ಕುಶಾಲನಗರ ನ.15 : ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ವೇದಿಕೆ ಘಟಕದ ವತಿಯಿಂದ ಕೊಡಮಾಡುವ 2023ನೇ ಸಾಲಿನ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಭಾಜನರಾಗಿದ್ದಾರೆ. ಕನ್ನಡ ಸಾಹಿತ್ಯ, ನಾಡು, ನುಡಿಯ ಬೆಳವಣಿಗೆಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಲೋಕೇಶ್ ಸಾಗರ್ ಅವರಿಗೆ ಕೊಡಮಾಡಲಾಗಿದೆ. ನ.19 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕರುನಾಡು ಸಾಮರಸ್ಯ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.
ಲೇಖಕ: admin
ಸೂರತ್ ನ.15 : ಬೃಹತ್ ಟ್ಯಾಂಕ್ ವೊಂದನ್ನು ಸ್ವಚ್ಛಗೊಳಿಸಲು ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪಲ್ಸಾನ ಕಡೋದರ ರಸ್ತೆಯಲ್ಲಿರುವ ಮಿಲ್ ವೊಂದರಲ್ಲಿ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕಾಮರಾಜ್ ಮತ್ತು ಬಾರ್ಡೋಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನಾಲ್ವರು ಕಾರ್ಮಿಕರ ಮೃತ ದೇಹಗಳನ್ನು ಹೊರತೆಗೆದರು.
ಚೆನ್ನೈ ನ.15 : ಅನಾರೋಗ್ಯದಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎನ್ ಶಂಕರಯ್ಯ (102) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಂಕರಯ್ಯ ಅವರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಶ್ರೀನಗರ ನ.15 : ಬಸ್ ಕಂದಕಕ್ಕೆ ಬಿದ್ದು ಸುಮಾರು 25 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಎಂಬಲ್ಲಿ ನಡೆದಿದೆ. ಸುಮಾರು 40 ಪ್ರಯಾಣಿಕರಿದ್ದ ಬಸ್ ಬುಧವಾರ 300 ಅಡಿ ಆಳದ ಕಂದಕಕ್ಕೆ ಬಿದ್ದು ಹಲವರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮಡಿಕೇರಿ ನ.15 : ಕೊಡಗು ಸುನ್ನೀ ವೇಲ್ಪೇರ್ ಅಸೋಸಿಯೇಷನ್ ಕುವೈಟ್ ಸಮಿತಿ ವತಿಯಿಂದ ಕೈತಾನ್ ರಾಜಧಾನಿ ಹೋಟೆಲ್ ನಲ್ಲಿ ಬ್ರಹತ್ತ್ ಜಲಾಲಿಯ್ಯ ರಾತೀಬ್ ಹಾಗೂ ಶೈಖ್ ಜೀಲಾನಿ ಸಯ್ಯಿದ್ ತಾಜುಲ್ ಉಲಾಮಾ ಅನುಸ್ಮರಣೆ ಸಮಾವೇಶ ನಡೆಯಿತು. ಮಗ್ರಿಬ್ ನಮಾಜಿನ ಬಳಿಕ, ಉಸ್ತಾದ್ ರುಗಳ ನೇತೃತ್ವದಲ್ಲಿ ಜಾಲಾಲಿಯ್ಯ ರಾತೀಬ್ ನಡೆಯಿತು. ಕಾರ್ಯಕ್ರಮದ ಸ್ವಾಗತ ಸಮಿತಿ ಚೆರ್ಮಾನ್ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹುಸೈನ್ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕುವೈಟ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಅಯ್ಯಂಗೇರಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕುವೈಟ್ ಸಮಿತಿ ಅಧ್ಯಕ್ಷ ಬಾದುಃಶಾ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಕಾರರಾಗಿ ಆಗಮಿಸಿದ್ದ ಸಯ್ಯಿದ್ ಮುತ್ತನ್ನೂರ್ ತಂಗಲ್ ಮಲಪ್ಪುರಂ ಮಾತನಾಡಿ ಜನಮನಸ್ಸು ಸೆಳೆದರು. ಸಮಿತಿ ಪ್ರಮುಖರಾದ ಅಬ್ದುಲ್ ರಹಮಾನ್ ಸಖಾಫಿ, ಅಲವಿ ಸಖಾಫಿ ತಂಜೇರಿ, ಮಾಹಿನ್ ಸಖಾಫಿ ಅಯ್ಯಂಗೇರಿ ಮಾತನಾಡಿ ಶುಭಕೋರಿದರು. ವೇದಿಕೆಯಲ್ಲಿ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಯಕೂಬ್ ಕಾರ್ಕಳ, ಕೆಎಸ್ಸಿಡಿ ಅಧ್ಯಕ್ಷ ಯೂಸುಫ್ ಮಂಚಕ್ಕಲ್,…
ಮಡಿಕೇರಿ ನ.15 : ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ಸೋಮವಾರಪೇಟೆ ಬೇಳೂರು, ಕೋವರ್ಕೊಲ್ಲಿ ಜಂಕ್ಷನ್ ಬಳಿ ಪ್ರವಾಸೋದ್ಯಮ ಸ್ಥಳಗಳ ಮಾರ್ಗಸೂಚಿ ಫಲಕವನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಸಿ.ಕೆ ರೋಹಿತ್ ಮಾತನಾಡಿ, ಪ್ರವಾಸೋದ್ಯಮ ಮಾರ್ಗನಸೂಚಿ ಫಲಕವು ಹೆಚ್ಚಿನ ಪ್ರವಾಸಿಗರಿಗೆ, ಪ್ರವಾಸೋದ್ಯಮ ಸ್ಥಳಗಳನ್ನು ತಲುಪಲು ಅನುಕೂಲವಾಗಲಿದೆ ಎಂದರು. ಇನ್ನು ಅನೇಕ ಸ್ಥಳಗಳಲ್ಲಿ ಸೋಮವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ಪ್ರವಾಸೋದ್ಯಮ ಮಾರ್ಗಸೂಚಿ ಫಲಕವನ್ನು ಅಳವಡಿಸುವುದಾಗಿ ಅವರು ತಿಳಿಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಎಸ್.ಎಲ್. ಅಭಿನಂದ ಮತ್ತು ಖಜಾಂಚಿ ಪ್ರೀತಂ ಹಾಜರಿದ್ದರು.
