಬನ್ನಿ ಯೋಧರೆ’ ಎಂಬ ಕಾರ್ಯಕ್ರಮದಲ್ಲಿ ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಪಿನ್ ರಾವತ್ ಮತ್ತು ಹುತಾತ್ಮ ವೀರ ಯೋಧರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಬಾಲ ಪ್ರತಿಭೆ ಶ್ರೀಶಾ, ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಭಾರತೀಯ ಸೇನಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರ ಸೇನಾಧಿಕಾರಿಗಳ ಸಾಧನೆಯನ್ನು ಮೆಲುಕು ಹಾಕಿದರು. ಬಿಪಿನ್ ರಾವತ್ ಅವರ ವಿದ್ಯಾಭ್ಯಾಸ, ಸೇನೆಯಲ್ಲಿ ಅವರ ಶೌರ್ಯ, ಸಾಹಸಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದಲ್ಲದೇ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಅವರ ಬಗ್ಗೆ ಮಾಹಿತಿ ನೀಡಿದರು. ಶ್ರೀಶಾ ಅವರ ಪೋಷಕರಾದ ಶಿಜು, ಸಂಧ್ಯಾ, ಸಪಾಯಿ ಕರ್ಮಚಾರಿ ಜಿಲ್ಲಾಧ್ಯಕ್ಷ ಆರ್.ರಂಗಸ್ವಾಮಿ, ಹರದೂರು ಗ್ರಾ.ಪಂ ಸದಸ್ಯ ಬಿ.ಡಿ.ಪದ್ಮನಾಭ, ಕೊಡಗು…

Read More

ಸೋಮವಾರಪೇಟೆ ಡಿ.12 : ಕಾಫಿ ಬೆಳೆಗಾರರ 10 ಹೆಚ್.ಪಿ. ಪಂಪ್‍ಸೆಟ್‍ಗಳಿಗೆ ಷರತ್ತಿಲ್ಲದೆ ಉಚಿತ ವಿದ್ಯುತ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣ ಜೇಸಿ ವೇದಿಕೆಯಲ್ಲಿ ಧರಣಿ ಪ್ರತಿಭಟನೆ ನಡೆಯಿತು. 2006ರಿಂದಲೂ ಉಚಿತ ವಿದ್ಯುತ್‍ಗಾಗಿ ರೈತ ಸಂಘ ಹೋರಾಟ ಮಾಡುತ್ತಿದೆ. ಕಳೆದ ವರ್ಷದ ಬೆಳಗಾವಿ ಅಧಿವೇಶನದಲ್ಲಿ ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅನೇಕ ಷರತ್ತುಗಳನ್ನು ಹಾಕಿ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದರು. ಕೊನೆಗೂ ಸರ್ಕಾರದ ಆದೇಶವಾಗಲಿಲ್ಲ. ಈಗ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಬೆಳಗಾವಿ ಅಧಿವೇಶನದಲ್ಲೇ ಉಚಿತ ವಿದ್ಯುತ್ ನೀಡುವ ಆದೇಶ ಹೊರಬೀಳಬೇಕು. ಈ ಬಗ್ಗೆ ಜಿಲ್ಲೆಯ ಶಾಸಕರಾದ ಡಾ.ಮಂತರ್‍ಗೌಡ ಮತ್ತು ಎ.ಎಸ್.ಪೊನ್ನಣ್ಣ ಕಾಫಿ ಬೆಳೆಯುವ ಜಿಲ್ಲೆಗಳ ಶಾಸಕರ ಸಹಕಾರದೊಂದಿಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲೇಬೇಕು ಎಂದು ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಆಗ್ರಹಿಸಿದರು. ಉಚಿತ ವಿದ್ಯುತ್ ಸಿಗುವ ನಿರೀಕ್ಷೆಯಿಂದ ಸಣ್ಣ ರೈತರು ಪಂಪ್‍ಸೆಟ್‍ಗಳ…

