ಸುಂಟಿಕೊಪ್ಪ ಡಿ.11 : ಸುಂಟಿಕೊಪ್ಪ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ಸಂಪತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಆಯ್ಕೆಯಾಗಿದ್ದಾರೆ. ದ್ವಾರಕ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಜ.4 ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಡಿ.11 : ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆದ ರೋಟರಿ ಜಿಲ್ಲೆ 3181 ರ ಕ್ರೀಡಾಕೂಟದಲ್ಲಿ ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ನ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅವರು ದಾಖಲೆಯ ಐದು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. 50ವರ್ಷ ಮೇಲ್ಪಟ್ಟವರಿಗಾಗಿ ನಡೆದ ಸ್ಪರ್ಧೆಯಲ್ಲಿ 100, 200, 400 ಮೀಟರ್ ಓಟ, ಭಾರದ ಗುಂಡು ಎಸೆತ ಮತ್ತು 400 ಮೀಟರ್ ನಡಿಗೆಯಲ್ಲಿ ಪ್ರಥಮ ಬಹುಮಾನ ಗಳಿಸುವ ಮೂಲಕ ಅಜಿತ್ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. ರೋಟರಿ ಜಿಲ್ಲೆ 3181ರ ಕೊಡಗು, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರದ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮೂಡಬಿದ್ರೆ ಆಳ್ವಾಸ್ ಕಾಲೇಜ್ ನ ಅಥ್ಲೆಟಿಕ್ಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಜಿತ್ ನಾಣಯ್ಯ ಬಹುಮಾನ ಪಡೆದರು.
ಮಡಿಕೇರಿ ಡಿ.11 : . ಪೊನ್ನಂಪೇಟೆ ತಾಲೂಕು ಬಾಳಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಪಿ.ಜಿ ಜಾನಕಿ ಮತ್ತು ಗೌರವ ಕೋಶಾಧಿಕಾರಿಯಾಗಿ ಚಂದ್ರಕಲಾ ವಿಷ್ಣುಮೂರ್ತಿ ಆಯ್ಕೆಯಾಗಿದ್ದಾರೆ. ಹೋಬಳಿ ಅಧ್ಯಕ್ಷರಾದ ಪಡಿಞಾರಂಡ ಪ್ರಭು ಮತ್ತು ತಾಲೂಕು ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಅವರ ಶಿಫಾರಸ್ಸು ಮೇರೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ ಮುನಿರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಡಿ.11 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮವು ಡಿಸೆಂಬರ್, 12 ರಂದು ಬೆಳಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಸಿ.ಶ್ಯಾಮ್ ಪ್ರಸಾದ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ.ಜೆ.ಜವರಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ವಕೀಲರ ಸಂಘದ ಅಧ್ಯಕ್ಷರಾದ ಎಂ.ಎ.ನಿರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಾನವ ಹಕ್ಕುಗಳ ಘಟಕದ ಸಂಚಾಲಕರಾದ ಎಚ್.ಪಿ.ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾನವ ಹಕ್ಕುಗಳ ಬಗ್ಗೆ ಉಪನ್ಯಾಸ…