ಮಡಿಕೇರಿ ನ.15 : ಕೊಡಗು ಹೆಗ್ಗಡೆ ಸಮಾಜದ ಪ್ರತಿನಿಧಿಗಳ ಸಭೆಯು ಸಮಾಜದ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಮಾಜದ ವಾರ್ಷಿಕ ಕ್ರೀಡೋತ್ಸವವನ್ನು ಹಾತೂರು ಸರ್ಕಾರಿ ಪ್ರಾಥಮಿಕ ಶಾಲೆಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣದಲ್ಲಿ 2024ರ ಮೇ 3 ರಿಂದ 5ರ ವರೆಗೆ ಮೂರು ದಿನಗಳ ಕಾಲ ಕ್ರಿಕೆಟ್, ಹಗ್ಗ ಜಗ್ಗಾಟ ಮತ್ತು ಮಹಿಳೆಯರಿಗೆ ಥ್ರೋ ಬಾಲ್ ಪಂದ್ಯಾವಳಿಯನ್ನು ನಡೆಸಲು ತೀರ್ಮಾನಿಸಿ, ಕ್ರೀಡಾ ಕೂಟದ ಯಶಸ್ವಿಗೆ ಸರ್ವರ ಸಹಕಾರ ಕೋರಲಾಯಿತು. ಕ್ರೀಡಾ ಕೂಟ ನಡೆಯುವ ದಿನಾಂಕಗಳಂದು ಕೊಡಗು ಹೆಗ್ಗಡೆ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಭೆಯಲ್ಲಿ ಮನವಿ ಮಾಡಿದರು. ಹಂಪಿ ವಿಶ್ವವಿದ್ಯಾಲಯದ ಕುಲಪತಿಯಾಗಿ ನೂತನವಾಗಿ ಆಯ್ಕೆಯಾದ ತಂಬಂಡ ವಿಜಯ್ ಪೂಣಚ್ಚ ಅವರನ್ನು ಅಭಿನಂದಿಸಿ ಕ್ರೀಡೋತ್ಸವದಂದು ಅಭಿನಂದಿಸಲು ನಿರ್ಣಯ ಕೈಗೊಳ್ಳಲಾಯಿತು. ಮುಂಬರುವ ದಿನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಸಮಾಜದ ಸದಸ್ಯರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಧನ ಸಹಾಯ ನೀಡುವ ನಿಟ್ಟಿನಲ್ಲಿ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತರವ ಚಿಂತನೆ ಇದೆ ಎಂದು ಸಮಾಜದ…
ಮಡಿಕೇರಿ ನ.14 : ನಿಲ್ಲಿಸಿದ್ದ ಆಟೋರಿಕ್ಷಾಗೆ ಬೊಲೆರೋ ವಾಹನವೊಂದು ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ ಟಿಬೆಟಿಯನ್ ಶಿಬಿರದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕುಶಾಲನಗರ ಸಮೀಪ ಬೈಲುಕೊಪ್ಪದಲ್ಲಿ ನಡೆದಿದೆ. ಟಿಬೆಟಿಯನ್ ಶಿಬಿರದ ವ್ಯಕ್ತಿ ಆಟೋದ ಹಿಂಬದಿಯಲ್ಲಿ ಕುಳಿತ್ತಿದ್ದರು, ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಆಟೋಕ್ಕೆ ಡಿಕ್ಕಿಯಾದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಿಂಬರ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ. ಆಟೋ ಮತ್ತು ಬೊಲೆರೋ ಸಂಪೂರ್ಣ ಜಖಂಗೊಂಡಿದೆ. ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ನ.14 : ಮೇಕೇರಿಯ ಶ್ರೀಗೌರಿ ಶಂಕರ ದೇವಾಲಯದಲ್ಲಿ ದೀಪಾವಳಿ ಮತ್ತು ಗೋಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯದ ಆವರಣದಲ್ಲಿ ನೂರಾರು ದೀಪಗಳು ಪ್ರಜ್ವಲಿಸಿದವು. ಗೋಪೂಜೆಯನ್ನು ಮಾಡುವ ಮೂಲಕ ಗೋವುಗಳಿಗೆ ಸಿಹಿಯನ್ನು ಹಂಚಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿದ್ದ ಭಕ್ತರಿಗೆ ಮಹಾಪೂಜೆಯ ನಂತರ ಪ್ರಸಾದ ವಿತರಿಸಲಾಯಿತು.
ಮಡಿಕೇರಿ ನ.14 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನವಾದ ಇಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಮಾಡಲಾಯಿತು. ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರದ್ಧಾಭಕ್ತಿಯಿಂದ ನಡೆದ “ಗೋಪೂಜೆ”ಯಲ್ಲಿ ಶ್ರೀಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್, ಅರ್ಚಕರು, ಸಿಬ್ಬಂದಿ ವರ್ಗ ಹಾಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಮಹಾಮಂಗಳಾರತಿಯ ನಂತರ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಯಿತು.