Read More

ಮಡಿಕೇರಿ ಡಿ.12 : ಸಮಾಜಸೇವೆ ಮೂಲಕ ಸಮಾಜದಲ್ಲಿ ನಾವು ಶಾಶ್ವತವಾಗಿ ಸ್ಮರಣೀಯರಾಗಲು ಸಾಧ್ಯ ಇದೆ ಎಂದು ಮಡಿಕೇರಿಯ ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ. ಬಿ.ರಾಘವ ಅಭಿಪ್ರಾಯಪಟ್ಟಿದ್ದಾರೆ. ನಗರದ ಕಾಯ೯ಪ್ಪ ಕಾಲೇಜಿನ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ವಲಯ 6 ರ ಸಾಂಸ್ಕೃತಿಕ ಸ್ಪಧೆ೯ ಕಲಾಪವ೯ವನ್ನು ಉದ್ಘಾಟಿಸಿ ಮಾತನಾಡಿದ ಅವರು,, ಸಾಮಾಜಿಕ ಬದಲಾವಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ, ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ ,ಬಾಬಾ ಆಮ್ಟೆ, ಮಥರ್ ಥೆರೆಸಾ, ಸ್ವಾಮಿ ವಿವೇಕಾನಂದ ಅವರಂಥ ಅನೇಕ ಮಹಾನೀಯರು ಪ್ರತೀಯೋವ೯ರ ಜೀವನದ ಆದಶ೯ವಾಗಬೇಕು ಎಂದು ಕರೆ ನೀಡಿದರು. ಸಾಮಾಜಿಕ ಚಳವಳಿಗಳ ಮೂಲಕ ದೇಶವನ್ನು ಸುಭದ್ರಗೊಳಿಸುವಲ್ಲಿ ಸಾಕಷ್ಟು ಮಹನೀಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಇಂಥ ಮಹನೀಯರ ಜೀವನಾದಶ೯ಗಳನ್ನು ವಿದ್ಯಾಥಿ೯ ದಿಸೆಯಲ್ಲಿಯೇ ಹೇಳಿಕೊಡಬೇಕೆಂದು ಅನಿಸಿಕೆ ವ್ಯಕ್ತಪಡಿಸಿದ ಮೇಜರ್ ಡಾ. ಬಿ.ರಾಘವ, ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಮೂಲಕ ಶಿಕ್ಷಣ, ಆರೋಗ್ಯ,…

Read More

ವಿರಾಜಪೇಟೆ ಡಿ.12 :   ಹೆಗ್ಗಳ ಗ್ರಾಮದಲ್ಲಿರುವ ಎಡಮಕ್ಕಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ವಾರ್ಷಿಕ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಮೊದಲ ದಿವಸ ದೀಪಾರಾಧನೆ ಹಾಗೂ ಮಹಾಪೂಜೆ ಸೇವೆಗಳು ನಡೆಯಿತು. ಎರಡನೇ ದಿವಸ ದೇವಾಲಯದಲ್ಲಿ ಗಣಪತಿ ಹೋಮ, ಧ್ವಜಾರೋಹಣ ಹಾಗೂ ಮಹಾಪೂಜೆ  ನಡೆಯಿತು. ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅನ್ನದಾನದ ವ್ಯವಸ್ಥೆ ಮಾಡಲಾಯಿತು. ಸಂಜೆ ದೀಪಾರಾಧನೆ ಹಾಗೂ ಎಡಮಕ್ಕಿ ಸಾರ್ವಜನಿಕ ಮೈದಾನದಿಂದ ತಾಲಪ್ಪೊಲಿ ಮೆರವಣಿಗೆ ನಡೆಯಿತು.  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ನೆರೆದಿದ್ದರು. ರಾತ್ರಿ ಮಾನಂದವಾಡಿಯ ಶ್ರೀ ಭಗವತಿ ಚಂಡೆ ವಾದ್ಯಮ್ ರಿಂದ ತಾಯಂಭಗಂ ಸೇವೆ ಜರುಗಿತು. ಮಹಾಪೂಜೆ ಅನ್ನದಾನ ಕಾರ್ಯಕ್ರಮ ನಡೆದವು.  ಮಾತ್ರವಲ್ಲದೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಹೇಶ್, ಮಹಿ ಕೂರ್ಗ್ ಇವರಿಂದ ಸಿಡಿಮದ್ದಿನ ಪ್ರದರ್ಶನ ನಡೆಯಿತು.  ವಾರ್ಷಿಕ ಮಹೋತ್ಸವದಲ್ಲಿ ಕೊಡಗು ಜಿಲ್ಲೆ, ಕೇರಳ, ತಮಿಳುನಾಡಿನಿಂದಲೂ ಭಕ್ತರು ಆಗಮಿಸಿದ್ದರು.  ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಮುಖ್ಯ ತಂತ್ರಿಗಳಾದ ಬ್ರಹ್ಮಶ್ರೀ ಮುಳ್ಳಪಲ್ಲಿ ಕೃಷ್ಣನ್ ನಂಬೂದಿರಿ…