ಮಡಿಕೇರಿ ಡಿ.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಪಬ್ಲಿಕ್ ಶಾಲೆ, ಪೊನ್ನಂಪೇಟೆ ಇವರ ಸಯುಕ್ತ ಆಶ್ರಯದಲ್ಲಿ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ದತ್ತಿನಿಧಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ ಕಾರ್ಯಕ್ರಮವು ಡಿ.12 ರಂದು ಬೆಳಗ್ಗೆ 11 ಗಂಟೆಗೆ ಪೊನ್ನಂಪೇಟೆಯ ಪದವಿಪೂರ್ವ ಕಾಲೇಜು ಕೆಪಿಎಸ್ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವಕಾಮತ್, ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ದತ್ತಿದಾನಿಗಳಾದ ಬೆಂಗಳೂರಿನ ಆರ್.ನಾಗೇಂದ್ರ ಕಾಮತ್, ಆರ್.ರಾಜಾರಾವ್ ಮತ್ತು ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ…
ಮಡಿಕೇರಿ ಡಿ.11 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಡಿ.16 ರಿಂದ ಡಿ.19 ರವರೆಗೆ ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಡಿ.16 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ. ಭಗಂಡೇಶ್ವರ ದೇವಾಲಯದಲ್ಲಿ ಡಿ.17 ರಂದು ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಭಗಂಡೇಶ್ವರ ದೇವರ ಉತ್ಸವ ನಡೆಯಲಿದೆ. ಡಿ.18 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪಂಚಾಮೃತ ಅಭಿಷೇಕ, ಸಂಪ್ರೋಕ್ಷಣೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಶ್ರೀ ಭೂತ ಬಲಿ, ಶ್ರೀ ಸುಬ್ರಹ್ಮಣ್ಯ ದೇವರ ಉತ್ಸವ ನಡೆಯಲಿದೆ. ಡಿ.19 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ ಶ್ರೀ ಮಹಾವಿಷ್ಣು…
ಮಡಿಕೇರಿ, ಡಿ. 11 : ಯುವ ಜನಾಂಗ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವಂತಾಗಬೇಕು ಎಂದು ಮಡಿಕೇರಿ ನಗರಸಭೆಯ ನಿವೃತ್ತ ಆಯುಕ್ತೆ ಮೂಟೇರ ಪುಷ್ಪಾವತಿ ಕಿವಿಮಾತು ಹೇಳಿದರು. ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ವಿದ್ಯಾಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆ ವಿದ್ಯಾಭ್ಯಾಸಕ್ಕೆ ಒತ್ತು ನೀಡುವ ಮೂಲಕ ಉನ್ನತ ಸ್ಥಾನಗಳನ್ನು ಅಲಂಕರಿಸುವಂತಾಗಬೇಕು ಎಂದು ನುಡಿದರು. ಆಧುನಿಕತೆ ಬೆಳೆಯುತ್ತಿದ್ದು, ಗೌಡ ವಿದ್ಯಾಸಂಘವನ್ನು ಕೂಡ ಆಧುನೀಕರಣಗೊಳಿಸುವತ್ತ ಗಮನ ಹರಿಸಬೇಕೆಂದು ಪುಷ್ಪಾವತಿ ಸಲಹೆ ನೀಡಿದರು. ಮೈಸೂರು ರಂಗಾಯಣದ ಹಿರಿಯ ಕಲಾವಿದೆ ದೇವಜನ ಗೀತಾ ಮೋಂಟಡ್ಕ ಮಾತನಾಡಿ, ಮಕ್ಕಳನ್ನು ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬರು ಗುರುಹಿರಿಯರನ್ನು ಗೌರವಿಸಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾನಿಧಿ ದಾನಿಗಳಾದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಮಂಞಂಡ್ರ ರೇಖಾ ಉಲ್ಲಾಸ್ ಮಾತನಾಡಿ, ಮಕ್ಕಳು ಸದಾ ಹಸನ್ಮುಖರಾಗಿರಬೇಕು. ಸಾಧಿಸುವ ಛಲವನ್ನು ಹೊಂದಿರಬೇಕು ಎಂದು ಹೇಳಿದರು. ಕೆ.ಎಂ.ಟಿ. ವಿದ್ಯಾಸಂಸ್ಥೆಯ ಸ್ಥಾಪಕ ಅಧ್ಯಕ್ಷ, ಕೊಡಗು ಗೌಡ…