Read More

ಸೋಮವಾರಪೇಟೆ ಡಿ.12 : ಗೌಡಳ್ಳಿ ಗ್ರಾ.ಪಂ, ಬೆಂಗಳೂರು ಮಕ್ಕಳ ಕಲ್ಯಾಣ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹಾಗೂ ನಾವು ಪ್ರತಿಷ್ಠಾನದ ವತಿಯಿಂದ ಗೌಡಳ್ಳಿ ಪ್ರೌಢಶಾಲೆ ಸಭಾಂಗಣದಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಶುಂಠಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಎರಡು ಕೊಠಡಿಯ ಮೇಲ್ಚಾವಣಿಯ ಮರಗಳು ಗೆದ್ದಲು ಹಿಡಿದಿದ್ದು, ಯಾವಾಗ ಬೇಕಾದರೂ ಕುಸಿದು ಬೀಳಬಹುದು ಎಂದು 5ನೇ ತರಗತಿ ಶ್ರೀನಿಧಿ ಹೇಳಿದರು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಬಂದು ನೋಡಿ ಹೋಗುತ್ತಾರೆ. ಆದರೆ ದುರಸ್ತಿ ಕೆಲಸ ಮಾಡಿಸಿಲ್ಲ. ಮಕ್ಕಳ ಜೀವಹಾನಿಯಾದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿದರು. ಪಂಚಾಯಿತಿ ವತಿಯಿಂದ ಇಂಗು ಗುಂಡಿ ನಿರ್ಮಾಣ ಮಾಡಲಾಗಿದೆ. ಆದರೆ ಪೈಪ್ ಅಳವಡಿಸಿಲ್ಲ. ಶಾಲಾ ಆವರಣ ವಾಸನೆಯಿಂದ ಕೂಡಿದೆ. ಗ್ರಾಮೀಣ ಭಾಗದಿಂದ ಮಕ್ಕಳು ಕಾಲ್ನಡಿಗೆಯಲ್ಲೇ ಬರಬೇಕು. ಮಳೆಗಾಲದಲ್ಲಿ ಛತ್ರಿ ಮತ್ತು ಸ್ವೆಟ್ಟರ್ ನೀಡಬೇಕು. ಹಾಗೂ ಎಲ್ಲಾ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿದರು.…

Read More

ಮಡಿಕೇರಿ ಡಿ.11 : ಅತ್ಯಂತ ಸೂಕ್ಷ್ಮ ಜನಾಂಗ ಕೊಡವರಿಗೆ ಸಾಂವಿಧಾನಿಕ ಭದ್ರತೆಯ ಅಗತ್ಯವಿದೆ, ಈ ದೇಶದ ಸಂವಿಧಾನವೊಂದೇ ಕೊಡವರ ಗುರುಪೀಠವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮೈಸೂರಿನ ಜಯಲಕ್ಷ್ಮಿ ಪುರಂನ ಕೊಡವ ಸಹಕಾರ ಭವನದಲ್ಲಿ ನಡೆದ ಕೊಡವ ವಿದ್ಯಾರ್ಥಿ ಸಂಘಗಳ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೊಡವರಿಗೆ ಕೊಡವ ಗುರುಪೀಠ ಇರಬೇಕು ಎನ್ನುವ ಅಭಿಪ್ರಾಯಗಳಿದೆ. ಆದರೆ ಈ ಹೇಳಿಕೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕೊಡವ ಬುಡಕಟ್ಟು ಸಮುದಾಯದ ಸಾಮಾಜಿಕ ನಂಬಿಕೆಗಳು ಹಾಗೂ ಪೂರ್ವಜರ ಆರಾಧನಾ ಮಾದರಿಗಳಿಗೆ ವಿರುದ್ಧವಾಗಿದೆ. ಈ ರೀತಿಯ ಪ್ರಸ್ತಾಪಗಳು ಸಾಂವಿಧಾನಿಕ ನೈತಿಕತೆಯನ್ನು ಬುಡಮೇಲು ಮಾಡುವ ಪ್ರಯತ್ನವಾಗಿದೆ. ಕೊಡವರು ಭಾರತೀಯ ಶ್ರೇಷ್ಠ ಸಂವಿಧಾನದ ಮೂಲಕವಷ್ಟೇ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದರು. ರಾಜ್ಯದ ವೈಫಲ್ಯ ಮತ್ತು ದುರಾಡಳಿತವನ್ನು ಮುಚ್ಚಿ ಹಾಕಲು, ಕೊಡವರ ಹಾದಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿದೆ. ಸಿಎನ್‌ಸಿಯ ಸಾಂವಿಧಾನಿಕ ಬೇಡಿಕೆಗಳ ಕುರಿತು ಕೊಡವ ಜನರ ಮೂಲಕವೇ ತಪ್ಪು ಗ್ರಹಿಕೆ ಮೂಡಿಸಲಾಗುತ್ತಿದೆ ಎಂದು…

Read More

ಗೋಣಿಕೊಪ್ಪಲು,ಡಿ.11  :  ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ಮೃತ  ಪ್ರದೀಪ್  ಕುಟುಂಬಕ್ಕೆ  ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ.5 ಲಕ್ಷ ಜಮಾ  ಮಾಡಲಾಗಿದೆ. ಪ್ರದೀಪ್   ಪತ್ನಿಯ ಪಂಚವಳ್ಳಿ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಖಾತೆಗೆ ರೂ.5 ಲಕ್ಷ ಜಮಾ ಮಾಡಿರುವುದಾಗಿ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಆಪ್ತರಾದ ಕೆ.ಎಸ್.ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ಶಾಸಕ ಪೊನ್ನಣ್ಣ, ಮಾಜಿ ಎಂ.ಎಲ್.ಸಿ ಅರುಣ್ ಮಾಚಯ್ಯ ಮುಂತಾದವರು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು. ಮೃತ ಪ್ರದೀಪ್ ಗೆ ಇಬ್ಬರು ಮಕ್ಕಳಿದ್ದು ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.11 :  ಕವನ ಓದುವ ಜೊತೆಗೆ ಕೇಳುಗರ ಸಂಕಟವನ್ನು ಕವನ ವಾಚಿಸುವ ಕವಿಗಳು ಅರಿಯಬೇಕು ಎಂದು ಸಾಹಿತಿ ಭಾರದ್ವಾಜ್.ಕೆ.ಆನಂದತೀರ್ಥ ಅಭಿಪ್ರಾಯ ವ್ಯಕ್ತಪಡಿಸಿದರು. ಕುಶಾಲನಗರ ಸಮೀಪದ ಹೆಬ್ಬಾಲೆ ಬನಶಂಕರಿ ಹಬ್ಬದ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ಬಾಲೆ ಘಟಕದ ವತಿಯಿಂದ ಬನಶಂಕರಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಕವಿಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಲೇ ಕವಿಗೋಷ್ಠಿಗಳಿಗೆ ಸಾರ್ವಜನಿಕರು ಬರುವುದು ಕಡಿಮೆ. ಅಂತಹುದರಲ್ಲಿ ಕವಿಗಳು ತಮಗೆ ಇಷ್ಟ ಬಂದ ಹಾಗೆ ಬರೆದು ಜನರಲ್ಲಿ ಸಾಹಿತ್ಯ ಆಸಕ್ತಿಯನ್ನು ಮತ್ತಷ್ಟು ಕಡಿಮೆ ಮಾಡಬಾರದು ಎಂದರು. ಸೋಮವಾರಪೇಟೆ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇಂತಹ ಕವಿಗೋಷ್ಠಿ ನಡೆಸುವ ಮೂಲಕ ಕನ್ನಡ ಭಾಷೆಯ ಗೌರವವನ್ನು ಹೆಚ್ಚಿಸಲಾಗುತ್ತಿದೆ. ಕೊಡಗಿನಲ್ಲಿ ಮಹಿಳಾ ಬರಹಗಾರ ಸಂಖ್ಯೆ ತುಂಬಾ ಕಡಿಮೆಯಿತ್ತು ಎನ್ನುತ್ತಿದ್ದರು, ಆದರೆ ಇವತ್ತು ಮಹಿಳೆಯರೇ ಹೆಚ್ಚು ಇರುವುದು ಸಂತಸ ತಂದಿದೆ. ಕೊಡಗು ನಿಸರ್ಗಕ್ಕೆ, ವೀರರ ನಾಡು, ಕಾವೇರಿ ನದಿ, ಸೈನಿಕರ ತವರೂರು. ಆದರೇ ಬರಹಗಾರರು ಕೂಡ ಕೇವಲ…