ಮಡಿಕೇರಿ ಡಿ.11 : ಕೊಡಗು ಮೊಗೇರ ಫುಟ್ಬಾಲ್ ಕ್ಲಬ್ ವತಿಯಿಂದ ಪ್ರಥಮ ಬಾರಿಗೆ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ನಡೆದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-1 ರ ಪಂದ್ಯಾವಳಿಯಲ್ಲಿ ಫಿಯೋನೆಕ್ಸ್ ಎಫ್ಸಿ ಸೋಮವಾರಪೇಟೆ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾವಳಿಯಲ್ಲಿ 6 ಆಟಗಾರರನ್ನೊಳಗೊಂಡಂತೆ 8 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಿತು. ಫೈನಲ್ ಪಂದ್ಯದಲ್ಲಿ ಫಿಯೋನೆಕ್ಸ್ ಎಫ್ಸಿ ಸೋಮವಾರಪೇಟೆ ಮತ್ತು ಮೊಗೇರ ಎಫ್ಸಿ ಪಾಲಿಬೆಟ್ಟ ತಂಡಗಳು ಪೂರ್ಣಾವಧಿಯಲ್ಲಿ ಯಾವುದೇ ಗೋಲು ದಾಖಲಿಸದೇ ಸಮಬಲ ಸಾಧಿಸಿತು. ನಂತರ ನಡೆದ ಪೆನಾಲ್ಟಿ ಶೂಟೌಟ್ನಲ್ಲಿ 2-0 ಗೋಲುಗಳ ಅಂತರದಲ್ಲಿ ಫಿಯೋನೆಕ್ಸ್ ಎಫ್ಸಿ ತಂಡ ಗೆಲುವು ಸಾಧಿಸಿ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದರೆ, ಮೊಗೇರ ಎಫ್ಸಿ ಪಾಲಿಬೆಟ್ಟ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫಿಯೋನೆಕ್ಸ್ ಎಫ್ಸಿ ಸೋಮವಾರಪೇಟೆ ತಂಡ ಮಾನ್ವಿಕ್ ಎಫ್ಸಿ ತಂಡವನ್ನು 3-0 ಗೋಲುಗಳಿಂದ ಮಣಿಸಿತು. ಫಿಯೋನೆಕ್ಸ್ ಎಫ್ಸಿ ಪರ ಪ್ರಶಾಂತ್ 3 ಹ್ಯಾಟ್ರಿಕ್ ಗೋಲು ದಾಖಲಿಸಿದ…
ಮಡಿಕೇರಿ ಡಿ.11 : ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನಾಚರಣೆ ಪ್ರಯುಕ್ತ ಜ.14 ರಂದು ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಸನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಕೆ.ಕೆ.ಸೋಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೊಡಗಿನಲ್ಲಿ ಪ್ರಥಮ ಬಾರಿಗೆ ಸೂರ್ಯ ನಮಸ್ಕಾರ ಚಾಲೆಂಜ್ ಸ್ಪರ್ಧೆಯನ್ನು ಏರ್ಪಡಿಸಿ ಜನಮೆಚ್ಚುಗೆಗೆ ಪಾತ್ರವಾಗಿತ್ತು. ಈ ಬಾರಿಯೂ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಯೋಗದಿಂದ ನಿರೋಗದ ಕಡೆ ಸಾಗುವ, ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಯೋಗದ ಮಹತ್ವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಗೋಣಿಕೊಪ್ಪಲಿನ ಕೈಕೇರಿ ಗ್ರಾಮದ ಭಗವತಿ ದೇವಾಲಯದ ಆವರಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಎಂದರು. ಸ್ಪರ್ಧೆಯು ಸೀನಿಯರ್, ಜೂನಿಯರ್ ಮತ್ತು ಸಾರ್ವಜನಿಕ ಎಂಬ ಮೂರು ವಿಭಾಗಗಳಲ್ಲಿ ನಡೆಯಲಿದ್ದು, ಪ್ರಥಮ ವಿಜೇತರಿಗೆ ರೂ.15 ಸಾವಿರ ನಗದು, ದ್ವಿತೀಯ ರೂ.10 ಸಾವಿರ ನಗದು ಹಾಗೂ ತೃತೀಯ ವಿಜೇತರಿಗೆ ರೂ.5 ಸಾವಿರ ನಗದು ಬಹುಮಾನ…
ಮಡಿಕೇರಿ ಡಿ.11 : ಧನ್ಯಶ್ರೀ ನೃತ್ಯ ಕಲಾನಿಕೇತನ ವತಿಯಿಂದ ಡಿ.15 ರಂದು ಭರತನಾಟ್ಯ ಕಲಾವಿದೆ ಪ್ರೇಕ್ಷ ಭಟ್ ಅವರ “ಭರತನಾಟ್ಯ ರಂಗಪ್ರವೇಶ” ಕಾರ್ಯಕ್ರಮ ನಡೆಯಲಿದೆ. ಮಡಿಕೇರಿಯ ಶ್ರೀಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಸನದ “ನಾಟ್ಯಶ್ರೀ” ಭಾರತೀಯ ಸಂಗೀತ ನೃತ್ಯ ಕಲಾ ಶಾಲೆಯ ವಿದುಷಿ ಕೆ.ಎಸ್.ಅಂಬಳೆ ರಾಜೇಶ್ವರಿ ಹಾಗೂ ಪೊನ್ನಂಪೇಟೆ ನಿನಾದ ವಿದ್ಯಾಸಂಸ್ಥೆಯ ಚೇಂದಿರ ನಿರ್ಮಲ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ. ಕಲಾವಿದರು, ಕಲಾ ಆಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪ್ರೇಕ್ಷ ಭಟ್ ಅವರ ಪೋಷಕರಾದ ವಿದ್ಯಾಶ್ರೀ ಹಾಗೂ ಎನ್.ಸಿ.ಅಶೋಕ್ ಭಟ್ ಮನವಿ ಮಾಡಿದ್ದಾರೆ.