Read More

ಮಡಿಕೇರಿ ಡಿ.11 :  ಗ್ರಾಮ ಪಂಚಾಯಿತಿಗಳ ಸರ್ವತೋಮುಖ ಅಭಿವೃದ್ದಿಗಳಿಗೆ ಸಹಕರಿಸಿ ಪ್ರಗತಿ ಸಾಧಿಸಿ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ವರ್ಣೀತ್ ನೇಗಿ ತಿಳಿಸಿದ್ದಾರೆ‌. ಪೊನ್ನಂಪೇಟೆ ತಾಲ್ಲೂಕಿನ ಸಾಮರ್ಥ್ಯ ಸೌಧದಲ್ಲಿ ಗ್ರಾ.ಪಂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಿ ಪ್ರಗತಿ ಸಾಧಿಸಲು ಗ್ರಾ.ಪಂ ಅಭಿವೃದ್ದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆ ಕುಂಠಿತವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಗತಿ ಸಾಧಿಸಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಶೌಚಾಲಯಗಳು ನಿರ್ಮಾಣವಾಗುತ್ತಿದ್ದು , ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಈಗಾಗಲೇ ಕೂಸಿನ ಮನೆ ಆರೈಕೆದಾರರಿಗೆ ತರಬೇತಿ ನೀಡಲಾಗಿದ್ದು , 3 ವರ್ಷದೊಳಗಿನ ನರೇಗಾ ಕೂಲಿ ಕಾರ್ಮಿಕರ ಮಕ್ಕಳನ್ನು ಕೂಸಿನ ಮನೆಯಲ್ಲಿ ಆರೈಕೆ ಮಾಡಬಹುದಾಗಿದೆ‌ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಪ್ರಚಾರ ಕೈಗೊಂಡು ನೋಂದಣಿ ಮಾಡಿಸುವಂತೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು. PM- ವಿಶ್ವಕರ್ಮ ಯೋಜನೆಯ ಬಗ್ಗೆ ವ್ಯಾಪಕ…

Read More

ಮಡಿಕೇರಿ ಡಿ.11 : ಬಿಲ್ಲವ ಸಮುದಾಯದ ತಂಡಗಳ ನಡುವೆ ನಡೆದ ಪೂಜಾರಿ ಪ್ರೀಮಿಯರ್ ಲೀಗ್ ಪ್ರಥಮ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಪೂಜಾರಿ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮರಗೋಡುವಿನ ಭಾರತಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಿಲ್ಲವ ಟೈಗರ್ಸ್ ಅಮ್ಮತ್ತಿ ತಂಡವನ್ನು 26 ರನ್‍ನಿಂದ ಮಣಿಸಿ ಪ್ರಶಸ್ತಿ ಗೆದ್ದಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಯಲ್ ಪೂಜಾರಿ ಕೊಡಗು ತಂಡ ನಿಗದಿತ 5 ಓವರ್‍ನಲ್ಲಿ 3 ವಿಕೆಟ್ ಕಳೆದುಕೊಂಡು 78 ರನ್ ಗಳಿಸಿತು. ಶ್ರೀನಾಥ್ ಪೂಜಾರಿ 29, ವಿನು ಪೂಜಾರಿ 18, ತ್ರಿಲೇಶ್ 17, ಬಬಿತ್ ಪೂಜಾರಿ 12 ರನ್ ಗಳಿಸಿದರು. ಗೆಲುವಿನ ಗುರಿ ಬೆನ್ನತ್ತಿದ ಬಿಲ್ಲವಟೈಗರ್ಸ್ ಅಮ್ಮತ್ತಿತಂಡ 5 ಓವರ್‍ನಲ್ಲಿ 5 ವಿಕೆಟ್ ಕಳೆದುಕೊಂಡು 52 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ತಂಡದ ಪರ ಶರಣ್ 21 ರನ್ ದಾಖಲಿಸಿದರು. ರಾಯಲ್ ಪೂಜಾರಿ ತಂಡದ ಬಬಿತ್ ಪೂಜಾರಿ 2 ವಿಕೆಟ್ ಕಬಳಿಸಿದರು. ಇದಕ್ಕೂ…

Read More